ದೊಡ್ಡಬಳ್ಳಾಪುರ, (ಆ.09): ತಾಲುಕಿನಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ನಗರಸಭೆ ಪೌರಾಯುಕ್ತ ಕೆ.ಜಿ.ಶಿವಶಂಕರ್ ಅವರನ್ನು ಗೌರಿಬಿದನೂರು ನಗರಸಭೆ ಪರಿಸರ ಅಭಿಯಂತರರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಪೌರಾಡಳಿತ ಸೇವೆಯ ವಿವಿಧ ಹುದ್ದೆಗಳ 20 ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ಆದೇಶಿಸಿದ್ದಾರೆ.
ಆದೇಶದ ಅನ್ವಯ ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತ ಕೆ.ಜಿ.ಶಿವಶಂಕರ್ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಚೆನ್ನಗಿರಿ ಪುರಸಭೆ ಮುಖ್ಯಾಧಿಕಾರಿ ಕೆ.ಪರಮೇಶ್ ಅವರನ್ನು ನೇಮಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….