ಗಾಂಧೀಜಿಯವರು ಹುತಾತ್ಮರಾದರೂ ಅವರ ವಿಚಾರಧಾರೆಗಳು ಇಂದಿಗೂ ನಮ್ಮೊಂದಿಗಿವೆ: ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿಯವರು ಹುತಾತ್ಮರಾದರೂ ಅವರ ವಿಚಾರಧಾರೆಗಳು ಇಂದಿಗೂ ನಮ್ಮೊಂದಿಗಿವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಹುತಾತ್ಮರ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು  ಹೋರಾಟವನ್ನು ಮುನ್ನಡೆಸಿದ ಮಹಾತ್ಮಗಾಂಧಿ ಅವರು ಸ್ವಾತಂತ್ರ್ಯ ಸಿಕ್ಕ ಐದಾರು ತಿಂಗಗಳುಗಳಲ್ಲೇ ತಾವೇ ದೊರಕಿಸಿಕೊಟ್ಟ ಸ್ವಾತಂತ್ರ್ಯದ ಮಣ್ಣಿನಲ್ಲೇ ಕೊಲೆ ಆಗಿ ಹುತಾತ್ಮರಾದರು.

ಹುತಾತ್ಮ ಮಹಾತ್ಮ ಅವರು ಇಂದು ನಮ್ಮ ಜತೆಗೆ ಇಲ್ಲದಿರಬಹುದು. ಆದರೆ  ಅವರ ವಿಚಾರಗಳು ಮತ್ತು ಅವರ ಬದುಕಿನ ಸಂದೇಶಗಳು ನಮ್ಮ ಜತೆಗೆ ಇವೆ. ಅವರು ಗಾಂಧಿಯನ್ನು ಕೊಂದರೇ ಹೊರತು ಅವರ ವಿಚಾರಗಳನ್ನು ಕೊಲ್ಲಲು ಸಾಧ್ಯವಾಗಿಲ್ಲ. ಇಡೀ ವಿಶ್ವ ಗೌರವಿಸುವ ವ್ಯಕ್ತಿ ಮತ್ತು ವ್ಯಕ್ತಿತ್ವ ಮಹಾತ್ಮಗಾಂಧಿ ಅವರದ್ದು. 

ದೇಶ ವಿಭಜನೆಯ ಸಂದರ್ಭದಲ್ಲಿ ಗಾಂಧಿ ಅವರು ನಿರ್ವಹಿಸಿದ ಪಾತ್ರವನ್ನು ಬೇರೆ ಯಾರಿಂದಲೂ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ.  ವಿಭಜನೆ ಸಂದರ್ಭದಲ್ಲಿ ನಡೆದ ಕೋಮುಗಲಭೆಗಳು, ಹಿಂಸೆ ಮತ್ತು ಕ್ರೌರ್ಯದ ಘಟನೆಗಳನ್ನು ನಾನು ಓದಿದ್ದೇನೆ. 

ಆ ಘಟನೆಗಳನ್ನು ನೆನಪಿಸಿಕೊಂಡರೆ ಈಗಲೂ ಮೈನಡುಗುತ್ತದೆ. ಲಾಹೋರ್, ದೆಹಲಿ, ಪಶ್ಚಿಮಬಂಗಾಳ ಮುಂತಾದ ಕಡೆಗಳಲ್ಲಿ ನಡೆಯುತ್ತಿದ್ದ ಭೀಕರ ಕೋಮುಗಲಭೆಗಳ ಸಂದರ್ಭದಲ್ಲಿ ಜನರ ಬಳಿಗೆ ಹೋಗಿ ಅವರಿಗೆ ಸಾಂತ್ವನ ಹೇಳಿ, ಸಮಾಧಾನಪಡಿಸಿ ಕೋಮುಗಲಭೆಗಳನ್ನು ನಿಲ್ಲಿಸಿದರು. 

ಈ ಕೆಲಸ ಮಾಡಲು ಸಾಧ್ಯ ಇದ್ದದ್ದು ಮಹಾತ್ಮಗಾಂಧಿಯವರಿಗೆ ಮಾತ್ರ. ಹೀಗಾಗಿ ಗಾಂಧಿ ಅವರಿಗೆ ಗಾಂಧಿಯೇ ಸಾಟಿ. ವಿಶ್ವದಲ್ಲಿ ಮಹಾತ್ಮ ಎಂದು ಕರೆಸಿಕೊಳ್ಳುವ ನಿಜವಾದ ಅರ್ಹತೆ ಹೊಂದಿದ್ದವರು ಗಾಂಧಿ ಮಾತ್ರ ಎಂದು ಅವರ ಹೋರಾಟ ಮತ್ತು ವೈಚಾರಿಕತೆಯನ್ನು ಸ್ಮರಿಸಿದರು.

ಬದುಕಿರುವವರೆಗೂ, ತಮ್ಮ ದೇಹದಲ್ಲಿ ರಕ್ತದ ಕೊನೆ ಹನಿ ಇರುವವರೆಗೂ ಮನುಕುಲದ ಒಳಿತಿಗಾಗಿ ಶ್ರಮಿಸಬೇಕು ಎಂದು ಬದುಕಿದ್ದವರು. ಮನುಕುಲದ ಶಾಂತಿ-ನೆಮ್ಮದಿಗಾಗಿ ದುಡಿಯುತ್ತಿದ್ದವರು. ಇವರು ಇನ್ನಷ್ಟು ವರ್ಷಗಳ ಕಾಲ ಬದುಕಿದ್ದಿದ್ದರೆ ಭಾರತದ ಚಿತ್ರಣವೇ ಇನ್ನೂ ಭಿನ್ನವಾಗಿರುತ್ತಿತ್ತು.

ಆದರೆ, ಮತಾಂಧತೆಯ ವಿರುದ್ಧ ಮನುಕುಲದ ಒಳಿತಿಗಾಗಿ ಶ್ರಮಿಸುತ್ತಿದ್ದ ಗಾಂಧಿ ಅವರನ್ನು ಮತಾಂಧನೊಬ್ಬ ಕೊಂದು ಹಾಕಿದ. ಆಗಿನ ಬ್ರಿಟಿಷ್ ಅಧಿಕಾರಿಯೇ ಗಾಂಧಿ ಅವರನ್ನು, “ಆರ್ಮಿ ಆಫ್ ಪೀಸ್’ ಎಂದು ಕರೆದಿದ್ದರು.

ಆತ್ಮಬಲ ಮಹಾತ್ಮಗಾಂಧಿ ಅವರಿಗೆ ಹೆಚ್ಚಾಗಿತ್ತು. ಗಾಂಧಿ ಅವರ ವಿಚಾರಗಳಿಂದ ಪ್ರಭಾವಿತರಾದ ಯುವಕರು ನೀವು ನೂರು ವರ್ಷ ಬದುಕಬೇಕು ಎಂದು ಹಾರೈಸಿದರೆ, ಇಲ್ಲ ನಾನು ನೂರಾ ಇಪ್ಪತ್ತು ವರ್ಷ ಬದುಕುತ್ತೇನೆ, ನೀವು ನನ್ನ ಆಯಸ್ಸನ್ನು ಕಡಿಮೆ ಮಾಡಿದ್ದೀರಿ ಎಂದು ಯುವಕರಿಗೆ ಹೇಳುತ್ತಿದ್ದರು.

ಆ ಮಟ್ಟದ ಆತ್ಮಬಲ ಗಾಂಧಿ ಅವರಲ್ಲಿತ್ತು. ಅವರು ಕೊಲೆ ಆಗುವ ವೇಳೆಯಲ್ಲೂ ಆರೋಗ್ಯ ತುಂಬಾ ಚೆನ್ನಾಗಿತ್ತು. ಅವರು ಇಚ್ಚಿಸಿದಷ್ಟು ವರ್ಷ ಬದುಕುವ ಚೈತನ್ಯ ಮತ್ತು ಆತ್ಮಬಲದ ಜತೆಗೆ ಆರೋಗ್ಯವನ್ನೂ ಹೊಂದಿದ್ದರು.

ಹುತಾತ್ಮ ಮಹಾತ್ಮ ಗಾಂಧಿ ಅವರ ವಿಚಾರಧಾರೆಗಳು ಹಿಂದೆಂದಿಗಿಂತ ಇಂದು ಹೆಚ್ಚು ಅಗತ್ಯವಾಗಿದೆ. ಗಾಂಧಿ ಅವರ ಬದುಕಿನ ಹೋರಾಟ ಮತ್ತು ಬದುಕಿನ ಸಂದೇಶವೇ ನಮಗೆಲ್ಲರಿಗೂ ಸ್ಫೂರ್ತಿ ಆಗಬೇಕು. 

ಅದರಲ್ಲೂ ಇವತ್ತಿನ ವಿದ್ಯಾರ್ಥಿ ಯುವಜನರು ಗಾಂಧಿ ಮಹಾತ್ಮ ಏಕಾದರು ಎನ್ನುವುದನ್ನು ಅರಿತುಕೊಳ್ಳಬೇಕು. ಈ ವಿಶ್ವಕ್ಕೆ, ಈ ದೇಶಕ್ಕೆ ನೆಮ್ಮದಿ-ಶಾಂತಿಯ ಬದುಕು ಬೇಕೆಂದರೆ ಅದು ಗಾಂಧಿ ಅವರ ಬದುಕಿನ ಸಂದೇಶಗಳಿಂದ, ಬದುಕಿನ ಮಾರ್ಗದಿಂದ ಮಾತ್ರ ಸಾಧ್ಯ.

ಹೀಗಾಗಿ ಮಹಾತ್ಮರ ಪುಣ್ಯತಿಥಿಯಂದು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿ ಮಡಿದ, ಮನುಕುಲದ ಶಾಂತಿಗಾಗಿ ತ್ಯಾಗ ಬಲಿದಾನಗೈದ ಪ್ರತಿಯೊಬ್ಬರನ್ನೂ ಸ್ಮರಿಸುತ್ತಾ ಅವರೆಲ್ಲರಿಗೂ ಈ ಸಂದರ್ಭದಲ್ಲಿ ನಮನಗಳನ್ನು ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!