ಎರಡನೇ ಡೋಸ್ ಕೋವಿಡ್ ಲಸಿಕಾಕರಣದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ 2ನೇ ಸ್ಥಾನ: ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ನೀಡುವ ಕೋವಿಡ್ 19 ರ ಮೊದಲ ಡೋಸ್ ಲಸಿಕಾಕರಣದಲ್ಲಿ ಶೇ.100 ರಷ್ಟು ಪ್ರಗತಿಯನ್ನು ಈಗಾಗಲೇ ಸಾಧಿಸಲಾಗಿದೆ. ಎರಡನೇ ಡೋಸ್ ನ ಲಸಿಕಾಕರಣದಲ್ಲಿ  ನಿಗದಿತ  ಗುರಿಯಂತೆ  ಶೇ 91.4ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯ ಮಟ್ಟದ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಸ್ತುತ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿ, ಈ ಸಾಧನೆ ಗೈಯಲು ಸಹಕಾರ ನೀಡಿದ ಜಿಲ್ಲೆಯ ಜನರಿಗೆ ಧನ್ಯವಾದ ತಿಳಿಸಿದರು. 

ಅವರು ಈ ಕುರಿತು ಬುಧವಾರ ಮಾಧ್ಯಮಗಳಿಗೆ ಮಾಹಿತಿ ಬಿಡುಗಡೆಗೊಳಿಸಿ ಮಾತನಾಡುತ್ತಾ, ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ 18 ವರ್ಷ ಮೇಲ್ಪಟ್ಟವರೆಲ್ಲರಿಗೆ ಲಸಿಕಾಕರಣ ಮಾಡಲು ಜಿಲ್ಲಾಡಳಿತ ಕಳೆದ ವರ್ಷದ ಜನವರಿ 16 ರಿಂದ ಲಸಿಕಾಕರಣ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಅಂದಿನಿಂದ ಈವರೆಗೆ ಹಲವು ಬಾರಿ ಜಿಲ್ಲೆಯಾದ್ಯಂತ ಲಸಿಕಾ ಅಭಿಯಾನ, ಮೇಳ, ಉತ್ಸವ ಕಾರ್ಯಕ್ರಮಗಳನ್ನು ಸಮರೋಪಾಧಿಯಾಗಿ ಹಮ್ಮಿಕೊಳ್ಳುತ್ತಾ ಬಂದಿದ್ದು,  ಪ್ರಸ್ತುತವು ಸಹ ಲಸಿಕಾಕರಣ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ. ಜಿಲ್ಲಾಡಳಿತದ ಈ  ಎಲ್ಲಾ ಕ್ರಮಗಳ ಫಲವಾಗಿ ಮೊದಲನೇ ಡೋಸ್ ಲಸಿಕೆಯನ್ನು 10,19,983 ಜನರಿಗೆ ಹಾಕುವ ಮೂಲಕ ಶೇ.100 ರಷ್ಟು ಪ್ರಗತಿಯನ್ನು ಈಗಾಗಲೇ  ಸಾಧಿಸಲಾಗಿದೆ ಎಂದರು.

ಒಂದೆರೆಡು ದಿನಗಳಲ್ಲಿ ಪೂರ್ಣಗೊಳಿಸಿ: ಜಿಲ್ಲೆಯಲ್ಲಿ ಈವರೆಗೆ ಎರಡನೇ ಡೋಸ್ ಲಸಿಕೆಯನ್ನು ಪಡೆಯಲು 8,84,568 ಜನರು ಅರ್ಹರಾಗಿದ್ದು, ಈ ಪೈಕಿ 8,69,255 ಜನರಿಗೆ ಈಗಾಗಲೇ ಲಸಿಕೆಯನ್ನು ನೀಡುವ ಮೂಲಕ ಶೇ 98.26 ರಷ್ಟು ಪ್ರಗತಿಯನ್ನು (ಜನವರಿ 19ಕ್ಕೆ) ಸಾಧಿಸಲಾಗಿದೆ. ಮೊದಲನೇ   ಡೋಸ್   ಲಸಿಕೆ  ಪಡೆದು ಎರಡನೇ  ಡೋಸ್ ಲಸಿಕೆ  ಪಡೆಯಲು   ಜನವರಿ 19ಕ್ಕೆ   ಜಿಲ್ಲೆಯಲ್ಲಿ 15,313 ಜನರು ಬಾಕಿ ಇದ್ದಾರೆ. ಇವರೆಲ್ಲರಿಗೂ ಒಂದೆರೆಡು ದಿನಗಳಲ್ಲಿ ಲಸಿಕಾಕರಣ ಮಾಡಿ ಪೂರ್ಣಗೊಳಿಸುವಂತೆ ಹಾಗೂ ಎರಡನೇ  ಡೋಸ್ ಲಸಿಕೆ  ಪಡೆಯಲು  ಮುಂದಿನ  ದಿನಗಳಲ್ಲಿ  ಅರ್ಹರಾಗುವವರಿಗೆ  ಲಭ್ಯವಾಗುವ  ದಿನಾಂಕದಂದೆ  ಲಸಿಕೆ  ನೀಡಲು ಸಂಬಂಧ ಪಟ್ಟವರಿಗೆ  ಸೂಚನೆ  ನೀಡಲಾಗಿದೆ ಎಂದರು.

ಸಹಕಾರಕ್ಕೆ ಕೃತಜ್ಞತೆ: ಎರಡನೇ ಡೋಸ್ ಲಸಿಕೆ ನೀಡಿಕೆಯಲ್ಲಿ ನಿಗದಿತ ಗುರಿಯನ್ನು ಸಾಧಿಸಿ ಶೇ.91.4ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯ ಮಟ್ಟದ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಎರಡನೇ ಸ್ಥಾನ ಗಳಿಸಲು ಸಾಧ್ಯವಾಗಿದೆ.

ಜಿಲ್ಲೆಯಲ್ಲಿ ಈವರೆಗೆ ನಡೆದ ಲಸಿಕಾಕರಣ ಅಭಿಯಾನ ಕಾರ್ಯಕ್ರಮಗಳ ಯಶಸ್ವಿಗೆ ಅಹರ್ನಿಶಿ ಶ್ರಮಿಸಿದ ಆರೋಗ್ಯ, ಆಶಾ, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಮತ್ತು ವಾರ್ಡ್ ಮಟ್ಟದ ಕೋವಿಡ್ ನಿಯಂತ್ರಣ ಟಾಸ್ಕ್ ಪೋರ್ಸ್ ಸಮಿತಿಯ ಸದಸ್ಯರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ/ನಗರ ಸ್ಥಳೀಯ ಆಡಳಿತ ಸಂಸ್ಥೆಗಳ ಅಧಿಕಾರಿಗಳು,  ಕಂದಾಯ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಜಿಲ್ಲಾಡಳಿತದ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಗೂ ಜಿಲ್ಲೆಯ ಸಮಸ್ತ ಜನಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿಗಳು ಧನ್ಯವಾದ ತಿಳಿಸುತ್ತಾ ಮುಂದಿನ ದಿನಗಳಲ್ಲಿಯೂ ಇದೇ ರೀತಿ ಸಹಕಾರವನ್ನು ಮುಂದುವರೆಸಬೇಕೆಂದರು. ವಿಶೇಷವಾಗಿ ಜಿಲ್ಲೆಯಲ್ಲಿ ಲಸಿಕಾಕರಣ ಕಾರ್ಯಕ್ರಮಗಳ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವರ ದಿನ ನಿತ್ಯದ ಮಾರ್ಗದರ್ಶನ ಹಾಗೂ ಸಹಕಾರವೆ ಪ್ರಮುಖ ಕಾರಣವಾಗಿದ್ದು, ಅವರಿಗೆ ಜಿಲ್ಲಾಧಿಕಾರಿಗಳು ಕೃತಜ್ಞತೆ ತಿಳಿಸಿದರು. 

ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಲು ಬಾಕಿ ಇರುವ ವಿವರ: ಮೊದಲನೇ ಡೋಸ್ ಲಸಿಕೆ  ಪಡೆದು ಎರಡನೇ  ಡೋಸ್ ಲಸಿಕೆ  ಪಡೆಯಲು (ಪ್ರಸ್ತುತ ಇಂದಿನ ದಿನಾಂಕಕ್ಕೆ) ಜಿಲ್ಲೆಯಲ್ಲಿ ಒಟ್ಟು 15,313 ಮಂದಿ ಬಾಕಿ ಉಳಿದಿದ್ದು, ಈ ಪೈಕಿ ತಾಲ್ಲೂಕುವಾರು ಬಾಗೇಪಲ್ಲಿ 1,967, ಚಿಕ್ಕಬಳ್ಳಾಪುರ 4,648, ಚಿಂತಾಮಣಿ 806, ಗೌರಿಬಿದನೂರು 6,308, ಗುಡಿಬಂಡೆ 367 ಹಾಗೂ ಶಿಡ್ಲಘಟ್ಟ ತಾಲ್ಲೂಕಿನಲ್ಲಿ 1,217 ಮಂದಿ ಬಾಕಿ ಇರುತ್ತಾರೆ. ಇವರೆಲ್ಲರಿಗೂ ಒಂದೆರಡು ದಿನದಲ್ಲಿ ಲಸಿಕೆಯನ್ನು ನೀಡಲು ಈಗಾಗಲೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈನಿಟ್ಟಿನಲ್ಲಿ ಲಸಿಕಾಕಾರ್ಯ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ.

ಎರಡನೇ ಡೋಸ್ ಲಸಿಕೆ ಪಡೆಯಲು ಜಿಲ್ಲೆಯಲ್ಲಿ ಅರ್ಹರಿರುವ ಜನರು ಹಾಗೂ ಮುಂದೆ ಅರ್ಹರಾಗುವ ಜನರು ಕೂಡಲೆ ಸಮೀಪದ ಲಸಿಕಾ ಕೇಂದ್ರಗಳಿಗೆ ತೆರಳಿ ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ಎರಡೂ ಡೋಸ್ ಗಳ ಲಸಿಕಾಕರಣದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಶೇ. 100ರಷ್ಟು ಪ್ರಗತಿ ಸಾಧಿಸಿದ ಮೊದಲ ಜಿಲ್ಲೆಯಾಗಿ ಹೊರಹೊಮ್ಮಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಸಮಸ್ತ ಜನರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!