ನಾನು ಓಡಿ ಹೋಗುವ ಸಿಎಂ ಅಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ಶಿಗ್ಗಾವಿ, (ಏ.19): ನನ್ನನ್ನು ಬೆಳಸಿದವರು ನೀವು. ನನ್ನನ್ನು ಉಳಿಸಿಕೊಳ್ಳುವವರು ನೀವು. ನಾನು ನನ್ನ ಜೀವನದ ಕೊನೆಯ ಉಸಿರು ಇರುವವರೆಗೂ ನಿಮ್ಮ ಸೇವೆಯನ್ನು ಮಾಡುತ್ತೇನೆ. ನನ್ನ ಸಾವಾದರೆ, ನನ್ನನ್ನು ಶಿಗ್ಗಾವಿಯಲ್ಲೇ ಮಣ್ಣು ಮಾಡಬೇಕು. ಇದು ನನ್ನ ಶಿಗ್ಗಾವಿಯ ಭೂಮಿ ತಾಯಿಯ ಮಣ್ಣಿನ ಋಣ ತೀರಿಸುವಂತದ್ದಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮುನ್ನ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.

ಅದ್ಯಾವ ಜನ್ಮದ ಸಂಬಂಧವೊ ಯಾವ ಋಣಾನುಬಂಧವೊ ನೀವು ಹದಿನೈದು ವರ್ಷ ಸತತ ಬೆಂಬಲ ನೀಡಿದ್ದೀರಿ, ನಮ್ಮ ನಿಮ್ಮ ನಡುವೆ ಯಾವುದೇ ಶಕ್ತಿ ಅಡ್ಡಿ ಬರುವುದಿಲ್ಲ. ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ತಲೆ ಬಾಗಿ, ನನ್ನ ಕೊನೆ ಉಸಿರು ಇರುವ ತನಕ ನಿಮ್ಮ ಸೇವೆ ಮಾಡುತ್ತೇನೆ ಎಂಬ ಪ್ರತಿಜ್ಞೆ ಮಾಡುತ್ತೇನೆ ಎಂದರು.

ಶಿಗ್ಗಾವಿ-ಸವಣೂರಿನ ಅಭಿವೃದ್ಧಿ ನಮ್ಮೆಲ್ಲರ ಕನಸಾಗಿತ್ತು. 2008ರಲ್ಲಿ ನಾನು ಬಂದಾಗ ಒಳ್ಳೆಯ ರಸ್ತೆ ಇರಲಿಲ್ಲ, ರಸ್ತೆಯ ಮಧ್ಯೆ ಹಳ್ಳಗಳಿದ್ದವು.  ಕುಡಿಯಲು ನೀರಿರಲಿಲ್ಲ. ಕುಡಿಯುವ ನೀರಿಗಾಗಿ ನಮ್ಮ ತಾಯಂದಿರು ರಸ್ತೆಯಲ್ಲಿ ಕೊಡ ಹಿಡಿದುಕೊಂಡು ಸಾಲು ಹಿಡಿದು ನಿಲ್ಲುತ್ತಿದ್ದರು. ಒಂದು ಒಳ್ಳೆಯ ಆಫೀಸ್ ನ ಕಟ್ಟಡ ಇರಲಿಲ್ಲ. ಜನರ ಕಷ್ಟಕ್ಕೆ ಸ್ಪಂದನೆ ಇರಲಿಲ್ಲ. ಕೆರೆಗಳಿಗೆ ನೀರು ಇರಲಿಲ್ಲ. ಇದರ ಮಧ್ಯೆ ಪ್ರಾರಂಭವಾಗಿರುವ ನಮ್ಮ ಅಭಿವೃದ್ಧಿ ಪಯಣ ಇವತ್ತು ಎರಡು ಏತ ನೀರಾವರಿ ಮಾಡಿ 100ಕ್ಕಿಂತ ಹೆಚ್ಚು ಕೆರೆಗಳನ್ನು ತುಂಬಿಸಿರುವ ದಾಖಲೆ ಶಿಗ್ಗಾವಿ-ಸವಣೂರನಲ್ಲಿ ಆಗಿದೆ ಎಂದರು.

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಳ್ಳಿಯಿಂದ ಹೊಲಗಳಿಗೆ ಹೋಗುವ 2 ಸಾವಿರ ಕಿ.ಮೀ ಗ್ರಾಮೀಣ ರಸ್ತೆ ನಿರ್ಮಾಣ ಮಾಡಿದ್ದೇವೆ. 15 ವರ್ಷಗಳಲ್ಲಿ ಮಾರು 10 ಸಾವಿರ ಬಡವರಿಗೆ ಮನೆ ನಿರ್ಮಾಣ ಮಾಡಿದ್ದೆವೆ. ಮಳೆಯಿಂದ ಹಾನಿಗೊಳಗಾದ ಜನರಿಗೆ 12 ಸಾವಿರ ಮನೆಗಳನ್ನು ಕಟ್ಟಿರುವ ದಾಖಲೆಯನ್ನು ಮಾಡಿದ್ದೇವೆ. ಬಡತನ ಶಾಪವಲ್ಲ. ಹುಟ್ಟುವಾಗ ಬಡತನ ಇರಬಹುದು. ಆದರೆ ಸಾಯುವವರೆಗೂ ಬಡತನದಲ್ಲಿಯೇ ಇರಬೇಕೆಂದು ಇಲ್ಲ. ತಮ್ಮ ದುಡಿಮೆಯಿಂದ ಪ್ರಾಮಾಣಿಕವಾಗಿ ಮುಂದೆ ಬರುವ ಅವಕಾಶವನ್ನು ಮಾಡಿಕೊಟ್ಟಿದ್ದೇನೆ. ಆದ್ದರಿಂದ ಜನರು ಸ್ವಾಭಿಮಾನದ ಬದುಕಿನಿಂದ ಬಾಳುತ್ತಿದ್ದಾರೆ ಎಂದರು.

ಶಿಗ್ಗಾವಿ, ಸವಣೂರು, ಬಂಕಾಪುರದಲ್ಲಿ 6 ಸಾವಿರ ಮನೆ ನಿರ್ಮಾಣ ಮಾಡಿದ್ದೇವೆ. ನಗರಗಳ ಸಂಪೂರ್ಣ ಅಭಿವೃದ್ಧಿಯನ್ನು ಮಾಡಿದ್ದೇವೆ. ಪ್ರತಿಯೊಂದು ಗ್ರಾಮಕ್ಕೆ ಇನ್ನು ಆರು ತಿಂಗಳಲ್ಲಿ ಪ್ರತಿಯೊಂದು ಮನೆಗೆ ನಳದಿಂದ ನೀರು ಕೊಡುವಂತಹ ವ್ಯವಸ್ಥೆ ನಮ್ಮ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ಆಗುತ್ತಿದೆ. ನಮ್ಮ ಪ್ರಧಾನಿ ಮೋದಿ, ನಡ್ಡಾ ಅವರ ನೇತೃತ್ವದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಹಳ್ಳಿ ಹಳ್ಳಿಯ ಪ್ರತಿ ಮನೆಗೂ ನಲ್ಲಿ ನೀರು ಕೊಡಲಾಗುತ್ತಿದೆ ಎಂದರು.

ಜೆ.ಪಿ ನಡ್ಡಾ ಅವರ ನೇತೃತ್ವದಲ್ಲಿ ಪಕ್ಷ ಕರ್ನಾಟಕದಲ್ಲಿ ಅತ್ಯಂತ ಸಂಘಟಿತವಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ 125 ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಪಡೆದು, ಮತ್ತೊಮ್ಮೆ ಕನ್ನಡ ನಾಡಿನ ಸೇವೆಯನ್ನು ಮಾಡಲು ಬಾರತೀಯ ಜನತಾ ಪಕ್ಷಕ್ಕೆ ಜನರು ಆಶೀರ್ವಾದ ಮಾಡುತ್ತಾರೆ. ಮುಖ್ಯಮಂತ್ರಿಯಾಗಿ ನಾನು ರೈತರಿಗೆ, ಯುವಕರಿಗೆ, ಮಹಿಳೆಯರಿಗೆ, ಕಾರ್ಮಿಕರಿಗೆ ವಿದ್ಯಾರ್ಥಿಗಳಿಗೆ ಏನೆಲ್ಲ ಕೆಲಸ ಮಾಡಿದ್ದೇನೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನ್ನ ಜೀವನದ ಕೊನೆಯ ಉಸಿರು ಇರುವವರೆಗೂ ನಿಮ್ಮ ಸೇವೆಯನ್ನು ಮಾಡುತ್ತೇನೆ ಎಂದರು.

ನಾನು ಕ್ಷೇತ್ರ ಬಿಟ್ಟು ಬೇರೆ ಕಡೆ ಹೋಗುತ್ತೇನೆ ಎಂದು ಕೇಳಿದರು. ನಾನು ಓಡಿ ಹೋಗುವ ಮುಖ್ಯಮಂತ್ರಿ ಅಲ್ಲ. ಏನೇ ಆದರೂ ನನ್ನ ಜನರ ಮುಂದೆ ತೀರ್ಮಾನ ಆಗಬೇಕು. ನೀವೇ ನನ್ನ ಮಾಲೀಕರು, ನಾನು ಕ್ಷೇತ್ರ ಬಿಟ್ಟು ದಾವಣಗೆರೆಗೆ ಹೋಗುತ್ತೆನೆ. ಎಂದು ಹಬ್ಬಿಸಿದ್ದರು. ಯಾವ ನನ್ನ ಮಗ ಹೇಳಿದ್ದು ಎಂದು ಕೇಳಿದೆ. ಇದು ನನ್ನ ಆತ್ಮಸ್ಥೈರ್ಯ. ಕರ್ನಾಟಕ ಮಾತೆಗೆ, ಕನ್ನಡಿಗರಿಗೆ ಮತ್ತು ಈ ಕ್ಷೇತ್ರದ ಜನರಿಗೆ ನಾನು ಪ್ರಾಮಾಣಿಕ ಸೇವೆಯನ್ನು ಮಾಡಿದ್ದೇನೆ. ಅದರಲ್ಲಿ ನನ್ನ ನಂಬಿಕೆಯಿದೆ ಎಂದರು.

ಕ್ಷೇತ್ರದಲ್ಲಿ ಆರ್ಯುವೇದಿಕ ಆಸ್ಪತ್ರೆ, ಶಿಗ್ಗಾವಿ, ಸವಣೂರಿನಲ್ಲಿ 250 ಹಾಸಿಗೆಯ ಆಸ್ಪತ್ರೆ, ಜಿಟಿಟಿಸಿ ಮತ್ತು ಇಂಜಿನಿಯರಿಂಗ್ ಕಾಲೇಜು, 10 ಸಾವಿರ ಜನರಿಗೆ ಉದ್ಯೋಗ ಕೊಡುವ ಟೆಕ್ಸ್ಟೈಲ್ ಪಾರ್ಕ್ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ಮಾಡಿದ್ದೇನೆ. ಬಂಕಾಪುರ ತಾಲ್ಲೂಕು ಆಗಬೇಕೆಂದು ಜನರ ಬೇಡಿಕೆ ಇದೆ. ನಾನು ಇವತ್ತು ಅದಕ್ಕೆ ಎಲ್ಲ ಅನುಮತಿ ಕೊಟ್ಟು ಆಜ್ಞೆ ಮಾಡಿದ್ದೇನೆ. ಚುನಾವಣೆ ನೀತಿ ಸಂಹಿತೆ ಅದಕ್ಕೆ ಅಡಚಣೆಯಾಗಿದೆ. ಬರುವ ದಿನಗಳಲ್ಲಿ ಬಂಕಾಪುರವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡುತ್ತೇನೆ ಎಂದರು.

ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಚಲನಚಿತ್ರ ನಟ ಸುದೀಪ್, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!