ಅಲ್ಲಾಡ್ಸು ಅಲ್ಲಾಡ್ಸು ಎಂಬ ಸಿನೆಮಾ ಹಾಡಿನಂತೆ, ಸಿದ್ದರಾಮಯ್ಯ ಸಿಎಂ ಖುರ್ಚಿ ಪರಿಸ್ಥಿತಿ: ಬಸವರಾಜ ಬೊಮ್ಮಾಯಿ

ಬಾಗಲಕೋಟೆ, (ಜೂ.26): ರಾಜ್ಯದ ಜನತೆಗೆ ಸುಳ್ಳು ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್  ಸೇಡಿನ ರಾಜಕಾರಣ ಆರಂಭಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸೋಮವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮಾತ್ರಕ್ಕೆ ಏನೆಲ್ಲ ಮಾಡಲು ಆಗಲ್ಲ. ಅಧಿಕಾರದಲ್ಲಿ ಇರುವ ಪಕ್ಷದ ನಿರ್ದೇಶನದಂತೆ ಪೊಲೀಸರು ನಡೆದುಕೊಳ್ಳಬಹುದು. ಆದರೆ, ಅವರಿಗೆ ಕಾನೂನು-ಸಂವಿಧಾನವೇ ತಂದೆ-ತಾಯಿ ಇದ್ದಂತೆ. ಅದನ್ನು ಬಿಟ್ಟು ಪೊಲೀಸರು ಏನೂ ಮಾಡಲು ಆಗಲ್ಲ. ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ, ಗಲಾಟೆ ಮಾಡುವ ಪರಿಪಾಠ ನಡೆದಿದೆ. ನಾವು ಕಾರ್ಯಕರ್ತರ ಜತೆಗೆ ಇರುತ್ತೇವೆ. ಯಾರೂ ಎದೆಗುಂದಬೇಕಿಲ್ಲ ಎಂದು ಹೇಳಿದರು.

ಸೋಲು ಗೆಲುವು ಸಾಮಾನ್ಯ: ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಗೆದ್ದಾಗ ದೊಡ್ಡ ಮನುಷ್ಯ ಇರಬೇಕು. ಸೋತಾಗ ಗಟ್ಟಿ ಮನುಷ್ಯ ಇರಬೇಕೆಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ನಮ್ಮ ಕಾರ್ಯಕರ್ತರು ಯಾರೂ ಎದೆಗುಂದಬೇಕಿಲ್ಲ. ಒಂದು ಚುನಾವಣೆಯಲ್ಲಿ ಸೋತರೆ, ಯಾವುದೇ ನಾಯಕರ ಭವಿಷ್ಯ ಅಥವಾ ಹಣೆಬರಹ ಬದಲಾಗಲ್ಲ. ಇಂದಿನ ಸೋಲೇ, ನಾಳೆಯ ಯಶಸ್ಸಿನ ಮೆಟ್ಟಿಲು ಎಂದು ಎಲ್ಲರೂ ಭಾವಿಸೋಣ ಎಂದು ಹೇಳಿದರು.

ರಾಜಕಾರಣಿಗಳು, ಕೇವಲ ಅಧಿಕಾರಕ್ಕಾಗಿ ಮಾತ್ರ ರಾಜಕೀಯ ಮಾಡಬಾರದು. ರಾಜಕಾರಣದಲ್ಲಿ ಎರಡು ರೀತಿ ಇದೆ. ಒಂದು ಅಧಿಕಾರಕ್ಕಾಗಿ, ಇನ್ನೊಂದು ಜನರಿಗಾಗಿ. ಅಧಿಕಾರಕ್ಕಾಗಿ ರಾಜಕೀಯ ಮಾಡಿದರೆ, ನಾನು ಏನು ಮಾಡಿದೆ, ನೀನು ಏನು ಮಾಡಿದೆ ಎಂಬ ಪ್ರತಿಷ್ಠೆ ಬರುತ್ತವೆ. ಅದೇ ಜನರಿಗಾಗಿ ರಾಜಕೀಯ ಮಾಡಿದರೆ, ಸೇವೆ ಒಂದೇ ಮುಖ್ಯವಾಗುತ್ತದೆ. ಬಾಗಲಕೋಟೆ, ಸಕ್ಕರೆ ನಾಡು. ಇಲ್ಲಿನ ಜನರು ಸಿಹಿ ರಸಕೊಡುವ ಕಬ್ಬಿನಂತೆ. ಆಂತರಿಕ ಸಮಸ್ಯೆ ಇರುತ್ತವೆ. ಅವುಗಳನ್ನು ಬದಿಗಿಟ್ಟು ಮುನ್ನಡೆಯೋಣ. ಯಾರೂ ಸೋಲಿಸುವ ಕೆಲಸ ಮಾಡಬಾರದು ಎಂದು ತಿಳಿಸಿದರು.

ಅಲ್ಲಾಡ್ಸು ಹಾಡಿನಂತಾದ ಸಿದ್ದು ಕುರ್ಚಿ: ರಾಜ್ಯದ ಜನರಿಗೆ ಐದು ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಒಂದು ಗ್ಯಾರಂಟಿ ಕೂಡ ಸರಿಯಾಗಿ ಈಡೇರಿಸಲು ಆಗಿಲ್ಲ. ಸಿದ್ದರಾಮಯ್ಯ ಸಿಎಂ ಆದ ತಕ್ಷಣ ವಿಜಯಪುರದ ಸಚಿವರೊಬ್ಬರು, ಸಿದ್ದು ಐದು ವರ್ಷ ಸಿಎಂ ಎಂದು ಹೇಳಿದರು, ಹಾಗೆಯೆ ಮೈಸೂರು ಭಾಗದ ಸಚಿವರೊಬ್ಬರು ಹೇಳಿದರು. ಐದು ವರ್ಷ ಸಿದ್ದು ಸಿಎಂ ಆಗಿರೋದು ಅವರ ಸಚಿವ-ಶಾಸಕರಲ್ಲೇ ಸಂಶಯ ಬಂದಿದೆ. ಹೀಗಾಗಿ ಇದು 6ನೇ ಗ್ಯಾಂಟಿಯಾಗಿ ಸಿದ್ದು ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳುತ್ತ ಹೊರಟಿದ್ದಾರೆ. ಅಲ್ಲಾಡ್ಸು ಅಲ್ಲಾಡ್ಸು ಎಂಬ ಸಿನೆಮಾ ಹಾಡಿನಂತೆ, ಸಿದ್ದರಾಮಯ್ಯ ಅವರ ಸಿಎಂ ಖುರ್ಚಿ ಪರಿಸ್ಥಿತಿ ಆಗಿದೆ ಎಂದು ವ್ಯಂಗ್ಯವಾಡಿದರು.

ಸಂತ್ರಸ್ತರೊಂದಿಗೆ ಹೋರಾಟ: ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂಮಿ ಕಳೆದುಕೊಂಡ ರೈತರು, ಏಕರೂಪದ ದರ ಕೊಡಿ ಎಂದು 2013ರಿಂದ 2018ರ ವರೆಗೆ ಹೋರಾಟ ಮಾಡಿದರೂ ಕಾಂಗ್ರೆಸ್‌ನವರು ಸ್ಪಂದಿಸಲಿಲ್ಲ. ಕೃಷ್ಣೆಯ ಕಡೆಗೆ ನಡಿಗೆ ಮಾಡಿ, ಅಧಿಕಾರ ಅನುಭವಿಸಿ  ಓಡಿ ಹೋದರು. ಒಂದು ಸಭೆಯನ್ನೂ ಸಂತ್ರಸ್ತರೊಂದಿಗೆ ಮಾಡಲಿಲ್ಲ. ನಾನು ಸಿಎಂ ಆದ ಬಳಿಕ ಮೂರು ಸಭೆ ನಡೆಸಿ, ಸಂತ್ರಸ್ತರಿಗೆ ಏಕರೂಪದ ದರ ಘೋಷಣೆ ಮಾಡಿ, ಪರಿಹಾರ ನೀಡಲು 5 ಸಾವಿರ ಕೋಟಿ ಮೀಸಲಿಟ್ಟಿದ್ದೇವು. ಈಗಿನ ಕಾಂಗ್ರೆಸ್ ಸರ್ಕಾರ, ಸಂತ್ರಸ್ತರಿಗೆ ಏಕರೂಪದ ದರ ಕೊಡಲೇಬೇಕು. ಅದು 25ರಿಂದ 35 ಸಾವಿರ ಕೋಟಿಯಾದರೂ ಸಂತ್ರಸ್ತರಿಗೆ ಕೊಡಬೇಕು. ಇಲ್ಲದಿದ್ದರೆ ವಿಜಯಪುರ, ಬಾಗಲಕೋಟೆ ಅವಳಿ ಜಿಲ್ಲೆಯ ಸಂತ್ರಸ್ತರೊಂದಿಗೆ ನಾವು ಹೋರಾಟಕ್ಕಿಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!