ರೈತರ ಗಮನಕ್ಕೆ; PM ಕಿಸಾನ್ ನಿಧಿ ಆರ್ಥಿಕ ನೆರವು: ಇ-ಕೆವೈಸಿ, ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಕಡ್ಡಾಯ

ಬೆಂ.ಗ್ರಾ.ಜಿಲ್ಲೆ, (ಜೂ.28): ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ರೂ.6,000/- ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಸದರಿ ಅನುದಾನವನ್ನು ರೂ.2,000/- ಗಳಂತೆ 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೀಡಲಾಗುತ್ತಿದೆ. 

ರಾಜ್ಯ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಯೋಜನೆಯ ರೈತ ಕುಟುಂಬಗಳಿಗೆ ಹೆಚ್ಚುವರಿಯಾಗಿ 2 ಕಂತುಗಳಲ್ಲಿ ವರ್ಷಕ್ಕೆ ರೂ.4.000/- ಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರದ ಈ ಯೋಜನೆಯ ಆರ್ಥಿಕ ನೆರವು ಪಡೆಯಲು ರೈತ ಫಲಾನುಭವಿಗಳು ಇ-ಕೆವೈಸಿ(E KYC) ಮಾಡುವುದು ಕಡ್ಡಾಯವಾಗಿರುತ್ತದೆ, ಜಿಲ್ಲೆಯಲ್ಲಿ ಈವರೆಗೆ ಶೇ.71 ರಷ್ಟು (ದೇವನಹಳ್ಳಿ ಶೇ.72 ದೊಡ್ಡಬಳ್ಳಾಪುರ ಶೇ.76, ಹೊಸಕೋಟೆ ಶೇ.69, ನೆಲಮಂಗಲ ಶೇ.64) ರೈತರು E KYC ಮಾಡಿಸಿದ್ದು, ಇನ್ನೂ 22,971 ಫಲಾನುಭವಿ ರೈತರು (ಶೇ.29ರಷ್ಟು – ದೇವನಹಳ್ಳಿ ಶೇ.28, ದೊಡ್ಡಬಳ್ಳಾಪುರ ಶೇ.24. ಹೊಸಕೋಟೆ ಶೇ.31 ನೆಲಮಂಗಲ ಶೇ.36) ಬಾಕಿ ಇರುತ್ತಾರೆ.

E KYC ಯನ್ನು ಈ ಕೆಳಕಂಡಂತೆ ಕೈಗೊಳ್ಳಬಹುದಾಗಿರುತ್ತದೆ.

1) ಓ.ಟಿ.ಪಿ ಆಧಾರಿತ E KYC – ಆಧಾರ್ ಕಾರ್ಡಿಗೆ ಮೊಬೈಲ್‌ ಸಂಖ್ಯೆ ಜೋಡಣೆಯಾಗಿರುವ ಫಲಾನುಭವಿಗಳು ಸ್ವತಃ ತಾವೇ ಅಥವಾ ಇತರರ ಸಹಾಯ ಪಡೆದ http://exlink/pmkisan.gov.in/aadharekyc.aspx 0 ಆಧಾರ್ ಸಂಖ್ಯೆ ಮತ್ತು ಓಟಿಪಿಯನ್ನು ನಮೂದಿಸಿ E KYC ಮಾಡಿಕೊಳ್ಳಬಹುದು. 

2) ಬಯೋಮೆಟ್ರಿಕ್‌ ಆಧಾರಿತ E KYC – ಕಾರ್ಡಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗದಿರುವ ಫಲಾನುಭವಿಗಳು ಗ್ರಾಮ ಬಸ್‌ ಕೇಂದ್ರ, ಸಿಎಸ್‌ಸಿ ಕೇಂದ್ರದ ಮೂಲಕ ತಮ್ಮ ಹೆಬ್ಬೆಟ್ಟಿನ ಗುರುತಿನ ಆಧಾರದ ಮೇಲೆ E KYC ಮಾಡಿಸಿಕೊಳ್ಳಬಹುದು.

3) PMKISAN FACE RECOGNITION APP E KYC – ಮೇಲಿನ ಎರಡೂ ಪ್ರಕಾರಗಳಲ್ಲಿ E KYC ಮಾಡಿಸಿಕೊಳ್ಳಲು ಆಗದ ಫಲಾನುಭವಿಗಳು PMKISAN FACE RECOGNITION APP ಮೂಲಕ ತಮ್ಮ ಕಣ್ಣಿನ ಗುಡ್ಡೆಯ ಗುರುತಿನ ಆಧಾರದ ಮೇಲೆ ಸ್ವತ: E KYC ಮಾಡಿಕೊಳ್ಳಬಹುದು ಮತ್ತು ಇತರೇ 10 ಜನ ರೈತರ E KYC ಮಾಡಿಕೊಡಬಹುದು.

14ನೇ ಕಂತಿನ ಆರ್ಥಿಕ ನೆರವು ವರ್ಗಾವಣೆಗಾಗಿ ಎಲ್ಲಾ ಫಲಾನುಭವಿಗಳು ಈ ಮೇಲಿನಂತೆ *ಜೂನ್ 30* ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ / ತೋಟಗಾರಿಕೆ ಇಲಾಖೆ / ಕಂದಾಯ ಇಲಾಖೆ / ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಅಧಿಕಾರಿ / ಸಿಬ್ಬಂದಿಗಳನ್ನು ಹಾಗೂ ನಾಗರೀಕ ಸೇವಾ ಕೇಂದ್ರ ಮತ್ತು ಗ್ರಾಮ ಓನ್ ಕೇಂದ್ರಗಳನ್ನು ಸಂಪರ್ಕಿಸಿ, ಕಡ್ಡಾಯವಾಗಿ E KYC ಮಾಡಿಸಿಕೊಳ್ಳುವುದು. ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಯಿಂದ ಆರ್ಥಿಕ ನೆರವು ವರ್ಗಾವಣೆಯಾಗದಿರುವ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!