5 ಕಿಮೀ ದೂರದ ಬೆಟ್ಟದಿಂದ ಅಪರಿಚಿತ ಮೃತ ದೇಹ ಹೊತ್ತು ತಂದ ಸೈನಿಕರು, ಪೊಲೀಸ್ ಅಧಿಕಾರಿ..!!

ಚಿಕ್ಕಬಳ್ಳಾಪುರ, (ಆ.09): ಆವಲಗುರ್ಕಿ ಬಳಿಯ ಈಶಾ ಆದಿಯೋಗಿ ಸನ್ನಿಧಾನದ ಬಳಿಯ ಶ್ರೀ ಜಾಲಾರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ  ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸುಮಾರು 50 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯಾಗಿದ್ದು ಗುರುತು ಪತ್ತೆಯಾಗಿಲ್ಲ.

ಹತ್ತಾರು ಕಿಲೋಮೀಟರ್ ಬೆಟ್ಟದ ಸಾಲಿದ್ದು ಸರಿಸುಮಾರು 05-06 ಕಿಲೋಮೀಟರ್ ದೂರದಲ್ಲಿ ಕುರಚಲು ಕಾಡಿನ ಮಧ್ಯೆ ವ್ಯಕ್ತಿಯ ಮೃತದೇಹ ಸಿಕ್ಕಿದೆ.

ಶ್ರೀ ಜಾಲಾರಿ ಲಕ್ಷ್ಮೀನರಸಿಂಹ ಸ್ವಾಮಿ ಬೆಟ್ಟದ ಬಳಿ ತರಬೇತಿಗಾಗಿ ಆರ್ಮಿ ಸೈನಿಕರು ಕ್ಯಾಂಪ್ ಹಾಕಿ ಕೂಂಬಿಂಗ್ ನಡೆಸುತ್ತಿದ್ದಾಗ ಬೆಟ್ಟದಲ್ಲಿ ಸೈನಿಕರ ಕಣ್ಣಿಗೆ ವ್ಯೆಕ್ತಿಯ ಶವ ಕಾಣಿಸಿದೆ. 

ಈ ವಿಷಯವನ್ನು ಚಿಕ್ಕಬಳ್ಳಾಪುರ ಪೋಲಿಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್‌ರ ಗಮನಕ್ಕೆ ಸೈನಿಕರು ತಂದಾಗ, ಪೋಲಿಸ್ ವರಿಷ್ಠಾಧಿಕಾರಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಕೆ.ಪ್ರದೀಪ್ ಪೂಜಾರ್‌ರಿಗೆ ದೂರವಾಣಿ ಮುಖಾಂತರ ತಿಳಿಸಿದ್ದಾರೆ.

ತಕ್ಷಣ ಕಾರ್ಯ ಪ್ರವೃತ್ತರಾದ ಪಿಎಸ್‌ಐ ಪ್ರದೀಪ್ ಪೂಜಾರ್ ತಮ್ಮ ಸಿಬ್ಬಂದಿಗಳಾದ ರಮೇಶ್, ಮಂಜುನಾಥ್ ಮತ್ತು ಸಾಧಿಕ್‌ರೊಂದಿಗೆ ಜಾಲಾರಿ ಲಕ್ಷ್ಮೀನರಸಿಂಹ ಸ್ವಾಮಿ ಬೆಟ್ಟದ ಬಳಿ ತೆರಳಿ ಸೈನಿಕರೊಂದಿಗೆ ಬೆಟ್ಟ ಹತ್ತಿ,ಆರ್ಮಿ ಸೈನಿಕರ ನೆರವಿನಿಂದ ಮೃತದೇಹ ಹೊತ್ತು ಕೆಳಗೆ ತರಲು ಸಾಕಷ್ಟು ಹರಸಾಹಸ ಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪಿಎಸ್‌ಐ ಪ್ರದೀಪ್ ಪೂಜಾರಿ ಹಾಗೂ ಅವರ ಸಿಬ್ಬಂದಿ ಸೇರಿದಂತೆ-ಸೈನಿಕರು ಬೆಟ್ಟದ ಕಾಡಿನಲ್ಲಿ ದೊರೆಯುವ ಮರ ಬಳ್ಳೀಗಳನ್ನು ಬಳಸಿ ಚಟ್ಟದ ಮಾದರಿ ತಯಾರು ಮಾಡಿ, 05-06 ಕಿಲೋಮೀಟರ್ ದುರ್ಗಮ ಹಾದಿಯಲ್ಲಿ ಸಾಕಷ್ಟು ಹರಸಾಹಸ ಪಟ್ಟು ಮೃತದೇಹವನ್ನು ಕೆಳಗೆ ಹೊತ್ತು ತಂದಿದ್ದಾರೆ. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪಿಎಸ್‌ಐ ಪ್ರದೀಪ್ ಪೂಜಾರ್ ಮೃತ ವ್ಯೆಕ್ತಿ ಸುಮಾರು ಐವತ್ತು ವರ್ಷದವರಾಗಿದ್ದು, ಈತ ಈಶ ಪೌಂಡೇಷನ್ ಬಳಿ ಒಡಾಡಿ ಕೊಂಡಿದ್ದ, ಕನ್ನಡ, ತೆಲುಗು ಬಾಷೆ ಮಾತನಾಡುತ್ತಿದ್ದು ಮಾನಸಿಕ ಅಸ್ವಸ್ಥನಂತೆ ವರ್ತನೆ ಇತ್ತೆಂದು ಈತನನ್ನು ಕಂಡವರು ಹೇಳಿದ್ದಾರೆ. 

ಬಹುಷಃ ಈತ  ಈಶ ಪೌಂಡೇಷನ್ ಬಳಿಯಿಂದ ಹತ್ತಿರದಲ್ಲೇ ಇರುವ ಜಾಲಾರಿ ನರಸಿಂಹ ಸ್ವಾಮಿ ಬೆಟ್ಟವನ್ನು ಮೂರು-ನಾಲ್ಕು ದಿನಗಳ ಹಿಂದೆ ಏರಿದ್ದು, ನೀರು,ಊಟ-ತಿಂಡಿ ಇಲ್ಲದೇ ಮೃತಪಟ್ಟಿರ ಬಹುದು ಎಂಬ ಶಂಕೆಯನ್ನು ವ್ಯೆಕ್ತ ಪಡಿಸಿದರು.

ಬೆಟ್ಟದ ಬಳಿ ತರಬೇತಿಗಾಗಿ ಸೈನಿಕರು ಕ್ಯಾಂಪ್ ಹಾಕಿ ಕೂಂಬಿಂಗ್ ನಡೆಸುತ್ತಿದ್ದಾಗ ಬೆಟ್ಟದಲ್ಲಿ ಸೈನಿಕರ ಕಣ್ಣಿಗೆ ಈ ಶವ ಕಂಡು ಬಂದ ಕಾರಣ ಅವರು ನಮ್ಮ  ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್‌ರ ಗಮನಕ್ಕೆ ತಂದ ಕೂಡಲೆ ನನಗೆ ಎಸ್.ಪಿ.ಯವರು ಮಾಹಿತಿ ನೀಡಿದರು.

ಮಾಹಿತಿ ಆಧರಿಸಿ ಸೈನಿಕರನ್ನು ಸಂಪರ್ಕಿಸಿದಾಗ ಅವರು ನನ್ನ ಮೊಬೈಲ್‌ಗೆ ಶವವಿದ್ದ ಲೊಕೇಷನ್ ಕಳುಹಿಸಿದ್ದೇ ಅಲ್ಲದೇ ಬೆಟ್ಟದ ಮೇಲಿನಿಂದ ದುರ್ಗಮ ಕಾಡು ಹಾದಿಯಲ್ಲಿ ಸುಮಾರು ಐದು ಕಿಲೋಮೀಟರ್ ಶವ ಹೊತ್ತು ತರಲು ಸಹಾಯ ಮಾಡಿದರು. ಸಹಾಯ ಮಾಡಿದ ಸೈನಿಕರಿಗೆ ತಮ್ಮ ಕೃತಜ್ಞತೆಗಳನ್ನು ಪ್ರದೀಪ್ ಪೂಜಾರ್ ತಿಳಿಸಿದರು.

ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಅಪರಿಚಿತ ವ್ಯೆಕ್ತಿಯ ಶವವನ್ನು ಜಿಲ್ಲಾಸ್ಪತ್ರೆಯ ಶೈತ್ಯಾಗಾರದಲ್ಲಿ ಇಡಲಾಗಿದ್ದು, ಮೃತರ ವಾರಸುದಾರರು ಯಾರಾದರೂ ಇದ್ದರೆ ತಮ್ಮನ್ನು ಸಂಪರ್ಕಿಸುವಂತೆ ಗ್ರಾಮಾಂತರ ಪೋಲಿಸರು ತಿಳಿಸಿದ್ದಾರೆ. 

ಸೈನಿಕರ ಮತ್ತು ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!