Why I killed Gandhi…? ಚಿತ್ರದ ಬಗ್ಗೆ ಆತಂಕವೇಕೆ..! / ಬೆತ್ತಲೆ ಸತ್ಯ-ಸುಳ್ಳಿನ ಸೆರಗು

‘ಏಳು ದಶಕಗಳ ನಿಗಿಕೆಂಡದಂತಹ ಸತ್ಯವನ್ನು ತನ್ನೊಡಲೊಳಗಿಟ್ಟುಕೊಂಡು ನೇಣಿಗೇರಿ ಮೋಕ್ಷ ಸಿಗದೆ ಕರಿಮಣ್ಣಿನ ಕುಡಿಕೆಯೊಳಗೆ ಮಮ್ಮಲಮರುಗಿ ಅಖಂಡ ಭಾರತದ ಸಿಂಧೂ ನದಿಯಲ್ಲಿ ಲೀನವಾಗಲು  ಪರಿತಪಿಸುತ್ತಿರುವ  ಆ ಮಹಾನ್ ದೇಶಭಕ್ತನ ಚಿತಾಭಸ್ಮವನ್ನು ಈ ಸಿನಿಮಾದ ಮೂಲಕ ಮಾತನಾಡಿಸಲು ಹೊರಟಿದ್ದಾರೆಯೇ ನಿರ್ದೇಶಕ ಅಶೋಕ್ ತ್ಯಾಗಿ.’

ನಿರೀಕ್ಷೆಯಿತ್ತು………..!!! ಚಿತ್ರಕ್ಕೆ ಶೀರ್ಷಿಕೆ ಇಟ್ಟ ದಿನವೇ ಈ ಚಿತ್ರದ ಬಗೆಗಿನ ವರ್ತಮಾನದ ಬೆಳವಣಿಗೆಗಳನ್ನು ಊಹಿಸಲಾಗಿತ್ತು.

ಸುಳ್ಳಿನ ಬೂದಿಯಲ್ಲಿ ಹುದುಗಿರುವ ಕೆಂಡದಂತಹ ಸತ್ಯವನ್ನು ಬೆತ್ತಲೆಗೊಳಿಸುವ ಸಿನಿಮಾ ಇದಾದ ಕಾರಣ ದೇಶದ ಒಂದು ವರ್ಗ, ಅದರಲ್ಲೂ ‘ಗಾಂಧಿ’ ಎಂಬ ಹೆಸರಿನ ಮೇಲೆಯೇ ಆರೇಳು ದಶಕಗಳ ಕಾಲ ದೇಶದಲ್ಲಿ ರಾಜಕಾರಣ ಮಾಡಿ ಅಧಿಕಾರ ಅನುಭವಿಸಿರುವ ಕಾಂಗ್ರೆಸ್ ಪಕ್ಷವಂತೂ ಈ ಸಿನಿಮಾದ ವಿರುದ್ಧ ತಿರುಗಿ ಬೀಳುತ್ತದೆ ಎಂಬ ನಿರೀಕ್ಷೆ ನಿಚ್ಚಳವಾಗಿತ್ತು. ಅಂತೆಯೇ  ಈ ಚಿತ್ರವನ್ನು ನಿಷೇಧಿಸಬೇಕೆಂದು ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರದಲ್ಲಿನ ತಮ್ಮದೇ ಸಹಭಾಗಿತ್ವದ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರಿಗೆ ಆಗ್ರಹಿಸಿರುವುದಷ್ಟೇ ಅಲ್ಲದೇ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿದೆ.

ಹಾಗಾದರೆ ಯಾವುದು ಆ ಸಿನಿಮಾ…? ನಿಷೇಧ ಹೇರಲ್ಪಡುವಂಥದ್ದು ಅದರಲ್ಲಿ ಏನಿದೆ….? ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಲು ಕಾರಣವಾಗಿದೆ.

‘Why I Killed Gandhi…?’ ಹೌದು.., ಇದೇ ಆ ಸಿನಿಮಾ. ಪ್ರಸ್ತುತ ಚಿತ್ರೀಕರಣ ಮತ್ತು ಬಿಡುಗಡೆ ಪೂರ್ವ ಕೆಲಸಗಳನ್ನೆಲ್ಲಾ ಮುಗಿಸಿ ಇದೇ ಜನವರಿ 30ರಂದು ( ಗಾಂಧಿ ಹತರಾದ ದಿನ)  ತೆರೆಗೆ ಬರಲು ಸಿದ್ಧವಾಗಿ ನಿಂತಿದೆ. ಚಿತ್ರಕ್ಕೆ ಕಲ್ಯಾಣಿ ಸಿಂಗ್ ಬಂಡವಾಳ ಮತ್ತು ಅಶೋಕ್ ತ್ಯಾಗಿ ನಿರ್ದೇಶನವಿದೆ. ದೇಶದ ಸಂವಿಧಾನವನ್ನು ಗುತ್ತಿಗೆಗೆ ತೆಗೆದುಕೊಂಡವರಂತೆ ವರ್ತಿಸುವ ಒಂದು ವರ್ಗಕ್ಕೆ ‘ನರಹಂತಕ’ನಂತೆ ಕಾಣಿಸಿ ಮತ್ತೊಂದು ವರ್ಗದ ದೃಷ್ಠಿಯಲ್ಲಿ ಮಹಾತ್ಮನಾಗಿ ನೆಲೆ ನಿಂತಿರುವ ವಿನಾಯಕ ನಾಥೂರಾಮ ಗೋಡ್ಸೆಯವರ ಪಾತ್ರವನ್ನು ಮಹಾರಾಷ್ಟ್ರ ಸರ್ಕಾರದ ಮಿತ್ರ ಪಕ್ಷವಾದ ಇಂಡಿಯನ್ ಎನ್.ಸಿ.ಪಿ ಯ ಸಂಸದ ಹಾಗೂ ಮೂಲತಃ ಕಲಾವಿದರಾದ ಅಮೋಲ್ ರಾಮ್ ಸಿಂಗ್ ಕೋಲ್ಹೆ ಮಾಡಿದ್ದಾರೆ. ಚಿತ್ರದ ಶೀರ್ಷಿಕೆಯಲ್ಲಿಯೇ ಚಿತ್ರದ ಕಥೆ ಅಡಗಿಸಿರುವ ನಿರ್ದೇಶಕರು ಚಿತ್ರದ ಬಗ್ಗೆ ಹೆಚ್ಚಿನ ಗೊಂದಲಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ‘ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರನ್ನು ಗೋಡ್ಸೆ ಎಂಬ ವ್ಯಕ್ತಿ ಗುಂಡಿಕ್ಕಿ ಹತ್ಯೆಗೈದನು’ ಎಂಬುದಾಗಿ ಸ್ವಾತಂತ್ರ್ಯಾನಂತರ ಭಾರತದ ಪಠ್ಯಪುಸ್ತಕಗಳಲ್ಲಿ ನಾವು ನೀವುಗಳೆಲ್ಲರೂ ಓದಿ ತಿಳಿದುಕೊಂಡಿರುವ ‘ಪಾಠದ ಒಳ ಸಾರಾಂಶ’ ಬಿಚ್ಚಿಡುವ ಪ್ರಯತ್ನ ಈ ಸಿನಿಮಾದ ಮೂಲಕ ಆಗಿದೆ. 

‘ಏಳು ದಶಕಗಳ ನಿಗಿಕೆಂಡದಂತಹ ಸತ್ಯವನ್ನು ತನ್ನೊಡಲೊಳಗಿಟ್ಟುಕೊಂಡು ನೇಣಿಗೇರಿ ಮೋಕ್ಷ ಸಿಗದೆ ಕರಿಮಣ್ಣಿನ ಕುಡಿಕೆಯೊಳಗೆ ಮಮ್ಮಲ ಮರುಗಿ ಅಖಂಡ ಭಾರತದ ಸಿಂಧೂ ನದಿಯಲ್ಲಿ ಲೀನವಾಗಲು  ಪರಿತಪಿಸುತ್ತಿರುವ  ಆ ಮಹಾನ್ ದೇಶಭಕ್ತನ ಚಿತಾಭಸ್ಮವನ್ನು ಈ ಸಿನಿಮಾದ ಮೂಲಕ ಮಾತನಾಡಿಸಲು ಹೊರಟಿದ್ದಾರೆ ನಿರ್ದೇಶಕ ಅಶೋಕ್ ತ್ಯಾಗಿ.’

ಗಾಂಧಿಯನ್ನು ಗೋಡ್ಸೆ ಕೊಂದದ್ದು ನಿಜವೇ(ಅದರಲ್ಲೂ ಕೆಲವು ಉತ್ತರ ಸಿಗದ ಪ್ರಶ್ನೆಗಳಿವೆ) ಆದರೂ…. ಗೋಡ್ಸೆಯವರ ಆ ಕಠಿಣ ನಿರ್ಧಾರದ ಹಿಂದೆ ಒಂದಷ್ಟು ಅಲ್ಲಗಳೆಯಲಾಗದ ಕಾರಣಗಳಿವೆ. ಕೆಂಪು ಆಂಗ್ಲರ ಕಪಿಮುಷ್ಠಿಯಲ್ಲಿದ್ದ ಭಾರತವನ್ನು ದಾಸ್ಯಮುಕ್ತಗೊಳಿಸಲು ಮುನ್ನೆಲೆಯಲ್ಲಿದ್ದ ಮೋಹನದಾಸ್ ಕರಮಚಂದ್ ಗಾಂಧಿ, ನೆಹರೂ, ಜಿನ್ನಾ ಮುಂತಾದವರ  ಲಾಠಿ-ಬೂಟಿನೇಟು ಅಥವಾ ಜೈಲುಶಿಕ್ಷೆಗಳಿಲ್ಲದ ‘ಶಾಂತಿಯುತ ಹೋರಾಟ’ ಒಂದೆಡೆಯಾದರೆ, ಬ್ರಿಟಿಷರಿಗೆ ಅವರದ್ದೇ ಭಾಷೆಯಲ್ಲಿ ಪ್ರತ್ಯುತ್ತರ ನೀಡುತ್ತಾ ಪರಂಗಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ನೇತಾಜಿ, ಲಾಲಾ ಲಜಪತರಾಯ್, ತಿಲಕ್, ಭಗತ್ ಸಿಂಗ್,ಆಜಾದ್, ವೀರ ಸಾವರ್ಕರ್ ಸೇರಿದಂತೆ ಈ ನೆಲಕ್ಕಾಗಿ ಪ್ರಾಣಾರ್ಪಣೆ ಮಾಡಿದ ಅಸಂಖ್ಯಾತ ಕ್ರಾಂತಿಕಾರಿಗಳ ಗುಂಪು ಇನ್ನೊಂದೆಡೆ ಇತ್ತು.  ಆ ಸಂದರ್ಭದಲ್ಲಿ Foreign Return  ಮೋಹನದಾಸ್ ಕರಮಚಂದ್ ಗಾಂಧಿಯವರ  ಪ್ರಭಾವ ದೇಶದ ಒಂದು ವರ್ಗದ ಮೇಲೆ ಸಾಕಷ್ಟಿತ್ತು. ಲಕ್ಷಾಂತರ ಕ್ರಾಂತಿಕಾರಿಗಳ ಜೀವವನ್ನು ಉಳಿಸುವ ಎಲ್ಲಾ ಸಾಮರ್ಥ್ಯದ ಜೊತೆಗೆ ಅವಕಾಶಗಳು ಇದ್ದರೂ ಸಹ ಶತಮಾನದ ಅಹಿಂಸಾವಾದಿಯ ಕಣ್ಣು,ಕಿವಿ,ಬಾಯಿಗಳು ಬಂದ್ ಆಗಿದ್ದವು. ಮೇಲೆ ಹೆಸರಿಸಿದ ಎರಡೂ ಗುಂಪುಗಳ ಹೋರಾಟದ ಫಲವಾಗಿ ‘ಕೆಂಪು ಆಂಗ್ಲರಿಂದ ಕಪ್ಪು ಆಂಗ್ಲರಿಗೆ ಅಧಿಕಾರ ಹಸ್ತಾಂತರವಾಯಿತು…!!?’.

ಇದಕ್ಕೂ ಮುನ್ನ ಸ್ವಾತಂತ್ರ್ಯದ ಹೊಸ್ತಿಲಲ್ಲಿ ದೆಹಲಿ ಮತ್ತು ಕೊಲ್ಕತ್ತಾಗಳಲ್ಲಿ ಲಕ್ಷಾಂತರ ಹಿಂದೂಗಳ ಹತ್ಯೆಯಾಗಿತ್ತು. ಅದರಲ್ಲಿ ಅಸಂಖ್ಯಾತ ಹಿಂದೂ ಸಹೋದರಿಯರ ಅತ್ಯಾಚಾರಗಳೂ ಸಹ ಸೇರಿದ್ದವು. ಈ ಹತ್ಯಾಕಾಂಡ ನಡೆಸಿದ್ದು ಅದೇ so-called ಮತಾಂಧ ಮುಸ್ಲಿಮರು. ಅಮಾಯಕ ಹಿಂದೂಗಳ ರಕ್ತಪಾತ ನಡೆಸಿ ಮೂಲತಃ ಹಿಂದೂರಾಷ್ಟ್ರವಾಗಿದ್ದ ಭಾರತವನ್ನು ಒಡೆದು ಪೂರ್ವ-ಪಶ್ಚಿಮ ಭಾಗಗಳನ್ನು ಇಸ್ಲಾಮ್ ಆಧಾರಿತ ಪಾಕಿಸ್ತಾನವನ್ನಾಗಿಸಿ, ಹೇರಳವಾದ ನಗದು ಗಂಟಿನೊಂದಿಗೆ ಜಿನ್ನಾನನ್ನು ಪಟ್ಟಕ್ಕೇರಿಸಲಾಯಿತು. ಸರಿ ಅವರ ಆಸೆಯಂತೆಯೇ  ಅವರಿಗೆ ಇಸ್ಲಾಮಿಕ್ ರಾಷ್ಟ್ರ ಪಾಕಿಸ್ತಾನವನ್ನು ಮಾಡಿಕೊಟ್ಟ ಮೇಲೆ ಉಳಿದ ಭಾರತ ಹಿಂದೂರಾಷ್ಟ್ರವಾಗಬೇಕಲ್ಲವೇ…? ಬಾಬಾಸಾಹೇಬ್ ಅಂಬೇಡ್ಕರ್ ಸಹ ‘ಭಾರತದಲ್ಲಿನ ಕೊನೆಯ ಮುಸ್ಲಿಮ್ ವ್ಯಕ್ತಿ ಪಾಕಿಸ್ತಾನಕ್ಕೆ ಹೋಗುವವರೆಗೂ, ಪಾಕಿಸ್ತಾನ ಪ್ರಾಂತ್ಯದಲ್ಲಿನ ಕೊನೆಯ ಹಿಂದೂ ಉದ್ದೇಶಿತ ಭಾರತ ಪ್ರಾಂತ್ಯದೊಳಗೆ ಬರುವವರೆಗೂ ಸ್ವಾತಂತ್ರ್ಯ ಘೋಷಣೆ ಬೇಡ’ ಎಂದು ಹಠ ಹಿಡಿದಿದ್ದರು. ಆದರೆ ಅದಕ್ಕೆ ಅಡ್ಡಗಾಲು ಹಾಕಿದ್ದು ಮೋಹನದಾಸ್ ಕರಮಚಂದ್ ಗಾಂಧಿ ಎಂಬ ಆರೋಪವಿದೆ. ಬಹುತೇಕರಿಗೆ ತಿಳಿಯದ ವಿಷಯವೇನೆಂದರೆ, ಇದರ ಹಿಂದೆ ಇದ್ದ ಸೂತ್ರಧಾರ ನೆಹರೂ. ಸರ್ದಾರ್ ಪಟೇಲರನ್ನು, ನೇತಾಜಿಯವರನ್ನು ನೇಪಥ್ಯಕ್ಕೆ ಸರಿಸಿ ದಶಕಗಳ ಮಟ್ಟಿಗಾದರೂ ತಮ್ಮ ಕುಟುಂಬದ ಅಧೀನದಲ್ಲಿ ಭಾರತವನ್ನು ಇಟ್ಟುಕೊಳ್ಳಲು ಗಾಂಧಿಯನ್ನು ಬಳಸಿಕೊಂಡು ಹೆಣೆದ ತಂತ್ರಗಾರಿಕೆಯಲ್ಲಿ ನೆಹರೂ ಗೆದ್ದಿದ್ದರು ಎನ್ನಲಾಗುತ್ತಿದೆ.

ಸ್ವಾತಂತ್ರ್ಯದ ಕ್ರಾಂತಿಕಾರಿ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ವೀರ ಸಾವರ್ಕರ್ ರವರ ಗರಡಿಯಲ್ಲಿ ಪಳಗಿದ್ದ ಮಹಾನ್ ದೇಶಭಕ್ತ ವಿನಾಯಕ ನಾಥೂರಾಮ್ ಗೋಡ್ಸೆಯವರಲ್ಲಿ ಇಡೀ ಭಾರತೀಯರ ಪರವಾಗಿ ಒಂದೆರಡು ಪ್ರಶ್ನೆಗಳೆದ್ದಿದ್ದವು. 

ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮಯೌವನದ ಹರೆಯದಲ್ಲಿಯೇ ಅಮೂಲ್ಯವಾದ ಜೀವಗಳನ್ನು ಬ್ರಿಟಿಷರ ಗುಂಡೇಟಿಗೆ, ನೇಣಿನ ಕುಣಿಕೆಗೆ ನೀಡಿದ ಸಹಸ್ರಾರು ಅದಮ್ಯ ಚೇತನಗಳನ್ನು ಉಳಿಸಿಕೊಳ್ಳಲಿಲ್ಲ ಗಾಂಧಿ.

ಮುಸ್ಲಿಮರಿಗಾಗಿ ಪ್ರತ್ಯೇಕ ರಾಷ್ಟ್ರದ ಹೆಸರಿನಲ್ಲಿ ದೆಹಲಿ-ಬಂಗಾಳಗಳಲ್ಲಿ ನಡೆದ ಹತ್ಯಾಕಾಂಡದಲ್ಲಿ ತಮ್ಮ ಮಾನ-ಪ್ರಾಣಗಳನ್ನು ಕಳೆದುಕೊಂಡ ಲಕ್ಷಾಂತರ ಹಿಂದೂ ಸಹೋದರ-ಸಹೋದರಿಯರ ರಕ್ತಪಾತದ ಬಗ್ಗೆ ಚಕಾರವೆತ್ತಲಿಲ್ಲ ಗಾಂಧಿ.

ವಲಸೆ ಬಂದ ಮುಸ್ಲಿಮರಿಗಾಗಿ ತಾಯಿ ಭಾರತಿಯನ್ನು ಸೀಳಿ ಇಬ್ಭಾಗ ಮಾಡಿದ ಮೇಲೂ, ಅವರನ್ನು ನಮ್ಮ ದೇಶದಲ್ಲಿಯೇ ಉಳಿಯುವಂತೆ ಮಾಡಿ ಹಿಂದೂಸ್ತಾನವನ್ನು so-called secular ಭಾರತವನ್ನಾಗಿ ಮಾಡಿದ್ದೂ ಅಲ್ಲದೇ, ಇಸ್ಲಾಮಿಕ್ ರಾಷ್ಟ್ರ ಪಾಕಿಸ್ತಾನದಲ್ಲಿಯೇ ಉಳಿದು ಅಲ್ಲಿನ ಮತಾಂಧರ ವಿಕೃತ ಕ್ರೌರ್ಯಕ್ಕೆ ನಲುಗಿ ನೆಲೆಯ ಜೊತೆಗೆ ಪ್ರಾಣವನ್ನೂ ಕಳೆದುಕೊಂಡ ಅಸಂಖ್ಯಾತ ಹಿಂದೂಗಳ ಆರ್ತನಾದವನ್ನು ಕೇಳಿಸಿಕೊಳ್ಳಲೇ ಇಲ್ಲ ಗಾಂಧಿ ಎಂಬ ಆಕ್ರೋಶವು ಇದೇ.

ಈ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಹುಡುಕಿ ಹೊರಟಿದ್ದ ವಿನಾಯಕ ನಾಥೂರಾಮ್ ಗೋಡ್ಸೆಯವರು 1948 ರ  ಜನವರಿ 30 ರಂದು ಒಂದು ಗಟ್ಟಿ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ ಇತಿಹಾಸ.. ಅದೇ ಗಾಂಧಿ ಹತ್ಯೆ….!

ಗಾಂಧಿ ಹತ್ಯೆ ಗೋಡ್ಸೆಯವರೇ ಮಾಡಿದ್ದಾ …. ಅಥವಾ ಇದರ ಹಿಂದೆ ಮತ್ತಾರದ್ದಾದರೂ ಕೈವಾಡ ಇದೆಯಾ? ಈಗ ‘Why I Killed Gandhi’ ಚಿತ್ರ ಬಿಡುಗಡೆಯಾದರೆ ಎಲ್ಲಿ ಆ ‘ಕೈ’ವಾಡ ಬಯಲಾಗುತ್ತದೆಯೋ ಎಂಬ ಭಯ ಕಾಂಗ್ರೆಸ್ಸಿಗರನ್ನು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿಸಿದೆಯಾ ಎಂಬ  ಬಗ್ಗೆ ಹತ್ತು ಹಲವು ಗೊಂದಲದ ಪ್ರಶ್ನೆಗಳು ನನ್ನನ್ನೂ ಸೇರಿದಂತೆ ದೇಶವಾಸಿಗಳನ್ನು ಕಾಡುತ್ತಿದೆಯೇ. ಅಥವಾ ಅವನತಿಯ ಅಂಚಿನಲ್ಲಿರುವ ತಮ್ಮ ಪಕ್ಷಕ್ಕೆ ಮತ್ತೊಮ್ಮೆ ಗಾಂಧಿ ಎಂಬ ಟಾನಿಕ್ ಸಿಕ್ಕಿತು ಎಂಬ ಅಧಿಕಾರದ ಲಾಲಸೆಯಿಂದ ಒಂದು ನಿರ್ದಿಷ್ಟ ವರ್ಗದ ಓಲೈಕೆಗಾಗಿಯೂ ಕಾಂಗ್ರೆಸ್ ಈ ಚಿತ್ರವನ್ನು ವಿರೋಧಿಸುತ್ತಿರಬಹುದು.

ಚಿತ್ರ ಬಿಡುಗಡೆಯಾಗಿ ‘ಗಾಂಧಿ ಹತ್ಯೆಯ ಹಿಂದಿನ ಅಸಲಿ ಸತ್ಯ’ವನ್ನು ಜಗತ್ತಿನ ಮುಂದಿರಿಸಲಿ ಮತ್ತು ಸುಳ್ಳಿನ ಸೆರಗು ಹೊದ್ದು ಅವಿತಿರುವ ಸತ್ಯವನ್ನು ಬೆತ್ತಲೆ ಮಾಡಲಿ ಎಂಬ ಆಶಯದೊಂದಿಗೆ…………

ಇಂತಿ ನಿಮ್ಮವ…ಜಿ.ಎನ್.ಪ್ರದೀಪ್

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

"ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ (ಡಿ.ಕೆ. ಶಿವಕುಮಾರ್) ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ" ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ (D.K. Suresh) ಅವರು ತಿಳಿಸಿದರು.

[ccc_my_favorite_select_button post_id="119818"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!