ಲಂಚ ಕೊಟ್ಟರಷ್ಟೇ ಇ-ಸ್ವತ್ತು ನಕ್ಷೆ..!!: ಪ್ರತಿ ಸ್ವತ್ತಿಗೆ 3 – 4 ಸಾವಿರ ಫಿಕ್ಸ್..? / ದೂರು ನೀಡುವಂತೆ ಎಡಿಎಲ್ ಆರ್ ಮನವಿ

ದೊಡ್ಡಬಳ್ಳಾಪುರ: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಡಿಜಿಟಲ್ ರೂಪ ನೀಡಿ , ಆನ್‌ಲೈನ್ ಸೇವೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ ಇ – ಸ್ವತ್ತು ‘ ( ಇ ಖಾತಾ ) ಯೋಜನೆ ಲಂಚ ಕೊಟ್ಟವರಿಗಷ್ಟೇ ಸೀಮಿತವಾದ ಸ್ವತ್ತಾಗುತ್ತಿದೆ ಎಂಬ ಆರೋಪ ತಾಲೂಕಿನಲ್ಲಿ ವ್ಯಾಪಕವಾಗಿದೆ.

ಇದರಿಂದಾಗಿ ಜನಸಾಮಾನ್ಯರಿಗೆ ಇ – ಖಾತಾ ಸೌಲಭ್ಯ ಕೈಗೆಟುಕದಂತಾಗಿದೆ. ಲಂಚದ ಬೇಡಿಕೆಯಿಂದಾಗಿ ಗ್ರಾಮ ಠಾಣಾದಲ್ಲಿ ನೆಲೆಸಿರುವ ರೈತಾಪಿ ಜನರು ಪಿತ್ರಾರ್ಜಿತ ಆಸ್ತಿಗೂ ಇ – ಖಾತಾ ಪಡೆಯಲಾಗುತ್ತಿಲ್ಲ .

ಹಳ್ಳಿಗಳಲ್ಲಿ ಇರುವ ಸೈಟು, ಮನೆ, ಕಟ್ಟಡಗಳಿಗೆ ಇ – ಖಾತಾ ಮುಖ್ಯವಾಗಿವೆ. ಇಲ್ಲವಾದರೆ, ಕಾನೂನಡಿ ಮಾನ್ಯತೆ ಇರುವುದಿಲ್ಲ. ಉಪ ನೋಂದಣಿ ಕಚೇರಿಯಲ್ಲಿ ಸುಲಭವಾಗಿ ನೋಂದಾಯಿಸಬಹುದು. ಇ – ಸ್ವತ್ತು ಇಲ್ಲವಾದರೆ, ದಾನಪತ್ರ, ಸೇಲ್ ಡೀಡ್, ಬ್ಯಾಂಕ್ ಸಾಲ, ಹಕ್ಕು ಬಿಡುಗಡೆ ಪತ್ರ ಇನ್ನಿತರ ಕರಾರುಗಳನ್ನು ಉಪ ನೋಂದಣಿ ಕಚೇರಿಯಲ್ಲಿ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಇ – ಸ್ವತ್ತು ಕಡ್ಡಾಯ ಮಾಡಲಾಗಿದೆ.

ಆದರೆ ಇ -ಖಾತಾ ಮಾಡುವುದು ಗ್ರಾಮಪಂಚಾಯಿತಿಯಾದರು ಸ್ವತ್ತಿನ ಸರ್ವೆ ಮಾಡಬೇಕಾದ್ದು, ಸರ್ವೆ ಇಲಾಖೆ ವಿಪರ್ಯಾಸ ಸರ್ವೆ ನಡೆಸಲು ಬರುವ ಅಧಿಕಾರಿಗಳು ಇಂತಿಷ್ಟು ಲಂಚದ ಹಣ ನೀಡಿದರಷ್ಟೇ ಸರ್ವೆ ನಕ್ಷೆ ನೀಡುತ್ತಾರೆ ಎಂಬ ಆರೋಪ ತಾಲೂಕಿನಲ್ಲಿ ವ್ಯಾಪಕವಾಗಿದೆ.

3 – 4 ಸಾವಿರ ಫಿಕ್ಸ್..?: ಇ – ಸ್ವತ್ತಿಗೆ ಸರ್ವೆ ಮಾಡಲು ಸರ್ಕಾರಿ ಶುಲ್ಕ 800ರೂ ಮಾತ್ರವಿದ್ದು, ಇದೇ ಹಣದಲ್ಲಿ ಸರ್ವೆ ನಡೆಸುವ ಅಧಿಕಾರಿಗಳಿಗೆ ಹಣ ಸಂದಾಯವಾಗುತ್ತದೆ. ಆದರೆ ಪ್ರತಿ ಸರ್ವೆ ಕಾರ್ಯಕ್ಕೆ ಕೆಲ ಅಧಿಕಾರಿಗಳು 3ರಿಂದ 4 ಸಾವಿರ ಲಂಚದ ಹಣ ಫಿಕ್ಸ್ ಮಾಡಿಕೊಂಡಿದ್ದು, ಹಣ ನೀಡದ ಹೊರತು ನಕ್ಷೆ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಸರ್ಕಾರಿ ಭೂಮಿಗೂ ಲಂಚ.!: ಅದಕ್ಕಿಂತ ವಿಪರ್ಯಾಸವೆಂದರೆ ಹೆಸರೇಳಲು ಇಚ್ಚಿಸದ ಪಿಡಿಒ ಒಬ್ಬರ ಮಾಹಿತಿಯಂತೆ.  ಸಾರ್ವಜನಿಕರದ್ದಷ್ಟೇ ಅಲ್ಲ ಸರ್ಕಾರಿ ಜಮೀನಿನ ನಕ್ಷೆ ಮಾಡಿ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಪಡೆಯಲು, ಗ್ರಾಪಂ ಪಿಡಿಒಗಳಿಂದ ಕೆಲ ಸರ್ವೆಯರ್ ಗಳು ಲಂಚದ ಹಣಕೇಳುತ್ತಾರೆಂಬುದಾಗಿದೆ‌. ಇಂತಹ ಆಘಾತಕಾರಿ ಬೆಳವಣಿಗೆ ತಾಲೂಕಿನಲ್ಲಿ ಕಂಡುಬಂದಿರುವುದು ಇ-ಸ್ವತ್ತು ನಕ್ಷೆ ತಯಾರಿಸಲು ಹೆಚ್ಚುವರಿ ಲಂಚದ ಬೇಡಿಕೆ ಆರೋಪಕ್ಕೆ ಇಂಬು ನೀಡುವಂತಿದೆ.

ಈ ಕುರಿತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಗಮನ ಹರಿಸಬೇಕಿದ್ದು, ಲಂಚದ ಹಣಕ್ಕಾಗಿ ಬಡ ಜನರಿಗೆ ತೊಂದರೆ ಮಾಡುವವರ ಕಡಿವಾಣ ಹಾಕಬೇಕಿದೆ.

ದೂರು ನೀಡಿ: ಈ ಕುರಿತಂತೆ ಹರಿತಲೇಖನಿ ಎಡಿಎಲ್ ಆರ್ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಪಡೆದಿದ್ದು, ಸರ್ಕಾರಿ ಶುಲ್ಕ ಹೊರತು ಪಡಿಸಿ ಹೆಚ್ಚಿನ ಹಣದ ಬೇಡಿಕೆ ಇಟ್ಟರೆ, ಸಾರ್ವಜನಿಕರು ತಾಲೂಕು ಮಟ್ಟದ ಎಡಿಎಲ್ ಆರ್, ಜಿಲ್ಲಾ ಮಟ್ಟದ ಡಿಡಿಎಲ್ ಅರ್ ಅವರಿಗೆ ದೂರು ನೀಡಬಹುದಾಗಿದ್ದು, ಲಂಚದ ಬೇಡಿಕೆ ಇಡುವ ಅಧಿಕಾರಿ ವಿರುದ್ದ ಕ್ರಮಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!