ಸತ್ಯ ಘಟನೆಯನ್ನು ಮರೆಮಾಚಿ ಅಪಪ್ರಚಾರ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಸ್ಪಷ್ಟನೆ / ಜ.26ರ ಘಟನೆ ವಿವರಿಸಿದ ನ್ಯಾಯಾಧೀಶರು

ರಾಯಚೂರು: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಸಂದರ್ಭದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರ ತೆಗೆದುಕೊಂಡು ಬಂದು ಇಟ್ಟಿರುವುದನ್ನು ಮತ್ತು ಅದನ್ನು ತೆಗೆದುಕೊಂಡು ಹೋಗಿರುವುದನ್ನು ನಾನು ನೋಡಿಲ್ಲ. ಅಂಬೇಡ್ಕರ್‌ ಭಾವಚಿತ್ರ ತೆಗೆದರೆ ಮಾತ್ರ ಧ್ವಜಾರೋಹಣಕ್ಕೆ ಬರುತ್ತೇನೆ ಎಂದು ಹೇಳಿದ್ದಾಗಿ ಅಪಪ್ರಚಾರ ಮಾಡಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಸ್ಪಷ್ಟನೆ ನೀಡಿದ್ದಾರೆ.

ಡಾ.ಅಂಬೇಡ್ಕರ್‌ ಅವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಅಭಿಮಾನ ಇದೆ. ಈ ಮಹಾನ್‌ ವ್ಯಕ್ತಿಗೆ ನಾನು ಯಾವತ್ತೂ ಅಗೌರವ ತೋರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರೆ, ನನ್ನ ಬಗ್ಗೆ ಯಾವ ಉದ್ದೇಶ ಇಟ್ಟುಕೊಂಡು ಈ ರೀತಿ ಅಪಪ್ರಚಾರ ಮಾಡಿದ್ದಾರೆ ಎಂಬುದು ನನಗೆ ತಿಳಿಯದಾಗಿದೆ. ಆ ವದಂತಿಯನ್ನು ನಂಬಬೇಡಿ’ ಎಂದು ಕೋರಿದ್ದಾರೆ.

ವಿವರಣೆ: ಹೈಕೋರ್ಟ್‌ನವರು ನೀಡಿದ ಎಸ್‌ಒಪಿ ಪ್ರಕಾರ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿ, ವಕೀಲರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿ 200 ಜನ ಮೀರದಂತೆ ಬುಧವಾರ ಬೆಳಿಗ್ಗೆ 8.30ಕ್ಕೆ ಗಣರಾಜ್ಯೋತ್ಸವ ಆಚರಿಸಲು ನಿರ್ಣಯಿಸಿ, ನೋಟಿಸ್‌ ನೀಡಲಾಗಿತ್ತು.

ಆದರೆ, ಬೆಳಿಗ್ಗೆ 8.15ರ ವೇಳೆಗೆ ನಮ್ಮ ಸಿಬ್ಬಂದಿ ನನ್ನ ಕೊಠಡಿಗೆ ಬಂದು ಕೆಲ ವಕೀಲರು ಮಹಾತ್ಮ ಗಾಂಧಿ ಅವರ ಭಾವಚಿತ್ರದ ಜೊತೆಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಸಹ ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕು ಎಂದು ಸರ್ಕಾರದ ಸುತ್ತೋಲೆ ಇದೆ ಎನ್ನುತ್ತಿದ್ದಾರೆ ಎಂದು ತಿಳಿಸಿದರು. ನಂತರ ಕೆಲ ವಕೀಲರು ಬಂದು ಸುತ್ತೋಲೆಯ ಪ್ರಕಾರ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರ ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕು ಎಂದು ಒತ್ತಾಯಿಸಿದರು. ಆಗ ನಾನು ಆ ಸುತ್ತೋಲೆ ಹೈಕೋರ್ಟ್‌ನ ಫುಲ್‌ ಕೋರ್ಟ್‌ ಮುಂದೆ ಪರಿಗಣನೆಗೆ ಇರುವ ಕಾರಣ ನಾವು ಕಾಯಬೇಕು ಎಂದು ಹೈಕೋರ್ಟ್‌ನ ರಿಜಿಸ್ಟ್ರಾರ್‌ ನಮ್ಮ ಲೀಡರ್ಸ್‌ ಗುಂಪಿನಲ್ಲಿ ತಿಳಿಸಿದ್ದಾರೆ. ಆದ ಕಾರಣ, ಒತ್ತಾಯಿಸಬೇಡಿ ಎಂದು ವಿನಂತಿಸಿಕೊಂಡೆ.

ಅದೇ ಸಮಯದಲ್ಲಿ ರಾಯಚೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಬಸವರಾಜ ಅವರು ಬಂದು ಉಳಿದ ವಕೀಲರಿಗೆ ಹೈಕೋರ್ಟ್‌ ರಿಜಿಸ್ಟ್ರಾರ್‌ ಅವರ ಸೂಚನೆಯ ಬಗ್ಗೆ ತಿಳಿಸಿ ಹೇಳಿ ಹೊರಗೆ ಕರೆದುಕೊಂಡು ಹೋದರು. ನಮ್ಮ ಸಿಬ್ಬಂದಿ ನನಗೆ, ಹೊರಗಡೆ ಬಹಳ ಜನ ಸೇರಿದ್ದಾರೆ ಎಂದು ತಿಳಿಸಿದರು. ನಂತರ ನಮ್ಮ ಸಿಬ್ಬಂದಿ, ಹೊರಗಡೆಯಿಂದ ಬಂದಿರುವ ಬೇರೆ ಜನರು ಹೋಗಿದ್ದಾರೆ. ತಾವು ಧ್ವಜಾರೋಹಣಕ್ಕೆ ಬರಬಹುದು ಎಂದು ತಿಳಿಸಿದ ನಂತರ ನಾನು ನಮ್ಮ ಎಲ್ಲ ನ್ಯಾಯಾಧೀಶರನ್ನು ಕರೆದುಕೊಂಡು ಧ್ವಜಾರೋಹಣ ಸ್ಥಳಕ್ಕೆ ಹೋಗಿ ಧ್ವಜಾರೋಹಣ ನೆರವೇರಿಸಿರುತ್ತೇವೆ. 

ಯಾವುದೇ ವ್ಯಕ್ತಿಗಳು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರ ತೆಗೆದುಕೊಂಡು ಬಂದು ಇಟ್ಟಿದ್ದನ್ನು ಮತ್ತು ತೆಗೆದುಕೊಂಡು ಹೋಗಿದ್ದನ್ನು ನಾನು ನೋಡಿಲ್ಲ. ಸತ್ಯ ಘಟನೆಯನ್ನು ಮರೆಮಾಚಿ ನಾನು ಅವರಿಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೊ ತೆಗೆದರೆ ಮಾತ್ರ ಧ್ವಜಾರೋಹಣಕ್ಕೆ ಬರುತ್ತೇನೆ ಎಂದಿದ್ದಾಗಿ ಅಪಪ್ರಚಾರ ಮಾಡಿರುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!