ಈ ದಿನದ ವಿಶೇಷ: ಖಾಯಂ ಮುಖ್ಯಮಂತ್ರಿ ಚಂದ್ರು ಜನ್ಮದಿನ

ಹಿರಿಯ ನಟ, ರಂಗಕರ್ವಿು, ರಾಜಕಾರಣಿ ಡಾ. ಮುಖ್ಯಮಂತ್ರಿ ಚಂದ್ರು (ಮೂಲ ಹೆಸರು ಚಂದ್ರಶೇಖರ). ಕರ್ನಾಟಕದ ‘ಖಾಯಂ ಮುಖ್ಯಮಂತ್ರಿ’ ಎಂದೇ ಜನಪ್ರಿಯರಾಗಿರುವ ಅವರು ಇತ್ತೀಚೆಗಷ್ಟೇ 70ಕ್ಕೆ ಕಾಲಿಟ್ಟಿದ್ದಾರೆ. 

ರಂಗಭೂಮಿ ಮತ್ತು ಚಲನಚಿತ್ರಗಳಲ್ಲಿ ಪ್ರಸಿದ್ಧರಾಗಿದ್ದಾರೆ. ಇವರ ಮೂಲ ಹೆಸರು ಚಂದ್ರಶೇಖರ್. ರಾಜಕೀಯದಲ್ಲೂ ಗಣನೀಯ ಹೆಸರಾಗಿದ್ದಾರೆ.

ಚಂದ್ರು ಅವರು ಹುಟ್ಟಿದ್ದು ಆಗಸ್ಟ್ 28,1953 ರಂದು ನೆಲಮಂಗಲ ತಾಲೂಕಿನ ಹೊನ್ನಸಂದ್ರದಲ್ಲಿ. ತಂದೆ ಎನ್.ನರಸಿಂಹಯ್ಯ, ತಾಯಿ ತಿಮ್ಮಮ್ಮ.. ಚಂದ್ರು ಮೂಲ ಹೆಸರು ಚಂದ್ರಶೇಖರ್. ಮನೆಯಲ್ಲಿ ಬಡತನ ಜೊತೆಗೆ ಮಗ ತುಂಬಾ ತುಂಟ. ಹೀಗಾಗಿ ತಂದೆ ತಾಯಂದಿರು ಮಗನನ್ನು ಸಿದ್ಧಗಂಗಾ ಮಠಕ್ಕೆ ಸೇರಿಸಿದರು. ಮುಂದೆ ಅವರು ಬಿಎಸ್ಸಿ ಓದಿದರು.

ಚಂದ್ರು ಅವರ ವೃತ್ತಿಬದುಕಿಗೆ ತಿರುವು ನೀಡಿದ್ದು ‘ಮುಖ್ಯಮಂತ್ರಿ’ ನಾಟಕ. ಈ ನಾಟಕದಲ್ಲಿನ ಮುಖ್ಯಮಂತ್ರಿ ಪಾತ್ರ ಅವರಿಗೆ ಅದೆಷ್ಟು ಜನಪ್ರಿಯತೆ ತಂದುಕೊಟ್ಟಿತು ಎಂದರೆ ಜನ ಅವರನ್ನು ಸದಾ ‘ಮುಖ್ಯಮಂತ್ರಿ’ ಎಂದೇ ಗುರುತಿಸುತ್ತಾರೆ. ಈ ನಾಟಕದಲ್ಲಿ ಅವರು ನಟಿಸಿದ್ದೇ ಆಕಸ್ಮಿಕವಂತೆ. ‘ಮುಖ್ಯಮಂತ್ರಿ’ ನಾಟಕದ ಕುರಿತೇ ಆತ್ಮಚರಿತ್ರೆಯಲ್ಲಿ ಒಂದು ಅಧ್ಯಾಯವನ್ನು ಚಂದ್ರು ಬರೆದಿದ್ದಾರೆ. ಮುಂಚೆ ಮುಖ್ಯಮಂತ್ರಿ ಪಾತ್ರವನ್ನು ಟಿ.ಎಸ್. ಲೋಹಿತಾಶ್ವ ಮಾಡಬೇಕಿತ್ತಂತೆ. 

ಚಂದ್ರು ನಿರ್ದೇಶಿಸಬೇಕಿತ್ತಂತೆ. ಆದರೆ, ಅನಾರೋಗ್ಯದಿಂದಾಗಿ ಲೋಹಿತಾಶ್ವ ಅವರಿಗೆ ನಟಿಸುವುದಕ್ಕೆ ಸಾಧ್ಯವಾಗದಿದ್ದರಿಂದ, ಅನಿವಾರ್ಯವಾಗಿ ಮುಖ್ಯಮಂತ್ರಿ ಪಾತ್ರವನ್ನು ಮಾಡುವುದಕ್ಕೆ ಚಂದ್ರು ಒಪ್ಪಬೇಕಾಯಿತಂತೆ.

ಮುಖ್ಯಮಂತ್ರಿ ಚಂದ್ರು ಕಳೆದ 44 ವರ್ಷಗಳಿಂದ ನೇಮಕಗೊಳ್ಳದ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಿದ್ದಾರೆ. ‘ಮುಖ್ಯಮಂತ್ರಿ’ ಹೆಸರಿನ ನಾಟಕದಲ್ಲಿ ಅವರು ಮುಖ್ಯಮಂತ್ರಿ ಪಾತ್ರವನ್ನು ನಿರ್ವಹಿಸಿದ್ದಾರೆ.

ಚಂದ್ರು ಅವರಿಗೆ ಆಕಸ್ಮಿಕವಾಗಿ ಬಂದ ಈ ಪಾತ್ರದ ಖ್ಯಾತಿ ಮತ್ತು ರಾಜಕೀಯ ಅದೃಷ್ಟವನ್ನು ತಂದುಕೊಟ್ಟಿದೆ. ಇದುವರೆಗೆ 800 ಕ್ಕೂ ಬಾರಿ ಪ್ರದರ್ಶನಗೊಂಡಿರುವ ಈ ನಾಟಕವನ್ನು ಆರ್‌ ಗುಂಡೂರಾವ್‌ನಿಂದ ಹಿಡಿದು ಸಿದ್ದರಾಮಯ್ಯವರೆಗೆ 14 ಮುಖ್ಯಮಂತ್ರಿಗಳು ನೋಡಿದ್ದಾರೆ.

ರಂಗಭೂಮಿಯ ಸ್ನೇಹಿತರಿಂದ ಉತ್ತೇಜಿತರಾಗಿ 1975ರಲ್ಲಿ ‘ತಾಯಿ’ ನಾಟಕದಲ್ಲಿ ಸಮುದಾಯದ ಪ್ರಸನ್ನರು ನೀಡಿದ ಪಾತ್ರದಿಂದ ಚಂದ್ರು ಅಪಾರ ಯಶಸ್ಸು ಪಡೆದರು. ಮುಖ್ಯಮಂತ್ರಿ ನಾಟಕದಲ್ಲಿ ಅಭಿನಯದಿಂದ ಬಂದ ಪ್ರಸಿದ್ಧಿ ಜೊತೆಗೆ ‘ಮುಖ್ಯಮಂತ್ರಿ ಚಂದ್ರು’ ಎಂಬ ಖಾಯಂ ಹೆಸರು ಬಂದದ್ದು ಈಗ ಇತಿಹಾಸ. 

ಅವರು ಬಿ.ವಿ. ರಾಜಾರಾಂ ಜೊತೆ ಸೇರಿ ನಿರ್ದೇಶಿಸಿದ ನಾಟಕ ಅಚಲಾಯತನ. ನಂತರ ಹಲವಾರು ನಾಟಕಗಳ ನಿರ್ದೇಶನ ಮಾಡಿದ ಚಂದ್ರು ಅವರ ಮೋಡಗಳು, ಮೂಕಿ ಟಾಕಿ, ಎಲ್ಲಾರು ಮಾಡುವುದು. ಗರ್ಭಗುಡಿ, ಕತ್ತಲೆ ದಾರಿದೂರ, ಕಾಲಿಗುಲ, ಭರತಪ್ಪನ ಸೊಂಟಕ್ಕೆ ಗಂಟೆ, ಕೇಳು ಜನಮೇಜಯ, ಕಂಬಳಿಸೇವೆ, ಹೋಂ ರೂಲು ಮುಂತಾದುವು ಜನಪ್ರಿಯವೆನಿಸಿದವು. 

ಮುಖ್ಯಮಂತ್ರಿ, ತಾಯಿ, ಕತ್ತಲೆ ದಾರಿದೂರ, ಘಾಸಿರಾಂ ಕೊತ್ವಾಲ್‌, ಕಾಲಿಗುಲ, ನಮ್ಮೊಳಗೊಬ್ಬ ನಾಜೂಕಯ್ಯ, ಆಸ್ಫೋಟ ಮುಂತಾದ ನಾಟಕಗಳ ಪ್ರಮುಖ ಪಾತ್ರಧಾರಿಯಾಗಿದ್ದ ಚಂದ್ರು ಅವರನ್ನು ಮುಂದೆ ಚಿತ್ರರಂಗ ತನ್ನವರನ್ನಾಗಿಸಿಕೊಂಡಿತು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ. ಕುಮಾರಸ್ವಾಮಿ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ.

ನನ್ನ ಸಂಪರ್ಕದಲ್ಲಿ ಯಾವೊಬ್ಬ ನಾಯಕರು ಇಲ್ಲ. ಒಂದು ವೇಳೆ ಸಂಪರ್ಕಕ್ಕೆ ಬಂದರೆ ನಮ್ಮ ಪಕ್ಷದ ಹಿರಿಯ ನಾಯಕನ ಜೊತೆ ಚರ್ಚಿಸಿ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120931"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]