ದೊಡ್ಡಬಳ್ಳಾಪುರದಲ್ಲಿ ಹೂವು ಮಾರುಕಟ್ಟೆ, ಹರಾಜು ಕೇಂದ್ರಕ್ಕೆ ಚಾಲನೆ

ದೊಡ್ಡಬಳ್ಳಾಪುರ, (ಆ.21): ರಾಜ್ಯದಲ್ಲೇ ಮಾದರಿ ಹೂವಿನ ಮಾರುಕಟ್ಟೆಯಾಗಿ ಅಭಿವೃದ್ಧಿ ಹೊಂದುವ ಮುನ್ಸೂಚನೆಗಳು ಇವೆ. ತಾಲ್ಲೂಕಿನ ಎಲ್ಲಾ ಹೂವು ಬರೆಳೆಗಾರರು ಎಪಿಎಂಸಿಯಲ್ಲಿ ಪ್ರಾರಂಭವಾಗಿರುವ ಹೂವಿನ ಮಾರುಕಟ್ಟೆಯ ಹರಾಜಿನಲ್ಲೇ ಭಾಗವಹಿಸುವ ಮೂಲಕ ಸ್ಪರ್ಧಾತ್ಮಕ ಬೆಲೆ ಪಡೆಯಬೇಕು ಎಂದು ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಸನ್ನ ಹೇಳಿದರು.

ಅವರು ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮವಾರದಿಂದ ನೂತನವಾಗಿ ಹೂವು ಬೆಳೆಗಾರರು ಹಾಗೂ ಹೂವು ಮಾರಾಟ ವರ್ತಕರ ವೇದಿಕೆ ವತಿಯಿಂದ ಪ್ರಾರಂಭವಾಗಿರುವ ಹೂವು ಮಾರುಕಟ್ಟೆ ಹರಾಜು ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಲ್ಲೂಕಿನಲ್ಲಿ ಬೆಳೆಯಲಾಗುತ್ತಿರುವ ಹೂವು ದೇಶದ ನಾನಾ ರಾಜ್ಯಗಳು ಸೇರಿದಂತೆ ವಿಶ್ವದ ಅನೇಕ ದೇಶಗಳಿಗೆ ಬೇರೆಡೆಯ ಮಾರುಕಟ್ಟೆಗಳ ಹರಾಜಿನ ಮೂಲಕ ರಫ್ತಾಗುತ್ತಿವೆ. ದೇವನಹಳ್ಳಿ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಇಲ್ಲಿನ ಎಪಿಎಂಸಿಗೆ ಸಮೀಪವೇ ಇರುವುದರಿಂದ ಹೂವು ಮಾರುಕಟ್ಟೆ ಅಭಿವೃದ್ದಿಗೆ ಸಹಕಾರಿಯಾಗಲಿದೆ.

ಭವಿಷ್ಯದಲ್ಲಿ ಹೂವಿನ ಮಾರುಕಟ್ಟೆ ಮತ್ತಷ್ಟು ವಿಸ್ತಾರವಾಗಿ ಬೆಳೆಯಲು ಎಲ್ಲಾ ರೈತರ ಸಹಕಾರ ಮುಖ್ಯವಾಗಿದೆ. ಇಷ್ಟು ವರ್ಷಗಳಿಂದ ಯಾರೋ ಎಲ್ಲಿಯೋ ಕುಳಿತು ನಿಗದಿ ಮಾಡುತ್ತಿದ್ದ ಬೆಲೆಗೆ ನಮ್ಮ ಹೂವು ಮಾರಾಟ ಮಾಡುವ ವ್ಯವಸ್ಥೇ ಇತ್ತು. ಇಂದಿನಿಂದ ನಮ್ಮ ಹೂವಿನ ಗುಣಮಟ್ಟಕ್ಕೆ ಅನುಗುಣವಾಗಿ ಸ್ಥಳದಲ್ಲೇ ಬಹಿರಂಗ ಹರಾಜಿನ ಮೂಲಕ ಬೆಲೆ ನಿರ್ಣಯವಾಗಲಿದೆ. ಪ್ರಾರಂಭದಲ್ಲಿ ಗ್ರಾಹಕರ ಕೊರತೆಯಿಂದಾಗಿ ಬೆಲೆ ಕಡಿಮೆಯಾಗಬಹುದು. ಆದರೆ ಭವಿಷ್ಯದಲ್ಲಿ ಹೂವು ಬೆಳೆಗಾರರಿಗೆ ಉತ್ತಮ ಬೆಲೆ, ಸೌಲಭ್ಯಗಳು ದೊರೆಯಲಿವೆ ಎಂದರು.

ರೈತರು ಬೆಳೆಗಾರರಾಗಿಯಷ್ಟೇ ಉಳಿಯದೆ ಮಾರಾಟಗಾರರು ಆದಾಗ ಮಾತ್ರ ಗ್ರಾಹಕರಿಗೆ ಕಡಿಮೆ ದರದಲ್ಲಿ ಹೂವು, ಹಣ್ಣು ಹಾಗೂ ತರಕಾರಿ ದೊರೆಯುವಂತೆ ಆಗಲಿದೆ. ಈ ದಿಸೆಯಲ್ಲಿ ರೈತರು ಹೂವುಗಳನ್ನು ತಾವೇ ಮಾರಾಟ ಮಾಡಲು ಅಗತ್ಯ ಇರುವ ಸ್ಥಳ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ದೊರೆತಿದೆ. ಒಗ್ಗಟ್ಟಿನಿಂದ ರೈತರು ಸೂಕ್ತ ರೀತಿಯಲ್ಲಿ ಬಳಸಿಕೊಂಡಾಗ ಮಾತ್ರ  ದಲ್ಲಾಳಿಗಳ ಹಾವಳಿಯಿಂದ ಬಿಡುಗಡೆ ಹೊಂದಲು ಸಾಧ್ಯವಾಗಲಿದೆ ಎಂದರು.

ಹೂವು ಮಾರಾಟಗಾರ ಕೆ.ಆರ್.ಅಶ್ವತ್ಥ್ ಮಾತನಾಡಿ, ಹೂವು ಬೆಳೆಗಾರರು ಉಳಿದರೆ ಮಾತ್ರ ವರ್ತಕರು ಜೀವನ ನಡೆಸಲು ಸಾಧ್ಯ. ಇಷ್ಟು ದಿನಗಳ ಕಾಲ ನಗರದ ಹೃದಯಭಾಗದಲ್ಲಿ ಕಾರ್ಯನಿರ್ವಹಿಸುತ್ತ ಹೂವಿನ ಮಾರುಕಟ್ಟೆ ಈಗ ಬೆಳೆದಿರುವ ಜನ ಸಂಖ್ಯೆ, ಹೂವು ಬೆಳೆಗಾರರ ಸಂಖ್ಯೆಗೆ ತಕ್ಕಷ್ಟು ವಿಸ್ತಾರವಾಗಿ ಇಲ್ಲ. ಎಪಿಎಂಸಿ ಆವರಣದಲ್ಲಿ ಹೂವು ಮಾರಾಟಕ್ಕೆ ಪ್ರತ್ಯೇಕ ಮಾರುಕಟ್ಟೆ ಪ್ರಾರಂಭವಾಗಿರುವುದು ಸ್ವಾಗತಾರ್ಹ. ಇಲ್ಲಿ ಹೂವು ಮಾರಾಟವಾಗದೇ ಉಳಿದರೆ ರೈತರು ಭಯಪಡದೆ ಬೆಂಗಳೂರಿಗೆ ಕಳುಹಿಸಿಕೊಡಿ ನಾನು ಮಾರಾಟ ಮಾಡಿಕೊಡುತ್ತೇನೆ. ಆದರೆ ನಮ್ಮೂರಿನ ಎಪಿಎಂಸಿಯಲ್ಲಿ ಹೂವು ಮಾರುಕಟ್ಟೆ ಅಭಿವೃದ್ಧಿಗೆ ಮಾರಾಟಗಾರರಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಪರಿಸರವಾದಿ ಕೆ.ಗುರುದೇವ್ ಮಾತನಾಡಿ, ರೈತರು ಹಾಗೂ ಕೃಷಿಗೆ ಹೆಚ್ಚಿನ ಮಾನ್ಯತೆ ದೊರೆಯುವ ದಿನಗಳು ಶೀಘ್ರದಲ್ಲೇ ಬರಲಿವೆ. ರೈತರು ಎದೆಗುಂದೆ ತಾವು ಬೆಳೆದ ಬೆಳೆಗಳನ್ನು ನೇರವಾಗಿ ಗ್ರಾಹಕರಿಗೆ ತಲುಪವಂತೆ ಮಾಡುವ ವಿಧಾನಗಳ ಕಡೆಗೆ ಪ್ರಥಮ ಆದ್ಯತೆ ನೀಡಬೇಕು ಎಂದರು.

ಉದ್ಘಾಟ ಸಮಾರಂಭದಲ್ಲಿ ರಾಜ್ಯ ರೈತ ಸಂಘಧ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್, ಮುಖಂಡರಾದ ಪ್ರಕಾಶ್, ಹನುಮಂತರಾಯಪ್ಪ, ರುದ್ರೇಶ್, ವಾಸು, ಶಿವರಾಜ್, ಉಮಾದೇವಿ, ಮಹಾದೇವ್, ಸಿದ್ದಲಿಂಗಪ್ಪ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!