ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ: ಕಂಟನಕುಂಟೆ ಗ್ರಾಪಂ ವ್ಯಾಪ್ತಿಯ 6186 ಫಲಾನುಭವಿಗಳಿಗೆ ಸುಮಾರು 1.85 ಕೋಟಿ ರೂ.ಗಳ ವಿವಿಧ ಸೌಲಭ್ಯಗಳ ವಿತರಣೆ..!!

ಬೆಂ.ಗ್ರಾ.ಜಿಲ್ಲೆ, (ನ.20): ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಹೋಬಳಿಯ ವಡ್ಡರಹಳ್ಳಿಯಲ್ಲಿ ಶನಿವಾರ ನ.19 ಬೆಂಗಳೂರು ಗ್ರಾಮಾಂತರ  ಜಿಲ್ಲಾಧಿಕಾರಿ ಆರ್.ಲತಾ ಅವರು ನಡೆಸಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ  ವಿವಿಧ ಇಲಾಖೆಗಳ ಯೋಜನೆಗಳಡಿ  ಕಂಟನಕುಂಟೆ ಗ್ರಾಪಂ ವ್ಯಾಪ್ತಿಯ 6186 ಫಲಾನುಭವಿಗಳಿಗೆ ಸುಮಾರು 1 ಕೋಟಿ 85 ಲಕ್ಷ ರೂ ಮೌಲ್ಯದ ವಿವಿಧ ಸೌಲಭ್ಯಗಳನ್ನು  ಹಸ್ತಾಂತರಿಸಲಾಗಿದೆ.

ಕಂದಾಯ ಇಲಾಖೆಯು 94 ಸಿ ಹಾಗೂ 94 ಸಿಸಿ ಅಡಿ 115 ಹಕ್ಕುಪತ್ರಗಳು, 16 ಪೌತಿ ಖಾತೆ ದಾಖಲೆಗಳು, 137 ಪಹಣಿ ತಿದ್ದುಪಡಿ ದಾಖಲೆಗಳು ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆ,ವಿಧವಾ ವೇತನ,ಸಂಧ್ಯಾ ಸುರಕ್ಷಾ ಯೋಜನೆ ಸೇರಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ಸುಮಾರು 250 ಕ್ಕೂ ಹೆಚ್ಚು ಮಂಜೂರಾತಿ ಆದೇಶಗಳನ್ನು ಹಸ್ತಾಂತರಿಸಲಾಯಿತು.ಸರ್ಕಾರದ ಒತ್ತುವರಿ ಭೂಮಿಯನ್ನು ಕಾಲುದಾರಿ ಹಾಗೂ ಸ್ಮಶಾನ ಭೂಮಿಗಾಗಿ ತೆರವುಗೊಳಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯು ತಾಪಂ ಅನಿರ್ಬಂಧಿತ ಅನುದಾನ ಯೋಜನೆಯಡಿ ಸರ್ಕಾರಿ ಶಾಲೆಗಳ ಕೊಠಡಿ ದುರಸ್ತಿ,ಮಾದರಿ ಶಾಲೆಯಾಗಿ ಅಭಿವೃದ್ಧಿ ಪಡಿಸುವುದು, ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಬಾಲಸ್ನೇಹಿ ಆಟದ ಸಾಮಗ್ರಿಗಳು,ಸರ್ಕಾರಿ ಪ್ರೌಢಶಾಲೆಗೆ ನಿರಂತರ ವಿದ್ಯುತ್ ಪೂರೈಕೆಗಾಗಿ ಇನ್ವರ್ಟರ್ ಸೇರಿದಂತೆ ಅನೇಕ ಸೌಕರ್ಯಗಳನ್ನು ಕಲ್ಪಿಸಲು ಕ್ರಮವಹಿಸಲಾಗಿದೆ.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಎನ್‌ಅರ್‌ಎಲ್‌ಎಂ) ಅಡಿ ಶ್ರೀದುರ್ಗಾ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ಸಮುದಾಯ ಬಂಡವಾಳ ನಿಧಿ ಯೋಜನೆಯಡಿ ಸಾಲವಿತರಣೆಗೆ ಸುಮಾರು 11 ಲಕ್ಷ ರೂ.ಒದಗಿಸಲಾಗಿದೆ.

ವಿಕಲಚೇತನರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಹಾಯಧನ ಸೇರಿದಂತೆ ಅನೇಕ ಸೌಲಭ್ಯಗಳನ್ನು ವಿತರಿಸಲಾಗಿದೆ.

ಕೃಷಿ ಇಲಾಖೆಯು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿಹೊಂಡ ನಿರ್ಮಾಣಕ್ಕೆ ಸುಮಾರು 17.44 ಲಕ್ಷ ರೂ. ಸೇರಿ ಬದು ನಿರ್ಮಾಣ, ಎರೆಹುಳು ತೊಟ್ಟಿ ನಿರ್ಮಾಣಕ್ಕೆ ನೆರವು ನೀಡಲಾಯಿತು.

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿವೇತನ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ವರ್ಗಾವಣೆ ಸೌಕರ್ಯ ಕಲ್ಪಿಸಿದೆ.

ತೋಟಗಾರಿಕೆ ಇಲಾಖೆಯು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 61 ಲಕ್ಷ ರೂ.ಸಹಾಯಧನ, ಪಿಎಂಕೆಎಸ್‌ವೈ ಅಡಿ ಹನಿ ನೀರಾವರಿ ಅಳವಡಿಕೆಗೆ 18 ಲಕ್ಷ ರೂ.ಸಹಾಯಧನ ಒದಗಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯು ಅಂತರ್ಜಾತಿ ವಿವಾಹ ನೆರವು ಕಾರ್ಯಕ್ರಮದಡಿ 14 ದಂಪತಿಗಳಿಗೆ 39 ಲಕ್ಷ ರೂ.ನೆರವು ಹಸ್ತಾಂತರ ಮಾಡಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸುಮಾರು 4 ಸಾವಿರ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡುಗಳು, ಸುಮಾರು 500 ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ನೋಂದಣಿ ಕಾರ್ಡ್ ಸೇರಿದಂತೆ ಅನೇಕ ಸೌಕರ್ಯಗಳನ್ನು ಕಂಟನಕುಂಟೆ ಗ್ರಾಪಂ ವ್ಯಾಪ್ತಿಯ ಫಲಾನುಭವಿಗಳಿಗೆ ವಡ್ಡರಹಳ್ಳಿಯಲ್ಲಿ ಒದಗಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]