ಕಳಪೆ ಗುಣಮಟ್ಟದ ಮನೆ ಕಟ್ಟಿಕೊಟ್ಟ ಬಿಲ್ಡರ್‌ಗೆ 4 ಲಕ್ಷ ದಂಡ ಸೇರಿ ಒಟ್ಟು 5.10 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ ಜಿಲ್ಲಾ ಗ್ರಾಹಕರ ಆಯೋಗ

ಧಾರವಾಡ (ನ.02): ಕಳಪೆ ಗುಣಮಟ್ಟದ ಮನೆ ಕಟ್ಟಿಕೊಟ್ಟ ಬಿಲ್ಡರ್‌ಗೆ 4 ಲಕ್ಷ ದಂಡ ಸೇರಿ ಒಟ್ಟು 5.10 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ.

ಹುಬ್ಬಳ್ಳಿಯ ದೇವಾಂಗ ಪೇಟೆಯಲ್ಲಿರುವ ತನ್ನ ಪ್ಲಾಟನಲ್ಲಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ಕಟ್ಟಿಕೊಡುವಂತೆ ನಿವೃತ್ತ ಪೋಲಿಸ್ ನೌಕರ ಶಂಕರ ಕೆರಕಣ್ಣವರ ಹುಬ್ಬಳ್ಳಿಯ ಪ್ರಶಾಂತ ಲೋಕಾಪೂರ ಹಾಗೂ ಗಾಯಿತ್ರಿ ಲೋಕಾಪೂರ ಬಿಲ್ಡರ್ವರ ಜೊತೆ ಒಪ್ಪಂದ ಮಾಡಿಕೊಂಡಿದ್ದರು.

ಅದರ ಪ್ರಕಾರ ದೂರುದಾರ 25 ಲಕ್ಷ ರೂಪಾಯಿ ಸಂದಾಯ ಮಾಡಿದ್ದರು. ಬಿಲ್ಡರ್‌ಗಳು ಕಡಿಮೆ ಗುಣಮಟ್ಟದ ಕಳಪೆ ಸಾಮಗ್ರಿಗಳನ್ನು ಮನೆ ಕಟ್ಟಲು ಉಪಯೋಗಿಸಿ ಮನೆ ಕಟ್ಟಿದ್ದರಿಂದ ಈಗ ಮನೆಯಲ್ಲಿ ಲಿಕೇಜ್ ಬಂದು ಮನೆಯ ಪರಿಕರಗಳು ಕೆಟ್ಟು ಹೋಗಿ ತಮ್ಮ ದೈನಂದಿನ ಜೀವನಕ್ಕೆ ತೊಂದರೆಯಾಗಿದೆ ಮತ್ತು ಕಳಪೆ ಗುಣಮಟ್ಟದ ಮನೆ ನಿರ್ಮಾಣದಿಂದ ತನಗೆ ಆರ್ಥಿಕ ಹಾನಿ, ಮಾನಸಿಕ ತೊಂದರೆಯಾಗಿದೆ.

ಕಾರಣ ಬಿಲ್ಡರ್‍ಗಳು ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಹೇಳಿ ಅವರಿಂದ 5 ಲಕ್ಷ ರೂಪಾಯಿ ಪರಿಹಾರ, 2 ಲಕ್ಷ ರೂಪಾಯಿ ಮಾನಸಿಕ ತೊಂದರೆಗೆ ಪರಿಹಾರ ಬಡ್ಡಿ ಸಮೇತ ಕೊಡಿಸುವಂತೆ ದೂರುದಾರ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಬಿಲ್ಡರ್‍ಗಳು ವಕೀಲರ ಮೂಲಕ ಹಾಜರಾಗಿ ತಾವೇ ಸುಮಾರು 2.5 ಲಕ್ಷ ಮೊತ್ತದ ಹೆಚ್ಚುವರಿ ಕೆಲಸ ಮಾಡಿಕೊಟ್ಟಿದ್ದು, ತಮ್ಮಿಂದ ಯಾವುದೇ ಸೇವಾ ನ್ಯೂನ್ಯತೆ ಆಗಿಲ್ಲಾ ಅಂತಾ ಹೇಳಿ ಈ ದೂರನ್ನು ವಜಾ ಮಾಡುವಂತೆ ಕೋರಿದ್ದರು.

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವ್ಹಿ.ಎ. ಬೋಳಶೆಟ್ಟಿ ಮತ್ತು ಪಿ.ಸಿ.ಹಿರೇಮಠ ಅವರು, ಕಟ್ಟಡದ ನಿರ್ಮಾಣ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಉಪಯೋಗಿಸಲಾಗಿದೆಯೋ ಅಥವಾ ಇಲ್ಲವೋ ಅನ್ನುವುದನ್ನು ತಿಳಿದುಕೊಳ್ಳಲು ಧಾರವಾಡದ ಅರವಿಂದ ಕಪಲಿ ಅನ್ನುವ ಸ್ವತಂತ್ರ ಸಿವಿಲ್ ಇಂಜನೀಯರರವನ್ನು ನೇಮಿಸಿ ಅವರಿಂದ ಕಟ್ಟಡ ಕಾಮಗಾರಿಯ ಬಗ್ಗೆ ಗ್ರಾಹಕರ ಆಯೊಗ ವಿವರವಾದ ವರದಿ ತರಿಸಿಕೊಂಡಿತ್ತು.

ಅವರ ವರದಿಯನ್ನು ಆಧರಿಸಿ ಬಿಲ್ಡರ್‌ಗಳ ಕೋರಿಕೆಯನ್ನು ತಳ್ಳಿಹಾಕಿ ಉಭಯತರ ಮಧ್ಯೆ ಆಗಿರುವ ಕಟ್ಟಡ ನಿರ್ಮಾಣದ ಒಪ್ಪಂದ ಪತ್ರದಲ್ಲಿರುವ ಷರತ್ತಿಗೆ ವಿರುದ್ಧವಾಗಿ ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಉಪಯೋಗಿಸಿ ಮನೆ ನಿರ್ಮಿಸಿಕೊಟ್ಟು ದೂರುದಾರನಿಗೆ ಮತ್ತು ಅವರ ಕುಟುಂಬದವರಿಗೆ ತೊಂದರೆ ಉಂಟು ಮಾಡಿ ಬಿಲ್ಡರ್‍ಗಳು ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ತೀರ್ಪು ನೀಡಿದ್ದಾರೆ.

ಈ ತಪ್ಪಿಗೆ ಬಿಲ್ಡರ್ ಗಳು ದೂರುದಾರನ ಮನೆಯ ದುರಸ್ತಿ ಮತ್ತು ಇತರೇ ಖರ್ಚಿಗೆ 4 ಲಕ್ಷ ರೂಪಾಯಿ ದಂಡದ ರೂಪದಲ್ಲಿ ಪರಿಹಾರ ಕೊಡುವಂತೆ ಮತ್ತು ಕಳಪೆ ಮನೆ ನಿರ್ಮಾಣದಿಂದ ದೂರುದಾರ ಮತ್ತು ಅವರ ಕುಟುಂಬದವರಿಗೆ ಆಗಿರುವ ಅನಾನುಕೂಲ ಹಾಗೂ ಮಾನಸಿಕ ಹಿಂಸೆಗಾಗಿ 1 ಲಕ್ಷ ರೂಪಾಯಿ ಪರಿಹಾರ ಹಾಗೂ 10 ಸಾವಿರ ರೂಪಾಯಿ ಈ ಪ್ರಕರಣದ ಖರ್ಚು ವೆಚ್ಚ ಕೊಡಲು ಆದೇಶಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]