ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಶೇ.50ಕ್ಕೆ ಸಹಾಯಧನ ಹೆಚ್ಚಳ: ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ

ಬೆಂ.ಗ್ರಾ.ಜಿಲ್ಲೆ: ಆತ್ಮ ನಿರ್ಭರ ಭಾರತ ಅಭಿಯಾನದ ಅಂಗವಾಗಿ ಪಿಎಂ-ಎಫ್ಎಂಇ ಯೋಜನೆಯ “ಒಂದು ಜಿಲ್ಲೆ ಒಂದು ಉತ್ಪನ್ನ” ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಕೋಳಿ ಸಂಸ್ಕರಣಾ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ” ಘಟಕಗಳು, ವ್ಯಕ್ತಿ/ ಸಂಸ್ಥೆಗಳು, ಎಫ್.ಪಿ.ಓ ಗಳನ್ನು ಉದ್ದಿಮೆದಾರರಾಗಿ ರೂಪಿಸಲು ಯೋಜಿಸಲಾಗಿದ್ದು, ಯೋಜನೆಯ ಬೆಂಬಲ/ ಸಹಾಯಧನ ವೈಯಕ್ತಿಕ/ ವ್ಯಕ್ತಿಗತ ಅತಿ ಸಣ್ಣ ಉದ್ದಿಮೆಗಳಿಗೆ ಶೇ‌.50 ಕ್ಕೆ ಸಹಾಯಧನವನ್ನು ಹೆಚ್ಚಳ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ತಿಳಿಸಿದ್ದಾರೆ.

ಆತ್ಮ ನಿರ್ಭರ ಭಾರತ ಅಭಿಯಾನದ ಅಂಗವಾಗಿ ಭಾರತ ಸರ್ಕಾರವು ಪ್ರಧಾನಮಂತ್ರಿಗಳ‌ ಅತಿ‌ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳ ಸಾಂಸ್ಥೀಕರಣಗೊಳಿಸುವಿಕೆ ಯೋಜನೆ ( PM-FME) ಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಹೊಸ ಉದ್ದಿಮೆ ಸ್ಥಾಪಿಸಲು/ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಕರಣಾ ಘಟಕವನ್ನು ‌ಉನ್ನತೀಕರಿಸಲು‌ ಅವಕಾಶವಿದ್ದು, “ಒಂದು ಜಿಲ್ಲೆ ಒಂದು ಉತ್ಪನ್ನ” ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಕೋಳಿ ಸಂಸ್ಕರಣಾ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ” ಘಟಕಗಳು, ವ್ಯಕ್ತಿ/ ಸಂಸ್ಥೆಗಳು, ಎಫ್.ಪಿ.ಓ ಗಳನ್ನು ಉದ್ದಿಮೆದಾರರಾಗಿ ರೂಪಿಸಲು ಯೋಜಿಸಲಾಗಿದೆ.

ಯೋಜನೆಯ ಬೆಂಬಲ/ ಸಹಾಯಧನ ವೈಯಕ್ತಿಕ/ ವ್ಯಕ್ತಿಗತ ಅತಿ ಸಣ್ಣ ಉದ್ದಿಮೆಗಳಿಗೆ ಈವರೆಗೆ ಕೇಂದ್ರ ಸರ್ಕಾರದಿಂದ ಶೇ‌. 35 ರಷ್ಟು ಸಹಾಯಧನವನ್ನು ನೀಡಲಾಗುತ್ತಿತ್ತು. ಪ್ರಸ್ತುತ ಸಹಾಯಧನವನ್ನು ಶೇ. 50 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರವು ಶೇ. 15 ರಷ್ಟು ಹೆಚ್ಚುವರಿ (ರೂ. 10 ಲಕ್ಷದ ಗರಿಷ್ಟ ಮಿತಿ) ಸಹಾಯಧನವನ್ನು ನೀಡಲಿದೆ.

ಈ‌ ಯೋಜನೆಯು 2020-21ರಿಂದ ಪ್ರಾರಂಭವಾಗಿ‌ 2024-25ರವರೆಗೆ ಅನುಷ್ಠಾನಗೊಳ್ಳಲಿದೆ.

ಯೋಜನೆಯ ಬೆಂಬಲ/ ಸಹಾಯಧನ ವೈಯಕ್ತಿಕ/ ವ್ಯಕ್ತಿಗತ ಅತಿ ಸಣ್ಣ ಉದ್ದಿಮೆಗಳಿಗೆ ಈವರೆಗೆ ಕೇಂದ್ರ ಸರ್ಕಾರದಿಂದ ಶೇ‌. 35 ರಷ್ಟು ಸಹಾಯಧನವನ್ನು ನೀಡಲಾಗುತ್ತಿತ್ತು. ಪ್ರಸ್ತುತ ಸಹಾಯಧನವನ್ನು ಶೇ. 50 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರವು ಶೇ. 15 ರಷ್ಟು ಹೆಚ್ಚುವರಿ (ರೂ. 10 ಲಕ್ಷದ ಗರಿಷ್ಟ ಮಿತಿ) ಸಹಾಯಧನವನ್ನು ನೀಡಲಿದೆ.

ಆಸಕ್ತ ವೈಯಕ್ತಿಕ ಫಲಾನುಭವಿಗಳು, ಸಂಘ‌ ಸಂಸ್ಥೆಗಳು ಎಫ್.ಪಿ.ಓ.ಗಳು‌ ಸ್ವ ಸಹಾಯ ಗುಂಪುಗಳ‌ ಸದಸ್ಯರು‌, ಒಕ್ಕೂಟಗಳು, ಸಹಕಾರಿ‌ ಸಂಸ್ಥೆಗಳು ಈ‌ ಯೋಜನೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ನೋಂದಣಿಗಾಗಿ ತಿರುಮಲೇಶ್ ಮೊ. ಸಂ.: 9448752379 ಮತ್ತು ಸಚ್ಚಿದಾನಂದಮ್ ಮೊ.ಸಂ.: 9952913999 ಇವರನ್ನು ‌  ಸಂಪರ್ಕಿಸಬಹುದಾಗಿದೆ.

ಆಸಕ್ತ ಫಲಾನುಭವಿಗಳು ಪೋರ್ಟಲ್ PMFME website link : http://pmfme.mofpi.gov.in, PMFME MIS website link : http://pmfme.mofpi.gov.in/mis ಮೂಲಕ  ಅರ್ಜಿಗಳನ್ನು ನೋಂದಾಯಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಸರ್ಕಾರದ PMFME website ಅಥವಾ ಜಿಲ್ಲಾ ನೋಡಲ್ ಅಧಿಕಾರಿ ‌ ಮಥುರಾ ಎಸ್ .ಪೈ., ಸಹಾಯಕ ಕೃಷಿ ನಿರ್ದೇಶಕರು(ರೈತ ಮಹಿಳೆ) ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಸಂಕೀರ್ಣ, ಬನಶಂಕರಿ, ಬೆಂಗಳೂರು ಮೊ.ಸಂ.: 8277929923, 9632862326 ಇವರನ್ನು ಸಂಪರ್ಕಿಸಬಹುದಾಗಿದೆ.

ಆಸಕ್ತ ರೈತರು ಮತ್ತು ಆಹಾರ ಸಂಸ್ಕರಣೆಯಲ್ಲಿ ತೊಡಗಿರುವ ಉದ್ಯಮಿಗಳು ಈ ಯೋಜನೆಯ ಉಪಯೋಗ ಪಡೆಯಬೇಕೆಂದು ಜಂಟಿ ಕೃಷಿ ನಿರ್ದೇಶಕರಾದ ಜಿ.ಎಸ್.ಜಯಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಂಗ್ರಹ ಚಿತ್ರ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ನಿನ್ನೆ ಧಾರವಾಡದಲ್ಲಿ ನಡೆದ ಪ್ರತಿಭಟನೆಯ ವಿದ್ಯಾರ್ಥಿಗಳಿಂದ ಗೋ ಬ್ಯಾಕ್ ಕೂಗಿಸಿಕೊಂಡು ಮುಜುಗರಕ್ಕೀಡಾಗಿ ಹಿಂತಿರುಗಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಅವರು, ಇಂದು ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಆರೋಪಗಳ

[ccc_my_favorite_select_button post_id="119746"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!