ಗಾಂಧೀಜಿಯವರು ಹುತಾತ್ಮರಾದರೂ ಅವರ ವಿಚಾರಧಾರೆಗಳು ಇಂದಿಗೂ ನಮ್ಮೊಂದಿಗಿವೆ: ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿಯವರು ಹುತಾತ್ಮರಾದರೂ ಅವರ ವಿಚಾರಧಾರೆಗಳು ಇಂದಿಗೂ ನಮ್ಮೊಂದಿಗಿವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಹುತಾತ್ಮರ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು  ಹೋರಾಟವನ್ನು ಮುನ್ನಡೆಸಿದ ಮಹಾತ್ಮಗಾಂಧಿ ಅವರು ಸ್ವಾತಂತ್ರ್ಯ ಸಿಕ್ಕ ಐದಾರು ತಿಂಗಗಳುಗಳಲ್ಲೇ ತಾವೇ ದೊರಕಿಸಿಕೊಟ್ಟ ಸ್ವಾತಂತ್ರ್ಯದ ಮಣ್ಣಿನಲ್ಲೇ ಕೊಲೆ ಆಗಿ ಹುತಾತ್ಮರಾದರು.

ಹುತಾತ್ಮ ಮಹಾತ್ಮ ಅವರು ಇಂದು ನಮ್ಮ ಜತೆಗೆ ಇಲ್ಲದಿರಬಹುದು. ಆದರೆ  ಅವರ ವಿಚಾರಗಳು ಮತ್ತು ಅವರ ಬದುಕಿನ ಸಂದೇಶಗಳು ನಮ್ಮ ಜತೆಗೆ ಇವೆ. ಅವರು ಗಾಂಧಿಯನ್ನು ಕೊಂದರೇ ಹೊರತು ಅವರ ವಿಚಾರಗಳನ್ನು ಕೊಲ್ಲಲು ಸಾಧ್ಯವಾಗಿಲ್ಲ. ಇಡೀ ವಿಶ್ವ ಗೌರವಿಸುವ ವ್ಯಕ್ತಿ ಮತ್ತು ವ್ಯಕ್ತಿತ್ವ ಮಹಾತ್ಮಗಾಂಧಿ ಅವರದ್ದು. 

ದೇಶ ವಿಭಜನೆಯ ಸಂದರ್ಭದಲ್ಲಿ ಗಾಂಧಿ ಅವರು ನಿರ್ವಹಿಸಿದ ಪಾತ್ರವನ್ನು ಬೇರೆ ಯಾರಿಂದಲೂ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ.  ವಿಭಜನೆ ಸಂದರ್ಭದಲ್ಲಿ ನಡೆದ ಕೋಮುಗಲಭೆಗಳು, ಹಿಂಸೆ ಮತ್ತು ಕ್ರೌರ್ಯದ ಘಟನೆಗಳನ್ನು ನಾನು ಓದಿದ್ದೇನೆ. 

ಆ ಘಟನೆಗಳನ್ನು ನೆನಪಿಸಿಕೊಂಡರೆ ಈಗಲೂ ಮೈನಡುಗುತ್ತದೆ. ಲಾಹೋರ್, ದೆಹಲಿ, ಪಶ್ಚಿಮಬಂಗಾಳ ಮುಂತಾದ ಕಡೆಗಳಲ್ಲಿ ನಡೆಯುತ್ತಿದ್ದ ಭೀಕರ ಕೋಮುಗಲಭೆಗಳ ಸಂದರ್ಭದಲ್ಲಿ ಜನರ ಬಳಿಗೆ ಹೋಗಿ ಅವರಿಗೆ ಸಾಂತ್ವನ ಹೇಳಿ, ಸಮಾಧಾನಪಡಿಸಿ ಕೋಮುಗಲಭೆಗಳನ್ನು ನಿಲ್ಲಿಸಿದರು. 

ಈ ಕೆಲಸ ಮಾಡಲು ಸಾಧ್ಯ ಇದ್ದದ್ದು ಮಹಾತ್ಮಗಾಂಧಿಯವರಿಗೆ ಮಾತ್ರ. ಹೀಗಾಗಿ ಗಾಂಧಿ ಅವರಿಗೆ ಗಾಂಧಿಯೇ ಸಾಟಿ. ವಿಶ್ವದಲ್ಲಿ ಮಹಾತ್ಮ ಎಂದು ಕರೆಸಿಕೊಳ್ಳುವ ನಿಜವಾದ ಅರ್ಹತೆ ಹೊಂದಿದ್ದವರು ಗಾಂಧಿ ಮಾತ್ರ ಎಂದು ಅವರ ಹೋರಾಟ ಮತ್ತು ವೈಚಾರಿಕತೆಯನ್ನು ಸ್ಮರಿಸಿದರು.

ಬದುಕಿರುವವರೆಗೂ, ತಮ್ಮ ದೇಹದಲ್ಲಿ ರಕ್ತದ ಕೊನೆ ಹನಿ ಇರುವವರೆಗೂ ಮನುಕುಲದ ಒಳಿತಿಗಾಗಿ ಶ್ರಮಿಸಬೇಕು ಎಂದು ಬದುಕಿದ್ದವರು. ಮನುಕುಲದ ಶಾಂತಿ-ನೆಮ್ಮದಿಗಾಗಿ ದುಡಿಯುತ್ತಿದ್ದವರು. ಇವರು ಇನ್ನಷ್ಟು ವರ್ಷಗಳ ಕಾಲ ಬದುಕಿದ್ದಿದ್ದರೆ ಭಾರತದ ಚಿತ್ರಣವೇ ಇನ್ನೂ ಭಿನ್ನವಾಗಿರುತ್ತಿತ್ತು.

ಆದರೆ, ಮತಾಂಧತೆಯ ವಿರುದ್ಧ ಮನುಕುಲದ ಒಳಿತಿಗಾಗಿ ಶ್ರಮಿಸುತ್ತಿದ್ದ ಗಾಂಧಿ ಅವರನ್ನು ಮತಾಂಧನೊಬ್ಬ ಕೊಂದು ಹಾಕಿದ. ಆಗಿನ ಬ್ರಿಟಿಷ್ ಅಧಿಕಾರಿಯೇ ಗಾಂಧಿ ಅವರನ್ನು, “ಆರ್ಮಿ ಆಫ್ ಪೀಸ್’ ಎಂದು ಕರೆದಿದ್ದರು.

ಆತ್ಮಬಲ ಮಹಾತ್ಮಗಾಂಧಿ ಅವರಿಗೆ ಹೆಚ್ಚಾಗಿತ್ತು. ಗಾಂಧಿ ಅವರ ವಿಚಾರಗಳಿಂದ ಪ್ರಭಾವಿತರಾದ ಯುವಕರು ನೀವು ನೂರು ವರ್ಷ ಬದುಕಬೇಕು ಎಂದು ಹಾರೈಸಿದರೆ, ಇಲ್ಲ ನಾನು ನೂರಾ ಇಪ್ಪತ್ತು ವರ್ಷ ಬದುಕುತ್ತೇನೆ, ನೀವು ನನ್ನ ಆಯಸ್ಸನ್ನು ಕಡಿಮೆ ಮಾಡಿದ್ದೀರಿ ಎಂದು ಯುವಕರಿಗೆ ಹೇಳುತ್ತಿದ್ದರು.

ಆ ಮಟ್ಟದ ಆತ್ಮಬಲ ಗಾಂಧಿ ಅವರಲ್ಲಿತ್ತು. ಅವರು ಕೊಲೆ ಆಗುವ ವೇಳೆಯಲ್ಲೂ ಆರೋಗ್ಯ ತುಂಬಾ ಚೆನ್ನಾಗಿತ್ತು. ಅವರು ಇಚ್ಚಿಸಿದಷ್ಟು ವರ್ಷ ಬದುಕುವ ಚೈತನ್ಯ ಮತ್ತು ಆತ್ಮಬಲದ ಜತೆಗೆ ಆರೋಗ್ಯವನ್ನೂ ಹೊಂದಿದ್ದರು.

ಹುತಾತ್ಮ ಮಹಾತ್ಮ ಗಾಂಧಿ ಅವರ ವಿಚಾರಧಾರೆಗಳು ಹಿಂದೆಂದಿಗಿಂತ ಇಂದು ಹೆಚ್ಚು ಅಗತ್ಯವಾಗಿದೆ. ಗಾಂಧಿ ಅವರ ಬದುಕಿನ ಹೋರಾಟ ಮತ್ತು ಬದುಕಿನ ಸಂದೇಶವೇ ನಮಗೆಲ್ಲರಿಗೂ ಸ್ಫೂರ್ತಿ ಆಗಬೇಕು. 

ಅದರಲ್ಲೂ ಇವತ್ತಿನ ವಿದ್ಯಾರ್ಥಿ ಯುವಜನರು ಗಾಂಧಿ ಮಹಾತ್ಮ ಏಕಾದರು ಎನ್ನುವುದನ್ನು ಅರಿತುಕೊಳ್ಳಬೇಕು. ಈ ವಿಶ್ವಕ್ಕೆ, ಈ ದೇಶಕ್ಕೆ ನೆಮ್ಮದಿ-ಶಾಂತಿಯ ಬದುಕು ಬೇಕೆಂದರೆ ಅದು ಗಾಂಧಿ ಅವರ ಬದುಕಿನ ಸಂದೇಶಗಳಿಂದ, ಬದುಕಿನ ಮಾರ್ಗದಿಂದ ಮಾತ್ರ ಸಾಧ್ಯ.

ಹೀಗಾಗಿ ಮಹಾತ್ಮರ ಪುಣ್ಯತಿಥಿಯಂದು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿ ಮಡಿದ, ಮನುಕುಲದ ಶಾಂತಿಗಾಗಿ ತ್ಯಾಗ ಬಲಿದಾನಗೈದ ಪ್ರತಿಯೊಬ್ಬರನ್ನೂ ಸ್ಮರಿಸುತ್ತಾ ಅವರೆಲ್ಲರಿಗೂ ಈ ಸಂದರ್ಭದಲ್ಲಿ ನಮನಗಳನ್ನು ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದ್ವೇಷ ಭಾಷಣ ಕಾಯ್ದೆ ವಿರುದ್ಧ ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

ದ್ವೇಷ ಭಾಷಣ ಕಾಯ್ದೆ ವಿರುದ್ಧ ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

ದ್ವೇಷ ಭಾಷಣ ತಡೆಗೆ ಕಾಂಗ್ರೆಸ್ ಸರ್ಕಾರ ಕಾನೂನು ತರಲು ಹೊರಟಿರುವುದು ಪ್ರಜಾಪ್ರಭುತ್ವ ಕೊಲೆ ಇದರ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಎಚ್ಚರಿಕೆ

[ccc_my_favorite_select_button post_id="117285"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]