ವಾರಣಾಸಿ, (ನ,13): ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲಿನ ಮೊದಲ ಟ್ರಿಪ್ ನ ಯಾತ್ರಾರ್ಥಿಗಳನ್ನು ಹೊತ್ತಂತಹ ರೈಲು ಇಂದು ವಾರಣಾಸಿ ಗೆ ಬಂದು ತಲುಪಿತು. ಬನಾರಸ್ ರೈಲು ನಿಲ್ದಾಣದಲ್ಲಿ ಯಾತ್ರಾರ್ಥಿಗಳಿಗೆ ಆತ್ಮೀಯ ಸ್ವಾಗತವನ್ನು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಶಶಿಕಲಾ ಜೊಲ್ಲೆ ಬನಾರಸ್ ನಲ್ಲಿ ಕೋರಿದರು.

ಪ್ರಥಮ ಟ್ರಿಪ್ ನ ಯಾತ್ರಾರ್ಥಿಗಳು ತಮ್ಮನ್ನು ಸ್ವಾಗತಿಸಲು ಆಗಮಿಸಿದ್ದ ಸಚಿವರನ್ನು ಕಂಡು ಸಂತಸಗೊಂಡರು. ರೈಲು ಪ್ರಯಾಣ ದಲ್ಲಿ ಅವರಿಗೆ ಸಿಕ್ಕಂತಹ ಅತಿಥ್ಯದ ಬಗ್ಗೆ ಸಚಿವ ರಿಗೆ ಮಾಹಿತಿ ನೀಡಿದರು.

ಎರಡು ದಿನಗಳ ಕಾಲ ವಾರಣಾಸಿ ಯಲ್ಲಿ ವಾಸ್ತವ್ಯ ಹೂಡಲಿರುವ ಯಾತ್ರಾರ್ಥಿಗಳು ನಂತರ ಪ್ರಯಾಗರಾಜ್ ಮತ್ತು ಅಯೋಧ್ಯೆ ಗೆ ಭೇಟಿ ನೀಡಿ ನಂತರ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
