ದೊಡ್ಡಬಳ್ಳಾಪುರ, ( ಜುಲೈ.26): ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮುನಿರಾಜು ಎನ್ ಅವರಿಂದು ಅಧಿಕಾರ ಸ್ವೀಕರಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ)ಗೆ ಸೇರಿದ ಗ್ರೂಪ್ ಎ (ಕಿರಿಯ ಶ್ರೇಣಿ) ವೃಂದದ ಈ ಕೆಳಕಂಡ ಕಾರ್ಯ ನಿರ್ವಾಹಕ ಅಧಿಕಾರಿ / ಸಹಾಯಕ ಕಾರ್ಯದರ್ಶಿ / ಸಹಾಯಕ ಯೋಜನಾಧಿಕಾರಿ-1 ಸೇರಿದ 32 ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆ ಮತ್ತು ಸ್ಥಳಕ್ಕೆ ವರ್ಗಾಯಿಸಿ ಸೋಮವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಬಾಲಪ್ಪ ಆದೇಶಿಸಿದ್ದರು.
ಇದರ ಅನ್ವಯ ಶ್ರೀನಾಥ್ ಗೌಡ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಾಲೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಮುನಿರಾಜು ಎನ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಈ ವೇಳೆ ಪ್ರಭಾರ ಇಒ ಶ್ರೀನಾಥ್ ಗೌಡ, ಅಧಿಕಾರ ಹಸ್ತಾಂತರ ಮಾಡಿ, ಹೂ ಗುಚ್ಚ ನೀಡಿ ಶುಭಕೋರಿದರು.
ಶ್ರೀನಾಥ್ ಗೌಡ ಅವರನ್ನು ದೇವನಹಳ್ಳಿ ತಾಲೂಕು ಪಂಚಾಯಿತಿ ಇಒ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….