ಧರಣಿ‌ ಮಾಡಲು ಯಡಿಯೂರಪ್ಪರಿಗೆ ಯಾವ ನೈತಿಕತೆ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜೂ.24): ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸಲು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಮಾಧ್ಯಮದವವರೊಂದಿಗೆ  ಮಾತನಾಡಿದರು.

ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದೆ. ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ.   ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದು, ಬಿತ್ತನೆ ಈಗಾಗಲೇ ಕೆಲವೆಡೆ ಪ್ರಾರಂಭವಾಗಿದೆ. ಇನ್ನು ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಈಗಾಗಲೇ  2 ಬಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ಕರೆದು ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು. 

ಬಿತ್ತನೆಗೆ ಸಿದ್ಧ: ಮಳೆ ಯಾವಾಗ ಬಂದರೂ ಬಿತ್ತನೆ ಮಾಡಲು ತಯಾರಾಗಿದ್ದೇವೆ. ಕೃಷಿ ಇಲಾಖೆ ಬೀಜ, ಗೊಬ್ಬರ ಹಾಗೂ  ಔಷಧಿಗಳನ್ನು ಸಂಗ್ರಹಿಸಿ ಸರ್ವಸನ್ನದ್ದವಾಗಿದೆ ಎಂದರು. 

ಬಜೆಟ್ ನಂತರ ಪರಿಶೀಲನೆ: ಸಣ್ಣ ಕೈಗಾರಿಕೆಗಳು ಹಾಗೂ ಕಾಸಿಯಾ ಪ್ರತಿನಿಧಿಗಳೊಂದಿಗೆ ನಿನ್ನೆ ನಡೆದ ಚರ್ಚೆಯಲ್ಲಿ ಅವರು ತಮ್ಮ ಸಮಸ್ಯೆಗಳನ್ನು  ತಿಳಿಸಿದ್ದಾರೆ. ಬಜೆಟ್ ಮಂಡನೆಯ ನಂತರ ಈ ಬಗ್ಗೆ ಪರಿಶೀಲಿಸುವ ಭರವಸೆ  ನೀಡಲಾಗಿದೆ  ಎಂದರು.  

ಕೈಗಾರಿಕೆಗಳಿಗೆ ಒಂಭತ್ತು ತಿಂಗಳ ವಿದ್ಯುತ್ ತೆರಿಗೆ ವಿಧಿಸಲಾಗಿದೆ. ಇದರಿಂದ ತಮಗೆ ಹೊರೆಯಾಗಿದೆ  ಎಂದು ಕೈಗಾರಿಕೋದ್ಯಮಿಗಳು ತಿಳಿಸಿದ್ದಾರೆ.  ದರ ಪರಿಷ್ಕರಣೆ ನಮ್ಮ ಸರ್ಕಾರದ ಅವಧಿಯಲ್ಲಿ ಆಗಿದ್ದಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದು. ದರ ಪರಿಷ್ಕರಣೆಯನ್ನು ಪ್ರತಿ ವರ್ಷ ಕೆ.ಇ.ಆರ್.ಸಿ ಮಾಡುತ್ತದೆ. ದರ ಏರಿಕೆಗೂ ನಮ್ಮ ಸರ್ಕಾರಕ್ಕೂ ಸಂಬಂಧವಿಲ್ಲ. ನಾವೂ ಕೂಡ ಅವರಿಗೆ ಎಷ್ಟು ಮಾಡಬೇಕೆಂದು ಮನವಿ ಸಲ್ಲಿಸಿರುತ್ತೇವೆ. ಅದೊಂದು ಸ್ವಾಯತ್ತ ಸಂಸ್ಥೆಯಾಗಿದೆ ಎಂದರು.

ಹಾಲಿನ ದರ ಹೆಚ್ಚಳದ ಕುರಿತಂತೆ ಇರುವ ಪ್ರಸ್ತಾವನೆ ಬಗ್ಗೆ ಸಂಬಂಧಪಟ್ಟವರಿಗೆ  ಮಾತನಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಬಡವರ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ತೊಂದರೆ: ಈಗಾಗಲೇ ತಿಳಿಸಿರುವಂತೆ ಬಡವರ ಕಾರ್ಯಕ್ರಮಕ್ಕೆ ತೊಂದರೆ ನೀಡಬೇಕೆಂದು ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಅವರ ಬಳಿ ಲಕ್ಷಗಟ್ಟಲೆ ಟನ್ ಅಕ್ಕಿಯಿದೆ.  

ಖಾಸಗಿಯವರಿಗೆ ಹರಾಜು ಮಾಡುತ್ತಾರೆ, ಆದರೆ ರಾಜ್ಯಗಳಿಗೆ ನೀಡುವುದಿಲ್ಲ ಎನ್ನುತ್ತಾರೆ. ಹಣ ನೀಡಿದರೂ ಕೊಡುವುದಿಲ್ಲ. 36.70 ರೂ. ಗಳ ವೆಚ್ಚದಲ್ಲಿ 1 ಕೆಜಿ ಅಕ್ಕಿ ಪಡೆಯಬಹುದು. ದ್ವೇಷದ ರಾಜಕಾರಣ ಮಾಡುವವರನ್ನು ಬಡವರ ವಿರೋಧಿ ಎನ್ನಬೇಕು ಎಂದರು.

ಧರಣಿ ಮಾಡಲು ನೈತಿಕ ಹಕ್ಕಿಲ್ಲ: ಬಿ.ಎಸ್.ಯಡಿಯೂರಪ್ಪ ಅವರು ಅಕ್ಕಿ ನೀಡದಿದ್ದರೆ ಧರಣಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರಿಗೆ ಧರಣಿ ಮಾಡುವ ಸ್ವಾತಂತ್ರ್ಯವಿದೆ. ಆದರೆ ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.  

ಅಕ್ಕಿ ಖರೀದಿ ಕುರಿತು ಸರ್ಕಾರಿ ಏಜೆನ್ಸಿಗಳೊಂದಿಗೆ ಇಂದು ಮಾತುಕತೆ: ಐದು ಗ್ಯಾರಂಟಿ ಯೋಜನೆಗಳ ಪೈಕಿ  ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ ಒಂದರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ. ಅಕ್ಕಿಯನ್ನೂ ನೀಡಬೇಕೆಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ.

2.29 ಲಕ್ಷ  ಮೆಟ್ರಿಕ್ ಟನ್ ಎಲ್ಲಿಯೂ ದೊರೆಯುತ್ತಿಲ್ಲ. ಎಲ್ಲಾ ರಾಜ್ಯದವರೂ ಪೂರ್ಣಪ್ರಮಾಣದ ಅಕ್ಕಿ ದೊರೆಯುತ್ತಿಲ್ಲವಾದ್ದರಿಂದ ಬೇರೆ ಸರ್ಕಾರಿ ಏಜೆನ್ಸಿಗಳಿಂದ ಎನ್.ಸಿ.ಸಿ.ಎಫ್ ನಿಂದ  ಕೇಂದ್ರೀಯ ಭಂಡಾರ್, ನ್ಯಾಫೆಡ್ ಸಂಸ್ಥೆಗಳಿಂದ  ದರಪಟ್ಟಿ ಕರೆಯಲಾಗಿದ್ದು, ಮಾತುಕತೆ ನಡೆದಿದೆ.

ಇಂದು 3.00 ಗಂಟೆಗೆ ಮಾತುಕತೆ ನಡೆಯಲಿದ್ದು ಎಷ್ಟು ಅಕ್ಕಿ, ದರ ಎನ್ನುವ ಬಗ್ಗೆ ತೀರ್ಮಾನ ಮಾಡಲಾಗುವುದು. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಪಡೆಯಲು ಟೆಂಡರ್ ಕರೆಯಬೇಕು. ಜೋಳ, ರಾಗಿ ವಿತರಣೆ 6 ತಿಂಗಳಿಗಾಗುವಷ್ಟಿದೆ. 2 ಕೆಜಿಯಂತೆ ನೀಡಬಹುದು. ಇನ್ನೂ 3 ಕೆಜಿ ಅಕ್ಕಿ ನೀಡಬೇಕಿದೆ. ಇಡೀ ವರ್ಷ ನೀಡುವಷ್ಟು ರಾಗಿ, ಜೋಳವಿಲ್ಲ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ

"ಸಿದ್ದರಾಮಯ್ಯ (Siddaramaiah) ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ನೀವುಗಳೇ (ನ್ಯೂಸ್ ಚಾನಲ್) ನಮ್ಮನ್ನು ಇಬ್ಭಾಗ ಮಾಡುತ್ತಿವೆ" ಎಂದು ಡಿಸಿಎಂ

[ccc_my_favorite_select_button post_id="121064"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!