ಸಂತ ಶಿಶುನಾಳ ಶರೀಫ, ಹಡಪದ ಅಪ್ಪಣ್ಣ ಹಾಗೂ ಫ.ಗು.ಹಳಕಟ್ಟಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುಷ್ಪನಮನ

ಬೆಂಗಳೂರು, (ಜುಲೈ.03): ʻಈಶ್ವರ ಅಲ್ಲಾ, ನೀನೇ ಎಲ್ಲಾ’ ಎಂದು ಬೋಧಿಸಿ, ಅದನ್ನು ಆಚರಣೆಯಲ್ಲಿ ತಂದವರು ಕಳಸದ ಗುರು ಗೋವಿಂದ ಭಟ್ಟರು ಹಾಗೂ ಅವರ ಶಿಷ್ಯರಾದ ಕರ್ನಾಟಕದ ಕಬೀರ, ಸಂತ ಶಿಶುನಾಳ ಶರೀಫರು. ಮಂದಿರ-ಮಸೀದಿ, ಪುರಾಣ-ಕುರಾನ, ನಮನ-ನಮಾಜ್, ಅಲ್ಲಮ-ಅಲ್ಲಾ, ಜಂಗಮ-ಫಕೀರ, ಇವೆಲ್ಲಾ ಒಂದೇ, ಭಗವಂತನ ದರ್ಶನಕ್ಕೆ ನಾವು ಹಾಕಿಕೊಂಡ ವಿವಿಧ ಹಾದಿಗಳು ಎಂದು ತೋರಿಸಿದಂತಹ ದಾರ್ಶನಿಕರ ಪೈಕಿ ಶಿಶುನಾಳ ಶರೀಫರು ಅಗ್ರಪಂಕ್ತಿಯಲ್ಲಿ ಗುರುತಿಸಿಕೊಳ್ಳುತ್ತಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಹೇಳಿದರು. 

ಅವರು ಇಂದು ಕನ್ನಡ ಸಾಹಿತ್ಯ ಪರಿಷತ್ತಿನ ಪಂಪ ಸಭಾಂಗಣದಲ್ಲಿ ಹಮ್ಮಿಕೊಂಡ ಸಂತ ಶಿಶುನಾಳ ಶರೀಫರ, ಹಡಪದ ಅಪ್ಪಣ್ಣನವರ ಹಾಗೂ ಫ.ಗು.ಹಳಕಟ್ಟಿ ಅವರ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಹಮ್ಮಿಕೊಂಡ ಪುಷ್ಪನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 

ಕಳಸದ ಗುರು ಗೋವಿಂದ ಭಟ್ಟರು ಹಾಗೂ ಸಂತ ಶಿಶುನಾಳ ಶರೀಫರು ಹಿಂದೂ ಹಾಗೂ ಇಸ್ಲಾಂ ಧರ್ಮಗಳ ಸಮಾನತೆ, ಸಮನ್ವಯ ಹಾಗೂ ಸಮಭಾವನ್ನು, ಸಮಚಿತ್ತ ಹಾಗೂ ಸಮದೃಷ್ಟಿಯಿಂದ ನೋಡಿದ ‘ಸಮಾನತೆಯ ಹರಿಕಾರರು‘ ಕಳಸದ ಗುರು ಗೋವಿಂದಭಟ್ಟರು ಹಾಗೂ ಸಂತ ಶಿಶುನಾಳ ಶರೀಫರು. ಇವರಿಬ್ಬರೂ ದೈವಭಕ್ತರು, ಆತ್ಮಜ್ಞಾನಿಗಳು, ತತ್ವಜ್ಞಾನಿಗಳು, ವಿಚಾರವಾದಿಗಳು, ವಿಮರ್ಶಕರು, ಶಾಂತಿ ಹಾಗೂ ಕ್ರಾಂತಿ ಪುರುಷರು, ಸಮಾಜ ಸುಧಾರಕರು, ನೀತಿ ಬೋಧಕರು ಹಾಗೂ ತ್ರಿಕಾಲ ಜ್ಞಾನಿಗಳು. ಎಲ್ಲಕ್ಕಿಂತ ಹೆಚ್ಚಾಗಿ ಇವರಿಬ್ಬರೂ ಸಮಸಮಾಜದ, ಮಾನವತೆಯ ಎರಡು ಕಣ್ಣುಗಳಾಗಿ ‘ಮಹಾನ್ ಮಾನವತಾವಾದಿ’ಗಳಾಗಿ ಸಮಾಜಕ್ಕೆ ಬೆಳಕನ್ನು ಕೊಟ್ಟವರು ಎಂದು ನೆನಪಿಸಿಕೊಂಡರು.

ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ “ಅನುಭವ ಮಂಟಪದಲ್ಲಿ” ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿ, ತಮ್ಮ ಕಾರ್ಯಕ್ಷಮತೆಯಿಂದ ಎಲ್ಲರಿಗೂ ಮಾದರಿಯಾಗಿದ್ದವರು ಹಡಪದ ಅಪ್ಪಣ್ಣನವರು. ಸಾಮಾಜಿಕ ಸಮಾನತೆಯ ಹರಿಕಾರರಾದ  ಅಪ್ಪಣ್ಣನವರು ಸುಮಾರು 250ಕ್ಕೂ ಹೆಚ್ಚು ವಚನಗಳನ್ನು ʻಅಪ್ಪಣ್ಣ ಪ್ರಿಯ ಚನ್ನಬಸವಣ್ಣʼ ಎಂಬ ಅಂಕಿತನಾಮದಿಂದ ವಚನಗಳನ್ನು ರಚಿಸಿದ್ದಾರೆ. ಬಸವಣ್ಣನವರಿಗೆ ಅಪ್ಪಣ್ಣ ಪ್ರಾಣವೇ ಆಗಿದ್ದರು. ಇದಕ್ಕೆ ಸಾಕ್ಷಿ ಕಲ್ಯಾಣಕ್ರಾಂತಿಯ ಕೊನೆಯ ದಿನಗಳ ಕುರಿತ  ಶೂನ್ಯ ಸಂಪಾದನೆಯಲ್ಲಿನ ವಿವರಗಳಿಂದ  ನಮಗೆ ಸ್ಪಷ್ಟಪಡಿಸುತ್ತವೆ. ಒಬ್ಬ ಕಾರ್ಯದರ್ಶಿ ಹೇಗೆ ಕಾರ್ಯನಿರ್ವಹಿಸಬೇಕೆಂಬುದಕ್ಕೆ ಹಡಪದ ಆಪ್ಪಣ್ಣ ಒಂದು ಉತ್ತಮ ಉದಾಹರಣೆಯಾಗಿ ಇರುತ್ತಾರೆ. ಆದರೆ ನಮ್ಮಲ್ಲಿ ಹಡಪದ ಅಪ್ಪಣ್ಣನ ಕುರಿತು, ಅವರ ರಚಿಸಿದ ವಚನಗಳ ಕುರಿತು ಹಾಗೂ ಅವರ ಜೀವನದ ಕುರಿತು ಇನ್ನೂ ಹೆಚ್ಚಿನ ಸಂಶೋಧನೆಯಾಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಜನರಿಗೆ ಗೊತ್ತಿಲ್ಲದೆ, ಕಬ್ಬಿಣದ ಕಡಲೆಯಂತಿದ್ದ ಸಂಸ್ಕೃತ ಭಾಷೆಯಲ್ಲಿದ್ದ ಧರ್ಮದ ಸಾರವನ್ನು ವಚನಕಾರರು ಜನರಿಗೆ ಅರ್ಥ ಆಗುವಂತೆ ನಮ್ಮ ಜೀವ ಭಾಷೆಯಾಗಿರುವ ಕನ್ನಡ ಭಾಷೆಯಲ್ಲಿ ತಿಳಿಸಿದರು ಫ.ಗು.ಹಳಕಟ್ಟಿಯವರು 200 ವಚನಕಾರರ ವಚನಗಳನ್ನು ಸಂಗ್ರಹಿಸಿ, ಮುಂದಿನ ತಲೆಮಾರಿಗೆ ನೀಡುವ ಮಹಾನ್ ಮೌಲ್ಯಯುತವಾದ ಕೆಲಸ ಮಾಡಿದರು. ಕರ್ನಾಟಕದ ಮೂಲೆ ಮೂಲೆಯನ್ನು ತಿರುಗಿ ತಾಳೆಗರಿಗಳಲ್ಲಿ ಇದ್ದ ವಚನಗಳನ್ನು ಪರಿಷ್ಕರಿಸಿ ಪ್ರಕಟಿಸಿದ ಕೀರ್ತಿ ಅವರದು ಎಂದ ನಾಡೋಜ ಡಾ.ಮಹೇಶ ಜೋಶಿಯವರು ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ನಿಕಟ ಒಡನಾಟವನ್ನು ಇಟ್ಟು ಕೊಂಡಿದ್ದ ಫ.ಗು.ಹಳಕಟ್ಟಿಯವರು ಆರಂಭದ ದಿನಗಳಲ್ಲಿ ಪರಿಷತ್ತಿಗೆ ಬೆನ್ನುಲುಬಾಗಿದ್ದರು. 1926ರಲ್ಲಿ ಬಳ್ಳಾರಿಯಲ್ಲಿ ನಡೆದ 12ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು ಎಂದು ಸ್ಮರಿಸಿ ಕೊಂಡು ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆಯನ್ನು ನೀಡಿದ  ಫ.ಗು.ಹಳಕಟ್ಟಿಯವರ ಜನ್ಮದಿನವನ್ನು “ವಚನ ಸಾಹಿತ್ಯ ಸಂರಕ್ಷಣಾ ದಿನ” ವನ್ನಾಗಿ ಆಚರಿಸಲಾಗುತ್ತಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ವಿವರಿಸಿದರು.

ಸಂತ ಶಿಶುನಾಳ ಶರೀಫರ, ಹಡಪದ ಅಪ್ಪಣ್ಣನವರ ಹಾಗೂ ಫ.ಗು.ಹಳಕಟ್ಟಿ ಅವರ ಜನ್ಮದಿನಾಚರಣೆಯ ಪುಷ್ಪನಮನ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಹಾಗೂ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ, ಡಾ.ಪದ್ಮಿನಿ ನಾಗರಾಜು, ಗೌರವ ಕೋಶಾಧ್ಯಕ್ಷರಾದ ಡಾ.ಬಿ.ಎಂ. ಪಟೇಲ್ ಪಾಂಡು, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ, ಪ್ರಕಟಣಾ ವಿಭಾಗದ ಸಂಚಾಲಕರಾದ ಪ್ರೊ.ಎನ್.ಎಸ್.ಶ್ರೀಧರ ಮೂರ್ತಿ, ವಿಶೇಷ ಕರ್ತವ್ಯಾಧಿಕಾರಿ ಚಿಕ್ಕತಿಮ್ಮಯ್ಯ ಸಿ. ಹಾಗೂ ಸಿಬ್ಬಂದಿಗಳು ಪುಷ್ಪನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!