ದೇವರಾಜ ಅರಸು ಎಜುಕೇಶನಲ್ ಟ್ರಸ್ಟ್ ಸಾರ್ವಜನಿಕರ ಆಸ್ತಿ ಕುಟುಂಬದ ಟ್ರಸ್ಟ್ ಅಲ್ಲ; ಜಾಲಪ್ಪನವರ ಕನಸಿನ ಸಂಸ್ಥೆಯ ಆಶಯಗಳಿಗೆ ಧಕ್ಕೆಯಾಗಬಾರದು – ಜಿ.ಹೆಚ್.ನಾಗರಾಜ್ ಸ್ಪಷ್ಟನೆ

ಕೋಲಾರ: ದೇವರಾಜ ಅರಸು ಟ್ರಸ್ಟ್‌ ದಿ.ಆರ್‌.ಎಲ್‌.ಜಾಲಪ್ಪ ಅವರ ಆಶಯ ಹಾಗೂ ಆಶೋತ್ತರಗಳಂತೆ ನಡೆಯುತ್ತಿದ್ದು, ಜಾಲಪ್ಪನವರ ಕುಟುಂಬಸ್ಥರಿಗೆ ಇದರಲ್ಲಿ ಹಕ್ಕಿಲ್ಲ. ಟ್ರಸ್ಟ್‌ ಬೈಲಾದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಆಡಳಿತಾಧಿಕಾರಿ ಜಿ.ಎಚ್‌.ನಾಗರಾಜ್‌ ಅವರು ಸ್ಪಷ್ಟಪಡಿಸಿದ್ದಾರೆ.

ಸಂಸ್ಥೆಯ ಮೇಲೆ ಹಕ್ಕು ಸಾಧಿಸಲು ಕುಟುಂಬಸ್ಥರು ಸೋಮವಾರ ನಡೆಸಿದ ಗದ್ದಲ ಸಂಬಂಧ ಟ್ರಸ್ಟಿಗಳೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು. ಇದು ಕುಟುಂಬದ ಟ್ರಸ್ಟ್ ಅಲ್ಲ. ಸಾರ್ವಜನಿಕರ ಟ್ರಸ್ಟ್ ಆಗಿದ್ದು. ಜಾಲಪ್ಪನವರು ನಿಧನ ಹೊಂದುವ ಮೊದಲು ತಮ್ಮ ಕುಟುಂಬದವರು ಯಾರಿರಬೇಕು ಎಂಬುದನ್ನು ನಿರ್ಧರಿಸಿದ್ದರು ಎಂದರು.

ಟ್ರಸ್ಟ್‌ ವಿಚಾರಕ್ಕೆ ಸಂಬಂಧಿಸಿದಂತೆ ನೀಡಲಾಗಿರುವ ಸೀಲಿಂಗ್ ಲೆಟರ್ನಲ್ಲಿ ಜಾಲಪ್ಪನವರು ತಮ್ಮ ಪುತ್ರ ರಾಜೇಂದ್ರ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಈ ಹಿಂದಿನ ಸಭೆಯಲ್ಲಿ ಜಾಲಪ್ಪನವರ ಮೊಮ್ಮಗ ಅರವಿಂದ್ ಅವರೇ ಅಧ್ಯಕ್ಷರ ಹೆಸರನ್ನು ಅನುಮೋದಿಸಿದ್ದರು. ಸದ್ಯ ಜಾಲಪ್ಪನವರ ಪುತ್ರ ರಾಜೇಂದ್ರ ಅವರೇ ಟ್ರಸ್ಟ್ ನ ಉಪಾಧ್ಯಕ್ಷರಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈಗಿನ ಟ್ರಸ್ಟ್ ಯಾವುದೇ ಕಾನೂನು ಬಾಹಿರ ಕೆಲಸ ಮಾಡುತ್ತಿಲ್ಲ. ಇದರ ಹಿಂದೆ ರಾಜಕೀಯ ಪಿತೂರಿ ಇರಬಹುದು. ಉತ್ತಮ ಬಾಂದವ್ಯ ಇದ್ದ ಕುಟುಂಬವನ್ನು ಒಡೆದಿದ್ದರ ಹಿಂದೆ ಷಡ್ಯಂತ್ರ ನಡೆಯುತ್ತಿದೆ. ಬಹಿರಂಗವಾಗಿ ಹೇಳಿದರೆ ಕೆಲವರಿಗೆ ನೋವಾಗಬಹುದು. ಆಡಳಿತ ಪಕ್ಷದ ಬಹುತೇಕರು ಇದರ ಹಿಂದೆ ಇದ್ದಾರೆ ಅನ್ನುವುದನ್ನು ಹೇಳಿದ್ದೇನೆ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ಟ್ರಸ್ಟಿಯಾಗಿದ್ದವರು. ಅವರು ನಮ್ಮ ಜೊತೆ ಮಾತಾಡಿದ್ದಾರೆ. ಹೊಸ ಸಮಿತಿಯಲ್ಲಿ ರಾಜೇಂದ್ರ ಅವರ ಹೆಸರಿದೆ. ಈಗ ನಮ್ಮ ಮೇಲೆ ಮಾಡಲಾಗುತ್ತಿರುವ ಯಾವುದೇ ಆರೋಪಕ್ಕೆ ಹುರುಳಿಲ್ಲ. ಜಾಲಪ್ಪನವರದ್ದು ನನ್ನದು 50 ವರ್ಷದ ಬಾಂದವ್ಯ. ನನ್ನ ಮನೆ ಮೇಲೆ ಮೂರು ಬಾರಿ ರೈಡ್ ಹಾಗೂ ಸಂಸ್ಥೆಯ ಮೇಲೂ ಎರಡು ಬಾರಿ ರೈಡ್ ಮಾಡಲಾಗಿದೆ. ಈ ವಿಚಾರದಲ್ಲಿ ನಮಗೆ ಕ್ಲೀನ್ ಚಿಟ್ ಸಿಕ್ಕಿದೆ. ಸಂಸ್ಥೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಸಾರ್ವಜನಿಕ ಟ್ರಸ್ಟ್ ಆಗಿರುವ ಕಾರಣ ಕುಟುಂಬದ ಹಸ್ತಕ್ಷೇಪದ ವಿಚಾರವೇ ಬರುವುದಿಲ್ಲ. ಬೈಲಾ ಪ್ರಕಾರ ಏನು ಇದೆಯೋ ಅದನ್ನೇ ಕಾರ್ಯಗತ ಗೊಳಿಸಲಾಗಿದೆ ಎಂದರು. 

ಆರ್. ಎಲ್‌. ಜಾಲಪ್ಪನವರು ಯಾವುದೇ ಮಕ್ಕಳನ್ನೂ ಹತ್ತಿರ ಸೇರಿಸುತ್ತಿರಲಿಲ್ಲ. ರಾಜಕೀಯವಾಗಿಯೂ ಹಾಗೂ , ಕಾನೂನುಬದ್ಧವಾಗಿಯೂ ವಿಚಾರ ಎದುರಿಸಲು ಸಿದ್ಧ. ಟ್ರಸ್ಟ್ ಗೆ ಬೈಲಾ ನಿಯಮವೇ ಅಂತಿಮ ಎಂದಿದ್ದಾರೆ.

2004ರಿಂದ ಟ್ರಸ್ಟ್ ನಲ್ಲಿ ಸಕ್ರಿಯನಾಗಿದ್ದೇನೆ. ಅಲ್ಲದೆ ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷನಾಗಿದ್ದೆ. ನಂತರ ರಾಜಕಾರಣ ಬಿಟ್ಟು ಪೂರ್ಣ ಪ್ರಮಾಣದಲ್ಲಿ ಟ್ರಸ್ಟ್ ಕೆಲಸದಲ್ಲಿ ಗುರುತಿಸಿಕೊಂಡಿದ್ಡೆದೇನೆ ಎಂದು ಜಾಲಪ್ಪನವರ ಮೂರನೇ ಮಗ ರಾಜೇಂದ್ರ ಸ್ಪಷ್ಟಪಡಿಸಿದ್ದಾರೆ.

ನಮ್ಮ ತಂದೆ ಸತ್ತು ತಿಂಗಳು ಕಳೆಯುತ್ತಿದ್ದ ಹಾಗೆ ಈ ರೀತಿ ಮಾಡಿದ್ದು ಸರಿಯಲ್ಲ. ನಾನು ಜಾಲಪ್ಪನವರ ಸಂಸ್ಥೆಯ ಪರವಾಗಿ ನಿಂತಿದ್ದೇನೆ. ಕುಟುಂಬಕ್ಕಿಂತ ಜಾಲಪ್ಪನವರ ಆಶಯಗಳು ಮುಖ್ಯ. ಕುಟುಂಬದವರ ಮನಸನ್ನು ಕೆಡಿಸಿದ ಕ್ಷುದ್ರ ಜನರಿದ್ದಾರೆ . ಮಾಜಿ ಸಿಎಂ ಸಿದ್ದರಾಮಯ್ಯನವರ ಬಳಿ ಟ್ರಸ್ಟ್ ವಿಚಾರ ಈಗಾಗಲೇ‌ ಮಾತಾಡಿದ್ದೇವೆ . ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳಬೇಕಾದ ವಿಚಾರವಿದು. ಅವರಿನ್ನೂ ಕುಟುಂಬದ ಟ್ರಸ್ಟ್ ಅನ್ನುವ ತಪ್ಪು ಭಾವನೆಯಲ್ಲಿದ್ದಾರೆ. ಹೀಗಾಗಿಯೇ ಅವರಲ್ಲಿ ಗೊಂದಲಗಳಿವೆ. ಅಕ್ರಮಗಳು ನಡೆದಿದ್ದರೇ ಅವರ ಬೇಡಿಕೆಯಂತೆ ತನಿಖೆಯಾಗಲಿ ಎಂದು ಸವಾಲು ಹಾಕಿದರು. 

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!