ರಾಜ್ಯದಲ್ಲಿ ವೈಎಸ್ ಟಿ (YST) ತೆರಿಗೆ ಜಾರಿ: ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ| ಒಂದು ಸರಕಾರ, ಹತ್ತಾರು ಮುಖ್ಯಮಂತ್ರಿಗಳು ಎಂದು ಕುಟುಕಿದ ಮಾಜಿ ಸಿಎಂ

ಬೆಂಗಳೂರು, (ಜುಲೈ.23): ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ (YST) ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಅವರು ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದರು.

ವೈಎಸ್ ಟಿ ಎಂದರೆ ಏನು? ಸ್ವಲ್ಪ ಬಿಡಿಸಿ ಹೇಳಿ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಧ್ಯರಾತ್ರಿವರೆಗೂ ತಮ್ಮ ಮನೆಗಳಲ್ಲಿ ಅಧಿಕಾರಿಗಳ ಸಭೆ ಮಾಡುವ ಘನಂದಾರಿ ವ್ಯಕ್ತಿಗಳನ್ನು ಕೇಳಿ? ಈಗಾಗಲೇ ವರ್ಗಾವಣೆ ದಂಧೆಗಾಗಿ ಯಾರನ್ನೆಲ್ಲ ಫೀಲ್ಡಿಗೆ ಇಳಿಸಿ ಗುಪ್ತ ಸಭೆಗಳನ್ನು ಮಾಡುತ್ತಿದ್ದಾರೋ ಅವರನ್ನೇ ಕೇಳಿ? ನೀವೂ ಪತ್ತೆ ಹಚ್ಚಿ ಎಂದರು.

ವರ್ಗಾವಣೆ ದಂಧೆ ಬಗ್ಗೆ ತಮ್ಮ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟಿರುವ ಹೇಳಿಕೆ ಬಗ್ಗೆ ಕಿಡಿಕಿಡಿಯಾದ  ಮಾಜಿ ಮುಖ್ಯಮಂತ್ರಿಗಳು, ನಾನು ಸಿದ್ದರಾಮಯ್ಯ ಅವರನ್ನು ಕೇಳಲು ಬಯಸುತ್ತೇನೆ. ನಾನು ನಿಮ್ಮ ಪಕ್ಷದ ಜತೆ ಸರಕಾರ ರಚನೆ ಮಾಡಿದ್ದಾಗ ನೀವೆಲ್ಲ ಏನೇನು ಮಾಡಿದಿರಿ ಎನ್ನುವುದು ಗೊತ್ತಿದೆ. ಪೊಗದಸ್ತಾದ ಇಲಾಖೆಗಳನ್ನು ಇಟ್ಟುಕೊಂಡಿದ್ದ ನಿಮ್ಮ ಮಂತ್ರಿಗಳು ಏನು ಮಾಡಿದರು? ಮುಖ್ಯಮಂತ್ರಿಯಾಗಿ ನಾನು ಯಾವೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆಯೇ ಇರಲಿಲ್ಲ. ಎಲ್ಲ ದಂಧೆಗಳು ಯಾರ ಮೂಗಿನಡಿ ನಡೆಯುತ್ತಿದ್ದವು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಣ ಕೊಟ್ಟು ಪೋಸ್ಟ್ ಪಡೆಯಲು ಬಂದವರನ್ನು ನಾನು ದೂರ ಇಟ್ಟಿದ್ದೆ. ಬಿಡಿಎ ಮೇಲೆ ಬಂದು ಕೊರಲು ಬಂದ ಅಧಿಕಾರಿಗೆ ಹೊರಗಟ್ಟಿದ್ದೆ. ಯಲಹಂಕ ತಹಶಿಲ್ದಾರ್ ಹುದ್ದೆಗೆ ಒಂದೂವರೆ ಕೋಟಿ ಕೊಡ್ತೀವಿ ಅಂದವರನ್ನು ಆಚೆ ಇಟ್ಟಿದ್ದೆ. ಇದು ನಾನು ನಡೆಸಿದ ಆಡಳಿತ. ಈಗ ನೋಡಿದರೆ ವೈಎಸ್ ಟಿ ತೆರಿಗೆ ಅಂತ ಇವರ ಶುರು ಮಾಡಿಕೊಂಡಿದ್ದಾರೆ ಎಂದು ಕಟುವಾಗಿ ಟೀಕೆ ಮಾಡಿದರು.

ವಸೂಲಿ ಮಾಡಿ ವರ್ಗಾವಣೆ ಮಾಡುವ ದಂಧೆ ಮಾಡದೇ ವಸೂಲಿ ಶುರುವಾಗಿದೆ. ಅಧಿಕಾರಿಗಳನ್ನು ಮನೆಯಲ್ಲಿ ಕೂರಿಸಿಕೊಂಡು ರಾತ್ರಿ ಒಂದು ಗಂಟೆಯವರೆಗೆ ಸಭೆ ಮಾಡ್ತಾ ಇದ್ದಾರಲ್ಲಾ.. ಅದು ಏತಕ್ಕೆ? ಸರಕಾರಿ ಕಚೇರಿ ಏಕೆ ಸಭೆಗಳನ್ನು ನಡೆಸಲ್ಲ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಒಂದು ಸರಕಾರ, ಹತ್ತಾರು ಮುಖ್ಯಮಂತ್ರಿಗಳು: ಕಾಂಗ್ರೆಸ್ ಸರಕಾರದಲ್ಲಿ ಈಗಾಗಲೇ ಆಡಳಿತ ಹಳಿತಪ್ಪಿದೆ. ‘ಒಂದು ಸರಕಾರ, ಹತ್ತಾರು ಮುಖ್ಯಮಂತ್ರಿಗಳು’ ಎನ್ನುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ಅವರು ಒಬ್ಬರೇ ಮುಖ್ಯಮಂತ್ರಿ ಅಲ್ಲ. ಇಲಾಖೆಗೊಬ್ಬ ಮುಖ್ಯಮಂತ್ರಿ ಇದ್ದಾರೆ. ಒಬ್ಬೊಬ್ಬರು ಮುಖ್ಯಮಂತ್ರಿಯಂತೆ ಹೇಳಿಕೆ ನೀಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಲೇವಡಿ ಮಾಡಿದರು.

ಇಲ್ಲಿ ಸಿದ್ದರಾಮಯ್ಯ ಒಂದು ಹೇಳ್ತಾರೆ, ಸತೀಶ್ ಜಾರಕಿಹೊಳಿ ಇನ್ನೊಂದು ಹೇಳ್ತಾರೆ. ಹಾಗಾದರೆ, ಇಲ್ಲಿ ಎಷ್ಟು ಜನ ಸಿಎಂಗಳು ಇದ್ದಾರೆ? ಎಂದು ಪ್ರಶ್ನಿಸಿದ ಅವರು; ಇದನ್ನು ಸರ್ಕಾರ ಅಂತ ಕರೀತೀರಾ? ಇಲ್ಲೇನಾದರೂ ಪಾರದರ್ಶಕತೆ ಅನ್ನೋದು ಇದೆಯಾ? 

ಬಿಜಿಪಿ ವಿರೋಧಿ ಸಭೆಗೆ ಕರೆದಿಲ್ಲ, ನಾವು ಹೋಗಲ್ಲ: ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ವಿರೋಧಿ ಪಕ್ಷಗಳ ಸಭೆಗೆ ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ಟಿಲ್ಲ, ನಮ್ಮನ್ನು ಯಾರೂ ಕರೆದಿಲ್ಲ. ಹೀಗಾಗಿ ಆ ಸಭೆಗೆ ಹೋಗುವುದಿಲ್ಲ ಎಂದು ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ನಮ್ಮದು ಸಣ್ಣ ಪಕ್ಷ. ಅದನ್ನು ಬೆಳೆಸುತ್ತೇವೆ, ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಅದಕ್ಕಾಗಿ ಸರಣಿ ಸಭೆಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಮಹತ್ವದ ಸಭೆ: ಪಕ್ಷದ ಕಚೇರಿಯಲ್ಲಿ ಮಹತ್ವದ ಸಭೆ ಕರೆದಿದ್ದೇವೆ. ಈ ಸರ್ಕಾರ ರಚನೆಯಾಗಿ 50 ದಿನ ಆಗಿದೆ. ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು, ಸರಕಾರದ ವಿರುದ್ಧ ಹೋರಾಟಗಳನ್ನು ಹೇಗೆಲ್ಲಾ ಹಮ್ಮಿಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಅವರು ಹೇಳಿದರು.

ಕಡಿಮೆ ಶಾಸಕರು ಇದ್ದಾರೆ ಎಂದು ನಾವು ಎದೆಗುಂದುವುದಿಲ್ಲ. ಸದನದ ಒಳಗೆ, ಹೊರಗೆ ಹೋರಾಟ ನಡೆಸುತ್ತೇವೆ. ಯಾವ ವಿಷಯಗಳನ್ನು ಕೈಗೆತ್ತಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ಮಾಡುತ್ತೇವೆ. ಗ್ಯಾರಂಟಿ ಬಗ್ಗೆ ನಾನು ಸದನದಲ್ಲಿ ಚರ್ಚೆ ಮಾಡಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಆಗಿದೆ. ಜನರನ್ನು ಇನ್ನೂ ಎಷ್ಟು ವರ್ಷ ಕೈ ಚಾಚುವಂತೆ ಮಾಡ್ತೀರಾ? ಎಂದು ಕೇಳುತ್ತೇವೆ ಎಂದು ಅವರು ಹೇಳಿದರು.

ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಶಾಸಕಿ ಕರೆಮ್ಮ ನಾಯಕ ಮುಂತಾದವರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮುಂದಿನ ತಿಂಗಳ (ಮೇ) ಮೊದಲ ವಾರದಲ್ಲಿ ಜೆಡಿಎಸ್ (JDS) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆಂದು ಜೆಡಿಎಸ್ ಹಿರಿಯ ಮುಖಂಡ ಎಸ್.ಎಂ. ಹರೀಶ್ ಗೌಡ (S.M.

[ccc_my_favorite_select_button post_id="120975"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]