ದೊಡ್ಡಬಳ್ಳಾಪುರ: ಸಚಿವರ ಭೇಟಿ ಸಂದರ್ಭದಲ್ಲಿ ಪ್ರತಿಭಟನೆ ನಡೆಯದಂತೆ ಜಾಣ್ಮೆತೋರಿದ ಅಧಿಕಾರಿಗಳು / ತಾಲೂಕು ಕಚೇರಿಯಲ್ಲಿ ದಿಢೀರ್ ಸಭೆ / ಸಚಿವರಿಗೆ ಮನವಿ ಸಲ್ಲಿಸಲು ಅವಕಾಶ

ದೊಡ್ಡಬಳ್ಳಾಪುರ: ಸ್ಥಗಿತಗೊಳಿಸಿರುವ ರಾಗಿ ಖರೀದಿ ನೋಂದಣಿಯನ್ನು ಜ.31 ರಿಂದ ಆರಂಭಿಸಬೇಕು. ರಾಗಿ ಖರೀದಿ ಮಿತಿಯನ್ನು ಸಡಿಲಗೊಳಿಸಬೇಕು. ಈ ಬೇಡಿಕೆಗಳು ಈಡೇರದಿದ್ದರೆ ಜ.31 ರಿಂದ ದೇಶದಾದ್ಯಂತ ರೈತ ವಿಶ್ವಾಸ ದ್ರೋಹ ದಿನವನ್ನಾಗಿ ಆಚರಿಸುತ್ತಿರುವ ಸಂದರ್ಭದಲ್ಲಿಯೇ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಗುರುವಾರ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ರೈತ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.

ಕನಸವಾಡಿಗೆ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ವೇಳೆ ಉಂಟಾಗಲಿದ್ದ ಪ್ರತಿಭಟನೆಯನ್ನು ತಡೆಯುವಲ್ಲಿ ಜಿಲ್ಲೆ ಮತ್ತು ತಾಲೂಕು ಅಧಿಕಾರಿಗಳು ಯಶಸ್ವಿಯಾಗಿದ್ದು, ಸಚಿವರು ಬರುವ ಮುಂಚೆಯೇ ರೈತ ಸಂಘಟನೆಗಳ ಮುಖಂಡರನ್ನು ಕರೆಸಿ ಸಭೆ ನಡೆಸಿದಲ್ಲದೆ, ಪ್ರತಿಭಟನೆ ಹೊರತು ಪಡೆಸಿ ಸಚಿವರಿಗೆ ಮನವಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಕಾರ್ಯಕ್ರಮದ ವೇಳೆ ನಡೆಯಲಿದ್ದ ಪ್ರತಿಭಟನೆಯನ್ನು ತಡೆದಿದ್ದಾರೆ.

ಈ ಕುರಿತಂತೆ ಇಂದು ನಗರದ ತಾಲೂಕು ಕಚೇರಿಯಲ್ಲಿ ನಡೆದ ಸಭೆ ನಡೆಸಿ ರೈತ ಮುಖಂಡರ ಅಹವಾಲುಗಳನ್ನು ಅಧಿಕಾರಿಗಳು ಆಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ, 2021ರಲ್ಲಿ ಪಂಜಾಬ್ ರಾಜ್ಯದಲ್ಲಿ ರೂ36 ಸಾವಿರ ಕೋಟಿ ವೆಚ್ಚದಲ್ಲಿ ಗೋಧಿ ಸೇರಿದಂತೆ ಇತರೆ ಆಹಾರ ಧಾನ್ಯಗಳನ್ನು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸರ್ಕಾರ ಖರೀದಿ ಮಾಡುವ ಮೂಲಕ ರೈತರ ನೆರವಿಗೆ ನಿಂತಿದೆ. ಆದರೆ ನಮ್ಮ ರಾಜ್ಯದಲ್ಲಿ ಕೇವಲ ರೂ400 ಕೋಟಿ ವೆಚ್ಚದಲ್ಲಿ ಮಾತ್ರ ಬೆಂಬಲ ಬೆಲೆ ಯೋಜನೆಯಲ್ಲಿ ಆಹಾರ ಧಾನ್ಯ ಖರೀದಿ ಮಾಡಲಾಗಿದೆ. ಈ ಸರ್ಕಾರಕ್ಕೆ ರೈತರ ಬಗ್ಗೆ ಗೌರವ ಇಲ್ಲದೇ ಇರುವುದಕ್ಕೆ ಇದು ಸಾಕ್ಷಿಯಾಗಿದೆ. ಮೂರನೇ ದರ್ಜೆ ಆಡಳಿತದಿಂದಾಗಿ ರೈತರು ಇಂದು ಬೀದಿಗೆ ಬರುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದರು.        

ರಾಜ್ಯದಲ್ಲಿನ  ಬಹುತೇಕ ಹಿರಿಯ ಅಧಿಕಾರಿಗಳಿಗೆ ರಾಗಿ ಅಂದರೆ ಯಾವ ರೀತಿಯ ಆಹಾರ ಎನ್ನುವುದೇ ತಿಳಿಯದೇ ಇರುವುದೇ ರಾಗಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಉತ್ತರ ಭಾರತದ ರಾಜ್ಯಗಳ ಜನರ ಪ್ರಮುಖ ಆಹಾರವಾಗಿರುವ ಗೋಧಿಯನ್ನು ಎಲ್ಲಾ ರಾಜ್ಯದ ಜನರು ಬಳಸುವಂತೆ ಮಾಡಲಾಗಿದೆ. ಉತ್ತಮ ಆರೋಗ್ಯಕ್ಕೆ ರಾಗಿಯನ್ನು ಪ್ರಮುಖ ಆಹಾರವನ್ನಾಗಿ ಬಳಸುವುದು ಮುಖ್ಯವಾಗಿದೆಯಂದು ಹಲವಾರು ತಜ್ಞ ವೈದ್ಯರು ಹೇಳುತ್ತಲೇ ಇದ್ದರು ದೇಶದ ಇತರೆ ರಾಜ್ಯಗಳಲ್ಲೂ ರಾಗಿ ಬಳಸುವಂತೆ ಮಾಡುವಲ್ಲಿಯೇ ಆಡಳಿತಗಾರರು ಸೋತಿದ್ದಾರೆ. ರಾಗಿಯನ್ನು ಪಡಿತರ ವ್ಯವಸ್ಥೆಯಲ್ಲಿ ವಿತರಣೆ ಮಾಡಲು ದೇಶದ ಇತರೆ ರಾಜ್ಯಗಳಿಗು ವಿಸ್ತರಣೆಯಾಗಬೇಕು ಎಂದು ಆಗ್ರಹಿಸಿದರು. 

ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯ ರೈತ ಸಂಘದ ಮುಖಂಡರು ಮಾತನಾಡಿ, ರಾಗಿ ಖರೀದಿ ಮಿತಿಯನ್ನು ಸಡಿಲಮಾಡುವಂತೆ ಆಗ್ರಹಿಸಿ ನಗರದ ರಾಗಿ ಖರೀದಿ ಕೇಂದ್ರದ ಮುಂದೆ ಒಂದು ವಾರಗಳ ಕಾಲ ರಾತ್ರಿ ಹಗಲು ಧರಣಿ ನಡೆಸಿದ್ದರು ಸೌಜನ್ಯಕ್ಕಾದರು ಜಿಲ್ಲಾಧಿಕಾರಿಗಳು ರೈತರನ್ನು ಭೇಟಿ ಮಾಡಿ ಕಷ್ಟಗಳನ್ನು ವಿಚಾರ ಮಾಡಿ ಸರ್ಕಾರದ ಗಮನಕ್ಕೆ ತಂದಿಲ್ಲ. ರೈತರ ಬಗ್ಗೆ ಗೌರವ ಇಲ್ಲದ ಜಿಲ್ಲಾಧಿಕಾರಿಗಳನ್ನು ಇಲ್ಲಿಂದ ತಕ್ಷಣ ವರ್ಗಾವಣೆ ಮಾಡಬೇಕು. ಇಂದಿನ ಸಭೆಗೂ ಸಹ ಜಿಲ್ಲಾಧಿಕಾರಿಗಳು ಹಾಜರಾಗದೆ ರೈತ ಸಂಘಟನೆಗೆ ಅವಮಾನ ಮಾಡಿದ್ದಾರೆ. ರಾಗಿ ಖರೀದಿ ಮಿತಿ ಸಡಿಲ, ನೋಂದಣಿ ಆರಂಭವಾಗದ ಹೊರತು ಈಗಾಗಲೇ ನೋಂದಣಿ ಮಾಡಿಕೊಂಡಿರುವ ರೈತರಿಂದ ರಾಗಿ ಪಡೆಯಬಾರದು. ರೈತರನ್ನು ಹೊಡೆದು ಹಾಳುವ ನೀತಿಯನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ರೈತರ ಪ್ರಶ್ನೆಗಳಿಗೆ ಉತ್ತರಿಸಿದ ಉಪವಿಭಾಗಾಧಿಕಾರು ಅರುಳ್ ಕುಮಾರ್, ರಾಗಿ ಖರೀದಿಯಲ್ಲಿನ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಈಗಾಗಲೇ ಚರ್ಚಿಸಲಾಗಿದೆ. ಸರ್ಕಾರದ ಆದೇಶಗಳನ್ನು ಪಾಲಿಸುವುದಷ್ಟೇ ನಮ್ಮ ಕರ್ತವ್ಯವಾಗಿದೆ. ರಾಗಿ ಖರೀದಿ ವಿಚಾರ ಸರ್ಕಾರದ ಹಂತದಲ್ಲಿ ನಿರ್ಧಾರವಾಗಬೇಕಿದೆ. ನಮ್ಮ ಹಂತದಲ್ಲಿನ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದರು.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕಿ ಗಿರಿಜಾ ಮಾತನಾಡಿ, ರಾಗಿ ಖರೀದಿ ಮಿತಿ ಸಡಿಲಿಕೆ, ನೋಂದಣಿ ಸ್ಥಗಿತ ಇಡೀ ರಾಜ್ಯದಲ್ಲಿ ಏಕ ರೀತಿಯ ನಿಯಮವಾಗಿದೆ. ಸರ್ಕಾರ ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದರು.

ಸಭೆಯಲ್ಲಿ ತಹಶೀಲ್ದಾರ್ ಮೋಹನಕುಮಾರಿ, ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಸಬ್ಇನ್ಸ್ಪೆಕ್ಟರ್ ಗೋವಿಂದ,  ರೈತ ಸಂಘಟನೆಗಳ ಮುಖಂಡರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]