ಸತ್ಯ ಘಟನೆಯನ್ನು ಮರೆಮಾಚಿ ಅಪಪ್ರಚಾರ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಸ್ಪಷ್ಟನೆ / ಜ.26ರ ಘಟನೆ ವಿವರಿಸಿದ ನ್ಯಾಯಾಧೀಶರು

ರಾಯಚೂರು: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಸಂದರ್ಭದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರ ತೆಗೆದುಕೊಂಡು ಬಂದು ಇಟ್ಟಿರುವುದನ್ನು ಮತ್ತು ಅದನ್ನು ತೆಗೆದುಕೊಂಡು ಹೋಗಿರುವುದನ್ನು ನಾನು ನೋಡಿಲ್ಲ. ಅಂಬೇಡ್ಕರ್‌ ಭಾವಚಿತ್ರ ತೆಗೆದರೆ ಮಾತ್ರ ಧ್ವಜಾರೋಹಣಕ್ಕೆ ಬರುತ್ತೇನೆ ಎಂದು ಹೇಳಿದ್ದಾಗಿ ಅಪಪ್ರಚಾರ ಮಾಡಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಸ್ಪಷ್ಟನೆ ನೀಡಿದ್ದಾರೆ.

ಡಾ.ಅಂಬೇಡ್ಕರ್‌ ಅವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಅಭಿಮಾನ ಇದೆ. ಈ ಮಹಾನ್‌ ವ್ಯಕ್ತಿಗೆ ನಾನು ಯಾವತ್ತೂ ಅಗೌರವ ತೋರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರೆ, ನನ್ನ ಬಗ್ಗೆ ಯಾವ ಉದ್ದೇಶ ಇಟ್ಟುಕೊಂಡು ಈ ರೀತಿ ಅಪಪ್ರಚಾರ ಮಾಡಿದ್ದಾರೆ ಎಂಬುದು ನನಗೆ ತಿಳಿಯದಾಗಿದೆ. ಆ ವದಂತಿಯನ್ನು ನಂಬಬೇಡಿ’ ಎಂದು ಕೋರಿದ್ದಾರೆ.

ವಿವರಣೆ: ಹೈಕೋರ್ಟ್‌ನವರು ನೀಡಿದ ಎಸ್‌ಒಪಿ ಪ್ರಕಾರ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿ, ವಕೀಲರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿ 200 ಜನ ಮೀರದಂತೆ ಬುಧವಾರ ಬೆಳಿಗ್ಗೆ 8.30ಕ್ಕೆ ಗಣರಾಜ್ಯೋತ್ಸವ ಆಚರಿಸಲು ನಿರ್ಣಯಿಸಿ, ನೋಟಿಸ್‌ ನೀಡಲಾಗಿತ್ತು.

ಆದರೆ, ಬೆಳಿಗ್ಗೆ 8.15ರ ವೇಳೆಗೆ ನಮ್ಮ ಸಿಬ್ಬಂದಿ ನನ್ನ ಕೊಠಡಿಗೆ ಬಂದು ಕೆಲ ವಕೀಲರು ಮಹಾತ್ಮ ಗಾಂಧಿ ಅವರ ಭಾವಚಿತ್ರದ ಜೊತೆಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಸಹ ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕು ಎಂದು ಸರ್ಕಾರದ ಸುತ್ತೋಲೆ ಇದೆ ಎನ್ನುತ್ತಿದ್ದಾರೆ ಎಂದು ತಿಳಿಸಿದರು. ನಂತರ ಕೆಲ ವಕೀಲರು ಬಂದು ಸುತ್ತೋಲೆಯ ಪ್ರಕಾರ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರ ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕು ಎಂದು ಒತ್ತಾಯಿಸಿದರು. ಆಗ ನಾನು ಆ ಸುತ್ತೋಲೆ ಹೈಕೋರ್ಟ್‌ನ ಫುಲ್‌ ಕೋರ್ಟ್‌ ಮುಂದೆ ಪರಿಗಣನೆಗೆ ಇರುವ ಕಾರಣ ನಾವು ಕಾಯಬೇಕು ಎಂದು ಹೈಕೋರ್ಟ್‌ನ ರಿಜಿಸ್ಟ್ರಾರ್‌ ನಮ್ಮ ಲೀಡರ್ಸ್‌ ಗುಂಪಿನಲ್ಲಿ ತಿಳಿಸಿದ್ದಾರೆ. ಆದ ಕಾರಣ, ಒತ್ತಾಯಿಸಬೇಡಿ ಎಂದು ವಿನಂತಿಸಿಕೊಂಡೆ.

ಅದೇ ಸಮಯದಲ್ಲಿ ರಾಯಚೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಬಸವರಾಜ ಅವರು ಬಂದು ಉಳಿದ ವಕೀಲರಿಗೆ ಹೈಕೋರ್ಟ್‌ ರಿಜಿಸ್ಟ್ರಾರ್‌ ಅವರ ಸೂಚನೆಯ ಬಗ್ಗೆ ತಿಳಿಸಿ ಹೇಳಿ ಹೊರಗೆ ಕರೆದುಕೊಂಡು ಹೋದರು. ನಮ್ಮ ಸಿಬ್ಬಂದಿ ನನಗೆ, ಹೊರಗಡೆ ಬಹಳ ಜನ ಸೇರಿದ್ದಾರೆ ಎಂದು ತಿಳಿಸಿದರು. ನಂತರ ನಮ್ಮ ಸಿಬ್ಬಂದಿ, ಹೊರಗಡೆಯಿಂದ ಬಂದಿರುವ ಬೇರೆ ಜನರು ಹೋಗಿದ್ದಾರೆ. ತಾವು ಧ್ವಜಾರೋಹಣಕ್ಕೆ ಬರಬಹುದು ಎಂದು ತಿಳಿಸಿದ ನಂತರ ನಾನು ನಮ್ಮ ಎಲ್ಲ ನ್ಯಾಯಾಧೀಶರನ್ನು ಕರೆದುಕೊಂಡು ಧ್ವಜಾರೋಹಣ ಸ್ಥಳಕ್ಕೆ ಹೋಗಿ ಧ್ವಜಾರೋಹಣ ನೆರವೇರಿಸಿರುತ್ತೇವೆ. 

ಯಾವುದೇ ವ್ಯಕ್ತಿಗಳು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರ ತೆಗೆದುಕೊಂಡು ಬಂದು ಇಟ್ಟಿದ್ದನ್ನು ಮತ್ತು ತೆಗೆದುಕೊಂಡು ಹೋಗಿದ್ದನ್ನು ನಾನು ನೋಡಿಲ್ಲ. ಸತ್ಯ ಘಟನೆಯನ್ನು ಮರೆಮಾಚಿ ನಾನು ಅವರಿಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೊ ತೆಗೆದರೆ ಮಾತ್ರ ಧ್ವಜಾರೋಹಣಕ್ಕೆ ಬರುತ್ತೇನೆ ಎಂದಿದ್ದಾಗಿ ಅಪಪ್ರಚಾರ ಮಾಡಿರುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ: ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ:

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ; ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="115331"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!