ಹರಿತಲೇಖನಿ ದಿನಕ್ಕೊಂದು ಕಥೆ: ಚಂದನದ ಮರದ, ಕರಕುಶಲ ಕೆತ್ತನೆಯನ್ನು ಮಾಡಲಾಗಿರುವ, ಸುಂದರವಾದ ಮಂಚವನ್ನೇಕೆ ಮುರಿದ ಕರ್ಣ..?

ಕರ್ಣ ದುರ್ಯೋಧನನ ಪರಮಾಪ್ತ ಸ್ನೇಹಿತನಾಗಿದ್ದನು. ಆತ ಇಂದಿಗೂ ಒಬ್ಬ ಶ್ರೇಷ್ಟ ದಾನಿ ಎಂದು ಪ್ರಸಿದ್ಧನಾಗಿದ್ದಾನೆ.

ಅವನ ಬಳಿ ಸಹಾಯ ಬೇಡಿ ಬಂದ ಯಾರನ್ನೂ ಅವನು ಬರಿಗೈಯಲ್ಲಿ ಕಳಿಸುತ್ತಿರಲಿಲ್ಲ. ಅವನು ಪ್ರತಿ ದನ ನದಿಗೆ ಸ್ನಾನ ಮಾಡಲು ಹೋಗುತ್ತಿದ್ದನು. ನೀರಿನಲ್ಲಿ ಇಳಿದು ಸೂರ್ಯನಿಗೆ ಅರ್ಘ್ಯವನ್ನು ನೀಡುತ್ತಿದ್ದನು ಮತ್ತು ಅವನ ಬಳಿ ಬಂದ ಯಾಚಕರಿಗೆ ಬೇಡಿದನ್ನು ನೀಡುತ್ತಿದ್ದನು.

ಒಂದು ಸಲ ಭಗವಾನ ಶ್ರೀಕೃಷ್ಣ ಮತ್ತು ಅರ್ಜುನ ಕುಳಿತು ಮಾತಾಡುತ್ತಿದ್ದರು. ಮಾತಾಡುತ್ತಾ ಮಾತಾಡುತ್ತಾ ಕರ್ಣನ ದಾನಶೂರತೆಯ ಬಗ್ಗೆ ಚರ್ಚೆಯಾಯಿತು. ಶ್ರೀ ಕೃಷ್ಣನು ಕರ್ಣನ ದಾನಶೂರತೆಯನ್ನು ಪ್ರಶಂಸಿಸಿದನು. ಶ್ರೀಕೃಷ್ಣನು ಹೇಳಿದನು, “ಕರ್ಣನಂತ ಉದಾರಿ ವ್ಯಕ್ತಿಯು ಯಾರೂ ಇಲ್ಲ.” 

ಇದನ್ನು ಕೇಳಿ ಅರ್ಜುನನು ಆಶ್ಚರ್ಯಚಕಿತನಾದನು ಮತ್ತು ಹೇಳಿದನು, “ಶ್ರೀಕೃಷ್ಣಾ, ಧರ್ಮರಾಜ ಕೂಡ ದಾನವೀರನೇ ಇದ್ದಾನೆ”. ಹಾಗಿದ್ದರೆ ಯಾರು ಹೆಚ್ಚು ದಾನವೀರರಿದ್ದಾರೆ ಎಂದು ಅವರು ಚರ್ಚಿಸಲು ಪ್ರಾರಂಭಿಸಿದರು. ಆಗ ಶ್ರೀಕೃಷ್ಣನು, “ಸರಿ ಹಾಗಿದ್ದರೆ, ನಾಳೆಯೇ ನಾವು ಕರ್ಣ ಮತ್ತು ಧರ್ಮರಾಜರ ಬಳಿ ಹೋಗಿ ಪರೀಕ್ಷಿಸೋಣ” ಎಂದು ಹೇಳಿದರು.

ಆಗ ಮಳೆಗಾಲವಿತ್ತು. ಮರುದಿನ ಸೂರ್ಯನು ಉದಯಿಸುತ್ತಿದ್ದಂತೆಯೇ ಶ್ರೀಕೃಷ್ಣ ಮತ್ತು ಅರ್ಜುನರು ಧರ್ಮರಾಜರ ಬಳಿಗೆ ಹೋದರು. ಅವರನ್ನು ನೋಡಿ ಧರ್ಮರಾಜನಿಗೆ ತುಂಬಾ ಆನಂದವಾಯಿತು. ಅವರನ್ನು ಆದರದಿಂದ ಸತ್ಕರಿಸಿದನು ಮತ್ತು ಅಲ್ಲಿಗೆ ಆಗಮಿಸಿದ ಕಾರಣವನ್ನು ಕೇಳಿದನು. ಆಗ ಶ್ರೀಕೃಷ್ಣನು ಹೇಳಿದನು, “ರಾಜ್ಯದಲ್ಲಿ ತಕ್ಷಣ ಒಂದು ಬೃಹತ್ ನಿರ್ಮಾಣ ಕಾರ್ಯ ಮಾಡಬೇಕಿದೆ. ಅದಕ್ಕಾಗಿ ಕಟ್ಟಿಗೆ ಬೇಕಾಗಿದೆ”. ತಕ್ಷಣ ಧರ್ಮರಾಯನು ತನ್ನ ಸೇವಕರನ್ನು ಕರೆದನು ಮತ್ತು ನಿರ್ಮಾಣಕ್ಕಾಗಿ ಅತ್ಯಂತ ಒಳ್ಳೆಯ ಗುಣಮಟ್ಟದ ಕಟ್ಟಿಗೆಯನ್ನು ತನ್ನಿರಿ ಎಂದು ಆಜ್ಞಾಪಿಸಿದನು. ತುಂಬಾ ಹೊತ್ತಾದರೂ ಸೇವಕರು ಹಿಂತಿರುಗಲಿಲ್ಲ. 

ಸ್ವಲ್ಪ ಸಮಯದ ನಂತರ ಸೇವಕರು ತಲೆಯನ್ನು ಬಗ್ಗಿಸಿ ಖಾಲಿ ಕೈಯಲ್ಲಿ ಹಿಂತಿರುಗಿದರು. ಆಗ ಧರ್ಮರಾಜನು ಕೇಳಿದನು, “ಏನಾಯಿತು? ಕಟ್ಟಿಗೆಯು ಸಿಗಲಿಲ್ಲವೇ?”. ಸೇವಕರು ಹೇಳಿದರು, “ಮಳೆಯ ಕಾರಣದಿಂದಾಗಿ ಎಲ್ಲಾ ಕಟ್ಟಿಗೆಗಳು ಒದ್ದೆಯಾಗಿ ಬಿಟ್ಟಿದೆ. ಹಾಗಾಗಿ ನಾವು ಕಟ್ಟಿಗೆಯನ್ನು ತರಲಿಲ್ಲ”. ಧರ್ಮರಾಯನು ವಿಧಿ ಇಲ್ಲದೇ ಅರ್ಜುನ ಮತ್ತು ಕೃಷ್ಣನಿಗೆ ಕಟ್ಟಿಗೆ ಸಿಗಲಿಲ್ಲ ಎಂದು ತಿಳಿಸಿದನು.

ಅರ್ಜುನ ಮತ್ತು ಕೃಷ್ಣ ಹಿಂತಿರುಗಿದರು. ನಂತರ ಅವರು ಕರ್ಣನ ಬಳಿ ಹೋದರು. ಕರ್ಣನು ಅವರಿಗೆ ಆದರದಿಂದ ಕೂರಲು ಹೇಳಿದನು ಮತ್ತು ಅವರ ಕ್ಷೇಮ ಸಮಾಚಾರ ವಿಚಾರಿಸಿಕೊಂಡನು. ಆಗ ಅರ್ಜುನನು ಕಟ್ಟಿಗೆಯ ಕುರಿತು ಹೇಳಿದನು. ಆಗ ಕರ್ಣನು, “ಇಷ್ಟೇ ತಾನೇ? ಇದರಲ್ಲಿ ಇಷ್ಟು ಚಿಂತೆ ಮಾಡಲು ಏನಿದೆ?” ಎಂದು ಹೇಳುತ್ತಾ ತನ್ನ ಸೇವಕರನ್ನು ಕಟ್ಟಿಗೆ ತರಲು ಕಳಿಸಿದನು. 

ಸ್ವಲ್ಪ ಸಮಯದಲ್ಲಿ ಆ ಸೇವಕರು ಹಿಂತಿರುಗಿದರು ಮತ್ತು ಹೇಳಿದರು, “ಮಳೆಯಲ್ಲಿ ಎಲ್ಲಾ ಕಟ್ಟಿಗೆಯು ಒದ್ದೆಯಾದ ಕಾರಣ ಯಾವುದೇ ಕಟ್ಟಿಗೆ ಸಿಗಲಿಲ್ಲ”. 

ಇದನ್ನು ಕೇಳಿದ ಕರ್ಣನು ಅರಮನೆಯ ಒಳಗೆ ಹೋದನು ಮತ್ತು ಎಷ್ಟು ಹೊತ್ತಾದರೂ ಹೊರಗೆ ಬರದಿದ್ದಾಗ ಶ್ರೀಕೃಷ್ಣನು ಅರ್ಜುನನನ್ನು ಕರೆದುಕೊಂಡು ಒಳಗೆ ಹೋದನು. ಅಲ್ಲಿ ನೋಡಿದರೆ ಕರ್ಣನು ತನ್ನ ಮಂಚದ ಮರವನ್ನು ಕಡಿಯುತ್ತಿದ್ದನು. ಅಕ್ಕಪಕ್ಕದಲ್ಲಿ ಅನೇಕ ಮರದ ಸಾಮಾನು ಮುರಿದು ಇಡಲಾಗಿತ್ತು. 

ಆಗ ಅವರಿಗೆ ತಿಳಿಯಿತು ಕರ್ಣ ಇಷ್ಟು ಹೊತ್ತು ಏನು ಮಾಡುತ್ತಿದ್ದನೆಂದು. ಅರ್ಜುನನು ಕೇಳಿದನು, “ಕರ್ಣಾ, ಇಷ್ಟು ಸಣ್ಣ ವಿಷಯಕ್ಕಾಗಿ ನೀನು ಚಂದನದ ಮರದ, ಕರಕುಶಲ ಕೆತ್ತನೆಯನ್ನು ಮಾಡಲಾಗಿರುವ, ಸುಂದರವಾದ ಮಂಚವನ್ನೇಕೆ ಮುರಿದೆ?”. 

ಆಗ ಕರ್ಣನು ಹೇಳಿದನು, “ಈ ವಸ್ತುಗಳನ್ನು ಪುನಃ ಮಾಡಿಸಿಕೊಳ್ಳಬಹುದು ಆದರೆ ಯಾರಿಗಾದರು ಸಹಾಯ ಮಾಡುವಂತಹ ಅವಕಾಶವನ್ನು ಕಳೆದುಕೊಂಡರೆ ಅದಕ್ಕಿಂತ ದುಃಖದ ವಿಷಯವೇನಿದೆ?”.

ಕೃಪೆ: ಹಿಂದೂ ಜಾಗೃತಿ

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!