ವಿದೇಶಿ ಪ್ರವಾಸದಿಂದ ಮರಳಿದ ಹೆಚ್.ಡಿ.ಕೆ; ವಿದೇಶದಲ್ಲೇ ಇರಲಿ ಎಂದು ಕೆಣಕಿದ್ದ ಕೃಷಿ ಸಚಿವರಿಗೆ ತಿರುಗೇಟು

ಬೆಂಗಳೂರು, (ಆ.14): ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಹೇಳಿದ್ದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತಿರುಗೇಟು ನೀಡಿದ್ದಾರೆ.

ಭಾನುವಾರ ತಡರಾತ್ರಿ ವಿದೇಶಿ ಪ್ರವಾಸದಿಂದ ಬೆಂಗಳೂರು ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಮ್ಮನ್ನು ಎದುರುಗೊಂಡ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು.

ಸಚಿವರ ಹೇಳಿಕೆಯ ಬಗ್ಗೆ ಕೆಂಡಾಮಂಡಲರಾದ ಮಾಜಿ ಸಿಎಂ, ‘ಇಲ್ಲಿ ಲೂಟಿ ಹೊಡೆಯೋಕೆ ನಮ್ಮನ್ನ ಬಿಟ್ಬಿಡಿ, ನೀವು ವಿದೇಶದಲ್ಲಿ ಇರಿ ಅಂತ ಸಲಹೆ ಕೊಟ್ಟ ಹಾಗಿದೆ. ಏಕೆಂದರೆ, ಮಾನ ಮಾರ್ಯಾದೆ ಇಲ್ಲದೆ ಇಲ್ಲಿ ದರೋಡೆ ಮಾಡಿಕೊಂಡು ಕೂತಿದ್ದಾರೆ. ನಾನು ಇಲ್ಲಿದ್ದರೆ ಅವರಿಗೆ ಆಗ್ತೀನಿ ಅಲ್ಲವೇ? ಎಂದರು.

ವಿದೇಶಿ ಪ್ರವಾಸಕ್ಕೆ ಅವರಿಂದ ವ್ಯವಸ್ಥೆ ಮಾಡಿಸಿಕೊಂಡು ಹೋಗಬೇಕಾ ನಾನು? ಆ ಪಾಪದ ಹಣ ತಗೊಂಡು ಹೋಗಬೇಕಾ? ವಿದೇಶಕ್ಕೆ ಹೋಗುವ ಯೋಗ್ಯತೆಯೂ ನನಗಿಲ್ಲವೇ? ಕಳೆದ 12 ವರ್ಷದಿಂದ ಪಕ್ಷದ ಸಂಘಟನೆಗೆ ಸಮಯ ಮೀಸಲಿಟ್ಟಿದ್ದೆ. ಎಲ್ಲೂ ಹೊರಗೆ ಹೋಗಿ ಬರುವ ಅವಕಾಶ ಸಿಕ್ಕಿರಲಿಲ್ಲ. ದೇಶ ಸುತ್ತು, ಕೋಶ ಓದು ಅಂತಾ ಹಿರಿಯರ ಮಾತಿದೆ. 

ಯಾವ ದೇಶದಲ್ಲಿ ಏನೇನಿದೆ ಅಂತಾ ತಿಳ್ಕೊಬೇಕಲ್ಲಾ? ಅಲ್ಲಿ ಯಾವ ರೀತಿ ಇದೆ, ನಮ್ಮಲ್ಲಿ ಯಾವ ರೀತಿ ಇದೆ ನೋಡಬೇಕಲ್ಲಾ. ಕಾಂಬೋಡಿಯಾಗೆ ಸ್ನೇಹಿತರ ಆಹ್ವಾನ ಇತ್ತು, ಹೋಗಿದ್ದೆ. ಅಲ್ಲಿನ ಸುವಿಶಾಲ ಪ್ರದೇಶದಲ್ಲಿ ಕಟ್ಟಿರುವ ಆಂಕರ್ ವಾಟ್ ಎಂಬ ಅದ್ಭುತವಾದ ದೇವಸ್ಥಾನ ಇದೆ. ನಮ್ಮ ದೇಶದಲ್ಲೂ ಇಲ್ಲ ಅಂತ ದೇವಸ್ಥಾನ. ಬ್ರಹ್ಮ, ವಿಷ್ಣು, ಮಹೇಶ್ವರ ತ್ರಿಮೂರ್ತಿಗಳು ಇರುವ ದೇವಸ್ಥಾನ. ಅದನ್ನು ಕಂಡು ನಾನು ವಿಸ್ಮಿನಾದೆ ಎಂದರು.

ಇತ್ತೀಚಿಗೆ ಆ ದೇಶ ಆರ್ಥಿಕವಾಗಿ ವೇಗವಾಗಿ ಬೆಳೆಯುತ್ತಿದೆ. ಒಂದು ಕಾಲದಲ್ಲಿ ಭಾರೀ ಸಂಕಷ್ಟದಲ್ಲಿ ಇದ್ದ ಆ ದೇಶ ಈಗ ತುಂಬ ಅದ್ಭುತವಾಗಿ ಬೆಳೆಯುತ್ತಿದೆ. ಕಾಂಬೋಡಿಯಾದ ಜಿಡಿಪಿ ಶೇ.7.7 ರಷ್ಟಿದೆ ಎಂದು ಅಲ್ಲಿನ ಮಂತ್ರಿಗಳೊಬ್ಬರು ಹೇಳಿದರು. ಸಾರ್ವಜನಿಕರ ಹಣದ ವಿನಿಯೋಗದ ಬಗ್ಗೆ ಅಲ್ಲಿ ಕಠಿಣ ನಿಯಮಗಳಿವೆ. ನಮ್ಮಲ್ಲಿ ಹಣಕ್ಕೆ ಕೊರತೆ ಇಲ್ಲ, ಈಗ ಲೂಟಿ ಮಾಡ್ತಾ ಇದ್ದಾರೆ ಇವರು ಎಂದು ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.

ಈಗ ಮಧ್ಯಪ್ರದೇಶದಲ್ಲಿಯೂ 40% ಸರ್ಕಾರ ಅಂತಾ ಹೇಳಿ ಪೋಸ್ಟರ್ ಹಾಕ್ಕೊಂಡಿದ್ದಾರೆ. ಈ ದೇಶವನ್ನು ಇವರು ಎಲ್ಲಿಗೆ ತಗೊಂಡು ಹೋಗ್ತಿದ್ದಾರೆ? ಎಂದು ಅವರು ಕಿಡಿಕಾರಿದರು.

ರಾಜ್ಯಪಾಲರ ಬಳಿ ಏಕೆ ಹೋದರು?: ಕೃಷಿ ಅಧಿಕಾರಿಗಳು ರಾಜ್ಯಪಾಲರ ಬಗ್ಗೆ ಬರೆದಿರುವ ಪತ್ರದ ಪ್ರತಿಕ್ರಿಯೆ ನೀಡಿದ ಅವರು; ತಮ್ಮ ವಿರುದ್ಧ ಬರೆದಿರುವ ಪತ್ರ ನಕಲಿ ಎನ್ನುವುದಾದರೆ ಕೃಷಿ ಸಚಿವರು ರಾಜ್ಯಪಾಲರ ಬಳಿಗೆ ಏಕೆ ಹೋದರು? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ನಾನು ಆ ಪ್ರಕರಣದ ಬಗ್ಗೆ ಚರ್ಚೆಯನ್ನೆ ಮಾಡಿಲ್ಲ. ಎಲ್ಲೂ ಆ ಬಗ್ಗೆ ಮಾತನಾಡಿಲ್ಲ. ನನ್ನ ಹೆಸರು ಯಾಕೆ  ತಳುಕು ಹಾಕುತ್ತಿದ್ದಾರೆ ಅಲ್ಲಿ? ಅವರಿಗೆ ಅಲ್ಲೂ ನನ್ನ ಹೆಸರೇ ಬೇಕು, ಯಾಕೆಂದರೆ ನನ್ನದೇ ಭಯ ಇರೋದು ಅವರಿಗೆ ಎಂದು ಕುಟುಕಿದರು.

ಮೊದಲು ಪ್ರಾಮಾಣಿಕವಾಗಿ ನಡೆದುಕೊಳ್ಳುವುದನ್ನು ಕಲಿಯಬೇಕು. ಪ್ರಾಮಾಣಿಕವಾಗಿ ನಡೆದುಕೊಂಡರೆ  ಇಂತಹ ಪರಿಸ್ಥಿತಿ ಏನಕ್ಕೆ ಬರುತ್ತದೆ? ಮಂತ್ರಿಗಿರಿ ಸಿಕ್ಕಿದೆ ಅಂತಾ ಹಗಲು ದರೋಡೆ ಮಾಡೋದಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಅವರು ಹೇಳಿದರು.

ಮಾಜಿ ಸಚಿವ ಸಾ.ರಾ.ಮಹೇಶ್, ಮಾಜಿ ಶಾಸಕ ಮಂಜುನಾಥ್ ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!