ಕೋವಿಡ್ ಮೂರನೇ ಅಲೆಯ ಸೋಂಕು ನಿಯಂತ್ರಣಕ್ಕೆ ಮೇಕ್ ಶಿಫ್ಟ್ ಆಸ್ಪತ್ರೆ ಸಹಕಾರಿ: ಸಚಿವ ಎನ್.ನಾಗರಾಜ್

ಬೆಂ.ಗ್ರಾ.ಜಿಲ್ಲೆ: ಮುಂಜಾಗ್ರತಾ ಕ್ರಮವಾಗಿ ಹೊಸಕೋಟೆ ನಗರದಲ್ಲಿ ಸಿಎಸ್ಆರ್ ನಿಧಿಯಡಿ 50 ಹಾಸಿಗೆಗಳ ಮೇಕ್‌ಶಿಫ್ಟ್ ಆಸ್ಪತ್ರೆ ನಿರ್ಮಿಸಿರುವುದು ಕೋವಿಡ್ ಮೂರನೇ ಅಲೆಯ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವರಾದ ಎನ್.ನಾಗರಾಜ್ (ಎಂ.ಟಿ.ಬಿ.) ಅವರು ತಿಳಿಸಿದರು.

ಕರ್ನಾಟಕ ಸರ್ಕಾರ, ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮ (ಯು.ಎನ್.ಡಿ.ಪಿ) ಮತ್ತು ಕಾರ್ಪೊರೇಟ್ ಕಂಪನಿಗಳ ಸಿ.ಎಸ್.ಆರ್. ಸಹಭಾಗಿತ್ವದಲ್ಲಿ ಅಮೇರಿಕನ್ ಇಂಡಿಯಾ ಫೌಂಡೇಶನ್ ಸಂಸ್ಥೆಯ ಮೂಲಕ ದಾನಿಗಳಾದ ಮಾಸ್ಟರ್‌ಕಾರ್ಡ್ ಇವರಿಂದ ಪ್ರಧಾನ ನೆರವು ದೊರೆತಿದ್ದು, ಸಾರಾಪ್ಲಾಸ್ಟ್ ಸಂಸ್ಥೆಯು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಸಹಕಾರದೊಂದಿಗೆ ಹೊಸಕೋಟೆ ನಗರದಲ್ಲಿ ನಿರ್ಮಾಣ ಮಾಡಲಾದ 50 ಹಾಸಿಗೆಗಳ ಮೇಕ್‌ಶಿಫ್ಟ್ ಆಸ್ಪತ್ರೆಯನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಹೊಸಕೋಟೆ ತಾಲ್ಲೂಕಿನ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಈ ಆಸ್ಪತ್ರೆ ಸಹಕಾರಿಯಾಗಲಿದ್ದು, ಕೋವಿಡ್ ನಂತರವೂ ಸಾರ್ವಜನಿಕರ ಸೇವೆಗೆ ಲಭ್ಯವಿರಲಿದೆ ಎಂದರಲ್ಲದೆ, ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡಿದ ಕಂಪನಿಗಳಿಗೆ ಸರ್ಕಾರದ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತವು ಜಾರಿಗೆ ತಂದಿರುವ ‘ವೈದ್ಯರ ನಡೆ-ಹಳ್ಳಿ ಕಡೆ’ ಕಾರ್ಯಕ್ರಮದಡಿ ವೈದ್ಯರೇ ಜನರ ಬಳಿಗೆ ತೆರಳಿ, ಆರೋಗ್ಯ ಪರೀಕ್ಷೆ ನಡೆಸುತ್ತಿರುವುದು ಶ್ಲಾಘನೀಯ ಎಂದರು.

ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟಲು ಎಲ್ಲರ ಸಹಕಾರ ಅತ್ಯಗತ್ಯವಾಗಿದ್ದು, ಜನರು ಎಚ್ಚರಿಕೆಯಿಂದ  ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಹಾಗೂ ಸಾಮಾಜಿಕ ಅಂತರ ಪಾಲಿಸುವ ಮೂಲಕ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡಿರುವ ಹಲವಾರು ಕ್ರಮಗಳಿಂದಾಗಿ ಕೋವಿಡ್ ಸೋಂಕು ನಿಯಂತ್ರಣವಾಗುತ್ತಿದೆ ಎಂದರಲ್ಲದೆ, ದೇಶದ ಪ್ರತಿಯೊಬ್ಬರಿಗೂ ಉಚಿತ ಲಸಿಕೆಯನ್ನು ನೀಡುವ ಮೂಲಕ ಕೋವಿಡ್ ಸೋಂಕು ತಡೆಗಟ್ಟಲು ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಶ್ರಮಿಸುತ್ತಿದ್ದಾರೆ ಹಾಗೂ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣದ ಯಶಸ್ಸಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಶ್ರಮವಹಿಸಿದ್ದಾರೆ ಎಂದು ಶ್ಲಾಘಿಸಿದರು. 

ನಗರೋತ್ಥಾನ ಯೋಜನೆಯಡಿ ಹೊಸಕೋಟೆ ನಗರದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಈ ಕಾಮಗಾರಿಯಿಂದ ಹೊಸಕೋಟೆ ನಗರದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ದೂರಾಗಲಿದೆ ಎಂದು ತಿಳಿಸಿದರು.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್‌ಕುಮಾರ್ ಬಚ್ಚೇಗೌಡ ಅವರು ಮಾತನಾಡಿ, ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಹೊಸಕೋಟೆ ತಾಲ್ಲೂಕಿನಲ್ಲಿ ನಿರ್ಮಾಣವಾಗಬೇಕಿದ್ದ ಮೇಕ್‌ಶಿಫ್ಟ್ ಆಸ್ಪತ್ರೆಯು ತಡವಾಗಿಯಾದರೂ ವಿಶ್ವಸಂಸ್ಥೆ, ರಾಜ್ಯ ಸರ್ಕಾರ, ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಮೇಕ್‌ಶಿಫ್ಟ್ ಆಸ್ಪತ್ರೆ ನಿರ್ಮಾಣಗೊಂಡಿರುವುದು ಹಾಗೂ ಕುಡಿಯುವ ನೀರಿನ ಕಾಮಗಾರಿ ಆರಂಭಕ್ಕೆ ಚಾಲನೆ ದೊರೆತಿರುವುದು ಉತ್ತಮ ಕಾರ್ಯವಾಗಿದೆ ಎಂದರು.

ಸಚಿವರು ಹಾಗೂ ಶಾಸಕರು, ಹೊಸಕೋಟೆ ನಗರದಲ್ಲಿ ನಗರೋತ್ಥಾನ(ಮನ್ಸಿಪಾಲಿಟಿ-3) ಯೋಜನೆಯ ಕುಡಿಯುವ ನೀರಿನ ಕಾಮಗಾರಿ ಅಂದಾಜು ರೂ. 4.64 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ಹಾಗೂ ಅನುಗೊಂಡನಹಳ್ಳಿ ಪೊಲೀಸ್ ಠಾಣೆ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ನೇರವೇರಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ಹೊಸಕೋಟೆ ತಹಶೀಲ್ದಾರ್ ಗೀತಾ ಸೇರಿದಂತೆ ಆರೋಗ್ಯ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

50 ಹಾಸಿಗೆಯ ವಿಸ್ತರಿತ ಆಸ್ಪತ್ರೆಯ ಮುಂಭಾಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಏರ್ಪಡಿಸಲಾದ ಆರೋಗ್ಯ ಶಿಕ್ಷಣ ಕುರಿತ ವಸ್ತು ಪ್ರದರ್ಶನದಲ್ಲಿ ಆಶಾ ಕಾರ್ಯಕರ್ತೆಯರು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಹೊಸಕೋಟೆ ನಗರದ ಗ್ಲೋಬಲ್ ಐ ಫೌಂಡೇಶನ್ ಹತ್ತಿರ, 44,000 ಚದರ ಅಡಿ ಪ್ರದೇಶದಲ್ಲಿ 6 ವಾರಗಳಲ್ಲಿ ಪೂರ್ಣಗೊಳಿಸಲಾದ ಮೇಕ್‌ಶಿಫ್ಟ್ ಆಸ್ಪತ್ರೆಯು 50 ಹಾಸಿಗೆಗಳನ್ನು ಹೊಂದಿದೆ. ಮೆಡಿಕ್ಯಾಬ್‌ನಲ್ಲಿ ಏಳು ಕ್ಯಾಬಿನ್‌ಗಳಿದ್ದು, ಒಂದು ಕ್ಯಾಬಿನ್‌ನಲ್ಲಿ, 8 ವೆಂಟಿಲೇಟರ್ ಹಾಸಿಗೆಗಳ ಸೌಲಭ್ಯದೊಂದಿಗೆ 1 ಐಸಿಯು ವಾರ್ಡ್, ಮೂರು ಕ್ಯಾಬಿನ್‌ನಲ್ಲಿ 14 ಹಾಸಿಗೆಗಳುಳ್ಳ ಜನರಲ್ ವಾರ್ಡ್, ಎರಡು ಕ್ಯಾಬಿನ್‌ನಲ್ಲಿ ಪುರುಷ ಹಾಗೂ ಮಹಿಳಾ ಕರ್ತವ್ಯ ನಿರತ ವೈದ್ಯರ ಕೊಠಡಿ, ಒಂದು ಕ್ಯಾಬಿನ್‌ನಲ್ಲಿ ನರ್ಸಿಂಗ್ ಸ್ಟೇಷನ್‌ ಅನ್ನು ಒಳಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!