ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ಬೇಕಾಬಿಟ್ಟಿ ವರ್ತನೆ ಕಂಡು ಬಂದಲ್ಲಿ ವೇತನಕ್ಕೆ ತಡೆ – ಬಿಇಒ ರಂಗಪ್ಪ ಎಚ್ಚರಿಕೆ

ದೊಡ್ಡಬಳ್ಳಾಪುರ, (ಜೂ.28): ಸರ್ಕಾರಿ ಶಾಲೆಗಳಲ್ಲಿ ಮೌಲ್ಯಾಧಾರಿತ ಶಿಕ್ಷಣ ದೊರಕುತ್ತಿರುವ ಹಿನ್ನೆಲೆಯಲ್ಲಿ, ಖಾಸಗಿ ಶಾಲೆಗಳ ವ್ಯಾಮೋಹದಿಂದ ಹೊರಬಂದಿರುವ ಅನೇಕ ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುತ್ತಿದ್ದಾರೆಂದು ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ ತಿಳಿಸಿದರು.

ತಾಲೂಕಿನ ಸಾಸಲು, ತೋಡಲಬಂಡೆ, ದೊಡ್ಡಗುಂಡಪ್ಪ ನಾಯಕನಹಳ್ಳಿ, ಆರೂಢಿ ಮುಂತಾದ ಶಾಲೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಶಿಕ್ಷಕರ ಸಭೆ ನಡೆಸಿದರು.

ಈ ವೇಳೆ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿನ ಗುಣಮಟ್ಟದ ಶಿಕ್ಷಣ ಖಾಸಗಿ ಶಾಲೆಗಳ ಕಣ್ಣು ಕೆಂಪಾಗುವಂತೆ ಮಾಡಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ಮೇಲೆ ಹೆಚ್ಚಿನ ಹೊಣೆಗಾರಿಕೆಯಿದ್ದು, ಬೇಕಬಿಟ್ಟಿ ವರ್ತನೆ ಕಂಡು ಬಂದಲ್ಲಿ ವೇತನ ತಡೆಹಿಡಿಯಲಾವುದು ಎಂದು ಎಚ್ಚರಿಕೆ ನೀಡಿದರು.

ಮಕ್ಕಳಲ್ಲಿ ಶಿಸ್ತನ್ನು ಮೈಗೂಡಿಸುವ ಕುರಿತು ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕಿದೆ. ಆಯಾ ಸಮಯಕ್ಕೆ ಪಾಠ ಪ್ರವಚನ ಮುಗಿಸಿ, ಟೆಸ್ಟ್ ನೀಡಬೇಕಿದೆ. ಕೋವಿಡ್ ನಂತರ ಮಕ್ಕಳಲ್ಲಿ ರೈಟಿಂಗ್ ಸ್ಕಿಲ್ ಕಡಿಮೆಯಾಗಿದ್ದು, ರೈಟಿಂಗ್ ಸ್ಕಿಲ್ ಹೆಚ್ಚಿಲು ಆಯಾ ದಿನದ ಪಠ್ಯಕ್ಕೆ ಸಂಬಂದಿಸಿದಂತೆ ಹೆಚ್ಚು ಹೆಚ್ಚು ಹೋಂ ವರ್ಕ್ ನೀಡಬೇಕಿದೆ. ಮರುದಿನ ಹೋಂ ವರ್ಕ್ ಪರಿಶೀಲನೆ ಮಾಡಿ, ತಪ್ಪಿದ್ದರೆ ಸಲಹೆ ನೀಡಬೇಕು. ಅನೇಕ ಶಿಕ್ಷಕರು ಹೋಂ ವರ್ಕ್ ಪುಸ್ತಕವನ್ನು ಬೇಜವಾಬ್ದಾರಿಯಿಂದ ಪರಿಶೀಲನೆ ಮಾಡಿರುವ ಆರೋಪ ಕೇಳಿಬಂದಿದ್ದು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.

ಉಳಿದಂತೆ ಶಾಲೆಯ ಮುಖ್ಯಶಿಕ್ಷಕರಿಗೆ ಶಿಕ್ಷಕರ, ಮಕ್ಕಳ ಚಲನವಲದ ಕುರಿತು ಸಂಪೂರ್ಣ ಅರಿವಿರಬೇಕು. ಮಕ್ಕಳ ಕಲಿಕಾ ವಿಚಾರಗಳು, ತರಗತಿಯಲ್ಲಿ ಏನು ನಡೆಯುತ್ತಿದೆ ಎಂಬ ಕುರಿತು ಸಂಪೂರ್ಣ ಮಾಹಿತಿ ಇಟ್ಟುಕೊಳ್ಳಬೇಕು. ಕೇವಲ ಶಾಲೆಯ ಕೆಲಸಗಳಿಗೆ ಸೀಮಿತವಾಗದೆ ಮಕ್ಕಳಿಗೆ ಪಾಠ ಮಾಡಬೇಕು.

ಊಟದ ವಿತರಣೆ, ಸ್ವಚ್ಚತೆ ಕಾಪಾಡುವುದು, ತ್ವರಿತವಾಗಿ ಊಟ ವಿತರಿಸುವುದು. ಊಟದ ಅವಧಿ 40ನಿಮಿಷದ ಒಳಗಾಗಿ ಮುಗಿಸಬೇಕಿದ್ದು, ವಿಳಂಬ ಧೋರಣೆ ತೋರಿ ಶೈಕ್ಷಣಿಕ ಅವಧಿಯನ್ನು ಕಡಿತವಾಗುವಂತೆ ಮಾಡಿದಲ್ಲಿ ಕ್ರಮಕೈಗೊಳ್ಳಬೇಕಾಗುತ್ತದೆ.

ಸರ್ಕಾರಿ ಶಾಲೆಗಳ ಕುರಿತು ಖಾಸಗಿ ಶಾಲೆ ಪೋಷಕರಿಗೆ ಆಸಕ್ತಿ ಹೆಚ್ಚಿಸುವಂತೆ ಶಿಕ್ಷಕರು ಕಾರ್ಯನಿರ್ವಹಿಸಬೇಕಿದೆ. ಮಕ್ಕಳ ಸಮಸ್ಯೆ ಹೇಳುತ್ತಾ ಕೂತರೆ ಶಿಕ್ಷಕ ಸರಿ ಇಲ್ಲ ಎಂಬುದೇ ಅರ್ಥ. ನೀವು ಸರಿಯಾಗಿ ಮಕ್ಕಳಿಗೆ ಶಿಕ್ಷಣ ನೀಡಿದರೆ ಸಮಸ್ಯೆ ಹೇಳಿಕೊಳ್ಳುವ ಅಗತ್ಯತೆ ಉಂಟಾಗುವುದಿಲ್ಲ.

ತಾಲೂಕಿನಲ್ಲಿ ಸರ್ಕಾರ, ಖಾಸಗಿ, ಪ್ರಜ್ಞಾವಂತ ಪೋಷಕರಿಂದ ಸರ್ಕಾರಿ ಶಾಲೆಗಳಿಗೆ ಮತ್ತೆ ಜೀವ ಬಂದಿದೆ. ಅದನ್ನು ಉಳಿಸಿಕೊಳ್ಳಲು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಹೆಚ್ಚಿನ ಶ್ರಮವಹಿಸಬೇಕೆಂದರು.

ಈ ಸಂದರ್ಭದಲ್ಲಿ ಇಸಿಒ ಮೈಲಾರಪ್ಪ, ಸೇರಿದಂತೆ ಆಯಾ ಶಾಲೆಯ ಮುಖ್ಯ ಶಿಕ್ಷಕರು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!