ಅಕ್ರಮ ಮದ್ಯ ಮಾರಾಟ ಮಾಡಿದ್ದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ

ಚಿಕ್ಕಬಳ್ಳಾಪುರ, (ನ.18): ಯಾವುದೇ ವ್ಯಕ್ತಿಗಳು ಅಕ್ರಮ ಮದ್ಯ ಮಾರಾಟ ಮಾಡುವುದು ಕಂಡು ಬಂದಲ್ಲಿ ಕೂಡಲೇ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಅಬಕಾರಿ ಹಾಗೂ ಪೊಲೀಸ್ ಇಲಾಖೆಗೆ ಮಾನ್ಯ ಜಿಲ್ಲಾಧಿಕಾರಿ ಎನ್.ಎಮ್.ನಾಗರಾಜ್ ಅವರು ಸೂಚಿಸಿದರು. 

ಅವರು ಶನಿವಾರ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಶಿಡ್ಲಘಟ್ಟ ತಾಲ್ಲೂಕಿನ ಕಸಬಾ ಹೋಬಳಿಯ ಗೆಜ್ಜಿಗಾನಹಳ್ಳಿ ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ಮದ್ಯಪಾನ ಸೇವಿಸುವುದರಿಂದ ತಮ್ಮ ಆರೋಗ್ಯ ಹಾಗೂ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಅಲ್ಲದೇ ಅಕ್ರಮ ಮದ್ಯಪಾನ ಮಾರಾಟ ಮಾಡುವುದು ಅಪರಾಧ ಈ ನಿಟ್ಟಿನಲ್ಲಿ ಮದ್ಯಪಾನ ಸೇವನೆಗೆ ದಾಸರಾಗದೇ ಉತ್ತಮ ಆರೋಗ್ಯಕ್ಕೆ ಹಾಗೂ ಮಕ್ಕಳ ಉಜ್ವಲ ಭವಿಷ್ಯಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಸಾರ್ವಜನಿಕರಿಗೆ ತಿಳಿಸಿದರು. 

ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಗ್ರಾಮಗಳು ಅಭಿವೃದ್ಧಿಯಾಗಲು ಸ್ವಚ್ಛತೆ ಅತ್ಯಗತ್ಯವಾಗಿದ್ದು, ಮನೆಯಲ್ಲಿ ಉತ್ಪಾದನೆಯಾಗುವ‌ ಹಸಿ ಹಾಗೂ ಒಣ ಕಸವನ್ನು ಬೇರ್ಪಡಿಸಿ ತ್ಯಾಜ್ಯ ವಿಲೇವಾರಿ ವಾಹನಕ್ಕೆ ನೀಡಬೇಕು. ಮುಖ್ಯವಾಗಿ  ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಎಂದು ಹೇಳಿದರು. 

ನಿವೇಶನ ರಹಿತರಿಗೆ 2 ಎಕರೆ, ಸ್ಮಶಾನಕ್ಕೆ 37 ಕುಂಟೆ ಜಮೀನು ಮಂಜೂರು: ಸರ್ಕಾರವು ಗ್ರಾಮದ ಎಲ್ಲ ಜನಾಂಗಕ್ಕೂ ಸೇರಿ ಗ್ರಾಮಕ್ಕೊಂದು ಸಾರ್ವಜನಿಕ ಸ್ಮಶಾನವನ್ನು ನೀಡಲಾಗುತ್ತಿದ್ದು, ಗೆಜ್ಜಿಗಾನಹಳ್ಳಿ ಗ್ರಾಮಕ್ಕೆ 37 ಕುಂಟೆ ಜಮೀನು‌ ನೀಡಲಾಗಿದೆ. ಅಲ್ಲದೆ ಗ್ರಾಮದಲ್ಲಿ ನಿವೇಶನ ರಹಿತ ಫಲಾನುಭವಿಗಳಿಗೆ ನಿವೇಶನ ನೀಡಲು 2 ಎಕರೆ ಜಮೀನು ಈಗಾಗಲೇ ಮಂಜೂರು ಮಾಡಿದ್ದು ನಿವೇಶನ ರಹಿತ ಫಲಾನುಭವಿಗಳನ್ನು ಗುರ್ತಿಸಿ ನಿವೇಶನವನ್ನು ಹಂಚಿಕೆ ಮಾಡಲಾಗುವುದು ಎಂದರು.

ಅಂಗನವಾಡಿ ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ, ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಹಾಗೂ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ. ಯಾವುದೇ ಮಗು ಮೂಲ ಶಿಕ್ಷಣದಿಂದ ಹೊರಗುಳಿಯಬಾರದು ಎಂದು ಸರ್ಕಾರವು ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ನೀಡಲಾಗುತ್ತಿದೆ. ಜೊತೆಗೆ ಆರೋಗ್ಯ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಇಲಾಖೆಗಳು ಸೇರಿದಂತೆ ಎಲ್ಲ ಇಲಾಖೆಗಳಲ್ಲಿ ಸರ್ಕಾರವು ಸಾಕಷ್ಟು ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಸಾರ್ವಜನಿಕರು ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಂದ ಖುದ್ದು ಅಹವಾಲುಗಳನ್ನು ಸ್ವೀಕರಿಸಿ, ರೈತರಿಗೆ ಭೂಮಿಯ ಹಕ್ಕು ಮತ್ತು ಮಾಹಿತಿಗೆ ಪಹಣಿ ಅತ್ಯಗತ್ಯವಾಗಿದೆ. ಗ್ರಾಮವಾಸ್ತವ್ಯ ಕಾರ್ಯಕ್ರಮದ ಮೂಲಕ ಕಂದಾಯ ಇಲಾಖೆಯ ಅಧಿಕಾರಿಗಳು ಖುದ್ದು ಮನೆ ಮನೆಗೆ ಭೇಟಿ ನೀಡಿ ರೈತರ ಪಹಣಿಗಳನ್ನು ಸರಿಪಡಿಸುವ ಕಾರ್ಯ ಮಾಡುತ್ತಿದ್ದಾರೆ. ರೈತರು ಅವುಗಳನ್ನು ಸರಿಪಡಿಸಿಕೊಳ್ಳಲು ಇದೊಂದು ಸದಾ ಅವಕಾಶವಾಗಿದ್ದು ಪ್ರತಿಯೊಬ್ಬರು ಸರ್ಕಾರಿ ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.    

ಕಂದಾಯ ಇಲಾಖೆಯಿಂದ ದುರ್ಬಲರಿಗೆ, ವಯೋ ವೃದ್ಧರಿಗೆ, ಅಂಗವಿಕರಲರಿಗೆ, ವಸತಿ ರಹಿತರಿಗೆ ವಸತಿ, ನಿವೇಶನ, ಸೇರಿದಂತೆ ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯುವಂತಹ ಸವಲತ್ತುಗಳನ್ನು ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ಯಶಸ್ವಿಯಾಗಿ ಅರ್ಹ ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಈ ಕುರಿತು ಎಲ್ಲಾ ಇಲಾಖೆಯ ಕಾರ್ಯಕ್ರಮಗಳ ಕುರಿತು ಮಳಿಗೆಗಳನ್ನು ಸ್ಥಾಪಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಕೋರಿದರು. 

ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮದ ಬೀದಿಗಳಲ್ಲಿ ರಸ್ತೆ, ಚರಂಡಿ, ಮೂಲಸೌಕರ್ಯಗಳ ಸ್ಥಿತಿ ಗತಿಗಳ ಪರಿಶೀಲನೆ ನಡೆಸಿದರು. ವಿವಿಧ ಯೋಜನೆಗಳಿಂದ ಆಯ್ಕೆಯಾದ ಫಲಾನುಭವಿಗಳಿಗೆ ಪಿಂಚಣಿ, ಪಹಣಿ, ಪೌತಿಖಾತೆ ಸೇರಿದಂತೆ ಹಕ್ಕು ಪತ್ರಗಳನ್ನು‌ ವಿತರಿಸಿದರು. 

ವಿವಿಧ ಇಲಾಖೆಗಳಿಂದ ತೆರಯಲ್ಪಟ್ಟ ಕೃಷಿ, ತೋಟಗಾರಿಕೆ, ರೇಷ್ಮೆ ವಸ್ತುಪ್ರದರ್ಶನ ಮಳಿಗೆಗಳು, ಆರೋಗ್ಯ ಶಿಬಿರ ಮಳಿಗೆ,  ಆರೋಗ್ಯ ತಪಾಸಣೆ ಹಾಗೂ ಔಷಧಿಗಳ ವಿತರಣೆ, ಡೆಂಗ್ಯೂ ರೋಗದ ಕುರಿತು ಅರಿವು ಶಿಬಿರ ಸೇರಿದಂತೆ ಇತರೆ ಎಲ್ಲಾ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು ಹಾಗೂ ಗ್ರಾಮಸ್ಥರಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ  ಕೆಎಂಎಫ್ ನಿರ್ದೇಶಕ ಶ್ರೀನಿವಾಸ್, ತಹಶೀಲ್ದಾರ್ ಬಿ.ಎಸ್.ರಾಜೀವ್, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಜಿಲ್ಲಾ ಆಹಾರ ‌ಮತ್ತು‌ ಗ್ರಾಹಕರ‌  ವ್ಯವಹಾರ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ, ಕೃಷಿ ಇಲಾಖೆಯ ಉಪ ನಿರ್ದೇಶಕಿ ಅನುರಾಧ,   ಮುಖಂಡರಾದ ಶೀಗೆಹಳ್ಳಿ ಬಸವರಾಜ್, ಸಿಡಿಪಿಓ ನೌತಾಜ್, ಬಿಸಿಎಂ ಅಧಿಕಾರಿ ನಾರಾಯಣಪ್ಪ, ಗ್ರಾಮಪಂಚಾಯಿತಿ ಅಧ್ಯಕ್ಷೆ ಹೇಮಾವತಿ, ಉಪಾಧ್ಯಕ್ಷ ದೇವರಾಜ್, ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಆಶಾಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!