ದೊಡ್ಡಬಳ್ಳಾಪುರ KSRTC ಡಿಪೋದಲ್ಲಿ 37ಮಂದಿ ಸಿಬ್ಬಂದಿ ಕೊರತೆ ಮಾಹಿತಿ ಬಹಿರಂಗ..!: ಪ್ರತಿ ನಿತ್ಯ 2 ರಿಂದ 3 ಮಾರ್ಗ ರದ್ದು..!!

ದೊಡ್ಡಬಳ್ಳಾಪುರ, (ಜುಲೈ.18): ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿಲ್ಲ. ಇದರಿಂದ ತರಗತಿಗಳಿಗೆ ಹೋಗಲು ಪ್ರತಿದಿನವು ತೊಂದರೆಯಾಗುತ್ತಿದೆ ಎಂದು ಆರೋಪಿಸಿ ತಾಲೂಕಿನಲ್ಲಿ ಹಲವು ಗ್ರಾಮಗಳಲ್ಲಿ ಶಾಲೆ, ಕಾಲೇಜು ಆರಂಭವಾದ ಒಂದು ತಿಂಗಳಿಂದ ಈಚೆಗೆ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿರುವುದು ಸಾಮಾನ್ಯವಾಗಿದೆ.

ಈ ನಿಟ್ಟಿನಲ್ಲಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶನಿವಾರ ನಡೆದ ಬಸ್‌ ಸಮಸ್ಯೆ ಕುರಿತಂತೆ ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಕುಂದು ಕೊರತೆ ಸಭೆ ಪ್ರಯಾಣಿಕರು ಅನುಭವಿಸುತ್ತಿರುವ ಸಮಸ್ಯೆ ಅನಾವರಣಕ್ಕೆ ವೇದಿಕೆಯಾಯಿತು.

ಸಮಯಕ್ಕೆ ಬಾರದ ಬಸ್‌ಗಳು, ಸೌಜನ್ಯದಿಂದ ವರ್ತಿಸದ ಸಿಬ್ಬಂದಿ ಹಾಗೂ ಗುಜರಿ ಸೇರಬೇಕಿರುವ ಬಸ್‌ಗಳು ಮಾರ್ಗ ಮಧ್ಯದಲ್ಲೇ ಕೆಟ್ಟು ನಿಲ್ಲುವ ಕುರಿತಂತೆ ಪ್ರಯಾಣಿಕರು ತಮ್ಮ ದೂರುಗಳನ್ನು ಶಾಸಕರ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು.

“ಒಂದು ದಿನವು ನಿಗದಿತ ಸಮಯಕ್ಕೆ ಬಸ್‌ಗಳು ಬಂದಿರುವ ನಿದರ್ಶನವೇ ಇಲ್ಲ. ಈ ಬಗ್ಗೆ ಚಾಲಕರು, ನಿರ್ವಾ- ಹಕರನ್ನು ಪ್ರಶ್ನೆ ಮಾಡಿದರೆ ಏಕವ ಚನದಲ್ಲಿ ಉತ್ತರ ನೀಡುತ್ತಾರೆ. ಬಸ್ ನಿಲ್ದಾಣದಲ್ಲಿನ ಸಂಚಾರ ನಿಯಂತ್ರಣ ಅಧಿಕಾರಿಗಳಿಗೆ ಲಿಖಿತವಾಗಿ ದೂರು ನೀಡಿದರೂ, ಯಾವುದೇ ಉತ್ತರವು ನೀಡಿಲ್ಲ. ನಗರದಲ್ಲಿನ ಕಾಲೇಜುಗಳಿಗೆ ಹೋಗದೆ ಚಿಕ್ಕಬಳ್ಳಾಪುರಕ್ಕೆ ಏಕೆ ಬರುತ್ತೀರಿ ಎಂದು ನಿರ್ವಾಹಕರು ಪ್ರಶ್ನೆ ಮಾಡುತ್ತಾರೆ’ ಎಂದು ಚಿಕ್ಕಬಳ್ಳಾಪು-ರದಲ್ಲಿನ ಖಾಸಗಿ ಎಂಜಿನಿಯರಿಂಗ್ ಕಾಲೇಜಿಗೆ ಹೋಗುವ ದೊಡ್ಡಬಳ್ಳಾ- ಪುರ ನಗರದ ವಿದ್ಯಾರ್ಥಿನಿ ಪೂರ್ಣಿಮಾ ಸಮಸ್ಯೆ ಹೇಳಿಕೊಂಡರು.

ನಾವು ಎಲ್ಲಿ ಓದಬೇಕು ಎಂದು ಹೇಳುವ ಅಧಿಕಾರ ಇವರಿಗೆ ನೀಡಿದವರು ಯಾರು?, ನಗರದಿಂದ ಚಿಕ್ಕಬಳ್ಳಾಪುರಕ್ಕೆ ಹೋಗಲು ಎರಡು ಮಾರ್ಗಗಳು ಇವೆ. ಇಂತಹದ್ದೇ ಮಾರ್ಗದಲ್ಲಿ ಹೋಗಿ ಎಂದು ಹೇಳುವ ಅಧಿಕಾರಿ ನೀಡಿವರು ಯಾರು’ ಎಂದು ಪ್ರಶ್ನಿಸಿದರು.

ಯಾವ ಮಾರ್ಗದ ಬಸ್‌ನಲ್ಲಿ ಸೀಟ್‌ಗಳು ಖಾಲಿ ಇದ್ದರೆ ಅವುಗಳಲ್ಲಿ ನಮಗೆ ಪ್ರಯಾಣ ಮಾಡಲು ಹಾಗೂ ಹೆಚ್ಚುವರಿ ಬಸ್‌ಗಳ ಸಂಚಾರ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು.

ದೊಡ್ಡಬೆಳವಂಗಲ ಹೋಬಳಿಯ ಹಾದ್ರಿಪುರ ಮಾರ್ಗದಲ್ಲಿ ದಶಕಗಳಿಂದ ಸಂಚರಿಸುತ್ತಿದ್ದ. ಬಸ್ ಸ್ಥಗಿತಗೊಳಿಸ ಲಾಗಿದೆ. ಇದರಿಂದ ಈ ಮಾರ್ಗದ ಹತ್ತಾರು ಗ್ರಾಮಗಳ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಈ ಮಾರ್ಗದಲ್ಲಿ ಮತ್ತೆ ಬಸ್‌ ಸಂಚಾರ ಪ್ರಾರಂಭಿಸಬೇಕು ಎಂದು ಹಾದ್ರಿಪುರ ಗ್ರಾಮದ ಪ್ರಯಾಣಿಕ ಪುಟ್ಟಸ್ವಾಮಿ ಆಚಾರ್ ಮನವಿ ಮಾಡಿದರು.

ತಾಲ್ಲೂಕು ಕೇಂದ್ರದಿಂದ ಸಾಸಲು ಹೋಬಳಿಯ ಕೊಟ್ಟಿಗೆಮಂಚೇನ- ಹಳ್ಳಿ, ಲಿಂಗಧೀರನಹಳ್ಳಿ ಸೇರಿದಂತೆ ಹಲವಾರು ಮಾರ್ಗಗಳಲ್ಲಿ ಸಂಚರಿಸುತ್ತಿದ್ದ ಬಸ್ಸುಗಳನ್ನು  ಸ್ಥಗಿತಗೊಳಿಸಲಾಗಿದೆ ಎಂದಿದ್ದರು.

ಈ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಶಾಸಕ ಧೀರಜ್ ಮುನಿರಾಜು ವಿಧಾನಸಭಾ ಅಧಿವೇಶನ ಮುಕ್ತಾಯವಾದ ನಂತರ ಗ್ರಾಮೀಣ ಭಾಗದ ಹಾಗೂ ಬೆಂಗಳೂರಿನ ಕಾವೇರಿನ ಭವನ-ದೊಡ್ಡಬಳ್ಳಾಪುರ ಮಾರ್ಗದ ಬಸ್‌ಗಳಲ್ಲಿ ಸಂಚರಿಸುವ ಮೂಲಕ ಸಮಸ್ಯೆ ಅರಿತುಕೊಳ್ಳಲಾ- ಗುವುದು ಎಂದು ತಿಳಿಸಿದ್ದಾರೆ.

ಇದರ ಬೆನ್ನಲ್ಲೇ, ತಾಲೂಕಿನಲ್ಲಿ ಬಸ್‌ಗಳ ಸಮಸ್ಯೆ ಇಲ್ಲದಿದ್ದರೂ ಬಸ್ ಚಾಲಕರು, ನಿರ್ವಾಹಕರು ಕೊರತೆಯೇ ಸಮಸ್ಯೆಗೆ ಕಾರಣವಾಗಿದ್ದು, ಒಟ್ಟು 37 ಮಂದಿ ಕೊರತೆ ಇರುವುದರಿಂದ ಸಮಸ್ಯೆ ತೀವ್ರವಾಗಲು ಕಾರಣ ಎಂಬ ಮಾಹಿತಿ ಹರಿತಲೇಖನಿಗೆ ಲಭ್ಯವಾಗಿದೆ.

ಈ ಕುರಿತಂತೆ ಡಿಪೋ ವ್ಯವಸ್ಥಾಪಕ ಸಂತೋಷ್ ಮಾಹಿತಿ ನೀಡಿದ್ದು,  ದೊಡ್ಡಬಳ್ಳಾಪುರ ಡಿಪೋದಲ್ಲಿ 76 ಮಾರ್ಗಗಳಿದ್ದು, 238 ಸಿಬ್ಬಂದಿಗಳ ಅಗತ್ಯವಿದೆ. ಆದರೆ 20 ಮಂದಿ ಕೊರತೆ ಇರುವ ಜೊತೆಗೆ ವಿವಿಧ ಕಾರಣಗಳಿಂದ 17 ಮಂದಿ ಹೆಚ್ಚುವರಿಯಾಗಿ ಅಲಭ್ಯರಾಗುತ್ತಿದ್ದು ಒಟ್ಟು 37 ಮಂದಿ ಕೊರತೆಯಿರುವ ಕಾರಣ ಪ್ರತಿ ನಿತ್ಯ ಎರಡರಿಂದ ಮೂರು ಮಾರ್ಗವನ್ನು ರದ್ದು ಮಾಡಲಾಗುತ್ತಿದೆ ಎಂದಿದ್ದಾರೆ.

ಚಾಲನಾ ಸಿಬ್ಬಂದಿ ಕೊರತೆ ಕುರಿತಂತೆ ಹಿರಿಯ ಅಧಿಕಾರಿಗಳ ಗಮನದಲ್ಲಿದ್ದು, ಮುಂದಿನ 15 ದಿನಗಳ ಒಳಗಾಗಿ ಚಾಲನಾ ಸಿಬ್ಬಂದಿ ನೀಡುವ ಬಗ್ಗೆ ಈಗಾಗಲೇ ಚರ್ಚೆ ನಡೆದಿರುವ ಕಾರಣ ಪ್ರಸ್ತುತ ಕಾಡುತ್ತಿರುವ ಸಮಸ್ಯೆ ಪರಿಹಾರವಾಗುತ್ತದೆ ಎಂದು ಡಿಪೋ ವ್ಯವಸ್ಥಾಪಕ ಸಂತೋಷ್ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!