ದೊಡ್ಡಬಳ್ಳಾಪುರ: ವಿಜೃಂಭಣೆಯಿಂದ ನಡೆದ ದಿನ್ನೆ ಬಯಲು ಬಸವಣ್ಣ ಆರತಿ ಉತ್ಸವ

ದೊಡ್ಡಬಳ್ಳಾಪುರ: ಹಚ್ಚ ಹಸಿರಿನ ರಾಗಿ ಹೊಲದ ಪೈರುಗಳ ನಡುವೆ ಬಣ್ಣ ಬಣ್ಣದ ಹೂವುಗಳಿಂದ ಶೃಂಗರಿಸಿದ ಹೂವಿನ ಆರತಿಗಳನ್ನು ಹೊತ್ತ ಮಹಿಳೆಯರು, ತಮಟೆ ವಾದ್ಯಗಳೊಂದಿಗೆ ಸಾಗಿ ಬರುತ್ತಿದ್ದ ದೃಶ್ಯ ನೋಡುಗರ ಕಣ್ಣುಗಳಿಗೆ ಹಬ್ಬವನ್ನು ಉಂಟುಮಾಡಿತ್ತು.

ಈ ದೃಶ್ಯ ಕಂಡು ಬಂದಿದ್ದು ಸೋಮವಾರ ತಾಲೂಕಿನ ಎಸ್.ಎಂ.ಗೊಲ್ಲಹಳ್ಳಿ ಸಮೀಪದ ದಿನ್ನೆ ಬಯಲು ಬಸವಣ್ಣ ದೇವಾಲಯ ಬಯಲಿನಲ್ಲಿ.

ಪುರಾತನ ದಿನ್ನೆ ಬಯಲು ಬಸವಣ್ಣ ದೇವರಿಗೆ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ಮಹಿಳೆಯರು ಶ್ರದ್ದಾಭಕ್ತಿಗಳಿಂದ ಹೂವಿನ ಆರತಿಗಳನ್ನು ಬೆಳಗಿ ಧನ್ಯತೆ ಮೆರೆದರು. ಸಂಜೆ ನಡೆದ ಆರತಿಗಳ ಉತ್ಸವದಲ್ಲಿ ಅರಳುಮಲ್ಲಿಗೆ, ಏಕಾಶಿಪುರ, ಕುಂಟನಹಳ್ಳಿ, ಗೆಜ್ಜಗದಹಳ್ಳಿ, ಬೈರಸಂದ್ರ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿದ್ದರು.

ಆರತಿಗಳ ಉತ್ಸವದಲ್ಲಿ ಭಾಗವಹಿಸಿದ್ದ ಎಲ್ಲಾ ಭಕ್ತಾದಿಗಳಿಗು ಹಚ್ಚಹಸಿರಿನ ಪ್ರಕೃತಿ ನಡುವಿನ ಬಯಲಿನಲ್ಲಿಯೇ ಅನ್ನಸಂತರ್ಪಣೆ ನಡೆಯಿತು.

ಇಲ್ಲಿನ ವಿಶೇಷವೆಂದರೆ ನಂದಿ(ಬಸವಣ್ಣ)ಮೂರ್ತಿ ಬಯಲಿನಲ್ಲೇ ಇರುವುದು. ನೂರಾರು ವರ್ಷಗಳಿಂದಲು ಇಲ್ಲಿನ ಮೂರ್ತಿಗೆ ಕಟ್ಟಡ ನಿರ್ಮಿಸಲು ಸಾಧ್ಯವಾಗಿಲ್ಲ. ಈ ಹಿಂದೆ ಹಲವಾರು ಬಾರಿ ಭಕ್ತಾಧಿಗಳು ಕಟ್ಟಡ ನಿರ್ಮಿಸಲು ಪ್ರಯತ್ನಿಸಿದ್ದರು ಸಹ ಕಟ್ಟಡದ ಗೋಡೆ ಬಿದ್ದು ಹೋಗಿದೆ. ಹೀಗಾಗಿಯೇ ಇಂದಿಗೂ ಬವಣ್ಣನ ಮೂರ್ತಿಯ ಸುತ್ತ ಯಾವುದೇ ಕಟ್ಟಡವು ಇಲ್ಲ ಎನ್ನುತ್ತಾರೆ ಅರ್ಚಕರಾದ ನಾಗರಾಜ್.

ರೈತರು ತಮ್ಮ ಮನೆಗಳಲ್ಲಿ ಹಸು ಕರು ಹಾಕಿದ ಒಂದು ವಾರದ ನಂತರ ಬೆಣ್ಣೆ, ಹಾಲಿನೊಂದಿಗೆ ಇಲ್ಲಿಗೆ ಬಂದು ಪೂಜೆ ಸಲ್ಲಿಸಿ ರಾಸುಗಳ ಏಳಿಗೆಗಾಗಿ ಪ್ರಾರ್ಥಿಸುವ ವಾಡಿಕೆ ನಡೆದುಕೊಂಡು ಬಂದಿದೆ.

ಯಾವುದೇ ಶುಭಕಾರ್ಯವನ್ನು ಮಾಡುವ ಮುನ್ನ ಅಥವಾ ಕಷ್ಟಗಳು ಬಂದಾಗ ಇಲ್ಲಿ ಪೂಜೆ ಸಲ್ಲಿಸಿ ಬಸವಣ್ಣ ದೇವರಿಂದ ಹೂವು ಬೇಡುವ ಪದ್ದತಿ ನೂರಾರು ವರ್ಷಗಳಿಂದಲು ನಡೆಯುತ್ತಿದೆ.

ಸೋಮವಾರ ಒಂದು ದಿನ ಮಾತ್ರ ಇಲ್ಲಿ ಪೂಜೆಗಳು ನಡೆಯುತ್ತವೆ. ವಾರದ ಇತರೆ ದಿನಗಳಲ್ಲಿ ಇಲ್ಲಿಗೆ ಭಕ್ತಾಧಿಗಳು ಬರುವುದು ಅಪರೂಪ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!