ದೊಡ್ಡಬಳ್ಳಾಪುರ: ಗೋ ಸಂರಕ್ಷಣೆಯ ಅರಿವು ಮೂಡಿಸಲು ಗೋ ಸಂಗಮ ಕಾರ್ಯಕ್ರಮ

ದೊಡ್ಡಬಳ್ಳಾಪುರ, (ಜುಲೈ.20): ಭಾರತೀಯ ಪ್ರಾದೇಶಿಕ ಗೋವು ತಳಿಗಳ ಸಂರಕ್ಷಣೆ, ಸಂವರ್ಧನೆ ಹಾಗೂ ಸಂಶೋಧನೆಗಾಗಿ ಜು.22 ಮತ್ತು 23 ಎರಡು ದಿನಗಳ ಕಾಲ ಗೋ ಸಂಗಮ ಕಾರ್ಯಕ್ರಮ ನಗರದ ಅರಳುಮಲ್ಲಿಗೆ ಗೇಟ್ ಸಮೀಪದ ಸರ್ಕಾರಿ ಶಾಲೆಯ ಆಟದ ಮೈಧಾನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಪ್ರಾದೇಶಿಕ ಗೋವು ತಳಿಗಳ ಪ್ರದರ್ಶನ, ಗೋವು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ, ಪಂಚಗವ್ಯ ವಿಚಾರ ಸಂಕಿರಣಗಳು, ಪಂಚಗವ್ಯ ಚಿಕಿತ್ಸಾ ವಿಧಾನ ಕುರಿತು ಸಲಹಾ ಶಿಬಿರಗಳು ಗೋ ಸಂರಕ್ಷಣಾ ತಜ್ಞರಿಂದ ನಡೆಯಲಿವೆ ಎಂದು ಗೋಮಾತಾ ಸಹಕಾರ ಸಂಘದ ಅಧ್ಯಕ್ಷ ಡಾ.ವಿ.ಜೀವನ್ ಕುಮಾರ್ ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಈ ಕುರಿತು ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶಿ ಗೋ ಸಾಕಾಣಿಕೆ ಅಪರೂಪವಾಗುತ್ತಿರುವ ಇಂದಿನ ದಿನಗಳಲ್ಲಿ ದೇಸಿ ಗೋವುಗಳ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ದೇಸಿ ತಳಿಗಳು ಮಾತ್ರ ಗೋ ಪೂಜೆಗೆ ಅರ್ಹವಾಗಿದ್ದು, ವಿದೇಶಿ ತಳಿಗಳು ಹಾಲು ಕರೆಯುವ ಪ್ರಾಣಿಗಳಷ್ಟೇ. ಗೋವುಗಳ ಸಗಣಿ, ಗಂಜಲಗಳಿಂದ  ಧೂಪ, ಸಾಂಬ್ರಾಣಿ, ಪಂಚಗವ್ಯ ಮೊದಲಾಗಿ ಹಲವು ಉತ್ಪನ್ನಗಳ ತಯಾರಿಕೆ ಬಗ್ಗೆ  ಮಾಹಿತಿ ನೀಡಲಾಗುತ್ತದೆ. ಈ ಬಗ್ಗೆ ಅರಿವು ಮೂಡಿಸುವಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. 

ಜು.22 ಮತ್ತು 23 ಸಂಜೆ 6.30ಕ್ಕೆ ವೇದೋಕ್ತ ಮಂತ್ರಗಳೊಂದಿಗೆ ಶುದ್ದ ದೀಪಗಳೊಂದಿಗೆ ಮಾತೆಯರಿಂದ ಗಂಗಾರತಿ ಮಾದರಿಯಲ್ಲಿ  ಗೋ ಮಾತಾ ಪೂಜಾ ಮತ್ತು ಆರತಿ ಕಾರ್ಯಕ್ರಮಗಳಿವೆ.

ಜು.23ರಂದು ಬೆಳಿಗ್ಗೆ 9ರಿಂದ 3 ಗಂಟೆಯವರೆಗೆ  ನುರಿತ ವೈದ್ಯರಿಂದ ಪಂಚಗವ್ಯ ಚಿಕಿತ್ಸಾ ಉಚಿತ ಸಲಹಾ ಶಿಬಿರ ಹಗೂ ನಿತ್ಯೋಪಯೋಗಿ ಗೋ ಉತ್ಪನ್ನಗಳ ತಯಾರಿಕಾ ಪ್ರಾತ್ಯಕ್ಷಿಕೆಯಿದೆ.

ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಡಾ.ಬಸವರಮಾನಂದ ಸ್ವಾಮೀಜಿ, ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ, ಮೇಲಣಗವಿ ಮಠದ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಪಂಚಗವ್ಯ ಚಿಕಿತ್ಸಕ ಡಾ.ನಿರಂಜನ್ ವರ್ಮ ಸಾನಿಧ್ಯ ವಹಿಸಲಿದ್ದಾರೆ.

ಶಾಸಕ ಧೀರಜ್ ಮುನಿರಾಜು, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ವಿಶ್ವ ಹಿಂದು ಪರಿಷತ್ ಸಂಪರ್ಕ ಪ್ರಮುಖ ಮಂಜುನಾಥ ಸ್ವಾಮಿ ಮೊದಲಾದವರು ಭಾಗವಹಿಸಲಿದ್ದಾರೆ. 

ಗೋ ಆಧಾರಿತ ಕೃಷಿ, ಗೋಉತ್ಪನ್ನಗಳ ತಯಾರಿಕೆ, ಪಂಚಗವ್ಯ ಚಿಕಿತ್ಸೆ ಕುರಿತಂತೆ ತಜ್ಞರಿಂದ ವಿಚಾರ ಸಂಕಿರಣ ನಡೆಯಲಿದೆ ಎಂದು ತಿಳಿಸಿದರು.

ಸುದ್ಧಿಗೋಷ್ಟಿಯಲ್ಲಿ ಗೋ ಸಂಗಮ ಕಾರ್ಯಕಾರಿ ಮಂಡಲಿಯ ಅಧ್ಯಕ್ಷ ಭಾಸ್ಕರ್, ಕಾರ್ಯದರ್ಶಿ ರಾಮಚಂದ್ರು, ಖಜಾಂಚಿ ಘನಶ್ಯಾಮ, ಸಹ ಕಾರ್ಯದರ್ಶಿಗಳಾದ  ಸುರೇಶ್, ಉಮಾ ಮಹೇಶ್ವರಿ, ಸಹ ಸಂಚಾಲಕರಾದ ವತ್ಸಲಾ, ಯಶೋಧ ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!