ಹರಿತಲೇಖನಿ ದಿನದ ಚಿತ್ರ: ಕುಂಭಾಸಿ

ಸಿದ್ದಿ ಕ್ಷೇತ್ರ ಎಂದೇ ಪ್ರಖ್ಯಾತಿ ಪಡೆದಿರುವ ಕುಂಭಾಸಿ, ಕುಂದಾಪುರದಲ್ಲಿನ ಪ್ರಸಿದ್ಧ ದೇವಾಲಯಗಳಲ್ಲೊಂದು. ಪರಶುರಾಮ ಸೃಷ್ಠಿಯ ಸಪ್ತ ಕ್ಷೇತ್ರಗಳಲ್ಲಿ ಇದೂ ಒಂದಾಗಿದೆ. ಕುಂದಾಪುರದಿಂದ ದಕ್ಷಿಣಕ್ಕೆ ರಾ.ಹೆ. 66ರಲ್ಲಿ ಸುಮಾರು 9 ಕಿ.ಮೀ. ದೂರದಲ್ಲಿ ಸಾಗಿದರೆ ಆನೆಗುಡ್ಡೆ (ಕುಂಭಾಸಿ) ಶ್ರೀ ವಿನಾಯಕ ದೇವರ ದರ್ಶನ ಪಡೆಬಹುದಾಗಿದೆ. ಇದು ಪುರಾತನವಾದ ಮತ್ತು ನಾಡಿನಾದ್ಯಂತ ಭಕ್ರಸಾಗರವನ್ನು ಹೊಂದಿರುವ ದೇವಾಲಯವಾಗಿದೆ.

ಪೌರಾಣಿಕ ಹಿನ್ನಲೆ: ಕುಂಭಾಸಿಗೆ ಹರಿಹರಕ್ಷೇತ್ರ, ಮಧುಕಾನನ, ಗೌತಮಕ್ಷೇತ್ರ, ನಾಗಾಚಲ, ಆನೆಗುಡ್ಡೆ, ಕುಂಭಕಾಶಿ ಮುಂತಾದ ಹೆಸರುಗಳಿವೆ. ಪ್ರತಿ ಹೆಸರಿನ ಹಿಂದೆಯೂ ಪೌರಾಣಿಕ ಕಥೆಗಳಿವೆ.

ಹಿಂದೆ ಮಹಾತೇಜಸ್ವಿಯಾದ ಕುಂಭಾಸುರನೆಂಬ ರಾಕ್ಷಸನು ರಾಮಚಂದ್ರನಿಗೆ ಭಯಪಟ್ಟು ಮಹೇಂದ್ರಗಿರಿಯಲ್ಲಿ ಅವಿತುಕೊಂಡಿದ್ದನು. ಕಾಲಾಂತರದಲ್ಲಿ ಅಲ್ಲಿಂದ ಹೊರಟು ನಾರದನ ಮಾತಿನಂತೆ ಈಶ್ವರನನ್ನು ಮೆಚ್ಚಿಸಿ ವರಪಡೆದು ಮದೋನ್ಮತ್ತನಾಗಿ ಶ್ರೀ ಕ್ಷೇತ್ರಕ್ಕೆ ಬಂದು ಸಿಕ್ಕಿದ ಜನರನ್ನೆಲ್ಲ ದಂಡಿಸಿ ಸೇನಾಸಮೇತನಾಗಿ ರಾಜ್ಯ ಸ್ಥಾಪನೆ ಮಾಡಿ ರಾಜ್ಯಭಾರ ನಡೆಸತೊಡಗಿದನು. ಈತನಿಗೆ ಭಯಪಟ್ಟು ಅಲ್ಲಿನ ಜನರು ಓಡಿಗೋಗಬೇಕಾಗಿ ಬಂತು..

ಆ ಸಮಯ ಪಾಂಡವರು ದ್ರೌಪದಿ ಸಹಿತ ವನವಾಸಿಗಳಾಗಿ ತೀರ್ಥಯಾತ್ರೆ ಮಾಡುತ್ತಾ ತುಂಗಭದ್ರಾ ತೀರದಲ್ಲಿರುವುದನ್ನು ತಿಳಿದ ಗೌತಮಾದಿ ಮುನಿಗಳು ಅಲ್ಲಿಗೆ ಹೋಗಿ ತಮ್ಮ ಸಂಕಷ್ಟವನ್ನು ಪಾಂಡವರಲ್ಲಿ ತೊಡಿಕೊಂದರು. ಪರಿಸ್ಥಿತಿಯನ್ನರಿತ ಧರ್ಮರಾಯನು ಸೋದರರೊಡನೆ ಕೂಡಿಕೊಂಡು ಭಾರ್ಗವ ಕ್ಷೇತ್ರವನ್ನು ಸೇರಿ ಮಧುವನಕ್ಕೆ ಬಂದು ಕ್ಷೇತ್ರದ ದರ್ಶನ ಮಾಡಿದನು.

ಸ್ವಲ್ಪ ದಿನಗಳಲ್ಲಿ ನಾಗಾಚಲಕ್ಕೆ ಬಂದು ಗಣೇಶನನ್ನು ಅರ್ಚಿಸಿ ಭೀಮಾದಿಗಳನ್ನು ರಾಕ್ಷಸರ ಸಂಹಾರಕ್ಕೆ ಕಳುಹಿಸಿಕೊಟ್ಟನು. ಭೀಮಾದಿಗಳು ಶಂಖನಾದ ಮಾಡುತ್ತಾ ಮುಂದುವರೆಯಲು ಕುಂಭಾಸುರನು ಯುದ್ಧಕ್ಕೆ ಬಂದನು. ಭೀಮನಿಗೂ ಕುಂಭಾಸುರನಿಗೂ ಭಯಂಕರ ಗದಾಯುದ್ಧ ನಡೆಯಿತು. ಅದರಲ್ಲಿ ರಾಕ್ಷಸನೇ ಜಯಶಾಲಿಯಾಗುವಂತಿದ್ದಾಗ ಅಶರೀರವಾಣಿಯೊಂದುಂಟಾಯಿತು. ಕೂಡಲೇ ಭೀಮನು ಗಣೇಶನನ್ನು ಮನದಲ್ಲೇ ಸ್ಮರಿಸಿ, ಪ್ರಸಾದ ರೂಪವಾದ ಖಡ್ಗವನ್ನು ಧರಿಸಿ ಕುಂಭಾಸುರನನ್ನು ಸಂಹಾರ ಮಾಡಿ ಮತ್ತುಳಿದ ರಾಕ್ಷಸರನ್ನು ನಿರ್ನಾಮಗೊಳಿಸಿದನು. ಶರೀರವಾಣಿಯಂತೆ ಖಡ್ಗದ ಶಕ್ತಿಯಿಂದ ಅಸುರನ್ನು ಸಂಹಾರ ಮಾಡಿದ್ದರಿಂದ ಈ ಕ್ಷೇತ್ರ ಕುಂಭ+ಅಸಿ(ಖಡ್ಗ)= ಕುಂಭಾಸಿ ಎಂದು ಸುಪ್ರಸಿದ್ಧವಾಯಿತು.

ಈ ದೇವಾಲಯವು ಅತೀ ಪುರಾತನವಾಗಿದ್ದು, ಅಲ್ಲಿಯೇ ಹತ್ತಿರದಲ್ಲಿ ನಾಗಾಚಲ ಅಯ್ಯಪ್ಪ ಸ್ವಾಮಿ ದೇವಾಲಯ ಹಾಗೂ ಇತರ ದೇವಾಲಯಗಳಿವೆ. ವಿನಾಯಕನ ಸನ್ನಿದಾನದಲ್ಲಿ ಪ್ರತಿನಿತ್ಯ ಅನ್ನದಾನ ಸೇವೆ ನಡೆಯುತ್ತದೆ‌.

ಪೂಜಾ ವಿನಿಯೋಗಾದಿಗಳು: ದೇವಾಲಯದಲ್ಲಿ ಬೆಳಿಗ್ಗೆ 5 ಘಂಟೆಗೆ, ಮಧ್ಯಾಹ್ನ 1.00 ಘಂಟೆಗೆ, ರಾತ್ರಿ 8.30 ಕ್ಕೆ ತ್ರಿಕಾಲದಲ್ಲಿ ಪೂಜೆ ನಡೆಯುತ್ತದೆ. ಬೆಳಿಗ್ಗೆ 6 ರಿಂದ ರಾತ್ರಿ 9 ರ ತನಕ ಅವಿರತವಾಗಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ದೇವಾಲಯ ಮುಕ್ತವಾಗಿರಯತ್ತದೆ. ವಾರದಲ್ಲಿ ಆದಿತ್ಯವಾರ, ಮಂಗಳವಾರ, ಶುಕ್ರವಾರ ಹಾಗೂ ಸಂಕ್ರಮಣ, ಸಂಕಷ್ಟಹರ ಚತುರ್ಥಿ ಹಾಗೂ ಗಣೇಶ ಚೌತಿ ದಿನಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಸೇರುತ್ತಾರೆ. ಮಾರ್ಗಶಿರ ಶುದ್ದ ಚತುರ್ಥಿ ವಾರ್ಷಿಕ ರಥೋತ್ಸವ ನಡೆಯುತ್ತದೆ. ವರ್ಷದಲ್ಲಿ 8-10 ಸಹಸ್ರ ನಾಳಿಕೇರ ಗಣಯಾಗ ನಡೆಯುತ್ತದೆ. ಇಲ್ಲಿಯ ಸೇವೆಗಳಲ್ಲಿ ಸತ್ಯಗಣಪತಿ ವೃತ, ಗಣಹೋಮ, ರಂಗಪೂಜೆ ವಿಶೇಷವಾಗಿ ನಡೆಯುತ್ತದೆ. ಸತ್ಯಗಣಪತಿ ವೃತವನ್ನು ಇಷ್ಟಾರ್ಥ ಸಿದ್ದಿಗಾಗಿ ಈ ಪೂಜೆಯನ್ನು ಮಾಡಿಸುತ್ತಾರೆ.

ದೇವಸ್ಥಾನದ ವಿಳಾಸ: ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನ, ಕುಂಭಾಸಿ, ಕುಂದಾಪುರ – ತಾಲೂಕು. ಉಡುಪಿ- ಜಿಲ್ಲೆ, ಕರ್ನಾಟಕ. ದೂರವಾಣಿ: 08254-26107908254-27222

ಮಾರ್ಗ: ಉಡುಪಿ ಕುಂದಾಪುರ ಮಧ್ಯೆ ಸಂಚರಿಸುವ ಬಸ್ಸುಗಳ ಮೂಲಕ ಕುಂಭಾಶಿ ತಲುಪಬಹುದಾಗಿದೆ. ಕುಂದಾಪುರ ರೈಲ್ವೆ ನಿಲ್ದಾಣಕ್ಕೂ ಸನಿಹವಿದೆ.

ಕೃಪೆ: ಫೇಸ್ಬುಕ್.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]