ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಶೇ.50ಕ್ಕೆ ಸಹಾಯಧನ ಹೆಚ್ಚಳ: ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ

ಬೆಂ.ಗ್ರಾ.ಜಿಲ್ಲೆ: ಆತ್ಮ ನಿರ್ಭರ ಭಾರತ ಅಭಿಯಾನದ ಅಂಗವಾಗಿ ಪಿಎಂ-ಎಫ್ಎಂಇ ಯೋಜನೆಯ “ಒಂದು ಜಿಲ್ಲೆ ಒಂದು ಉತ್ಪನ್ನ” ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಕೋಳಿ ಸಂಸ್ಕರಣಾ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ” ಘಟಕಗಳು, ವ್ಯಕ್ತಿ/ ಸಂಸ್ಥೆಗಳು, ಎಫ್.ಪಿ.ಓ ಗಳನ್ನು ಉದ್ದಿಮೆದಾರರಾಗಿ ರೂಪಿಸಲು ಯೋಜಿಸಲಾಗಿದ್ದು, ಯೋಜನೆಯ ಬೆಂಬಲ/ ಸಹಾಯಧನ ವೈಯಕ್ತಿಕ/ ವ್ಯಕ್ತಿಗತ ಅತಿ ಸಣ್ಣ ಉದ್ದಿಮೆಗಳಿಗೆ ಶೇ‌.50 ಕ್ಕೆ ಸಹಾಯಧನವನ್ನು ಹೆಚ್ಚಳ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ತಿಳಿಸಿದ್ದಾರೆ.

ಆತ್ಮ ನಿರ್ಭರ ಭಾರತ ಅಭಿಯಾನದ ಅಂಗವಾಗಿ ಭಾರತ ಸರ್ಕಾರವು ಪ್ರಧಾನಮಂತ್ರಿಗಳ‌ ಅತಿ‌ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳ ಸಾಂಸ್ಥೀಕರಣಗೊಳಿಸುವಿಕೆ ಯೋಜನೆ ( PM-FME) ಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಹೊಸ ಉದ್ದಿಮೆ ಸ್ಥಾಪಿಸಲು/ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಕರಣಾ ಘಟಕವನ್ನು ‌ಉನ್ನತೀಕರಿಸಲು‌ ಅವಕಾಶವಿದ್ದು, “ಒಂದು ಜಿಲ್ಲೆ ಒಂದು ಉತ್ಪನ್ನ” ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಕೋಳಿ ಸಂಸ್ಕರಣಾ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ” ಘಟಕಗಳು, ವ್ಯಕ್ತಿ/ ಸಂಸ್ಥೆಗಳು, ಎಫ್.ಪಿ.ಓ ಗಳನ್ನು ಉದ್ದಿಮೆದಾರರಾಗಿ ರೂಪಿಸಲು ಯೋಜಿಸಲಾಗಿದೆ.

ಯೋಜನೆಯ ಬೆಂಬಲ/ ಸಹಾಯಧನ ವೈಯಕ್ತಿಕ/ ವ್ಯಕ್ತಿಗತ ಅತಿ ಸಣ್ಣ ಉದ್ದಿಮೆಗಳಿಗೆ ಈವರೆಗೆ ಕೇಂದ್ರ ಸರ್ಕಾರದಿಂದ ಶೇ‌. 35 ರಷ್ಟು ಸಹಾಯಧನವನ್ನು ನೀಡಲಾಗುತ್ತಿತ್ತು. ಪ್ರಸ್ತುತ ಸಹಾಯಧನವನ್ನು ಶೇ. 50 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರವು ಶೇ. 15 ರಷ್ಟು ಹೆಚ್ಚುವರಿ (ರೂ. 10 ಲಕ್ಷದ ಗರಿಷ್ಟ ಮಿತಿ) ಸಹಾಯಧನವನ್ನು ನೀಡಲಿದೆ.

ಈ‌ ಯೋಜನೆಯು 2020-21ರಿಂದ ಪ್ರಾರಂಭವಾಗಿ‌ 2024-25ರವರೆಗೆ ಅನುಷ್ಠಾನಗೊಳ್ಳಲಿದೆ.

ಯೋಜನೆಯ ಬೆಂಬಲ/ ಸಹಾಯಧನ ವೈಯಕ್ತಿಕ/ ವ್ಯಕ್ತಿಗತ ಅತಿ ಸಣ್ಣ ಉದ್ದಿಮೆಗಳಿಗೆ ಈವರೆಗೆ ಕೇಂದ್ರ ಸರ್ಕಾರದಿಂದ ಶೇ‌. 35 ರಷ್ಟು ಸಹಾಯಧನವನ್ನು ನೀಡಲಾಗುತ್ತಿತ್ತು. ಪ್ರಸ್ತುತ ಸಹಾಯಧನವನ್ನು ಶೇ. 50 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರವು ಶೇ. 15 ರಷ್ಟು ಹೆಚ್ಚುವರಿ (ರೂ. 10 ಲಕ್ಷದ ಗರಿಷ್ಟ ಮಿತಿ) ಸಹಾಯಧನವನ್ನು ನೀಡಲಿದೆ.

ಆಸಕ್ತ ವೈಯಕ್ತಿಕ ಫಲಾನುಭವಿಗಳು, ಸಂಘ‌ ಸಂಸ್ಥೆಗಳು ಎಫ್.ಪಿ.ಓ.ಗಳು‌ ಸ್ವ ಸಹಾಯ ಗುಂಪುಗಳ‌ ಸದಸ್ಯರು‌, ಒಕ್ಕೂಟಗಳು, ಸಹಕಾರಿ‌ ಸಂಸ್ಥೆಗಳು ಈ‌ ಯೋಜನೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ನೋಂದಣಿಗಾಗಿ ತಿರುಮಲೇಶ್ ಮೊ. ಸಂ.: 9448752379 ಮತ್ತು ಸಚ್ಚಿದಾನಂದಮ್ ಮೊ.ಸಂ.: 9952913999 ಇವರನ್ನು ‌  ಸಂಪರ್ಕಿಸಬಹುದಾಗಿದೆ.

ಆಸಕ್ತ ಫಲಾನುಭವಿಗಳು ಪೋರ್ಟಲ್ PMFME website link : http://pmfme.mofpi.gov.in, PMFME MIS website link : http://pmfme.mofpi.gov.in/mis ಮೂಲಕ  ಅರ್ಜಿಗಳನ್ನು ನೋಂದಾಯಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಸರ್ಕಾರದ PMFME website ಅಥವಾ ಜಿಲ್ಲಾ ನೋಡಲ್ ಅಧಿಕಾರಿ ‌ ಮಥುರಾ ಎಸ್ .ಪೈ., ಸಹಾಯಕ ಕೃಷಿ ನಿರ್ದೇಶಕರು(ರೈತ ಮಹಿಳೆ) ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಸಂಕೀರ್ಣ, ಬನಶಂಕರಿ, ಬೆಂಗಳೂರು ಮೊ.ಸಂ.: 8277929923, 9632862326 ಇವರನ್ನು ಸಂಪರ್ಕಿಸಬಹುದಾಗಿದೆ.

ಆಸಕ್ತ ರೈತರು ಮತ್ತು ಆಹಾರ ಸಂಸ್ಕರಣೆಯಲ್ಲಿ ತೊಡಗಿರುವ ಉದ್ಯಮಿಗಳು ಈ ಯೋಜನೆಯ ಉಪಯೋಗ ಪಡೆಯಬೇಕೆಂದು ಜಂಟಿ ಕೃಷಿ ನಿರ್ದೇಶಕರಾದ ಜಿ.ಎಸ್.ಜಯಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಂಗ್ರಹ ಚಿತ್ರ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!