ದ.ರಾ.ಬೇಂದ್ರೆಯವರ ಜೀವನವೇ ಕಾವ್ಯ ಮತ್ತು ಕಾವ್ಯವೇ ಜೀವನವಾಗಿತ್ತು: ಕನ್ನಡ ಶಿಕ್ಷಕ ಜಿ.ಎಸ್.ಚೌಧರಿ

ದೊಡ್ಡಬಳ್ಳಾಪುರ: ದ.ರಾ.ಬೇಂದ್ರೆಯವರ ಜೀವನವೇ ಕಾವ್ಯ ಮತ್ತು ಕಾವ್ಯವೇ ಜೀವನವಾಗಿತ್ತು. ಬೇಂದ್ರೆ ತಮ್ಮ ಜೀವನದಲ್ಲಿ ದುಃಖ, ನೋವು ಅನುಭವಿಸುತ್ತಲೇ ಸಹೃಯದರಿಗೆ ಸಾಹಿತ್ಯದ ಸವಿಯುಣಿಸುತ್ತಿದ್ದರು ಎಂದು ಸಕ್ಕರೆಗೊಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ಕನ್ನಡ ಶಿಕ್ಷಕ ಜಿ.ಎಸ್.ಚೌಧರಿ ತಿಳಿಸಿದರು. 

ಅವರು ನಗರದ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ  ವರಕವಿ ದ.ರಾ.ಬೇಂದ್ರೆಯವರ 126ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ  ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಎನ್ನ ಪಾಡೆನಗಿರಲಿ, ಅದರ ಹಾಡನ್ನಷ್ಟೇ ನೀಡುವೆನು ರಸಿಕ , ಕಲ್ಲು ಸಕ್ಕರೆಯಂತಹ ನಿನ್ನೆದೆಯು ಕರಗಿದರೆ ಅದರ ಸವಿಯುಣಿಸು ನನಗೆ ಎಂಬುದನ್ನು ವರಕವಿ ತಮ್ಮ ಕವನದಲ್ಲೆ ಹೇಳಿದ್ದಾರೆ ಎಂದರು.

ದೇಸಿ ಸೊಗಡಿನಲ್ಲಿ ಕಾವ್ಯ ಮಾಡಿರುವ ಬೇಂದ್ರೆಯವರು ಸಾಹಿತ್ಯದಲ್ಲಿ ದಾರ್ಶನಿಕತೆ ಇದೆ. ದಾರ್ಶನಿಕ ಕೃತಿಗಳು ಮೌಲ್ಯ ಶಿಕ್ಷಣ ನೀಡುತ್ತವೆ. ವಿದ್ಯಾರ್ಥಿಗಳು ಇಂತಹ ದಾರ್ಶನಿಕ ಕೃತಿಗಳನ್ನು ಓದುವ ಮೂಲಕ ಬದುಕಿನಲ್ಲಿ ಉತ್ತಮ ಮೌಲ್ಯಗಳನ್ನು ಕಲಿಯಬಹುದಾಗಿದೆ. ಪ್ರಕೃತಿಯ ವರ್ಣನೆಗಳಿಂದ ಹಿಡಿದು ಸಾಮಾಜಿಕ ಪ್ರಜ್ಞೆಯ ಕವಿತೆಗಳು  ಓದುಗರ ಮನಗೆದ್ದಿವೆ. ಶಬ್ದಗಾರುಡಿಗಾರ ಬೇಂದ್ರೆ ತಮ್ಮ ಕವಿತೆಗಳ ಮೂಲಕ ಹೊಸಗನ್ನಡ ಕಾವ್ಯಕ್ಕೆ  ಹೊಸತನ ನೀಡಿದರು.

ನರಬಲಿ ಕವನ ಬರೆದು ಜೈಲುವಾಸ ಅನುಭವಿಸಿದ ಬೇಂದ್ರೆಯವರು  ಗೆಳೆಯರ ಗುಂಪು ಕಟ್ಟಿ ಸಾಹಿತ್ಯ ಚಟುವಟಿಕಗಳನ್ನು ವಿಸ್ತರಿಸಿದರು. ಗರಿ, ಗಂಗಾವತರಣ, ನಾದಲೀಲೆ, ಸಖೀಗೀತ, ಉಯ್ಯಾಲೆ, ನಾಕುತಂತಿ, ಮೇಘದೂತ ಮುಂತಾದ ಹಲವಾರು ಕೃತಿಗಳು ಇಂದಿಗೂ ಕನ್ನಡ ಸಾಹಿತ್ಯ ಓದುಗರ ಮನಗೆದ್ದಿವೆ. ಜಾನಪದ ಶೈಲಿಯ ಕವನಗಳು, ಭಾವಗೀತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡುತ್ತಿದಾರೆ ಎಂದರು.

ಕಾಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಚ್.ಎನ್.ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ದ.ರಾ.ಬೇಂದ್ರೆಯವರ ಜೀವನ ಮತ್ತು ಅವರ ಸಾಹಿತ್ಯವನ್ನು ಅಧ್ಯಯನ  ಮಾಡಬೇಕಾಗಿದೆ. ಸಾಹಿತ್ಯಾಭಿರುಚಿಯು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಅಗಲಿದೆ. ಪಠ್ಯವಿಷಯಗಳಿಗೆ ನೀಡುವ ಮಹತ್ವವನ್ನು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕಾಗಿದೆ ಎಂದರು. 

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಜೈಕುಮಾರ್, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಗೌರವ ಕಾರ್ಯದರ್ಶಿ ಎ.ಜಯರಾಂ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಆರ್.ಗೋವಿಂದರಾಜು,  ಮಾಳವ ನಾರಾಯಣಸ್ವಾಮಿ, ಜಾನಪದ ಕಲಾವಿದ ಹಾಡೋನಹಳ್ಳಿ ಗೋವಿಂದರಾಜು, ಯುವಕವಿ ಅಂಜನಗೌಡ, ಶಾಲೆಯ ಕನ್ನಡ ಶಿಕ್ಷಕಿ ಜಯಶ್ರೀ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!