ಗಾಂಧೀಜಿಯವರು ಹುತಾತ್ಮರಾದರೂ ಅವರ ವಿಚಾರಧಾರೆಗಳು ಇಂದಿಗೂ ನಮ್ಮೊಂದಿಗಿವೆ: ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿಯವರು ಹುತಾತ್ಮರಾದರೂ ಅವರ ವಿಚಾರಧಾರೆಗಳು ಇಂದಿಗೂ ನಮ್ಮೊಂದಿಗಿವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಹುತಾತ್ಮರ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು  ಹೋರಾಟವನ್ನು ಮುನ್ನಡೆಸಿದ ಮಹಾತ್ಮಗಾಂಧಿ ಅವರು ಸ್ವಾತಂತ್ರ್ಯ ಸಿಕ್ಕ ಐದಾರು ತಿಂಗಗಳುಗಳಲ್ಲೇ ತಾವೇ ದೊರಕಿಸಿಕೊಟ್ಟ ಸ್ವಾತಂತ್ರ್ಯದ ಮಣ್ಣಿನಲ್ಲೇ ಕೊಲೆ ಆಗಿ ಹುತಾತ್ಮರಾದರು.

ಹುತಾತ್ಮ ಮಹಾತ್ಮ ಅವರು ಇಂದು ನಮ್ಮ ಜತೆಗೆ ಇಲ್ಲದಿರಬಹುದು. ಆದರೆ  ಅವರ ವಿಚಾರಗಳು ಮತ್ತು ಅವರ ಬದುಕಿನ ಸಂದೇಶಗಳು ನಮ್ಮ ಜತೆಗೆ ಇವೆ. ಅವರು ಗಾಂಧಿಯನ್ನು ಕೊಂದರೇ ಹೊರತು ಅವರ ವಿಚಾರಗಳನ್ನು ಕೊಲ್ಲಲು ಸಾಧ್ಯವಾಗಿಲ್ಲ. ಇಡೀ ವಿಶ್ವ ಗೌರವಿಸುವ ವ್ಯಕ್ತಿ ಮತ್ತು ವ್ಯಕ್ತಿತ್ವ ಮಹಾತ್ಮಗಾಂಧಿ ಅವರದ್ದು. 

ದೇಶ ವಿಭಜನೆಯ ಸಂದರ್ಭದಲ್ಲಿ ಗಾಂಧಿ ಅವರು ನಿರ್ವಹಿಸಿದ ಪಾತ್ರವನ್ನು ಬೇರೆ ಯಾರಿಂದಲೂ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ.  ವಿಭಜನೆ ಸಂದರ್ಭದಲ್ಲಿ ನಡೆದ ಕೋಮುಗಲಭೆಗಳು, ಹಿಂಸೆ ಮತ್ತು ಕ್ರೌರ್ಯದ ಘಟನೆಗಳನ್ನು ನಾನು ಓದಿದ್ದೇನೆ. 

ಆ ಘಟನೆಗಳನ್ನು ನೆನಪಿಸಿಕೊಂಡರೆ ಈಗಲೂ ಮೈನಡುಗುತ್ತದೆ. ಲಾಹೋರ್, ದೆಹಲಿ, ಪಶ್ಚಿಮಬಂಗಾಳ ಮುಂತಾದ ಕಡೆಗಳಲ್ಲಿ ನಡೆಯುತ್ತಿದ್ದ ಭೀಕರ ಕೋಮುಗಲಭೆಗಳ ಸಂದರ್ಭದಲ್ಲಿ ಜನರ ಬಳಿಗೆ ಹೋಗಿ ಅವರಿಗೆ ಸಾಂತ್ವನ ಹೇಳಿ, ಸಮಾಧಾನಪಡಿಸಿ ಕೋಮುಗಲಭೆಗಳನ್ನು ನಿಲ್ಲಿಸಿದರು. 

ಈ ಕೆಲಸ ಮಾಡಲು ಸಾಧ್ಯ ಇದ್ದದ್ದು ಮಹಾತ್ಮಗಾಂಧಿಯವರಿಗೆ ಮಾತ್ರ. ಹೀಗಾಗಿ ಗಾಂಧಿ ಅವರಿಗೆ ಗಾಂಧಿಯೇ ಸಾಟಿ. ವಿಶ್ವದಲ್ಲಿ ಮಹಾತ್ಮ ಎಂದು ಕರೆಸಿಕೊಳ್ಳುವ ನಿಜವಾದ ಅರ್ಹತೆ ಹೊಂದಿದ್ದವರು ಗಾಂಧಿ ಮಾತ್ರ ಎಂದು ಅವರ ಹೋರಾಟ ಮತ್ತು ವೈಚಾರಿಕತೆಯನ್ನು ಸ್ಮರಿಸಿದರು.

ಬದುಕಿರುವವರೆಗೂ, ತಮ್ಮ ದೇಹದಲ್ಲಿ ರಕ್ತದ ಕೊನೆ ಹನಿ ಇರುವವರೆಗೂ ಮನುಕುಲದ ಒಳಿತಿಗಾಗಿ ಶ್ರಮಿಸಬೇಕು ಎಂದು ಬದುಕಿದ್ದವರು. ಮನುಕುಲದ ಶಾಂತಿ-ನೆಮ್ಮದಿಗಾಗಿ ದುಡಿಯುತ್ತಿದ್ದವರು. ಇವರು ಇನ್ನಷ್ಟು ವರ್ಷಗಳ ಕಾಲ ಬದುಕಿದ್ದಿದ್ದರೆ ಭಾರತದ ಚಿತ್ರಣವೇ ಇನ್ನೂ ಭಿನ್ನವಾಗಿರುತ್ತಿತ್ತು.

ಆದರೆ, ಮತಾಂಧತೆಯ ವಿರುದ್ಧ ಮನುಕುಲದ ಒಳಿತಿಗಾಗಿ ಶ್ರಮಿಸುತ್ತಿದ್ದ ಗಾಂಧಿ ಅವರನ್ನು ಮತಾಂಧನೊಬ್ಬ ಕೊಂದು ಹಾಕಿದ. ಆಗಿನ ಬ್ರಿಟಿಷ್ ಅಧಿಕಾರಿಯೇ ಗಾಂಧಿ ಅವರನ್ನು, “ಆರ್ಮಿ ಆಫ್ ಪೀಸ್’ ಎಂದು ಕರೆದಿದ್ದರು.

ಆತ್ಮಬಲ ಮಹಾತ್ಮಗಾಂಧಿ ಅವರಿಗೆ ಹೆಚ್ಚಾಗಿತ್ತು. ಗಾಂಧಿ ಅವರ ವಿಚಾರಗಳಿಂದ ಪ್ರಭಾವಿತರಾದ ಯುವಕರು ನೀವು ನೂರು ವರ್ಷ ಬದುಕಬೇಕು ಎಂದು ಹಾರೈಸಿದರೆ, ಇಲ್ಲ ನಾನು ನೂರಾ ಇಪ್ಪತ್ತು ವರ್ಷ ಬದುಕುತ್ತೇನೆ, ನೀವು ನನ್ನ ಆಯಸ್ಸನ್ನು ಕಡಿಮೆ ಮಾಡಿದ್ದೀರಿ ಎಂದು ಯುವಕರಿಗೆ ಹೇಳುತ್ತಿದ್ದರು.

ಆ ಮಟ್ಟದ ಆತ್ಮಬಲ ಗಾಂಧಿ ಅವರಲ್ಲಿತ್ತು. ಅವರು ಕೊಲೆ ಆಗುವ ವೇಳೆಯಲ್ಲೂ ಆರೋಗ್ಯ ತುಂಬಾ ಚೆನ್ನಾಗಿತ್ತು. ಅವರು ಇಚ್ಚಿಸಿದಷ್ಟು ವರ್ಷ ಬದುಕುವ ಚೈತನ್ಯ ಮತ್ತು ಆತ್ಮಬಲದ ಜತೆಗೆ ಆರೋಗ್ಯವನ್ನೂ ಹೊಂದಿದ್ದರು.

ಹುತಾತ್ಮ ಮಹಾತ್ಮ ಗಾಂಧಿ ಅವರ ವಿಚಾರಧಾರೆಗಳು ಹಿಂದೆಂದಿಗಿಂತ ಇಂದು ಹೆಚ್ಚು ಅಗತ್ಯವಾಗಿದೆ. ಗಾಂಧಿ ಅವರ ಬದುಕಿನ ಹೋರಾಟ ಮತ್ತು ಬದುಕಿನ ಸಂದೇಶವೇ ನಮಗೆಲ್ಲರಿಗೂ ಸ್ಫೂರ್ತಿ ಆಗಬೇಕು. 

ಅದರಲ್ಲೂ ಇವತ್ತಿನ ವಿದ್ಯಾರ್ಥಿ ಯುವಜನರು ಗಾಂಧಿ ಮಹಾತ್ಮ ಏಕಾದರು ಎನ್ನುವುದನ್ನು ಅರಿತುಕೊಳ್ಳಬೇಕು. ಈ ವಿಶ್ವಕ್ಕೆ, ಈ ದೇಶಕ್ಕೆ ನೆಮ್ಮದಿ-ಶಾಂತಿಯ ಬದುಕು ಬೇಕೆಂದರೆ ಅದು ಗಾಂಧಿ ಅವರ ಬದುಕಿನ ಸಂದೇಶಗಳಿಂದ, ಬದುಕಿನ ಮಾರ್ಗದಿಂದ ಮಾತ್ರ ಸಾಧ್ಯ.

ಹೀಗಾಗಿ ಮಹಾತ್ಮರ ಪುಣ್ಯತಿಥಿಯಂದು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿ ಮಡಿದ, ಮನುಕುಲದ ಶಾಂತಿಗಾಗಿ ತ್ಯಾಗ ಬಲಿದಾನಗೈದ ಪ್ರತಿಯೊಬ್ಬರನ್ನೂ ಸ್ಮರಿಸುತ್ತಾ ಅವರೆಲ್ಲರಿಗೂ ಈ ಸಂದರ್ಭದಲ್ಲಿ ನಮನಗಳನ್ನು ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]