ಮೀಸಲಾತಿ ಹೆಚ್ಚಳ: ತಳಸಮುದಾಯದವರಿಗೆ ಸ್ವಾಭಿಮಾನದ ಬದುಕು ನೀಡಿದೆ: ಸಿಎಂ ಬೊಮ್ಮಾಯಿ

ಬಳ್ಳಾರಿ, (ನ.20): ಎಸ್ ಸಿ ಸಮುದಾಯಕ್ಕೆ 15 ರಿಂದ 17 % ಹಾಗೂ ಎಸ್ ಟಿ ಸಮುದಾಯಗಳಿಗೆ 3 ರಿಂದ 7 % ಮೀಸಲಾತಿ ಹೆಚ್ಚಳ ಸಂವಿಧಾನಬದ್ಧವಾದ ನಿರ್ಧಾರವಾಗಿದ್ದು, ತಳಸಮುದಾಯದವರಿಗೆ ಸ್ವಾಭಿಮಾನದ ಬದುಕನ್ನು ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಭಾರತೀಯ ಜನತಾ ಪಕ್ಷದ ಎಸ್.ಟಿ. ಮೋರ್ಚಾ ವತಿಯಿಂದ ಬಳ್ಳಾರಿಯ ಜೀ ವೃತ್ತದ ಬಳಿ ಆಯೋಜಿಸಿದ್ದ “ಎಸ್.ಟಿ.ಮೋರ್ಚಾ ಬೃಹತ್ ಸಮಾವೇಶ”ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ಎನ್ನುವ ಮೂಲಕ ಇಡೀ ಭಾರತವನ್ನು ಒಗ್ಗೂಡಿಸಿದ್ದಾರೆ. ಏಕ್ ಭಾರತ ,ಶ್ರೇಷ್ಠ ಭಾರತ ಎಂದು ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸಿದ್ದಾರೆ. ತಳಸಮುದಾಯದವರಿಗೆ ಸ್ವಾಭಿಮಾನದ ಬದುಕನ್ನು ನೀಡಲು ಸರ್ಕಾರ, ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳದ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದರು.

ಸಾಮಾಜಿಕ ನ್ಯಾಯ ಒದಗಿಸಿದ ಸರ್ಕಾರದ ಯೋಜನೆಗಳು: ಸರ್ಕಾರ ಎಸ್ ಸಿ ಎಸ್ ಟಿ ಸಮುದಾಯಗಳಿಗೆ 28 ಸಾವಿರಕ್ಕೂ ಹೆಚ್ಚಿನ ಅನುದಾನವನ್ನು ನೀಡಿದೆ. ಸಮಾಜ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಿಗೆ 6 ಸಾವಿರ ಕೋಟಿ ರೂ. ನೀಡಲಾಗಿದೆ. ಎಸ್ ಟಿ ಸಮುದಾಯಕ್ಕೆ ಪ್ರತ್ಯೇಕ ನಿರ್ದೇಶನಾಲಯವನ್ನು ಸ್ಥಾಪಿಸಲಾಯಿತು.  ಹಾಲು ಮತದ ಸಮುದಾಯಕ್ಕೆ ನ್ಯಾಯ ಒದಗಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕಾಗಿನೆಲೆ ಅಭಿವೃದ್ಧಿ ಅನುದಾನ ನೀಡಿದರು. ವಾಲ್ಮೀಕಿ ಜಯಂತಿಯನ್ನು ಘೋಷಣೆ ಮಾಡಿದರು. ಸಾಮಾಜಿಕ ನ್ಯಾಯವನ್ನು ನಮ್ಮ ಸರ್ಕಾರ ಅಕ್ಷರಶ: ನೀಡಿದೆ. ಎಸ್ ಸಿ ಎಸ್ ಟಿ ಸಮುದಾಯದವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕೆಂಬ ಆಶಯದೊಂದಿದೆ ನಮ್ಮ ಸರ್ಕಾರ ಯೋಜನೆಗಳನ್ನು ಜಾರಿಗೊಳಿಸಿದೆ. 100 ಅಂಬೇಡ್ಕರ್ ಹಾಸ್ಟೆಲ್ ಗಳು, 50 ಕನಕದಾಸ ಹಾಸ್ಟೆಲ್ ಗಳನ್ನು ನಿರ್ಮಿಸಲಾಗುತ್ತಿದೆ. ಐದು ಲಕ್ಷ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಐದು ಲಕ್ಷ ಯುವಕರಿಗೆ  ವಿವೇಕಾನಂದ ಯುವಶಕ್ತಿ ಯೋಜನೆಗಳ  ಮೂಲಕ ಸ್ವಯಂ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದರು.

ವಾಲ್ಮೀಕಿ ನಮ್ಮ ಸರ್ಕಾರಕ್ಕೆ ಸ್ಪೂರ್ತಿ: ವಾಲ್ಮೀಕಿ ರಚಿಸಿದ ರಾಮಾಯಣ, ಪವಿತ್ರ ಧರ್ಮಗ್ರಂಥಗಳಲ್ಲಿ ಒಂದು. ವಾಲ್ಮೀಕಿಯವರು ನಮಗೆ ಸ್ಪೂರ್ತಿ. ದೇಶವನ್ನು ಕಟ್ಟುವ ಕೆಲಸವನ್ನು ವಾಲ್ಮೀಕಿ ಸಮುದಾಯದವರು ಮಾಡಬೇಕು. ಮೊಘಲರನ್ನು ಹಿಮ್ಮೆಟ್ಟಿಸಿದ್ದು, ಈ ಸಮುದಾಯದ ವೀರ ನಾಯಕರು. ವೀರ ಮದಕರಿ, ಏಕಲವ್ಯ,ಬೇಡರ ಕಣ್ಣಪ್ಪ ಎಲ್ಲರೂ ವಾಲ್ಮೀಕಿ ಕುಲವನ್ನು ಶ್ರೇಷ್ಟಗೊಳಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಾರಿಗೆ  ಹಾಗೂ ಎಸ್ಟಿ ಇಲಾಖೆಗಳ ಸಚಿವ ಬಿ‌. ಶ್ರೀರಾಮುಲು, ಸಚಿವರಾದ ಗೋವಿಂದ ಕಾರಜೋಳ, ಆನಂದ ಸಿಂಗ್, ಪ್ರಭು ಚೌಹ್ವಾಣ್, ಶಾಸಕರಾದ ಸೋಮಶೇಖರ್ ರೆಡ್ಡಿ, ಕರುಣಾಕರ್ ರೆಡ್ಡಿ, ರಾಜು ಗೌಡ ಹಾಗೂ ಮತ್ತಿತರರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!