ಭ್ರಷ್ಟಾಚಾರ ವಿವಾದ: ಮಾಧ್ಯಮ ಪ್ರಕಟಣೆ ನೀಡಿದ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣವರ್

ಬೆಂಗಳೂರು: ಭ್ರಷ್ಟಾಚಾರ ವಿವಾದದಲ್ಲಿ ಸಿಲುಕಿರುವ ಐಪಿಎಸ್ ರವಿ ಡಿ.ಚನ್ನಣ್ಣವರ್​ ಮಾಧ್ಯಮ ಪ್ರಕಟಣೆ ನೀಡಿದ್ದು, ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.

ಮಾಧ್ಯಮ ಪ್ರಕಟಣೆಯಲ್ಲಿ ಉಲ್ಲೇಖವಾಗಿರುವ ಸಂದೇಶವನ್ನು ಕೆಳಕಂಡಂತೆ ಯಥಾವತ್ತಾಗಿ ನೀಡಲಾಗಿದೆ.

ಆತ್ಮೀಯರೇ: ಇತ್ತೀಚಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ  ಕಾನೂನು ಬದ್ಧವಾಗಿಯೇ ಖರೀದಿಸಿದ್ದು, ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿ ಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿರುತ್ತಾರೆ.

ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸುತ್ತಿದ್ದು, ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ ಆದ್ದರಿಂದ ಈ ಕುರಿತಂತೆ ನಾನು ಇದಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಈ ಕೆಳಕಂಡಂತೆ ಕ್ರಮ ಕೈಗೊಂಡಿರುತ್ತೆನೆ.

1. ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್ ನೋಟಿಸ್ ನೀಡಿರುತ್ತೇನೆ. ಇದಕ್ಕೆ ಉತ್ತರ ಬಂದಿರುವುದಿಲ್ಲ.

2.ನಾನು ಈ ಕುರಿತು ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ , ರೂಪಾಯಿ 3 ಕೋಟಿಗೆ ಮಾನನಷ್ಟ ಮೊಕದ್ದಮೆಯನ್ನ ದಾಖಲಿಸಲಿದ್ದೇನೆ.

3.ಹಾಗೆಯೇ ಸುಳ್ಳು ಆಪಾದನೆ ಮಾಡಿದ್ದಕ್ಕೆ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ ಕ್ರಿಮಿನಲ್ DEFEMATION ಕೇಸ್ ಹೂಡಲಿದ್ದೇನೆ.

ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. 

ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ.

ಹಾಗೆಯೇ ನನಗೆ  ನ್ಯಾಯವಾದಿಗಳ ಬಗ್ಗೆ ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ, ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ, ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು, ಅಶ್ಲೀಲ ಪದ ಬಳಕೆ,  ಹೀಯಾಳಿಸುವುದನ್ನು  ಮಾಡಬಾರದು. ಎಂದು ಎಲ್ಲಾ ಮಾಧ್ಯಮಗಳ ಮೂಲಕ ಕೇಳಿಕೊಳ್ಳುತ್ತೇನೆ ರವಿ ಚನ್ನಣ್ಣನವರ್ ಮನವಿ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!