ದೊಡ್ಡಬಳ್ಳಾಪುರ, (ಡಿ.08): ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿ ಯವರ ಮೇಲೆ ಪುಂಜಾಲಕಟ್ಟೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಖಂಡಿಸಿ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದಿಂದ ಕಲಾಪ ಬಹಿಷ್ಕರಿಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ದೌರ್ಜನ್ಯಕ್ಕೊಳಗಾದ ವಕೀಲರ ಪರವಾಗಿ ಅವರಿಗೆ ನೈತಿಕ ಬೆಂಬಲವನ್ನು ಸೂಚಿಸಲಾಯಿತು.

ಈ ಕುರಿತಂತೆ ಹರಿತಲೇಖನಿಗೆ ಮಾಹಿತಿ ನೀಡಿದ ಸಂಘದ ಅಧ್ಯಕ್ಷರಾದ ಹೆಚ್.ಎಂ.ಮಂಜುನಾಥ್, ಡಿಸೆಂಬರ್ 03ರಂದು ಮಂಗಳೂರಿನ ಯುವ ಕುಲದೀಪ್ ವಕೀಲರಾದ ಅವರ ಮೇಲೆ ಬಂಟ್ವಾಳದ ಶೆಟ್ಟಿ , ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಪೊಲೀಸರು ನಡೆಸಿದ ದೌರ್ಜನ್ಯವನ್ನು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಗಿದೆ.

ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲರ ಮೇಲೆ FIR ದಾಖಲಿಸಿ , ರಾತೋರಾತ್ರಿ ವಕೀಲರ ಮನ ಪ್ರವೇಶ ಮಾಡಿ ವಕೀಲರನ್ನು ಮನೆಯಿಂದ ಎಳೆದುಕೊಂಡು ಹೋಗಿ ನಡೆಸಿದ ಪೊಲೀಸ್ ದೌರ್ಜನ್ಯವನ್ನು ದೊಡ್ಡಬಳ್ಳಾಪುರ ತಾಲ್ಲೂಕು ತೀವವಾಗಿ ಖಂಡಿಸುತ್ತದೆ. ಈ ಕೂಡಲೇ ತಪ್ಪಿತಸ್ತ ಪೋಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಯವರನ್ನು ಮತ್ತು ಸರಕಾರವನ್ನು ಒತ್ತಾಯಿಸುತ್ತೇವೆ. ಕೂಡಲೇ ಕಮ ಕೈಗೊಳ್ಳಲು ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಸೂಕ್ತ ಹೋರಾಟ ನಡೆಸಲಾಗುವುದು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘವು ಎಚ್ಚರಿಸುತ್ತದೆ ಹಾಗೂ ಈ ಕೂಡಲೇ ವಕೀಲರ ಸಂರಕ್ಷಣೆ ಕಾಯ್ದೆಯನ್ನು ತ್ವರಿತವಾಗಿ ಜಾರಿಗೆ ತರಬೇಕೆಂದು ಒತ್ತಾಯಿಸುತ್ತೇವೆ ಎಂದಿದ್ದಾರೆ.
ಈ ವೇಳೆ ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಆರ್.ರವಿ, ನಿರ್ದೇಶಕರಾದ ಪ್ರಕಾಶ್.ಆರ್.ಡಿ., ಎಂ.ಮುನಿರಾಜು, ಎನ್.ನರಸಿಂಹಮೂರ್ತಿ, ಪ್ರಭಾಕರ್.ಆರ್, ಶ್ರೀನಿವಾಸ್, ಶಾಂತಲಾ, ಹರೀಶ್.ಹೆಚ್.ಜಿ., ವಸುಧಾ.ಬಿ.ಎಸ್., ಸುರೇಶ್ ಕುಮಾರ್ ಸೇರಿದಂತೆ ಅನೇಕ ವಕೀಲರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
