ಆರ್.ಎಲ್.ಜಾಲಪ್ಪ ನಿಧನದ ಬೆನ್ನಲ್ಲೇ ಅಧಿಕಾರಕ್ಕಾಗಿ ಕುಟುಂಬ ಕಲಹ…!: ಬೆಂಬಲಿಗರೊಂದಿಗೆ ಪ್ರತಿಭಟನೆ ಕುಳಿತ ಜಾಲಪ್ಪರ ಕುಟುಂಬ / ಪೊಲೀಸರಿಂದ ಲಘು ಲಾಠಿ ಪ್ರಹಾರ

ಕೋಲಾರ: ದಿವಂಗತ ಕೇಂದ್ರ ಮಾಜಿ ಸಚಿವ ಅರ್.ಎಲ್.ಜಾಲಪ್ಪ ಅಹಿಂದ ಹೆಸರಲ್ಲಿ ಕಟ್ಟಿ ಬೆಳೆಸಿದ ಶಿಕ್ಷಣ ಸಂಸ್ಥೆಗಳು. ಜಾಲಪ್ಪ ನಿಧನಾನಂತರ ಅವರು ಕಟ್ಟಿ ಬೆಳೆಸಿದ ಶಿಕ್ಷಣ ಸಂಸ್ಥೆಗಳ ಎದುರಲ್ಲಿ ಅವರ ಮಕ್ಕಳು ಮೊಮ್ಮಕ್ಕಳು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ಡಿಸೆಂಬರ್ 17 ರಂದು ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಅವರು ನಿಧನಾನಂತರ ಈಗ ಅವರೇ ಕಟ್ಟಿ ಬೆಳೆಸಿದ ದೇವರಾಜ ಅರಸು ಎಜುಕೇಷನಲ್ ಟ್ರಸ್ಟ್‌ನ ಆಡಳಿತದ ವಿಚಾರವಾಗಿ, ಆರ್.ಎಲ್.ಜಾಲಪ್ಪ ಸಂಬಂಧಿ ಜಿ.ಹೆಚ್.ನಾಗರಾಜ್ ಹಾಗೂ ಜಾಲಪ್ಪ ಮಕ್ಕಳು, ಮೊಮ್ಮಕ್ಕಳ ನಡುವೆ ವಿವಾದ ಶುರುವಾಗಿದೆ.

ಈ ವಿಚಾರವಾಗಿ ಆರ್.ಎಲ್.ಜಾಲಪ್ಪ ಮಕ್ಕಳು ಹಾಗೂ ಕುಟುಂಬಸ್ಥರು ತಮಗೆ ಅನ್ಯಾಯವಾಗಿದೆ ಎಂದು ಕೋಲಾರದ ಟಮಕಾ ಮೆಡಿಕಲ್ ಕಾಲೇಜು ಬಳಿ ತಮ್ಮ ನೂರಾರು ಜನ ಬೆಂಬಲಿಗರೊಂದಿಗೆ ಜಿ.ಹೆಚ್.ನಾಗರಾಜ್ ವಿರುದ್ದ ಪ್ರತಿಭಟನೆ ನಡೆಸಿದರು.

ಈ ವೇಳೆ ಕಾಲೇಜು ಆವರಣದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟವಾಗಿ ಪ್ರತಿಭಟನೆ ವಿಕೋಪಕ್ಕೆ ಹೋಗಿದ್ದು. ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಬೀಸಿದರು ಆಗ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡ ಜಿ.ಲಕ್ಷ್ಮೀಪತಿ ಎಂಬುವರ ತಲೆಗೆ ಲಾಠಿ ಏಟು ಬಿದ್ದು ರಕ್ತ ಸೋರಿಸಿಕೊಂಡು ಪೊಲೀಸ್ ಸಬ್‌ಇನ್ಪೆಕ್ಟರ್ ಅಣ್ಣಯ್ಯರ ಮೇಲೆ ಹರಿಹಾಯ್ದರು. ಆದರೆ ಲಾಠಿ ಬೀಸುವ ವೇಳೆ ಅಣ್ಣಯ್ಯ ಕಾಲಿಗೂ ಪೆಟ್ಟಾಗಿ ನಂತರ ಸ್ಥಳಕ್ಕೆ ಬಂದ ಹೆಚ್ಚಿನ ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಣ ಮಾಡಿದರು.

ನಂತರ ಆರ್.ಎಲ್.ಜಾಲಪ್ಪ ಹಿರಿಯ ಮಗ ನರಸಿಂಹಸ್ವಾಮಿ, ಮೊಮ್ಮಗ ಅರವಿಂದ್, ಹೆಣ್ಣುಮಕ್ಕಳಾದ ಉಮಾದೇವಿ, ಲಕ್ಷ್ಮಿ, ಸರಸ್ವತಿ, ಪಾರ್ವತಿ ದೇವಿ, ಸೇರಿ ಎಲ್ಲರೂ ಮೆಡಿಕಲ್ ಕಾಲೇಜು ಎದುರು ಕುಳಿತು ಪ್ರತಿಭಟನೆ ನಡೆಸಿದ್ದು. ಈ ವೇಳೆ ಮಾತನಾಡಿದ ಅವರು ನಮ್ಮ ತಂದೆ ಕಟ್ಟಿ ಬೆಳೆಸಿದ ಸಂಸ್ಥೆಯಲ್ಲಿ ನಮ್ಮನ್ನು ಹೊರಗಿಡುವ ಪ್ರಯತ್ನ ನಡೆಯುತ್ತಿದೆ, ನಮ್ಮ ತಂದೆಯ ಆಶಯಗಳನ್ನು ಈಡೇರಿಸುತ್ತಿಲ್ಲ ಎಂದರು. 

ಆರ್.ಎಲ್.ಜಾಲಪ್ಪ ನಿಧನ ನಂತರ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ಕಾರ್ಯದರ್ಶಿಯಾಗಿದ್ದ ಜಿ.ಹೆಚ್.ನಾಗರಾಜ ಅವರನ್ನು ಎರಡು ದಿನಗಳ ಹಿಂದಷ್ಟೇ ಆಯ್ಕೆ ಮಾಡಲಾಗಿದೆ. ಆದರೆ ನಾಗರಾಜ್ ಆಯ್ಕೆ ಸರಿ ಇಲ್ಲ, ಅಧ್ಯಕ್ಷ ಸ್ಥಾನ ಆರ್.ಎಲ್.ಜಾಲಪ್ಪ ಮಗ ನರಸಿಂಹಸ್ವಾಮಿ ಅವರಿಗೆ ಸಿಗಬೇಕು ಜಾಲಪ್ಪ ಅವರು ಕಟ್ಟಿ ಬೆಳೆಸಿದ ಸಂಸ್ಥೆಯಲ್ಲಿ ಅವರ ಮಕ್ಕಳಿಗೆ ಅಧಿಕಾರ ಇಲ್ಲವಾದರೆ ಜಾಲಪ್ಪ ಅವರ ಆಶಯಗಳು ಈಡೇರುವುದಿಲ್ಲ.

ಟ್ರಸ್ಟ್‌ನಲ್ಲಿ ಒಟ್ಟು 12 ಜನ ಟ್ರಸ್ಟ್ ಸದಸ್ಯರ ಪೈಕಿ ಆರು ಜನಕ್ಕೆ ಮಾತ್ರ ಮತದಾನದ ಅಧಿಕಾರ ನೀಡಲಾಗಿದೆ. ಈ ಆರು ಜನರ ಪೈಕಿ ಜಾಲಪ್ಪ ಅವರ ಮಗ ರಾಜೇಂದ್ರ ಒಬ್ಬರಿಗೆ ಮಾತ್ರ ಅವಕಾಶ ನೀಡಿ ಉಳಿದವರನ್ನು ಕೇವಲ ಸದಸ್ಯರನ್ನಾಗಿ ಮಾಡಿದ್ದಾರೆ. ಇದಕ್ಕೆ ಬದಲಾಗಿ ಜಿ.ಹೆಚ್.ನಾಗಾರಾಜ್ ಅವರ ಮಗ ಅವರ ಸಂಬಂಧಿಕರಿಗೆ ಟ್ರಸ್ಟ್‌ನಲ್ಲಿ ಆಜೀವ ಸದಸ್ಯತ್ವ ಮತದಾನದ ಹಕ್ಕು ನೀಡಿ ಇಡೀ ಟ್ರಸ್ಟ್‌ನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. 

ನಮ್ಮ ತಂದೆಯ ಆಶಯಗಳು ಈಡೇರಬೇಕು ಎಂದರೆ ಸರ್ಕಾರ ಮದ್ಯ ಪ್ರವೇಶ ಮಾಡಿ ಜಾಲಪ್ಪ ಅವರ ಕುಟುಂಬಸ್ಥರಿಗೆ ಅಧಿಕಾರ ನೀಡಬೇಕು ಇಲ್ಲವಾದಲ್ಲಿ ಸರ್ಕಾರ ಈ ಶಿಕ್ಷಣ ಸಂಸ್ಥೆಯನ್ನು ವಶಕ್ಕೆ ಪಡೆಯಬೇಕು ಎಂದರು.

ಒಟ್ಟಾರೆ ಜಾಲಪ್ಪ ಕಟ್ಟಿ ಬೆಳೆಸಿದ ಶಿಕ್ಷಣ ಸಂಸ್ಥೆ ಎದುರು ಮಕ್ಕಳೇ ಪ್ರತಿಭಟನೆ ಮಾಡಿ ಕಣ್ಣೀರಾಕುವ ಸ್ಥಿತಿ ಬಂದಿದ್ದು ಮಾತ್ರ ದುರಂತ. ಜಾಲಪ್ಪ ಇದ್ದಾಗಲೇ ವಿವಾದ ಇತ್ಯರ್ಥ ಪಡಿಸಿಕೊಳ್ಳದೆ ಈಗ ಅವರ ನಿಧನಾನಂತರ ಇಡೀ ಶಿಕ್ಷಣ ಸಂಸ್ಥೆಗಳಲ್ಲಿ ಗೊಂದಲ ಸೃಷ್ಟಿ ಮಾಡಿರೋದು ಶಿಕ್ಷಣ ಸಂಸ್ಥೆಗಳಲ್ಲಿ ಆತಂಕಕ್ಕೆ ಕಾರಣವಾಗಿರೋದಂತು ಸುಳ್ಳಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!