ದೇವನಹಳ್ಳಿಯನ್ನೇ ಜಿಲ್ಲೆ ಎಂದು ಘೋಷಿಸಿ ಎಂದಿಲ್ಲ: ದೊಡ್ಡಬಳ್ಳಾಪುರದಲ್ಲಿ ಕನ್ನಡಪರ ಸಂಘಟನೆಗಳಿಗೆ ಸ್ಪಷ್ಟನೆ ನೀಡಿದ ಶಾಸಕ ನಿಸರ್ಗ ನಾರಾಯಣಸ್ವಾಮಿ / ವಿಡಿಯೋ ಮಾಡದಂತೆ ವರದಿಗಾರರಿಗೆ ಸೂಚನೆ

ಬೆಂ.ಗ್ರಾ.ಜಿಲ್ಲೆ: ಜ.26ರಂದು ದೇವನಹಳ್ಳಿಯಲ್ಲಿ ನಡೆದ ಜಿಲ್ಲಾಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ದೇವನಹಳ್ಳಿ ಜಿಲ್ಲೆ ಎಂದು ಹೆಸರು ಘೋಷಣೆ ಮಾಡಿ ಹಾಗೂ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ನೀಡಿ ಎಂದು ಒತ್ತಾಯಿಸಿದ್ದ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ. ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗುತ್ತಿದಂತೆ ಇಂದು ಯೂಟರ್ನ್ ಹೊಡೆದಿದ್ದು, ಗಣರಾಜ್ಯೋತ್ಸವದಂದು ದೇವನಹಳ್ಳಿ ಜಿಲ್ಲೆಯೆಂದು ಘೋಷಿಸಿ, ಹೆಸರು ಬದಲಾವಣೆ ಮಾಡಿ ಎಂದು ಒತ್ತಾಯ ಮಾಡಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ.

ದೊಡ್ಡಬಳ್ಳಾಪುರ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತೂಬಗೆರೆ ಹೋಬಳಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಯ ವೇಳೆ ಭೇಟಿಯಾದ ಕನ್ನಡ ಪರ ಸಂಘಟನೆಗಳ ಮುಖಂಡರಿಗೆ ಈ ಕುರಿತು ನಿಸರ್ಗ ನಾರಾಯಣಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾಗಿದ್ದರು, ಜಿಲ್ಲಾ ಕೇಂದ್ರ ಘೋಷಣೆಯಾಗದೆ ಸರ್ಕಾರ ಅನುದಾನ ನೀಡುತ್ತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರವೆಂದು ಘೋಷಿಸಿ ಎಂಬುದೇ ನನ್ನ ಒತ್ತಾಯವಾಗಿದೆಯೇ ಹೊರತು ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲವೆಂದು ಹೆಸರು ಬದಲಿಸಲು ಕೇಳುತ್ತಿಲ್ಲ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಜಿಲ್ಲಾ ಕೇಂದ್ರ ಯಾವುದು ಎಂಬುದು ಪ್ರಶ್ನೆಯಾಗಿದೆ. ರಾಮನಗರ ಜಿಲ್ಲೆ ರಾಮನಗರ ಜಿಲ್ಲಾ ಕೇಂದ್ರ, ಮಂಡ್ಯ ಜಿಲ್ಲೆ ಮಂಡ್ಯ ಜಿಲ್ಲಾ ಕೇಂದ್ರ, ಚಿಕ್ಕಬಳ್ಳಾಪುರ ಜಿಲ್ಲೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಎಂದಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವೆಂದು ಘೋಷಿಸಿ ಜಿಲ್ಲೆಯ ಅಭಿವೃದ್ಧಿಗೆ ಅನುದನ ನೀಡಬೇಕೆಂಬುದು ನನ್ನ ಒತ್ತಾಯವಾಗಿದೆ. ಅದರೆ ನನ್ನ ಹೇಳಿಕೆಯನ್ನು ತಿರುಚಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದಕ್ಕು ಮುನ್ನ ಮಾತನಾಡಿದ ಕನ್ನಡಪರ ಸಂಘಟನೆಗಳ ಮುಖಂಡರಾದ ಕನ್ನಡ ಪಕ್ಷದ ಸಂಜೀವ್ ನಾಯಕ್, ಕರವೇ ಪ್ರವೀಣ್ ಶೆಟ್ಟಿ ಬಣದ ಹಮಾಮ್ ವೆಂಕಟೇಶ್, ಹಿರಿಯ ಹೋರಾಟಗಾರಾರದ ಸತ್ಯನಾರಾಯಣ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಘೋಷಣೆಗೆ ಎಲ್ಲಾ ರೀತಿಯಲ್ಲಿ ದೊಡ್ಡಬಳ್ಳಾಪುರ ಸೂಕ್ತವಾಗಿದ್ದರು, ರಾಜಕೀಯ ಲಾಭಕ್ಕೆ ದೇವನಹಳ್ಳಿಯನ್ನು‌ ಜಿಲ್ಲೆ ಎಂದು ಘೋಷಿಸಿ ಎಂದು ಒತ್ತಾಯಿಸುತ್ತಿರುವುದು ನಿಮಗೆ ಶೋಭೆಯಲ್ಲ. ಚುನಾವಣೆ ಸಮೀಪ ಬರುತ್ತಿದ್ದಂತೆ ಈ ರೀತಿ ಹೇಳಿಕೆ ನೀಡಿ ಎರಡು ತಾಲೂಕು ಜನರ ನೆಮ್ಮದಿ ಕೆಡಿಸುವುದು ಸರಿಯಲ್ಲ. ಶಾಸಕರು ಈ ಧೋರಣೆ ಬದಲಿಸಿಕೊಳ್ಳಬೇಕು, ಜಿಲ್ಲೆಯ ಒಂದೇ ತಾಲೂಕನ್ನೆ ದೃಷ್ಟಿಯಾಗಿಸಿಕೊಂಡು ಜಿಲ್ಲೆ ಎಂದು ಘೋಷಣೆ ಮಾಡುವಂತೆ ಒತ್ತಾಯಿಸುವುದು ಸರಿಯಲ್ಲ‌. ನಿಮ್ಮ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಆಕ್ಷೇಪಿಸಿದರು.

ವಿಡಿಯೋ ಮಾಡದಂತೆ ಸೂಚನೆ: ಸಭೆಯ ವೇಳೆ ಕನ್ನಡ ಪರ ಸಂಘಟನೆಗಳು ಏಕಾಏಕಿ ಭೇಟಿಗೆ ವಿಚಲಿತರಾದ ನಿಸರ್ಗ ನಾರಾಯಣಸ್ವಾಮಿ, ದೇವನಹಳ್ಳಿ ಜಿಲ್ಲೆ ಎಂದು ಘೋಷಿಸಿ ಎಂದು ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ, ಜಿಲ್ಲಾ ಕೇಂದ್ರ ಘೋಷಣೆ ಮಾಡಿ ಎಂಬುದಷ್ಟೆ ನನ್ನ ಹೇಳಿಕೆಯಾಗಿದೆ ಎಂದರು. ಈ ಸಂದರ್ಭದಲ್ಲಿ ವರದಿಗೆ ವಿಡಿಯೋ ಸೆರೆಹಿಡಿಯುತ್ತಿದ್ದ ಮಾಧ್ಯಮ ಪ್ರತಿನಿಧಿಗಳಿಗೆ ಇದು ಆಫ್ದ ರೆಕಾರ್ಡ್ ಎಂದು ವಿಡಿಯೋ ಚಿತ್ರೀಕರಣ ಮಾಡದಂತೆ ಸೂಚಿಸಿದರು.

ಈ ವೇಳೆ ತಹಶೀಲ್ದಾರ್ ಮೋಹನಕುಮಾರಿ, ಇಒ ಶ್ರೀನಾಥ್ ಗೌಡ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್, ಹೋರಾಟಗಾರರಾದ ಜೋಗಹಳ್ಳಿ ಅಮ್ಮು, ಸೂರಿ, ವೆಂಕಟೇಶ್, ಎಂ.ಸತೀಶ್, ಕೆ.ಪಿ.ಜಗನ್ನಾಥ್, ಮಾಹಿತಿ ಹಕ್ಕು, ಸಾಮಾಜಿಕ ಕಾರ್ಯಕರ್ತರ ವೇದಿಕೆ ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್ ಡಿ.ಉಪ್ಪಾರ್, ದೊಡ್ಡತುಮಕೂರು ಆನಂದ್ ಮತ್ತಿತರರಿದ್ದರು. 

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ (Accident) ಅಕ್ಕ ಮತ್ತು ತಮ್ಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಎಪಿಎಂಸಿ

[ccc_my_favorite_select_button post_id="115491"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!