ದೊಡ್ಡಬಳ್ಳಾಪುರ: ಮಾದಕ ವಸ್ತು ವಿರೋಧಿ ಕಾರ್ಯಾಚರಣೆ ತೀವ್ರಗೊಳಿಸಿದ ಪೊಲೀಸರು / ವಿವಿಧೆಡೆ ದಾಳಿ / ವಿದ್ಯಾರ್ಥಿಗಳ ಗುರಿಯಾಗಿಸಿದ್ದ ವಿದೇಶಿ ಪ್ರಜೆ ಸೇರಿ 7 ಜನರ ಬಂಧನ

ದೊಡ್ಡಬಳ್ಳಾಪುರ: ತಾಲೂಕಿನಾಧ್ಯಂತ ಮಾದಕ ವಸ್ತು ವಿರೋಧಿ ಕಾರ್ಯಾಚರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ನೈಜೀರಿಯಾ ದೇಶದ ಪ್ರಜೆ ಸೇರಿ 7 ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ವಂಶಿಕೃಷ್ಣ ಹಾಗೂ ಎಎಸ್ಪಿ ಲಕ್ಷ್ಮೀ ಗಣೇಶ್ ಅವರ ಸೂಚನೆಯ ಮೇರೆಗೆ ದೊಡ್ಡಬಳ್ಳಾಪುರ ವೃತ್ತದ ರಾಜಾನುಕುಂಟೆ, ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾರಲು ಯತ್ನಿಸುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಜಾನುಕುಂಟೆ: ಸಬ್ ಇನ್ಸ್‌ಪೆಕ್ಟರ್ ಗಜೇಂದ್ರ, ಭವಿತ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಪಿಜಿ, ಕಾಲೇಜುಗಳ ಬಳಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಬಂದಿದ್ದ ವಿದೇಶಿ ಪ್ರಜೆ ಅಗ್ಬಾಯ್ ಅಜುಕ್ವು ಓನ್ವುಕಾ ಎಂಬಾತನನ್ನು ಬಂಧಿಸಿ, ಆತನ ಬಳಿಯಿದ್ದ ಪ್ರಚೋದಕ ಮಾತ್ರೆಗಳು, ಕ್ರಿಸ್ಟಲ್ ಮಿತ್ ಪುಡಿ, ಕೊಕೇನ್ ಹಾಗೂ ಎಲ್.ಎಸ್.ಡಿ ಸ್ಟಾಂಪ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ದೊಡ್ಡಬೆಳವಂಗಲ: ಸಬ್ ಇನ್ಸ್‌ಪೆಕ್ಟರ್ ಜ್ಞಾನಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ನಗರದ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ಮಾಹಿತಿ ಮೇರೆಗೆ ಅಮಿತ್ (21ವರ್ಷ) ಎಂಬುವವರನ್ನು ಬಂಧಿಸಿ ಸುಮಾರು ಒಂದು ಲಕ್ಷ ಮೌಲ್ಯದ (ಎಗ್ರೇಡ್) ಗಾಂಜಾ ವಶಪಡಿಸಿಕೊಂಡಿದ್ದಾರೆ.

ದೊಡ್ಡಬಳ್ಳಾಪುರ ನಗರ: ಸಬ್ ಇನ್ಸ್‌ಪೆಕ್ಟರ್ ಗೋವಿಂದ್ ನೇತೃತ್ವದಲ್ಲಿ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುವ ವೇಳೆ ದಾಬಸ್ ಪೇಟೆ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಒಂದೇ ದ್ವಿಚಕ್ರ ವಾಹನದಲ್ಲಿ ಬಂದ ಮೂವರನ್ನು ತಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಸವಾರರು ಅನುಮಾನಸ್ಪದವಾಗಿ ವರ್ತಿಸಿದ ಕಾರಣ ಬ್ಯಾಗ್ ಚೆಕ್ ಮಾಡಿದಾಗ ಸುಮಾರು 20 ಸಾವಿರಕ್ಕೂ ಹೆಚ್ಚು ಮೌಲ್ಯದ ಗಾಂಜಾ ಸೊಪ್ಪು ಪತ್ತೆಯಾಗಿದೆ.

ಈ ಕುರಿತಂತೆ ಕೋಳಾಲ ವ್ಯಾಪ್ತಿಯ ರಂಗ (25), ದೊಡ್ಡಬಳ್ಳಾಪುರ ನಗರದ ರಾಕೇಶ್ (20), ತನುಶ್ (25) ಎನ್ನುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ: ಟಫೆ ಕಾರ್ಖಾನೆ ಬಳಿ ನಿಲ್ಲುತ್ತಿದ್ದ ಹೊರ ರಾಜ್ಯದ ಚಾಲಕರಿಗೆ ಗಾಂಜಾ ಸೋಪ್ಪು ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಹಿನ್ನಲೆ, ನಿಗಾವಹಿಸಿದ್ದ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸತೀಶ್ ನೇತೃತ್ವದ ಪೊಲೀಸರು ಗಾಂಜಾ ಸೊಪ್ಪುಗಳ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ..

ಹಲವು ದಿನಗಳಿಂದ ಸತತ ನಿಗಾವಹಿಸಿದ ಗ್ರಾಮಾಂತರ ಪೊಲೀಸರು ಇಂದು ಭರ್ಜರಿ ಬೇಟೆಯಾಡಿದ್ದಾರೆ. ಬಂಧಿತರನ್ನು ಮಾರಸಂದ್ರದ ಸುರೇಂದ್ರ (35 ವರ್ಷ), ದೊಡ್ಡಬಳ್ಳಾಪುರದ ಪವನ್ ಕುಮಾರ್ (19) ವರ್ಷ ಎನ್ನಲಾಗಿದ್ದು, ಆರೋಪಿಗಳಿಂದ 3 ಕೆಜಿ 100 ಗ್ರಾಂ ಮೌಲ್ಯದ ಎ ಗ್ರೇಡ್ ಗಾಂಜಾ ಸೊಪ್ಪನ್ನು ವಶ ಪಡಿಸಿಕೊಳ್ಳಲಾಗಿದೆ.

ವಿದ್ಯಾರ್ಥಿಗಳ ಭವಿಷ್ಯದ ಅರಿವಿಗೆ ಕಾರ್ಯಾಗಾರ ಅಗತ್ಯ: ಮಾದಕ ವಸ್ತುಗಳು ಸಮಾಜದ ಪಿಡುಗಾಗಿದ್ದು, ಅಮಾಯಕ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಗೆಡುವುತ್ತಿರುವ ಮಾದಕ ವಸ್ತುಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಾಗಾರ ಅಗತ್ಯವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಾದಕ ವಸ್ತುಗಳ ಗುಂಗಿನಲ್ಲಿ ನಡೆಯುವ ಅಹಿತರ ಘಟನೆಗಳಿಂದ ವಿದ್ಯಾರ್ಥಿಗಳ ಜೀವನ ಹಾಳಾಗುತ್ತಿದೆ. ಈ ನಿಟ್ಟಿನಲ್ಲಿ ಕಾಲೇಜುಗಳ ಆಡಳಿತ ಮಂಡಳಿಗಳು ತಜ್ಞರು, ಪರಿಣಿತರು, ವೈದ್ಯರು, ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಕಾರ್ಯಾಗಾರ ನಡೆಸಿ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಸಮಸ್ಯೆಗಳ ಕುರಿತು ವಿವರಿಸಬೇಕಿದೆ.

ಈ ಕಾರ್ಯಾಚರಣೆ ಸಾಧನೆಯಲ್ಲ, ಇದು ಸಮಾಜಕ್ಕೆ ಕಳಂಕವಾಗಿದೆ. ವಿದ್ಯಾರ್ಥಿಗಳ ಜೀವನವನ್ನು ಹಾಳುಗೆಡುವುತ್ತಿರುವ ಮಾದಕ ವಸ್ತುಗಳ ಮಾರಾಟ ಜಾಲದ ಬೇರನ್ನು ಭೇದಿಸಲು ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ

"ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಸದ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

[ccc_my_favorite_select_button post_id="119538"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!