ದೊಡ್ಡಬಳ್ಳಾಪುರ, (ಜುಲೈ.10): ಸಮರ್ಪಕ ಸಾರಿಗೆ ವ್ಯವಸ್ಥೆಗೆ ಒತ್ತಾಯಿಸಿ ತಾಲೂಕಿನ ಹುಲಿಕುಂಟೆ ಬಳಿ ಬಸ್ ತಡೆದು ನಡೆಸಲಾಗುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಕೆಎಸ್ಆರ್ಟಿಸಿ ಡಿಪೋ ವ್ಯವಸ್ಥಾಪಕ ಸಂತೋಷ್ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಉಂಟಾಗುತ್ತಿದ್ದ ಸಮಸ್ಯೆ ಆಲಿಸಿದರು.
ಈ ವೇಳೆ ಒಂದು ವಾರದ ಒಳಗಾಗಿ ಹೆಚ್ಚುವರಿ ಬಸ್ ನೀಡುವುದಾಗಿ ಲಿಖಿತ ಭರವಸೆಯ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟು, ಬಸ್ ಸಂಚರಿಸಲು ಅನುವು ಮಾಡಿಕೊಟ್ಟರು.
ಸೋಮವಾರ ಬೆಳಗ್ಗೆ ತಾಲೂಕಿನ ಹುಲಿಕುಂಟೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ಸಾರಿಗೆ ಬಸ್ ತಡೆದಿದ್ದ ವಿದ್ಯಾರ್ಥಿಗಳು ಪ್ರತಿಭಟನೆ ಮುಂದಾದರು. ಈ ವೇಳೆ ಈ ರಸ್ತೆಯಲ್ಲಿ ಬಂದ ಒಂಬತ್ತು ಬಸ್ಸುಗಳನ್ನು ತಡಹಿಡಿಯಲಾಯಿತು.
ದೊಡ್ಡಬಳ್ಳಾಪುರ-ತುಮಕೂರು ಮಾರ್ಗಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೆ ಒಂದೇ ಬಸ್ಸಿನಲ್ಲಿ 130ಕ್ಕು ಹೆಚ್ಚು ಮಂದಿ ಪ್ರಯಾಣಿಕರು ಸಾಗಬೇಕಾದ ಅನಿವಾರ್ಯತೆ ಇದೆ. ದಿನ ನಿತ್ಯ ಸಮಸ್ಯೆಯ ಕುರಿತು ಅಧಿಕಾರಿಗಳಿಗೆ ಮಾಹಿತಿ ಇದ್ದರು ಹೆಚ್ಚುವರಿ ಬಸ್ ಬಿಡದ ಕಾರಣ ಬಸ್ಸಿನ ಡೋರ್ನಲ್ಲಿ ನೇತಾಡಿಕೊಂಡು ತೆರಳಬೇಕಾದ ಪರಿಸ್ಥಿತಿ ಇದ್ದು, ಆಯತಪ್ಪಿ ಬಿದ್ದು ಸತ್ತರೆ ಹೊಣೆ ಯಾರೆಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದರು.
ಈ ಕುರಿತಂತೆ ಸ್ಥಳಕ್ಕೆ ಸಾರಿಗೆ ಅಧಿಕಾರಿಗಳು ಬಂದು ಸಮರ್ಪಕ ಬಸ ವ್ಯವಸ್ಥೆ ಕಲ್ಪಿಸದ ಹೊರತು ಬಸ್ ಬಿಡುವುದಿಲ್ಲವೆಂದು ವಿದ್ಯಾರ್ಥಿಗಳ ಪಟ್ಟುಹಿಡಿದಿದ್ದರು. ಗ್ರಾಮಸ್ಥರು ಸಹ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….