ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, (ಆ.12): ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಕರ್ನಾಟಕ ರಾಜ್ಯ ವಕೀಲರ  ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ ಅಸಮಾನತೆ ತೊಡೆದುಹಾಕಲು ಪ್ರಯತ್ನ ಮಾಡಬೇಕು. ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ ಭಾಷಣವನ್ನು ಎಲ್ಲರೂ ಓದಿದರೆ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತದೆ. ಸಮಾಜ ನನಗೇನು ಮಾಡಿದೆ ಎನ್ನುವುದಕ್ಕಿಂತ ನಾನು ಸಮಾಜಕ್ಕೆ ಏನು ಮಾಡಿದೆ ಎಂದು ಕೇಳಿಕೊಳ್ಳುವುದು ಮುಖ್ಯ. ಆ ದೃಷ್ಟಿಯಿಂದ ಚಿಂತನೆ ಮಾಡಬೇಕು. 

ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಅಗತ್ಯ: ಕೆಳ ನ್ಯಾಯಾಲಯಗಳಲ್ಲಿ ಮೀಸಲಾತಿ ಇದೆ. ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಇಲ್ಲ. ಅಲ್ಲಿ ಮೀಸಲಾತಿ ಜಾರಿಯಾದರೆ ಹೆಚ್ಚು ಉಪಯುಕ್ತ ವಾದ ನ್ಯಾಯದಾನ ನೀಡಲು ಸಾಧ್ಯ ಎಂದು ತಿಳಿಸಿದರು.

ಕಾನೂನಿನ ದೃಷ್ಟಿ ಯಲ್ಲಿ ಎಲ್ಲರೂ ಸಮಾನರು: ಸಂವಿಧಾನ ಬರುವ ಮುನ್ನ ಒಂದು ರೀತಿಯ ನ್ಯಾಯದಾನ ವ್ಯವಸ್ಥೆ ಇತ್ತು. ಸಂವಿಧಾನ ಬಂದ ನಂತರ ಭಿನ್ನವಾಗಿದೆ. ಬ್ರಿಟಿಷರ ಕಾಲದಲ್ಲಿ ಹಾಗೂ ಸ್ವಾತಂತ್ರ್ಯ ದೊರೆತ ನಂತರ ಭಿನ್ನವಾಗಿದೆ. ಅದಕ್ಕೂ ಮುನ್ನ ರಾಜಮಹಾರಾಜರು ನ್ಯಾಯ ತೀರ್ಮಾನ ಮಾಡುತ್ತಿದ್ದರು. ಅವರ ತೀರ್ಮಾನ ಮನುವಾದದ ರೀತಿಯ ಮೇಲೆ ತೀರ್ಮಾನವಾಗುತ್ತಿದ್ದವು. ಜಾತಿ ವ್ಯವಸ್ಥೆ ಬಲವಾಗಿದ್ದುದರಿಂದ ಒಂದೇ ರೀತಿಯ ತಪ್ಪಿಗೆ ಬೇರೆ ಬೇರೆ ಶಿಕ್ಷೆಗಳಿದ್ದವು. ಶ್ರೀಮಂತರಿಗೆ, ಮೇಲ್ಜಾತಿಯವರಿಗೆ, ಕೆಲವರ್ಗದವರಿಗೆ, ಬಡವರಿಗೆ  ಬೇರೆ ರೀತಿಯ ಶಿಕ್ಷೆ ಆಗುತ್ತಿತ್ತು. ಸಂವಿಧಾನ ಬಂದ ನಂತರ ಆರ್ಟಿಕಲ್ 14 ರಲ್ಲಿ  Equality before Law, Equal Protection of Law ಎಂದು ಒಪ್ಪಿಕೊಂಡಿದ್ದೇವೆ. ಕಾನೂನಿನ ದೃಷ್ಟಿ ಯಲ್ಲಿ ಎಲ್ಲರೂ ಸಮಾನರು ಎಂದರು.

ಸಮಾಜದಲ್ಲಿ ದಡ್ಡರೂ ಅಲ್ಲ, ಬುದ್ಧಿವಂತರೂ ಅಲ್ಲ: ಎಲ್ಲರಿಗೂ ಸಮಾನ ನ್ಯಾಯ ದೊರಕಬೇಕೆಂದು ನಮ್ಮ ಸಂವಿಧಾನ ಬಹಳ ಸ್ಪಷ್ಟವಾಗಿ ಹೇಳಿದೆ. ಸುಪ್ರಸಿದ್ಧ ವಕೀಲರನ್ನು ಕರ್ನಾಟಕ ಬಾರ್ ಕೌನ್ಸಿಲ್ ಕಳುಹಿಸಿಕೊಟ್ಟಿರುವುದು ಹೆಮ್ಮೆಯ ವಿಚಾರ. ಬಹಳ ಜನ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ರಾಗಿದ್ದಾರೆ, ತಜ್ಞರಾಗಿದ್ದಾರೆ. ಕರ್ನಾಟಕದಲ್ಲಿ ಬಹಳ ಜನ ಪ್ರತಿಭಾವಂತ ವಕೀಲರಿದ್ದಾರೆ.  ಯಾರು ಸಮಾಜದಲ್ಲಿ ದಡ್ಡರೂ ಅಲ್ಲ, ಬುದ್ಧಿವಂತರೂ ಅಲ್ಲ. ಅವಕಾಶದಿಂದ ವಂಚಿತರಾದವರು ದಡ್ಡರು ಹಾಗೂ ಅವಕಾಶ ದೊರತವರು ಬುದ್ಧಿವಂತರು. ಸಂವಿಧಾನ ಎಲ್ಲರಿಗೂ ಅವಕಾಶ ದೊರೆತಿರುವುದರಿಂದ ಕೆಳವರ್ಗದವರೂ ಕೂಡ ಉನ್ನತ ಸ್ಥಾನಗಳಿಗೆ ಹೋಗಲು ಸಾಧ್ಯವಾಗುತ್ತದೆ. ನಾನು ಮೈಸೂರಿಗೆ ಬಂದಾಗ ಕುರುಬರಲ್ಲಿ ನಾನೊಬ್ಬನೇ ವಕೀಲ ಇದ್ದೆ ಎಂದು ಮುಖ್ಯ ಮಂತ್ರಿಗಳು ಸ್ಮರಿಸಿದರು. 

ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಾಲದಲ್ಲೂ ಇದ್ದಾರೆ: ಎಲ್ಲಾ ಮೇಲ್ವರ್ಗದವರೇ ವಕೀಲರಾಗಿದ್ದರು. ಕೆಳಜಾತಿಯವರಿಗೆ ವಕೀಲರಾಗುವುದು ಬೇಡ ಎಂದೂ ಹೇಳುತ್ತಿದ್ದರು. ನನಗೇ ಇದರ ಅನುಭವವಾಗಿದೆ ಎಂದರು.

ಶಾನುಭೋಗರೊಬ್ಬರು ಮಗನನ್ನು ಕಾನೂನು ಕಲಿಸಬೇಡ ಎಂದು ತಮ್ಮ ತಂದೆಗೆ ಹೇಳಿದ್ದರು. ಅವರ ಮಾತು ಕೇಳಿ ಕಾನೂನು ಓದದೇ ಹೋಗಿದ್ದರೆ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದರು. 

ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಾಲದಲ್ಲೂ ಇದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಸಮುದಾಯದಿಂದ ಬಂದವರು. ಅವರಿಗೆ ಬರೋಡಾ ಮಹಾರಾಜರು ವಿದೇಶಕ್ಕೆ ತೆರಳಲು ಅವಕಾಶ ನೀಡದೆ ಹೋಗಿದ್ದರೆ, ಇಂಥ ಸಂವಿಧಾನ ಸಿಗುತ್ತಿರಲಿಲ್ಲ. ಸಂವಿಧಾನವನ್ನು ವಿರೋಧಿಸುವವರೂ ಇದ್ದಾರೆ ಸಮಾಜದಲ್ಲಿ. ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳ ತಲೆ ಕೆಡಿಸುವ ಕೆಲಸ ಮಾಡುತ್ತಿದ್ದಾರೆ. 

ಎಳೆ ವಯಸ್ಸಿನಲ್ಲಿ ಸಂವಿಧಾನದ ವಿರುದ್ಧ ದಾರಿತಪ್ಪಿಸುತ್ತಾರೆ.  ಬಡವರಿಗೆ , ದಲಿತರಿಗೆ, ಅವಕಾಶ ವಂಚಿತರಿಗೆ ನ್ಯಾಯ ಸಿಗಬೇಕು. ಸಂವಿಧಾನದ ವಿರುದ್ಧ ಇರುವವರಿಂದ ನ್ಯಾಯ, ಬಡವರಿಗೆ ರಕ್ಷಣೆ ಸಿಗಲು ಸಾಧ್ಯವೇ? ಈ ಬಗ್ಗೆ ಗಂಭೀತವಾಗಿ ಚರ್ಚೆ ಮಾಡಬೇಕಿದೆ. ಇಂಥ ಸಮಾವೇಶ ಗಳನ್ನು  ಮಾಡುವಾಗ ಈ ವಿಚಾರಗಳ ಬಗ್ಗೆ ಚರ್ಚಿಸಬೇಕು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!