ಬಾರದ ಬೆಳೆ ನಷ್ಟ ಪರಿಹಾರ: ವಯಕ್ತಿಕ ದ್ವೇಷದಿಂದ ಬಲಿಪಶು ಮಾಡುತ್ತಿದ್ದಾರೆಂದ ರೈತ ಸಂಪರ್ಕ ಕೇಂದ್ರದ ಮಾಜಿ ಕೃಷಿ ಅಧಿಕಾರಿ

ದೊಡ್ಡಬಳ್ಳಾಪುರ: ಅಕಾಲಿಕವಾಗಿ ಸುರಿದ ಮಳೆಯಿಂದ ತಾಲೂಕಿನ ಸಾಸಲು ಹೋಬಳಿಯ ಸುಮಾರು 240ಕ್ಕು ರೈತರಿಗೆ ಬೆಳೆ ನಷ್ಟ ಪರಿಹಾರ ಬಾರದಿರುವ ವಿಚಾರ ದಿನಕ್ಕೊಂದು ತಿರುವು ಪಡೆಯುತ್ತಿದೆಯೇ ಹೊರತು ರೈತರಿಗೆ ಪರಿಹಾರ ದೊರಕುತ್ತಿಲ್ಲ.

ಕಂದಾಯ ಇಲಾಖೆ ಅಧಿಕಾರಿಗಳು ನೊಂದಣಿ ಮಾಡಬೇಕಾದ ಅರ್ಜಿಯನ್ನು ಕೃಷಿ ಅಧಿಕಾರಿ ಪಡೆದು ನೊಂದಣಿ ‌ಮಾಡಿಲ್ಲ ಎಂದು ಆರೋಪಿಸುತ್ತಿರುವುದು ನನ್ನ ವಿರುದ್ಧದ ವಯಕ್ತಿಕ ದ್ವೇಷವೇ ಕಾರಣ ಎಂದು ಸಾಸಲು ರೈತ ಸಂಪರ್ಕ ಕೇಂದ್ರದಲ್ಲಿ ಕಾರ್ಯನಿರ್ವಹಿಸಿ ಪ್ರಸ್ತುತ ವರ್ಗಾವಣೆಗೊಂಡಿರುವ ಸಿದ್ದಲಿಂಗಯ್ಯ ಆರೋಪಿಸಿದ್ದಾರೆ..

ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿದ ಅವರು, ಸಾಸಲು ಹೋಬಳಿಯಲ್ಲಿ ಬೆಳೆ ನಷ್ಟ ಪರಿಹಾರ ನೊಂದಣಿ ಮಾಡಲು ಇತರೆ ಹೋಬಳಿಯಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅವರ ಕಚೇರಿಯಲ್ಲಿ ಉಂಟಾಗುವ ಒತ್ತಡ ತಗ್ಗಿಸುವ ಸಲುವಾಗಿ ಕೃಷಿ ಇಲಾಖೆಯಲ್ಲಿ ಅರ್ಜಿಗಳನ್ನು ಪಡೆದು ಆಯಾ ವ್ಯಾಪ್ತಿಯ ವಿಎಗಳ ಮೂಲಕ ತಲುಪಿಸುವ ಕಾರ್ಯವನ್ನು ಅಷ್ಟೇ ಮಾಡಲಾಗಿದೆ. 

ಇಷ್ಟೆ ನಮ್ಮ ಇಲಾಖೆ ಕಾರ್ಯ. ಆದರೆ ಅರ್ಜಿಗಳನ್ನು ನೊಂದಣಿ ಮಾಡದೆ, ನಾನು ವರ್ಗವಣೆಗೊಂಡ ನಂತರ ನನ್ನ ಮೇಲೆ ಆರೋಪ ಮಾಡಿ ಸಾರ್ವಜನಿಕ ವಲಯದಲ್ಲಿ ನನ್ನನ್ನು ಕಳನಾಯಕನಂತೆ ಬಿಂಬಿಸಲಾಗುತ್ತಿದೆ. ಇದರಲ್ಲಿ ದೊಡ್ಡಬಳ್ಳಾಪುರದ ಕೆಲ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಕೆಲ ರಾಜಕಾರಣಿಗಳ ಶಡ್ಯಂತ್ರ ಅಡಗಿದೆ.

ರೈತರಿಂದ ಶಾಸಕರಿಗೆ ಹಾಗು ಹಿರಿಯ ಅಧಿಕಾರಿಗಳಿಗೆ ದೂರು ಬಂದಾಗ ಸ್ಥಳದಲ್ಲಿದ್ದ ಕೃಷಿ ಅಧಿಕಾರಿಗಳು, ಈ ಪ್ರಕರಣದಲ್ಲಿ ಕೃಷಿ ಇಲಾಖೆ ಪಾತ್ರವೇನು ಎಂಬುದನ್ನು ವಿವರಿಸುವುದನ್ನು ಬಿಟ್ಟು, ನನ್ನ ವಿರುದ್ಧವೇ ಆರೋಪಿಸಿದ್ದಾರೆ. ಇದು ಆ ಅಧಿಕಾರಿಗಳಿಗೆ ತನ್ನ ಇಲಾಖೆ ಸಿಬ್ಬಂದಿಗಳ ಮೇಲಿರುವ ದ್ವೇಷ ಎಷ್ಟೇಂದು ತಿಳಿಯುತ್ತದೆ.

ಅನಾರೋಗ್ಯದ ನಡುವೆಯೂ ಸಮರ್ಪಕ ಸೇವೆ ನೀಡಲಾಗಿದೆ. ಆದರೆ ಕೆಲ ಅಕ್ರಮಗಳಿಗೆ ಅವಕಾಶ ನೀಡುವುದಿಲ್ಲವೆಂದು ತೀವ್ರವಾದ ಹಿಂಸೆ ನೀಡಿ ಸಾಸಲು ರೈತ ಸಂಪರ್ಕ ಕೇಂದ್ರದಿಂದ ವರ್ಗಾವಣೆ ಆಗುವಂತೆ ಮಾಡಿದರು. ಈಗ ವರ್ಗವಾಣೆಯಾಗಿದ್ದರು ನೆಮ್ಮದಿಯಿಂದ ಕೆಲಸ ಮಾಡಲು ಬಿಡುತ್ತಿಲ್ಲ.

ನೊಂದಣಿ ಮಾಡಬೇಕಾದ ಕಂದಾಯ ಇಲಾಖೆಯ ಅಧಿಕಾರಿಗಳನ್ನು ರಕ್ಷಿಸಲು ವರ್ಗಾವಣೆಯಾದ ನನ್ನ ಬಲಿಪಶು ಮಾಡಲು ತೀವ್ರತರವಾದ ಪ್ರಯತ್ನ ಮಾಡಲಾಗುತ್ತಿದೆ. ದೊಡ್ಡಬಳ್ಳಾಪುರ ಕೃಷಿ ಇಲಾಖೆಯ ಕೆಲ ಅಧಿಕಾರಿಗಳು ಪದೇ ಪದೇ ಸುಳ್ಳು ಆರೋಪ ಮಾಡಿ ಪ್ರತಿ ದಿನ ಮಾನಸಿಕ ಹಿಂಸೆ ನೀಡುತ್ತಿದ್ದಾರೆ‌ಂದು ಆರೋಪಿಸಿದ್ದಾರೆ.

ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಘಟನೆಯಲ್ಲಿ ಕೃಷಿ ಅಧಿಕಾರಿಯ ಪಾತ್ರವೇನು, ರೈತರು ಅರ್ಜಿಗಳನ್ನು ಯಾರಿಗೆ ನೀಡಿದ್ದಾರೆ, ಕಂದಾಯ ಇಲಾಖೆ ಅಧಿಕಾರಿಗಳು ನೊಂದಣಿ ಮಾಡದೆ ಇರಲು ಕಾರಣವೇನು, ನನ್ನ ವಿರುದ್ಧ ಆರೋಪ ಮಾಡಲು ಸಾಕ್ಷಿ ಏನು ಎಂಬುದನ್ನು ಪರಿಶೀಲನೆ ನಡೆಸಿ, ತಪ್ಪು ಮಾಡಿದವರ ವಿರುದ್ದ ಕ್ರಮಕೈಗೊಂಡು ನನ್ನನ್ನು ಕಳಂಕ ಮುಕ್ತನನ್ನಾಗಿಸಬೇಕೆಂದು ಸಿದ್ದಲಿಂಗಯ್ಯ ಅಳಲು ತೋಡಿಕೊಂಡಿದ್ದಾರೆ.

(ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ZP, TP ಚುನಾವಣೆ.. ಮಹತ್ವದ ಸುಳಿವು ನೀಡಿದ ರಾಜ್ಯ ಚುನಾವಣೆ ಅಯುಕ್ತ

ZP, TP ಚುನಾವಣೆ.. ಮಹತ್ವದ ಸುಳಿವು ನೀಡಿದ ರಾಜ್ಯ ಚುನಾವಣೆ ಅಯುಕ್ತ

ZP, TP ಚುನಾವಣೆ ಮಾಡೋದಕ್ಕೆ ಸರ್ಕಾರ ಕೂಡಾ ಸ್ಪಂದನೆ ನೀಡಿದೆ. ಎಪ್ರಿಲ್, ಮೇ ನಲ್ಲಿ ಮಾಡಲು ಸಲಹೆ ಸೂಚನೆ ನೀಡಿದೆ ಎಂದರು.

[ccc_my_favorite_select_button post_id="100849"]
ದೊಡ್ಡಬಳ್ಳಾಪುರ: ಸಡಗರ ಸಂಭ್ರಮದ ಸಂಕ್ರಾಂತಿ / Video

ದೊಡ್ಡಬಳ್ಳಾಪುರ: ಸಡಗರ ಸಂಭ್ರಮದ ಸಂಕ್ರಾಂತಿ / Video

ದೊಡ್ಡಬಳ್ಳಾಪುರ: ಸುಗ್ಗಿ ಹಬ್ಬ ಸಂಕ್ರಾಂತಿಯನ್ನು (Sankranti 2025) ತಾಲೂಕಿನಾಧ್ಯಂತ ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು. ಜನತೆ ಎಳ್ಳು ಬೆಲ್ಲವನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಸಂಕ್ರಾಂತಿ ಶುಭಾಶಯಗಳನ್ನು ಕೋರಿದರು. ಮನೆಗಳ ಮುಂದೆ ಸಂಕ್ರಾಂತಿಯ ವಿಶೇಷ ಶುಭಾಶಯಗಳನ್ನು ಕೋರುವ

[ccc_my_favorite_select_button post_id="100920"]
Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ.. Video

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ.. Video

ಮಕರ ಸಂಕ್ರಾಂತಿ ಪ್ರಯುಕ್ತ ಇಂದು ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ಆಯೋಜನೆಗೊಂಡಿದ್ದವು. Makara jyothi

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]

Hindi ರಾಷ್ಟ್ರ ಭಾಷೆ ಅಲ್ಲ.. ಆರ್.ಅಶ್ವಿನ್ ಹೇಳಿಕೆಗೆ

[ccc_my_favorite_select_button post_id="100687"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

ಯಾರೋ ದುಷ್ಕರ್ಮಿಗಳು ಹೂವಿನ ಗಿಡಗಳಿಗೆ ಕಳೆನಾಶಕ ಸಿಂಪಡಣೆ ಮಾಡಿದ್ದು, ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತ ಸತೀಶ್ ಬಾಬು ಕಂಗಾಲಾಗಿದ್ದಾರೆ. Herbicide

[ccc_my_favorite_select_button post_id="100832"]
Accident: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕಾರು ಅಪಘಾತ..! ಬೆನ್ನಿನ ಮೂಳೆ ಮುರಿತ

Accident: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕಾರು ಅಪಘಾತ..! ಬೆನ್ನಿನ ಮೂಳೆ ಮುರಿತ

ಕಾರು ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕೂಡಲೇ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ Accident

[ccc_my_favorite_select_button post_id="100889"]

ಆರೋಗ್ಯ

ಸಿನಿಮಾ

ಸಂಕ್ರಾಂತಿ ಸಂಭ್ರಮದಲ್ಲಿ ನಟ ದರ್ಶನ್ ದರ್ಶನ..! ಅಭಿಮಾನಿಗಳು ಫುಲ್ ಖುಷ್

ಸಂಕ್ರಾಂತಿ ಸಂಭ್ರಮದಲ್ಲಿ ನಟ ದರ್ಶನ್ ದರ್ಶನ..! ಅಭಿಮಾನಿಗಳು ಫುಲ್ ಖುಷ್

ಇಷ್ಟು ದಿನ ದರ್ಶನ್ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದ ಅಭಿಮಾನಿಗಳು ಈ ಒಂದು ಪೋಸ್ಟ್‌ನಿಂದಾಗಿ ಫುಲ್ ಖುಷಿಯಾಗಿದ್ದಾರೆ. Darshan

[ccc_my_favorite_select_button post_id="100939"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!