ಸಾಸಲು ಹೋಬಳಿ ಕೇಂದ್ರದಲ್ಲಿ ದೊಡ್ಡಬಳ್ಳಾಪುರ ತಾಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರಾಗಿ ಚಿನ್ನು ಪ್ರಕಾಶ್ ಆಯ್ಕೆ

ದೊಡ್ಡಬಳ್ಳಾಪುರ, (ಡಿ.01): ದೊಡ್ಡಬಳ್ಳಾಪುರ ತಾಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದೇ 18 ಮತ್ತು 19ರಂದು ತಾಲೂಕಿನ ಸಾಸಲು ಹೋಬಳಿ ಕೇಂದ್ರದಲ್ಲಿ ನಡೆಯಲಿದ್ದು, ಸಮ್ಮೇಳನವನ್ನು ಸಂಭ್ರಮದಿಂದ ನಡೆಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿವಿಧ ಇಲಾಖೆಗಳು ಅದರದೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಸಮ್ಮೇಳನಕ್ಕೆ ಅಗತ್ಯ ಸಹಕಾರ ನೀಡಬೇಕಾಗುತ್ತದೆ. ಆಯಾ ಇಲಾಖೆಗಳ ಜನಸ್ನೇಹಿ ಯೋಜನೆಗಳ ಕುರಿತು ಮಾಹಿತಿ ನೀಡಲೂ ಇದೊಂದು ಉತ್ತಮ ವೇದಿಕೆಯಾಗಿದ್ದು, ತಾಲೂಕಿನಾದ್ಯಂತ ಹೆಚ್ಚಿನ ಪ್ರಚಾರದೊಂದಿಗೆ ಅರ್ಥಪೂರ್ಣವಾಗಿ ಆಯೋಜಿಸಲು ಸಹಕರಿಸಬೇಕು ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸೇವಾದಳ, ಪ್ರೌಡಶಾಲಾ ಮಕ್ಕಳ ಸಹಭಾಗಿತ್ವವನ್ನು ಕಡ್ಡಾಯವಾಗವಾಗಿಸಿ. ಇನ್ನು ಇಲ್ಲಿನ ಹೋಬಳಿಯ ಧಾರ್ಮಿಕ ಇತಿಹಾಸ, ಜನಪದ ಇತಿಹಾಸವನ್ನು ಸಮ್ಮೇಳನದ ಮೂಲಕ ಪ್ರಚಾರಕ್ಕೆ ಬರುವ ಅಗತ್ಯ ಇದೆ ಎಂದು ತಿಳಿಸಿದರು.

ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ಬೆಂಗಳೂರು ವಿಶ್ವ ವಿದ್ಯಾಲಯ ಕನ್ನಡ ವಿಭಾಗ, ಕನ್ನಡ ಪುಸ್ತಕ ಪ್ರಾಧಿಕಾರಗಳನ್ನು ವಿಶೇಷವಾಗಿ ಬಳಸುಕೊಳ್ಳುವುದು, ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸುವ ಹಂತದಲ್ಲಿ ಅಧಿಕಾರಿಗಳ ಸಭೆಯೊಂದನ್ನು ನಡೆಸಲಾಗುವುದು ಎಂದರು.

ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಸಮ್ಮೇಳನದ ಸ್ವಾಗತ ಸಮಿತಿ ಹಾಗೂ ಉಪಸಮಿತಿಗಳಲ್ಲಿ ಕನ್ನಡ ಸಂಘಟನೆಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಭಾಗಿತ್ವ ಮುಖ್ಯ. ಸಮ್ಮೇಳನ ಸ್ವರೂಪ ಮತ್ತು ರೂಪರೇಷೆಗಳು ಶಿಷ್ಟಾಚಾರದಂತೆ ರೂಪಗೊಳ್ಳಬೇಕು. ಈ ಹಂತದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿಗೆ ಸಂಪೂರ್ಣ ಹೊಣೆಗಾರಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದರು.

ವಿವಿಧ ವಿಚಾರಗಳ ಕುರಿತು ಚರ್ಚೆ: ಸಾಸಲು ಹೋಬಳಿಯಲ್ಲಿ ಪ್ರಥಮ ಭಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸಂತೋಷದ ಸಂಗತಿಯಾಗಿದೆ. ಸಾಸಲು ಚಿನ್ನಮ್ಮನ ಇತಿಹಾಸದ ಮೂಲಕ ಸಮ್ಮೇಳನಕ್ಕೆ ಮತ್ತಷ್ಟು ಮೆರಗು ಸಿಕ್ಕುವಂತಾಗುತ್ತದೆ. ಒಂದು ದಿನಕ್ಕೆ ಸಮ್ಮೇಳನ ಸೀಮಿತಗೊಳ್ಳುವುದು ಉತ್ತಮ. ಯುವಜನ ಕೇಂದ್ರಿತ ವಿಚಾರಗೋಷ್ಠಿ, ಸಮ್ಮೇಳನ ನಿರ್ಣಯಗಳ ಅನುಷ್ಠಾನ ಇತ್ಯಾದಿ ವಿಚಾರಗಳ ಕುರಿತು ಸಲಹೆಗಳು ಕೇಳಿ ಬಂದವು.

ಸಮ್ಮೇಳನಾಧ್ಯಕ್ಷರಾಗಿ ಚಿನ್ನು ಪ್ರಕಾಶ್ ಆಯ್ಕೆ: ದೊಡ್ಡಬಳ್ಳಾಪುರ ತಾಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಸಲು ಹೋಬಳಿಯ ಸಾಹಿತಿ-ಕಲಾವಿದ ಚಿನ್ನುಪ್ರಕಾಶ್ ಅವರನ್ನು ತಾಲೂಕು ಕಸಾಪ ಕಾರ್‍ಯಕಾರಿ ಸಮಿತಿ ಆಯ್ಕೆ ಮಾಡಿದೆ ಎಂದು ತಾ.ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು ಪ್ರಕಟಿಸಿದರು.

ಇದೇ ವೇಳೆ ಸಮ್ಮೇಳನಾಧ್ಯಕ್ಷರ ಪರಿಚಯ ಪತ್ರ ಹಾಗೂ ಸಮ್ಮೇಳನದ ಲಾಂಛನವನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಾಥ್‌ಗೌಡ, ಕಸಾಪ ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು, ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡ ಸಂಘಟನೆಗಳ ಮುಖಂಡರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!