ಗ್ರಾಮ ಒನ್ ಇಂದಿನಿಂದ 3026 ಗ್ರಾಮ ಪಂಚಾಯಿತಿಗಳಲ್ಲಿ ಆರಂಭ: ಮಾರ್ಚ್ ಅಂತ್ಯದೊಳಗೆ ರಾಜ್ಯಾದ್ಯಂತ ವಿಸ್ತರಣೆ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಯೋಜನೆ ಇಂದಿನಿಂದ ರಾಜ್ಯದ 3026 ಗ್ರಾಮ ಪಂಚಾಯಿತಿಗಳಲ್ಲಿ ಆರಂಭವಾಗಿದೆ. ಮಾರ್ಚ್ ಅಂತ್ಯದೊಳಗೆ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಬುಧವಾರ ವರ್ಚುಯಲ್ ಕಾರ್ಯಕ್ರಮದಲ್ಲಿ ಸಸಿಗೆ ನೀರು ಹಾಕುವ  ಮೂಲಕ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್  ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜನರ ಸಮಯ ಹಾಗೂ ಹಣ ಉಳಿಸುವ ಗ್ರಾಮ ಒನ್: ಸರ್ಕಾರದ ಸೌಲಭ್ಯ ಪಡೆಯಲು ಜನರು  ಸಮಯ ಹಾಗೂ ಹಣ ವ್ಯಯಿಸುವುದನ್ನು ತಪ್ಪಿಸಿ, ಗ್ರಾಮೀಣ ಜನರ ಬಳಿಯೇ ಸೇವೆಗಳನ್ನು ತಲುಪಿಸುವ ಧ್ಯೇಯದೊಂದಿಗೆ ಗ್ರಾಮ ಒನ್ ಕಾರ್ಯಕ್ರಮವನ್ನು ರೂಪಿಸಲಾಗಿದೆ.

ಕೃಷಿ, ತೋಟಗಾರಿಕೆ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಹಲವಾರು ಸೇವೆಗಳು ಗ್ರಾಮ ಮಟ್ಟದಲ್ಲಿ ಲಭ್ಯವಾಗಿಸುವ  ಚಿಂತನೆಯಿಂದ ಗ್ರಾಮ ಒನ್ ಪ್ರಾರಂಭಿಸಲಾಗಿದೆ. ತಾಲ್ಲೂಕು ಕಚೇರಿಯಲ್ಲಿ  ಸೇವೆಗಳಿಗಾಗಿ ಜನಸಂದಣಿ ತಪ್ಪಿಸಲು ಹಾಗೂ ಸೇವೆಗಳ ಪೂರೈಕೆಯಲ್ಲಿ ವಿಕೇಂದ್ರೀಕರಣದ ಉದ್ದೇಶದಿಂದ, ಗ್ರಾಮಮಟ್ಟದಲ್ಲಿಯೂ ಈ ಎಲ್ಲ ಸೇವೆಗಳನ್ನು ಒದಗಿಸಲಾಗುವುದು.  ಗ್ರಾಮಸ್ಥರು ನೇರವಾಗಿ ಗ್ರಾಮ ಪಂಚಾಯತಿಗಳಿಗೆ ತೆರಳಿ ಗ್ರಾಮ ಒನ್ ಸೇವೆಗಳನ್ನು ಪಡೆಯಬಹುದಾಗಿದೆ ಎಂದು ತಿಳಿಸಿದರು.

ಜನರ ವಿಶ್ವಾಸವನ್ನು ಪುನರ್ ಸ್ಥಾಪಿಸುವ ಚಿಂತನೆ: ಉತ್ತಮ ಸಲಕರಣೆ ,ಸಮರ್ಥ ಹಾಗೂ ಸದೃಢ ತಂತ್ರಜ್ಞಾನದಿಂದ ಯಾವುದೇ ಅಡಚಣೆಗಳಿಲ್ಲದೆ ಗ್ರಾಮೀಣ ಜನರಿಗೆ ಸೇವೆ ಒದಗಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. 12 ಜಿಲ್ಲೆಗಳ 3026 ಗ್ರಾಮ ಪಂಚಾಯತಿಗಳಲ್ಲಿ ಈ ಸೇವೆಯನ್ನು ಪ್ರಾರಂಭಿಸಲಾಗಿದ್ದು, ಈ ಹಿಂದೆ 4 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿ, ಅನುಷ್ಠಾನದಲ್ಲಿನ ಎಲ್ಲ ತೊಡಕುಗಳನ್ನು ನಿವಾರಿಸಲಾಗಿದೆ. ಜನರಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವ ಕ್ರಾಂತಿಕಾರಿ ಬದಲಾವಣೆ ಇದಾಗಿದೆ. ತಳಮಟ್ಟದಲ್ಲಿ ಸರ್ಕಾರದ ಸೇವೆಗಳನ್ನು ಸಮರ್ಪಕವಾಗಿ ಸುಲಭವಾಗಿ ತಲುಪಿಸಲಾಗುವುದು. ಈ ವ್ಯವಸ್ಥೆಯ ಮೂಲಕ ಸರ್ಕಾರದ ಕಾರ್ಯನಿರ್ವಹಣೆಯ ಮೇಲಿನ ಜನರ ವಿಶ್ವಾಸವನ್ನು ಪುನರ್ ಸ್ಥಾಪಿಸುವ ಚಿಂತನೆ ಇದೆ ಎಂದು ತಿಳಿಸಿದರು. 

ಗ್ರಾಮ ಸ್ವರಾಜ್ಯದಿಂದ ಗ್ರಾಮ ಸುರಾಜ್ಯದೆಡೆಗೆ: ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯ ಹಾಗೂ ಅಟಲ್ ಬಿಹಾರಿ ವಾಜಪೇಯಿಯವರ ಗ್ರಾಮ ಸುರಾಜ್ಯ , ಸ್ವರಾಜ್ಯದಿಂದ ಸುರಾಜ್ಯದೆಡೆಗೆ ಗ್ರಾಮಗಳನ್ನು ಒಯ್ಯಲು ಆಧುನಿಕ ತಂತ್ರಜ್ಞಾನ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದರು.

ಗ್ರಾಮ ಒನ್ – ದಕ್ಷ ವ್ಯವಸ್ಥೆಯಾಗಿಸಲು ಸೂಚನೆ: ಮನೆ ಹೊಲ ಹಕ್ಕು ಪತ್ರಗಳು, ಸಂಧ್ಯಾ ಸುರಕ್ಷಾ, ಅಂಗವಿಕಲರ ಮಾಸಾಶನ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹೀಗೆ ಜನರ ಹತ್ತಾರು ಸೇವೆಗಳ ಅವಶ್ಯಕತೆಗಳನ್ನು ಪೂರೈಸುವ  ಪ್ರಯತ್ನವಾಗಿದೆ.  ಪ್ರಮುಖ ಸೇವೆಗಳಿಗೆ ಸೀಮಿತಗೊಳಿಸಿ ಅತ್ಯಂತ ದಕ್ಷ  ವ್ಯವಸ್ಥೆಯನ್ನಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ.  ಈ ವ್ಯವಸ್ಥೆಯನ್ನು ನಿರಂತರವಾಗಿ ಸುಧಾರಿಸುವ ಮೂಲಕ ಜನರಿಗೆ ಸಮರ್ಪಕವಾಗಿ ಸೇವೆಗಳನ್ನು ಒದಗಿಸಲಾಗುವುದು ಎಂದರು.

ಗ್ರಾಮ ಒನ್ ಬಗ್ಗೆ ಜನರಲ್ಲಿ ಅರಿವು: ಶಾಸಕರು, ಸಚಿವರು ಹಾಗೂ ಜನಪ್ರತಿನಿಧಿಗಳು ಗ್ರಾಮ ಒನ್ ವ್ಯವಸ್ಥೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿ, ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮ ಒನ್ ಕಾರ್ಯನಿರ್ವಹಣೆಯ ಬಗ್ಗೆ ಪರಿಶೀಲಿಸಬೇಕೆಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಗ್ರಾಮ ಒನ್ ಯಶಸ್ಸಿಗೆ ಜಿಲ್ಲಾಧಿಕಾರಿಗಳ ನಾಯಕತ್ವ: ಗ್ರಾಮ ಒನ್ ನ ಪ್ರಾಯೋಗಿಕ ಹಂತದಲ್ಲಿಯೇ 6 ಲಕ್ಷಕ್ಕಿಂತ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿ ಸೇವೆಗಳನ್ನು ಪೂರೈಸಲಾಗಿದೆ. ತಹಶೀಲ್ದಾರರು, ಸಹಾಯಕ ಕಮೀಷನರ್ ರ ಸಹಕಾರ ಬಹಳ ಮುಖ್ಯ.  ಅನ್ ಲೈನ್ ನಲ್ಲಿ ಸ್ವೀಕೃತವಾಗುವ ಅರ್ಜಿಗಳಿಗೆ ಶೀಘ್ರವಾಗಿ ಮಂಜೂರಾತಿ ನೀಡದಾಗ ಮಾತ್ರ ಸಂಬಂಧಪಟ್ಟ ಪ್ರಮಾಣ ಪತ್ರಗಳನ್ನು ಜನರಿಗೆ ದೊರಕಿಸಿಕೊಡಲು ಸಾದ್ಯವಾಗುತ್ತದೆ.  ಜನರಿಗೆ ಸೇವೆಗಳನ್ನು ಒದಗಿಸುವ ಎಲ್ಲ ಹಂತದ ವ್ಯವಸ್ಥೆಯನ್ನು ತಾಲ್ಲೂಕು ಕಚೇರಿಯಲ್ಲಿ ಕಲ್ಪಿಸಿ ಆನ್ಲೈನ್ ನಲ್ಲಿಯೇ ಎಲ್ಲ ಪರಿಹಾರವನ್ನು ಒದಗಿಸುವ ವ್ಯವಸ್ಥೆ ಆಗಬೇಕು. ಇದಕ್ಕಾಗಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಈ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ ಜವಾಬ್ದಾರಿ  ಹಾಗೂ ನಾಯಕತ್ವ ವಹಿಸಬೇಕು. ಸರ್ಕಾರದ ಪ್ರಥಮ ಆದ್ಯತೆಯ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸುವ ಗ್ರಾಮ ಒನ್: ಗ್ರಾಮೀಣ ಜನರ ಬದುಕಿನಲ್ಲಿ ಬದಲಾವಣೆ ತಂದು ಜೀವನದ ಗುಣಮಟ್ಟವನ್ನು ಉನ್ನತೀಕರಿಸಲು ಸರ್ಕಾರದ ಸೇವೆಗಳನ್ನು ಸುಲಭವಾಗಿ ದೊರಕಿಸಿಕೊಟ್ಟು ಗ್ರಾಮ ಒನ್ ವ್ಯವಸ್ಥೆಯ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಹಾಗೂ ಜನಮನದಲ್ಲಿ ಉಳಿಯುವಂತಹ ಕಾರ್ಯಕ್ರಮ ವಾಗಬೇಕು. ಜನರ ಬದುಕನ್ನು ನಂ.1 ಮಟ್ಟಕ್ಕೆ ಏರಿಸಲು ಗ್ರಾಮ ಒನ್ ಸಹಕರಿಸುವಂತಾಗಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಹಾವೇರಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯೋಜನೆ ಉದ್ಘಾಟನಾ ಸಮಾರಂಭ ಸಂದರ್ಭದಲ್ಲಿ ಗ್ರಾಮಸ್ಥರಿಂದ ಅರ್ಜಿ ಸ್ವೀಕರಿಸಿ ಆಯುಷ್ಮಾನ್ ಭಾರತ, ಆರ್ ಟಿ ಸಿ, ಸಂಧ್ಯಾ ಸುರಕ್ಷಾ ಕಾರ್ಡ್, ರಹವಾಸಿ ಪ್ರಮಾಣಪತ್ರ ಮುಂತಾದ ಪ್ರಮಾಣಪತ್ರಗಳನ್ನು ವಿತರಣೆ ಮಾಡಲಾಯಿತು. ತಕ್ಷಣವೇ ಪ್ರಮಾಣಪತ್ರ ವಿತರಿಸಲು ವ್ಯವಸ್ಥೆ ಮಾಡಿಕೊಂಡಿದ್ದ ಇ ಆಡಳಿತ ಇಲಾಖೆ ಅಧಿಕಾರಿಗಳ ಕಾರ್ಯವನ್ನು ಸಿಎಂ ಬೊಮ್ಮಾಯಿ ಶ್ಲಾಘಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಧರ್ಮ,‌ ಪೂಜೆ, ಭಕ್ತಿ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುವ ಸಾಧನಗಳು: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮ,‌ ಪೂಜೆ, ಭಕ್ತಿ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುವ ಸಾಧನಗಳು: ಡಿಸಿಎಂ ಡಿ.ಕೆ. ಶಿವಕುಮಾರ್

"ಧರ್ಮ,‌ ಪೂಜೆ, ಭಕ್ತಿ ಇವು ಪ್ರದರ್ಶನಕ್ಕೆ ಇರುವಂತಹ ಸಂಗತಿಗಳಲ್ಲ. ಇವು ಮನುಷ್ಯನ ಆತ್ಮವಿಶ್ವಾಸವನ್ನು ಹೆಚ್ಚಿಸುವ ಸಲುವಾಗಿ ಇರುವ ಸಾಧನಗಳು. ನನ್ನ ಧರ್ಮ ಸರಿ, ನಿನ್ನ ಧರ್ಮ ತಪ್ಪು ಎನ್ನುವ ಕಲ್ಪನೆ ಎಲ್ಲಿಯೂ ಇಲ್ಲ" ಎಂದು

[ccc_my_favorite_select_button post_id="119874"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!