ಎನ್ ಸಿ ಸಿಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜೂ.19): ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್ ಸಿ ಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ  ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಭಾರತೀಯ ಆಹಾರ ಮಂಡಳಿ(ಎಫ್ ಸಿ ಐ) ನಿಂದ 34 ರೂ. ಅಕ್ಕಿ , 2.60ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆ.ಜಿ. ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು. ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.

10 ಕೆಜಿ ಅಕ್ಕಿನೀಡಲು ವಾರ್ಷಿಕ 10,092 ಕೋಟಿ ರೂ: ಅನ್ನಭಾಗ್ಯ ಯೋಜನೆಯಡಿ 10 ಕೆಜಿ  ಅಕ್ಕಿ ವಿತರಿಸಲು ಒಂದು ತಿಂಗಳಿಗೆ 840  ಕೋಟಿ ರೂ. ವೆಚ್ಚ ತಗುಲಲಿದೆ. ವರ್ಷಕ್ಕೆ 10,092 ಕೋಟಿ ವೆಚ್ಚವಾಗಲಿದೆ. ಸರ್ಕಾರ ಈ ವೆಚ್ಚವನ್ನು ಭರಿಸಿ ಅಕ್ಕಿಯನ್ನು ವಿತರಿಸಲು ಸಿದ್ಧವಿದೆ. ಅಕ್ಕಿಯ ದಾಸ್ತಾನು ಲಭ್ಯವಿದ್ದರೂ ಕೇಂದ್ರ ಸರ್ಕಾರದವರು ಅಕ್ಕಿ ನೀಡಲು ಒಪ್ಪುತ್ತಿಲ್ಲ. ರಾಜ್ಯ ಬಿಜೆಪಿ ಪಕ್ಷದವರು ರಾಜ್ಯದ ಬಡವರಿಗೆ ಅನುಕೂಲವಾಗಲು ಅಕ್ಕಿಯನ್ನು ವಿತರಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಬಹುದಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೇ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದ್ರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿ ಅಕ್ಕಿಯನ್ನು ರಾಜ್ಯದ ಜನರಿಗೆ ನೀಡಬೇಕಾಗುತ್ತದೆ ಎಂದರು.

ಪಂಜಾಬ್ ಸರ್ಕಾರದೊಂದಿಗೆ ಚರ್ಚೆ: ಪಂಜಾಬ್ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಸರಬರಾಜು ಮಾಡಲು ಸಿದ್ದವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪಂಜಾಬ್ ನಿಂದ ಅಕ್ಕಿ ಖರೀದಿ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚರ್ಚಿಸಿದ್ದಾರೆ. ರಾಜ್ಯ ತಿಳಿಸುವ ದರಕ್ಕೆ ಅಕ್ಕಿ ನೀಡಲು ಪಂಜಾಬ್ ಸರ್ಕಾರದೊಂದಿಗೆ ಮತ್ತೊಮ್ಮೆ ಚರ್ಚಿಸಲಾಗುವುದು ಎಂದರು.

ಬಡವರಿಗಾಗಿ ಅಕ್ಕಿ ನೀಡುವ ಯೋಜನೆಗೆ ತಪ್ಪದೇ ಚಾಲನೆ: ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅಕ್ಕಿ ಪಡೆಯುವವರೆಗೆ ಸರ್ಕಾರದ ಬಳಿ ಸಮಯವಿದೆಯೇ ಎಂಬುದಕ್ಕೆ ಪ್ರತಿಕ್ರಯಿಸಿ, ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂಎಸ್ ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ, ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಖಂಡಿತ ಚಾಲನೆಗೊಳಿಸಲಿದೆ ಎಂದರು.

ಕೇಂದ್ರ ಸರ್ಕಾರ ಬಡವರ ಅಕ್ಕಿ ಕೊಡುವುದರಲ್ಲಿ ರಾಜಕಾರಣ ಹಾಗೂ ದ್ವೇಷದ ರಾಜಕಾರಣ ಮಾಡುತ್ತಿದೆ. ಕೇಂದ್ರ ಸರ್ಕಾರವೇನೂ ಭತ್ತ  ಬೆಳೆಯಲು ಜಮೀನು ಇಟ್ಟುಕೊಂಡಿಲ್ಲ. ಅವರೂ ರಾಜ್ಯಗಳಿಂದ ಅಕ್ಕಿಯನ್ನು ಪಡೆದಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸಹಕರಿಸಬೇಕು: ಸಹಕಾರಿ ಒಕ್ಕೂಟದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪದೇ ಪದೇ ಹೇಳುತ್ತಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಕೇಂದ್ರ ಸರ್ಕಾರಕ್ಕೆ ತೆರಿಗೆ ಬರುವುದು ರಾಜ್ಯಗಳಿಂದ. ಅವರು ಸಹಕರಿಸಬೇಕು ಎಂದರು.

ಕರ್ನಾಟಕಕ್ಕೆ ನೀರು ಬಿಡಬಾರದೆಂದು ಮಹಾರಾಷ್ಟ್ರದ ರೈತರು ಬ್ಯಾರೇಜ್ ಬಂದ್ ಮಾಡಿದ್ದು, ರೈತರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸುದ್ದಿಗಾರರು ಮುಖ್ಯಮಂತ್ರಿಗಳು ಗಮನಕ್ಕೆ ತಂದಾಗ, ಅಲ್ಲಿನ ರೈತರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾತನಾಡಲಾಗುವುದು ಎಂದರು.

ಗೊಂದಲವಿಲ್ಲ: ಸರ್ಕಾರ ಐದು ವರ್ಷಗಳ ಅವಧಿ ಮುಗಿಸುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು  ಹಾಗೂ ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳು ನಮ್ಮಲ್ಲಿಲ್ಲ ಎಂದು ಸ್ಪಷ್ಟ ಪಡಿಸಿದರು.

ಜಿ.ಎಸ್.ಟಿ ಸಮಿತಿಗೆ ಅರ್ಹರು: ಜಿ.ಎಸ್.ಟಿ ಸಮಿತಿಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಬಹುದಿತ್ತು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಕೃಷ್ಣಬೈರೇಗೌಡರನ್ನು ಕಳಿಸಲು ಅವಕಾಶವಿದೆ. ಅದಕ್ಕೆ ಅವರು ಅರ್ಹರೂ ಕೂಡ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!