BBMP ತ್ಯಾಜ್ಯ ಲಾರಿ ಅಪಘಾತ News update: ಮೃತರಿಗೆ ಪರಿಹಾರ ನೀಡಿ ಕೈತೊಳೆದುಕೊಂಡ ಬಿಬಿಎಂಪಿ / ಹಲವು ಗಂಟೆಗಳ ಬಳಿಕ ರಸ್ತೆಯಲ್ಲಿದ್ದ ಯುವಕರ ಮೃತ ದೇಹ ತೆರವು

ದೊಡ್ಡಬಳ್ಳಾಪುರ, (ನ.29): ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಲಾರಿ ಅಪಘಾತದಲ್ಲಿ ಮೃತ ಪಟ್ಟ ದ್ವಿಚಕ್ರ ವಾಹನ ಸವಾರರಿಗೆ ತಲಾ 25 ಲಕ್ಷ ನೀಡಲು ಬಿಬಿಎಂಪಿ ಅಧಿಕಾರಿಗಳು ಒಪ್ಪಿಗೆ ಸೂಚಿಸಿ, ಕೈತೊಳೆದುಕೊಂಡಿದೆ.

ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ, ನೆಲಮಂಗಲ ಶಾಸಕ ಡಾ.ಶ್ರೀನಿವಾಸ ಮೂರ್ತಿ ಹಾಗೂ ಹುಲಿಕುಂಟೆ ಅಕ್ಕಪಕ್ಕದ ಗ್ರಾಮಸ್ಥರ ಆಕ್ರೋಶಕ್ಕೆ ಮಣಿದ ಬಿಬಿಎಂಪಿ ಅಧಿಕಾರಿಗಾಳದ ಎಇಇ ಪ್ರಸನ್ನ, ಎಸ್ ಇ ಪ್ರವೀಣ್ ಅವರು ಮೃತ ಯುವಕರ ಕುಟುಂಬಕ್ಕೆ ತಲಾ 25 ಲಕ್ಷ ನೀಡಲು ಸಮ್ಮತಿ ನೀಡಿದರು.

ನೆಲಮಂಗಲ ತಾಲೂಕಿನ ಮರಳುಕುಂಟೆ ಗ್ರಾಮದ ಮಹೇಶ್ (27ವರ್ಷ), ಮಾರುತಿ (24 ವರ್ಷ), ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹಿಂತಿರುಗಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ, ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಲಾರಿ ಅಪಘಾತ ನಡೆಸಿದ ಪರಿಣಾಮ, ಯುವಕರು ಸ್ಥಳದಲ್ಲಿಯೇ ಸಾವನಪ್ಪಿದ್ದರು.

ಈ ಕುರಿತಂತೆ ಎರಡು ತಾಲೂಕಿನ ಶಾಸಕರು, ಹುಲಿಕುಂಟೆ ಗ್ರಾಮದ ಅಕ್ಕಪಕ್ಕದ ಗ್ರಾಮಸ್ಥರು ಮೃತ ದೇಹಗಳನ್ನು ತೆರವು ಮಾಡಲು ಬಿಡದೆ ಪ್ರತಿಭಟನೆಗೆ ಕುಳಿತಿದ್ದರು.

ಈ ವೇಳೆ ಉಪವಿಭಾಗಾಧಿಕಾರಿ ತೇಜಸ್ ಕುಮಾರ್, ತಹಶೀಲ್ದಾರ್ ಮೋಹನಕುಮಾರಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ನಾಗರಾಜ್, ಸರ್ಕಲ್ ಇನ್ಸ್ಪೆಕ್ಟರ್ ಹರೀಶ್, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಜ್ಞಾನಮೂರ್ತಿ ಸ್ಥಳಕ್ಕೆ ಭೇಟಿ ನೀಡಿದ್ದರು.

ಸುಮಾರು ಆರು ಗಂಟೆಗಳ ನಂತರ ಸ್ಥಳಕ್ಕೆ ಬಂದ ಬಿಬಿಎಂಪಿ ಅಧಿಕಾರಿಗಳು ಹಲವು ಸುತ್ತಿನ ಮಾತುಕತೆ ನಡೆಸಿದ್ದು, ಮೃತ ಯುವಕರ ಕುಟುಂಬಕ್ಕೆ ಪರಿಹಾರ ನೀಡಲು ಸಮ್ಮತಿ ನೀಡಿದರು.

ಸೋಮವಾರ ಮಧ್ಯರಾತ್ರಿ 1ಗಂಟೆಯಾದರೂ ಕೆಲವು ಯುವಕರು ಮೃತರಿಗೆ ತಲಾ 50 ಲಕ್ಷ ರೂ ಪರಿಹಾರ ನೀಡಬೇಕೆಂದು ಪಟ್ಟುಹಿಡಿದ್ದು, ಮೃತರ ಶವಗಳನ್ನು ತೆರವು ಮಾಡಲು ಬಿಡದ ಕಾರಣ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ, ಶವಗಳನ್ನು ತೆರವುಗೊಳಿಸಿದರು.

ಸಭೆಯ ನಂತರ ತೀರ್ಮಾನ: ಉಳಿದಂತೆ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಘಟಕ ಎಂ.ಎಸ್.ಜಿ.ಪಿ ಬಂದ್ ಮಾಡುವ ವಿಚಾರದ ಕುರಿತಂತೆ, ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಶಾಸಕರ ನೇತೃತ್ವದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸುವ ಮಾತುಗಳು ಕೇಳಿಬಂದಿದ್ದು, ಕೆಲವೇ ದಿನಗಳಲ್ಲಿ ಎರಡು ತಾಲೂಕಿನ ಶಾಸಕರ ನೇತೃತ್ವದಲ್ಲಿ ಸಭೆ ನಡೆದು, ಅಂತಿಮ ತೀರ್ಮಾನ ಹೊರಬೀಳಲಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]