ಸಂಗಮನಾಥನ ದರ್ಶನ ಪಡೆದ ವಿವಿಧ ಸಚಿವರು: ಪುಣ್ಯ ಭೂಮಿ ಕೂಡಲ ಸಂಗಮದಲ್ಲಿ ಮೃತ್ತಿಕೆ ಸಂಗ್ರಹ

ಬಾಗಲಕೋಟೆ, (ನ.04): ಜಗಜ್ಯೋತಿ ಬಸವಣ್ಣನವರ ಪುಣ್ಯ ಭೂಮಿ ಕೂಡಲ ಸಂಗಮಕ್ಕೆ ಕಂದಾಯ ಸಚಿವ ಆರ್.ಆಶೋಕ, ಗೃಹಮಂತ್ರಿ ಆರಗ ಜ್ಞಾನೇಂದ್ರ, ಐಟಿ, ಬಿಟಿ ಸಚಿವ ಡಾ.ಅಶ್ವತ ನಾರಾಯಣ, ಕ್ರೀಡಾ ಸಚಿವ ನಾರಾಯಣಗೌಡ ಅವರು ಶುಕ್ರವಾರ ಭೇಟಿ ನೀಡಿ ಸಂಗಮನಾಥನ ದರ್ಶನ ಪಡೆದು ಮೃತ್ತಿಕೆಯನ್ನು ಸಂಗ್ರಹಿಸಿದರು.

ಸಂಗಮನಾಥನ ದರ್ಶನ ಪಡೆದುಕೊಂಡು ಬಳಿಕ ಮಾತನಾಡಿದ ಐಟಿ, ಬಿಟಿ ಸಚಿವ ಅಶ್ವತ ನಾರಾಯನ ಅವರು ಜಗಜ್ಯೋತಿ ಬಸವಣ್ಣನವರು ನೀಡಿರುವಂತಹ ಸಂದೇಶ, ಸಾಮಾಜಿಕ ನ್ಯಾಯದ ಮೂಲಕ ಕಲ್ಯಾಣ ಸಮಾಜ ಕಟ್ಟಲು ಪುಣ್ಯ ಭೂಮಿಯ ಮೃತ್ತಿಕೆಯನ್ನು ಸಂಗ್ರಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕೂಡಲ ಸಂಗಮ ಕ್ಷೇತ್ರಕ್ಕೆ ಆಗಮಿಸಿರುವುದಾಗಿ ತಿಳಿಸಿದರು.

ಪುಣ್ಯ ಸ್ಥಳದ ಮೃತ್ತಿಕೆ ಪುಣ್ಯ ಮೃತ್ತಿಕೆಯಾಗಿರುತ್ತದೆ. ಇಂತಹ ಮೃತ್ತಿಕೆಗಳನ್ನು ಸಂಗ್ರಹ ಮಾಡಿಯೇ ನಾಡಪ್ರಭು ಕೆಂಪೇಗೌಡ ಅವರು ಬೆಂಗಳೂರನ್ನು ಸ್ಥಾಪನೆ ಮಾಡಿದ್ದಾರೆ. ಬಸವಣ್ಣನವರ ಸಂದೇಶ, ಅವರ ಜೀವನದಲ್ಲಿ ಜ್ಯಾತ್ಯಾತೀತ ಸಮಾಜ ನಿರ್ಮಾಣ, ಸಾಮಾಜಿಕ ನ್ಯಾಯ ಕೊಟ್ಟಿರುವದನ್ನು ಅಳವಡಿಸಿಕೊಂಡು ಇವರಿಬ್ಬರ ಸಂಗಮ ಮೃತ್ತಿಕೆ ಮೂಲಕ ತಂದು ನಾಡನ್ನು ಒಂದು ಕಡೆ ತಂದು ಶಕ್ತಿ ಕೇಂದ್ರವನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ ನಾಡಪ್ರಭು ಕೆಂಪೇಗೌಡ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಹೆಸರು ಇಡುವ ಮೂಲಕ ವಿದೇಶಿಯರು ಅವರ ಬಗ್ಗೆ ಕೇಳುವಂತಾಗಿದೆ. ನಾಡಿನ ಸಮೃದ್ದಿಗಾಗಿ ಕನ್ನಡ ನಾಡಿನಲ್ಲಿ ಹುಟ್ಟಿರುವ ಪುಣ್ಯ ಪುರುಷರ ಸ್ಥಳಗಳ ಮೃತ್ತಿಕೆಯನ್ನು ಸಂಗ್ರಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಗಜ್ಯೋತಿ ಬಸವಣ್ಣನವರ ಪುಣ್ಯ ಭೂಮಿ ಕೂಡಲಸಂಗಮದಲ್ಲಿ ಮೃತ್ತಿಕೆ ಸಂಗ್ರಹಿಸಲು ನಾಲ್ಕು ಜನ ಸಚಿವರು ಬಂದಿದ್ದೇವೆ. ಈ ಸ್ಥಳದ ಅಭಿವೃದ್ದಿಗಾಗಿ 500 ಕೋಟಿ ರೂ.ಗಳ ನೀಡಲಾಗುತ್ತಿದ್ದು, ಹಂತ ಹಂತವಾಗಿ ಬಸವಣ್ಣನವರ ಪುಣ್ಯ ಸ್ಥಳವನ್ನು ಅಭಿವೃದ್ದಿ ಪಡಿಸಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಕೂಡಲ ಸಂಗಮದ ಮಹಾದೇವ ಸ್ವಾಮಿಗಳು, ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಕೂಡಲ ಸಂಗಮ ಅಭಿಬೃದ್ದಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಸಚಿವರನ್ನು ಜಾನಪದ ಕಲಾತಂಡಗಳ ಮೂಲಕ ಸ್ವಾಗತಿಸಲಾಯಿತು. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]